AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ!

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ!

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಎನ್‌ಡಿಎ ನಾಯಕರ ಜತೆಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಬಿರುಸಿನ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದಾರೆ. ಆದ್ರೆ, ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ತಮಿಳುನಾಡಿನಲ್ಲಿ ಬಿಜೆಪಿಗೆ ದೊಡ್ಡ ಶಾಕ್ ಎದುರಾಗಿದೆ. ಬಿಜೆಪಿ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡಿರುವ ಅಣ್ಣಾಮಲೈ ಅವರು ಕೈಗೊಂಡ ನಿರ್ಧಾರ ಕೇಸರಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ.

SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್

SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್

ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ. PDOಗಳ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು,

ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು,

ಕರ್ನಾಟಕ ಸಾರಿಗೆ ಇಲಾಖೆಯ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ಸಾಕಷ್ಟು ಬ್ರೋಕರ್ ಗಳು ಬೇರೆ ಬೇರೆ ರಾಜ್ಯಗಳಲ್ಲಿ ನಕಲಿ ದಾಖಲೆಗಳನ್ನು ನೀಡಿ ರಿಜಿಸ್ಟ್ರೇಷನ್ ಮಾಡಿಸಿಕೊಂಡು ಮತ್ತೆ ಎಲೆಕ್ಟ್ರಾನಿಕ್ ಸಿಟಿ ಮತ್ತು ಚಂದಾಪುರ ಆರ್ಟಿಓದಲ್ಲಿ ಕ್ಲಿಯರೆನ್ಸ್ ಮಾಡಿಸಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಆದ್ರೆ, ಅಧಿಕಾರಿಗಳು ಮಾತ್ರ ‌ಬಸ್ಸುಗಳನ್ನು ತಪಾಸಣೆ ಮಾಡದೆಯೇ ಚಾರ್ಸಿ ನಂಬರ್ ಟ್ಯಾಪಾರಿಂಗ್ ಆಗಿರುವ ಬಸ್ಸುಗಳಿಗೆ ಸಿಸಿ ನೀಡುತ್ತಿದ್ದಾರೆ.

ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್, ಇಒ ಹೇಳಿದ್ದೇನು?

ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್, ಇಒ ಹೇಳಿದ್ದೇನು?

ಬೆಂಗಳೂರಿನ ಐತಿಹಾಸಿಕ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಬಂದಿದ್ದ ಚಿನ್ನದ ನಕ್ಲೇಸ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಇಓ ಅವರನ್ನ ಸಸ್ಪೆಂಡ್ ಮಾಡಲಾಗಿದೆ. ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಮುಜರಾಯಿ ಇಲಾಖೆಯು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ. ನಾಗರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆದ್ರೆ, ಇದೀಗ ಈ ಪ್ರಕರಣಕ್ಕೆ ಅಮಾನತುಗೊಂಡ ನಾಗರಾಜು ಅವರು ಬಿಗ್ ಟ್ವಿಸ್ಟ್ ನೀಡಿದ್ದಾರೆ.

10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ,  ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ

10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ

ಸವದತ್ತಿಯಲ್ಲಿ (savadathi) ತಾಯಿಯೊಂದಿಗೆ ಅನೈತಿಕ ಸಂಬಂಧ (illicit relationship) ಹೊಂದಿದ್ದನೆಂಬ 10 ವರ್ಷಗಳ ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈರಯ್ಯ ಮಠಪತಿ ಎನ್ನುವಾತ ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಎನ್ನುವಾತನನ್ನು ಕೊಚ್ಚಿ ಕೊಂದಿದ್ದಾನೆ. ಬಳಿಕ ಹಂತಕ ಈರಯ್ಯ ಮಠಪತಿ, ಶವದ ಮೇಲೆ ನಿಂತು ವಿಕೃತಿ ಮೆರೆದಿದ್ದು, ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಕೊಲೆ ಮಾಡಿರುವುದನ್ನು ಹೇಳಿ ಶರಣಾಗಿದ್ದಾನೆ.

ಸಾಗರ ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

ಸಾಗರ ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರಿಗೆ ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡಿದ್ದಾರೆ.

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?

ಐತಿಹಾಸಿಕ ಬೆಂಗಳೂರು ಕರಗಕ್ಕೆ ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ.

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ: ಸಿಡಿದೆದ್ದ ಬಿಜೆಪಿ, ಸದನದಲ್ಲಿ ಕೋಲಾಹಲ

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ: ಸಿಡಿದೆದ್ದ ಬಿಜೆಪಿ, ಸದನದಲ್ಲಿ ಕೋಲಾಹಲ

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿ ಪರಿಷತ್​​ಗೆ ತೆರಳಿದ್ದು, ಅಲ್ಲಿ ಉತ್ತರ ನೀಡಬೇಕಾದರೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ಈ ನಡುವೆ ವಿಧಾನಪರಿಷತ್ ಕಾಂಗ್ರೆಸ್ ಶಾಸಕ ನಜೀರ್ ಅಹ್ಮದ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶದ್ರೋಹಿ ಎಂದು ಕರೆದು ವಿವಾದದ ಕಿಡಿಹೊತ್ತಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ?

ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ?

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿರುವ ಪ್ರಯುಕ್ತ ಎರಡು ದಿನ ನಗರದ ವಿವಿಧೆಡೆ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಲಾಗಿದೆ. ಹಾಗಾದ್ರೆ, ಯಾವ್ಯಾವ ಏರಿಯಾದಲ್ಲಿ ಎಂದಿನಿಂದ ಕಾವೇರಿನಲ್ಲಿ ವ್ಯತ್ಯಯ ಉಂಟಾಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು.

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ: ಸದನದಲ್ಲಿ ಅಶೋಕ್‌-ಸಿದ್ದರಾಮಯ್ಯ ಕಾಮಿಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ: ಸದನದಲ್ಲಿ ಅಶೋಕ್‌-ಸಿದ್ದರಾಮಯ್ಯ ಕಾಮಿಡಿ

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ನೀಡಿದರು. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪಕ್ಷ ನಾಯಕ ಅಶೋಕ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ, ನೀನು ಕುಡಿದಿದ್ದೀಯೆನಯ್ಯ? ನೀನು ಕುಡಿದಿದ್ರೆ ತಾನೇ ಗೊತ್ತಾಗೋದು. ಕಿಂಗ್ ಪಿಶರ್ 225 ರೂ ಇದೆ. ತೆಲಂಗಾದಲ್ಲಿ 125 ಇದೆ ಎಂದು ಹೇಳಿದರು.

33 ವರ್ಷದ ಸಂಪಾದನೆ ಹೋಯ್ತು: 18 ಕೋಟಿ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಬೆಂಗಳೂರಿನ ಬಿಲ್ಡರ್​​ನ ಕಣ್ಣೀರಿನ ಕಥೆ

33 ವರ್ಷದ ಸಂಪಾದನೆ ಹೋಯ್ತು: 18 ಕೋಟಿ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಬೆಂಗಳೂರಿನ ಬಿಲ್ಡರ್​​ನ ಕಣ್ಣೀರಿನ ಕಥೆ

ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ನೇಪಾಳಿ ದಂಪತಿ ದರೋಡೆ ಮಾಡಿದೆ ಎಂಬುದು ತನಿಖೆಯಲ್ಲಿ ದೃಢಪಟ್ಟಿದ್ದು, ಖರ್ನಾಕ್ ದಂಪತಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದೆಡೆ 18 ಕೋಟಿ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಉದ್ಯಮಿ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.