AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
Nagara Panchami 2026: ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು

Nagara Panchami 2026: ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು

ಹಿಂದೂ(Hindu) ಸಂಸ್ಕೃತಿಯಲ್ಲಿ ಸಾಲು ಸಾಲು ಹಬ್ಬಗಳ ಆಗಮನಕ್ಕೆ ಮಂಗಲಮಯ ಮುನ್ನುಡಿ ಬರೆಯುವ ಮೊದಲ ಪವಿತ್ರ ಪರ್ವವೇ ನಾಗರ ಪಂಚಮಿ. ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು(Nagara Panchami) ಆಚರಿಸಲಾಗುವ ಈ ದಿನ, ನಾಗ ದೇವತೆಯನ್ನು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಕೃತಜ್ಞತೆಯಿಂದ ಪೂಜಿಸುವುದು ಅನಾದಿ ಕಾಲದಿಂದಲೂ ಬಂದ ಶ್ರೇಷ್ಠ ಸಂಪ್ರದಾಯ. ಈ ಹಬ್ಬವನ್ನು ಉತ್ತರ ಕರ್ನಾಟಕದಲ್ಲಿ ಭಾಗದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ. ಬಗೆ ಬಗೆ ಖಾದ್ಯಗಳನ್ನ ಮಾಡಿ ಕುಟುಂಬಸ್ಥರೊಂದಿಗೆ ನಾಗಪ್ಪನಿಗೆ ಹಾಲು ಎರೆದು ಸಂಭ್ರಮಿಸುತ್ತಾರೆ. ಈ ಸಂಭ್ರಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮಾಡಿದೆ. ಹೌದು...ಇಂದು (ಆಗಸ್ಟ್​ 16) ಬೆಳಿಗ್ಗೆಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದ 'ವೃಕ್ಷ ಸಾಂಪ್ರದಾಯಿಕ ಕಲಾಮಂಟಪ'ದಲ್ಲಿ 'ನಮ್ಮೂರ ನಾಗರ ಪಂಚಮಿ 2026' ಅದ್ದೂರಿಯಾಗಿ ಆಚರಿಸಲಾಯ್ತು.

ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರಿನ ನೈಸ್ ರಸ್ತೆ ವಿವಾದ: ಟೋಲ್ ವಿರುದ್ಧ ಸಿಡಿದೆದ್ದ ಪ್ರತಿಪಕ್ಷಗಳು

ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರಿನ ನೈಸ್ ರಸ್ತೆ ವಿವಾದ: ಟೋಲ್ ವಿರುದ್ಧ ಸಿಡಿದೆದ್ದ ಪ್ರತಿಪಕ್ಷಗಳು

ನೈಸ್ ಸಂಸ್ಥೆಯಲ್ಲಿರುವ ಟೋಲ್ ಗೇಟ್ ರಾಜಜೀಯ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ನೈಸ್ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್​ಗಳನ್ನು ತತ್‌ಕ್ಷಣ ಜಾರಿಗೆ ಬರುವಂತೆ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಬಿಜೆಪಿ ಸಹ ಬೆಂಬಲಿಸಿದೆ.

RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು

RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ಮಾಡಲು ಪೂರ್ವನುಮತಿ ಕಡ್ಡಾಯಗೊಳಿಸವು ಸಂಬಂಧ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಈ ಮೂಲಕ ಆರ್​​​​​ಎಸ್​​​​​ಎಸ್​​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಪ್ರತಿಕ್ರಿಯಿಸಿದ್ದು, ಸಂಘ ನೋಂದಣಿ ಮಾಡುವ ಅವಶ್ಯಕತೆ ಇಲ್ಲ. ಆರ್​ಎಸ್​​ಎಸ್​ ರಿಜಿಸ್ಟ್ರೇಷನ್ ಆಗಿರಲಿಲ್ಲ, ಮುಂದೆಯೂ ಆಗಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದಾರೆ.

ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ: ಏನಿದು ಸಿದ್ದು ಮಾರ್ಮಿಕ ಮಾತು

ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ: ಏನಿದು ಸಿದ್ದು ಮಾರ್ಮಿಕ ಮಾತು

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯನವರು ಸೈಲೆಂಟ್​​​​​​​ ಆಗಿದ್ದಾರೆ. ಬಹಿರಂವಾಗಿ ಯಾವುದೇ ಹೇಳಿಕೆಗಳನ್ನು ನೀಡದೇ ಸೈಲೆಂಟ್ ಮೂಡ್​​​ಗೆ ಜಾರಿದ್ದಾರೆ. ಇಂದು (ಆಗಸ್ಟ್​ 15) ಮಾಧ್ಯಮದವರು ಸಿದ್ದರಾಮಯ್ಯನವರನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಆದ್ರೆ, ಸಿದ್ದರಾಂಯ್ಯ ಮಾತ್ರ, ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ‌. ನಾನು ಹೆಚ್ಚು ಮಾತಾಡುತ್ತಿಲ್ಲ ಅಷ್ಟೇ . ನಾನು ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ. ನಿನ್ನೆ ಅಧಿವೇಶನದಲ್ಲಿ ಭಾಗಿ ಆಗಿದ್ದೇನೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಎಂದಿದ್ದಾರೆ.

ಕರ್ನಾಟಕ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ವೇತನ ಹಿಂಬಾಕಿ ರಿಲೀಸ್

ಕರ್ನಾಟಕ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ವೇತನ ಹಿಂಬಾಕಿ ರಿಲೀಸ್

ಕರ್ನಾಟಕ ಸಾರಿಗೆ ನೌಕರರಿಗೆ (Transport Employees) ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 170 ಕೋಟಿ ರೂಪಾಯಿ ವೇತನ ಹಿಂಬಾಕಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 26 ತಿಂಗಳ ವೇತನ ಹಿಂಬಾಕಿಯ 1271 ಕೋಟಿ ರೂಪಾಯಿ ಕೊಡಬೇಕಿತ್ತು. ಈ ಹಿಂದೆ ಸರ್ಕಾರ 450 ಕೋಟಿ ಬಿಡುಗಡೆ ಮಾಡಿತ್ತು. 821 ಕೋಟಿ ಹಿಂಬಾಕಿಯಲ್ಲಿ ಇಂದು ಮತ್ತೆ 170 ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನು ಈ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದು, ಉಳಿದ 651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವ ಭರವಸೆಯನ್ನು ಸಾರಿಗೆ ಸಚಿವರು ನೀಡಿದ್ದಾರೆ. ಸಾರಿಗೆ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕಲ್ಪಿಸಲಾಗುವುದು. ನಾಲ್ಕು ನಿಗಮಗಳಿಗೆ ಯೋಜನೆ ವಿಸ್ತರಣೆ ಆಗಲಿದೆ ಎಂದು ಉಚಿತ ವೈದ್ಯಕೀಯ ಸೇವೆ ನೀಡುವ ಭರವಸೆ ನೀಡಿದ್ದಾರೆ.

“ನಮ್ಮ ಹೊಸ ಹೀರೋ. ನಿಮ್ಮ ಲೀಡರ್”: ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ

“ನಮ್ಮ ಹೊಸ ಹೀರೋ. ನಿಮ್ಮ ಲೀಡರ್”: ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ

ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 14) ವಿಧಾನಪರಿಷತ್ ಕಲಾಪದಲ್ಲಿ ನೂತನ ಸಚಿವರನ್ನು ಪರಿಚಯ ಮಾಡಿಕೊಟ್ಟರು. ಈ ವೇಳೆ ಮೊದಲ ಬಾರಿ ಸಚಿವರಾಗಿ ವಿಧಾನ ವಿಧಾನ ಪರಿಷತ್​​​​ನ ಸಭಾನಾಯಕರಾಗಿರುವ ಯತೀಂದ್ರ ಸಿದ್ದರಾಮಯ್ಯವರನ್ನು ವಿಶೇಷ ರೀತಿಯಲ್ಲಿ ಪರಿಚಯ ಮಾಡಿಕೊಟ್ಟರು. ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಪರಿಚಯಿಸುವಾಗ ಯತೀಂದ್ರ ಅವರ ಹೆಸರನ್ನು ಹೇಳಿ, "ನಮ್ಮ ಹೊಸ ಹೀರೋ. ನಮ್ಮ ನಾಯಕ" ಎಂದು ಬೆನ್ನುತಟ್ಟಿ ಪರಿಚಯ ಮಾಡಿಕೊಟ್ಟಿರುವುದು ವಿಶೇಷವಾಗಿತ್ತು.

ಹೊಸ ಕಾಯ್ದೆ ಮೂಲಕ RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶಗಳನ್ನ ಬಿಚ್ಚಿಟ್ಟ ಗೃಹ ಸಚಿವ

ಹೊಸ ಕಾಯ್ದೆ ಮೂಲಕ RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶಗಳನ್ನ ಬಿಚ್ಚಿಟ್ಟ ಗೃಹ ಸಚಿವ

ವಿಧೇಯಕದ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ವಿಪಕ್ಷಗಳು ವಿಧೇಯಕವನ್ನು ಓದಿದ್ದಾರಾ? ವಿಧೇಯಕದ ಚರ್ಚೆ ಮಾಡಲಿ, ಏನಾದರೂ ತಪ್ಪಿದ್ರೆ ನೋಡೋಣ. ಈ ವಿಧೇಯಕದಲ್ಲಿ ಆರ್​ಎಸ್​ಎಸ್ ಬಗ್ಗೆ ಇದೆಯಾ? ಸರ್ಕಾರಿ ಜಾಗವನ್ನು ಉಪಯೋಗಿಸುವುದಕ್ಕೆ ಅನುಮತಿ ಬೇಕಲ್ವಾ? ಇದರಲ್ಲಿ ಸಮಸ್ಯೆ ಏನಿದೆ? ನಮ್ಮ ಪಕ್ಷ 140 ವರ್ಷ ಹಳೆಯದ್ದು, ಆದ್ರೂ ಅನುಮತಿ ಪಡೆಯುತ್ತೇವೆ. ಈ ವಿಧೇಯಕಕ್ಕೂ ನೋಂದಣಿ ಆಗದಿರುವುದಕ್ಕೂ ಸಂಬಂಧವಿಲ್ಲ. ನೀವು ಸಲಹೆ ಕೊಡಿ ನಾವು ಸ್ವಾಗತ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ದೇಶದ್ರೋಹಿ ಅನ್ನೋದಕ್ಕೆ ಇದಕ್ಕಿಂತೆ ಸಾಕ್ಷಿ ಬೇಕಾ? ಧ್ವಜಾರೋಹಣದಿಂದ ವಿನಾಯಿತಿ ಕೇಳಿದ ಜಮಿರ್ ವಿರುದ್ಧ ಬಿಜೆಪಿ ಆಕ್ರೋಶ

ದೇಶದ್ರೋಹಿ ಅನ್ನೋದಕ್ಕೆ ಇದಕ್ಕಿಂತೆ ಸಾಕ್ಷಿ ಬೇಕಾ? ಧ್ವಜಾರೋಹಣದಿಂದ ವಿನಾಯಿತಿ ಕೇಳಿದ ಜಮಿರ್ ವಿರುದ್ಧ ಬಿಜೆಪಿ ಆಕ್ರೋಶ

ವಿಜಯನಗರ ಜಿಲ್ಲಾ ಉಸ್ತುವಾರಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಜವಾಬ್ದಾರಿಯನ್ನು ಸಚಿವ ಜಮೀರ್ ಅಹ್ಮದ್ ನಿರಾಕರಿಸಿದ್ದಾರೆ. ಈ ಸಂಬಂಧ ವಿನಾಯಿ ಕೋರಿ ಸಿಎಂ ಡಿಕೆ ಶಿವಕುಮಾರ್​​​ಗೆ ಪತ್ರ ಬರೆದಿರುವುದು ರಾಜ್ಯಕೀಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯ ದಿನಾಚರಣೆದಂದು ಧ್ವಜಾರೋಹಣಕ್ಕೆ ಸಮಯ ಇಲ್ಲ ಎಂದು ಹೇಳುವ ಮೂಲಕ ಜಮೀರ್ ಅಹಮದ್ ದೇಶದ್ರೋಹ ಎಸಗಿದ್ದಾರೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ವಿಪಕ್ಷ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು

ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು

ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಮಸಾಲಾ ಜೊತೆಯಲ್ಲಿ ನಿಕೋಟಿನ್ ಇರಬಾರದು. ಆದರೂ ಮಸಾಲಾ ಜೊತೆ ಮಿಕ್ಸ್‌ ಮಾಡಿ ನಿಕೋಟಿನ್ ಮಾರಾಟ ಮಾಡಲಾಗುತ್ತಿದೆ. ಇದು ನಮ್ಮ ಗಮನಕ್ಕೆ ಬಂದಿದೆ, ಹೀಗಾಗಿ ನಿಷೇಧಕ್ಕೆ ಆದೇಶ ನೀಡಿದ್ದು, ಮುಂದೆ ಯಾವ ರೀತಿ ನಿಯಮ ರೂಪಿಸಬೇಕೆಂದು ನಿರ್ಧರಿಸ್ತೇವೆ. ಇನ್ನು ಅಡಕೆ ಮಾರಾಟಗಾರರಿಗೆ ತೊಂದರೆ ಆಗದ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರಿ ಪಿಂಚಣಿದಾರರಿಗೆ ಸಿಹಿ ಸುದ್ದಿ:‘ಸಂಧ್ಯಾ ಕಿರಣ’ ಯೋಜನೆಗೆ ಸಂಪುಟ ಒಪ್ಪಿಗೆ, ಏನಿದು ಸ್ಕೀಮ್?

ರಾಜ್ಯ ಸರ್ಕಾರಿ ಪಿಂಚಣಿದಾರರಿಗೆ ಸಿಹಿ ಸುದ್ದಿ:‘ಸಂಧ್ಯಾ ಕಿರಣ’ ಯೋಜನೆಗೆ ಸಂಪುಟ ಒಪ್ಪಿಗೆ, ಏನಿದು ಸ್ಕೀಮ್?

ವಯಸ್ಸಾದ ಕಾಲದಲ್ಲಿ ಕಾಡುವ ಅನಾರೋಗ್ಯ (Disease) ಹಾಗೂ ಹೆಚ್ಚುತ್ತಿರುವ ಆಸ್ಪತ್ರೆ ವೆಚ್ಚಗಳಿಂದ ಕಂಗೆಟ್ಟಿರುವ ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ (Retired Government Worker) ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದೆ. ರಾಜ್ಯ ಸರಕಾರಿ ನೌಕರರಿಗೆ 'ಸಂಧ್ಯಾ ಕಿರಣ' ನಗದು ರಹಿತ ಚಿಕಿತ್ಸೆ ಸೌಲಭ್ಯ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಾಗಾದ್ರೆ, ಏನಿದು ಸಂಧ್ಯಾ ಕಿರಣ ಯೋಜನೆ? ಎನ್ನುವ ಡಿಟೇಲ್ಸ್ ಇಲ್ಲಿದೆ.

ಹೊಸ ಕಾಯ್ದೆಯೊಂದಿಗೆ ಕರ್ನಾಟಕದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ಯಾ?

ಹೊಸ ಕಾಯ್ದೆಯೊಂದಿಗೆ ಕರ್ನಾಟಕದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ಯಾ?

ಕರ್ನಾಟಕದಲ್ಲಿ ಆರ್ ಎಸ್ ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಹೊಸ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಂಘಟನೆಗಳು ನಡೆಸುವ ಪಥಸಂಚಲನ, ಸಭೆ, ಕಾರ್ಯಕ್ರಮ ಹಾಗೂ ಇತರೆ ಚಟುವಟಿಕೆಗಳಿಗೆ ನಿಯಂತ್ರಣ ಹೇರುವ ಉದ್ದೇಶದ ಮಹತ್ವದ ವಿಧೇಯಕವೊಂದು ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಿದ್ದು, ಇದೇ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಿದೆ. ಏನಿದು ಕಾಯ್ದೆ?

Indian Independence 2026: ತ್ರಿವರ್ಣ ಧ್ವಜದ ಮಧ್ಯದಲ್ಲಿ “ಅಶೋಕ ಚಕ್ರ”ದ ಕುತೂಹಲಕಾರಿ ಸಂಗತಿಗಳು

Indian Independence 2026: ತ್ರಿವರ್ಣ ಧ್ವಜದ ಮಧ್ಯದಲ್ಲಿ “ಅಶೋಕ ಚಕ್ರ”ದ ಕುತೂಹಲಕಾರಿ ಸಂಗತಿಗಳು

ದೇಶವನ್ನು ಪ್ರತಿನಿಧಿಸುವ ಅತ್ಯಂತ ಮಹತ್ವದ ಅಂಶವೆಂದರೆ ಭಾರತದ ರಾಷ್ಟ್ರೀಯ ಧ್ವಜ. ಭಾರತದ ರಾಷ್ಟ್ರೀಯ ಧ್ವಜದಲ್ಲಿರುವ ಅಶೋಕ ಚಕ್ರವು ದೇಶದ ಪ್ರಮುಖ ಪ್ರಾತಿನಿಧ್ಯ ಸಂಕೇತವಾಗಿದೆ. ಇನ್ನು ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರವನ್ನು ಯಾವಾಗ ಸೇರಿಸಲಾಯ್ತು? ಇನ್ನು ಅಶೋಕ್ ಚಕ್ರದಲ್ಲಿರುವ 24 ಗೆರೆಗಳು ಏನು ಹೇಳುತ್ತವೆ? ಅಶೋಕ ಚಕ್ರದ ಕುರಿತು ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!