ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: FIR ದಾಖಲಾಗುತ್ತಿದ್ದಂತೆಯೇ ಸ್ಪಷ್ಟನೆ ಕೊಟ್ಟ ರವಿಕುಮಾರ್
ಮಾತು ಆಡಿದ್ರೆ ಹೋಯ್ತು, ಮುತ್ತು ಹೊಡೆದ್ರೆ ಹೋಯ್ತು ಎನ್ನುವಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಮತ್ತೆ ಅಧಿಕಾರಿಯ ವಿರುದ್ಧ ನಾಲಗೆ ಹರಬಿಟ್ಟ ಆರೋಪ ಕೇಳಿಬಂದಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ರವಿಕುಮಾರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪರಿಷತ್ ಸಭಾಪತಿಗೆ ಕಾಂಗ್ರೆಸ್ ದೂರು ನೀಡಿದೆ. ಈ ವಿಚಾರ ಭಾರೀ ಚರ್ಚೆಗಾಗುತ್ತಿದ್ದಂತೆಯೇ ಇದೀಗ ಸ್ವತಃ ರವಿಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ.
- Ramesh B Jawalagera
- Updated on: Jul 3, 2025
- 8:02 pm
ಬೆಂಗಳೂರಿನಲ್ಲಿ ಎಕ್ಸ್ಟ್ರಾ ಕಾಫಿ ಕಪ್ಗಾಗಿ ಗಲಾಟೆ: ಹೋಟೆಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ
ಎಕ್ಸ್ ಟ್ರಾ ಕಾಫಿ ಕಪ್ ಕೊಡದಿದ್ದಕ್ಕೆ ಹೋಟೆಲ್ ಸಿಬ್ಬಂದಿಗೆ ನಾಲ್ಕೈದು ಜನ ಸೇರಿಕೊಂಡು ಹಿಗ್ಗಾಮುಗ್ಗಾ ಹಲ್ಲೆ ನಡೆಸದ್ದಾರೆ. ಈ ಘಟನೆ ನಿನ್ನೆ (ಜುಲೈ 02) ಬೆಂಗಳೂರಿನ ಶೇಷಾದ್ರಿಪುರಂನ (Sheshadripuram )ನಮ್ಮ ಫಿಲ್ಟರ್ ಕಾಫಿ ಶಾಪ್ನಲ್ಲಿ ನಡೆದಿದೆ. ಕಾಫಿ ಶಾಪ್ಗೆ ಬಂದಿದ್ದ ನಾಲ್ವರು ಕಾಫಿಯನ್ನು ಕೊಂಡು ಮತ್ತೊಂದು ಕಪ್ ಕೇಳಿದ್ದಾರೆ. ಈ ವೇಳೆ, ಹೋಟೆಲ್ ಸಿಬ್ಬಂದಿ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ನಾಲ್ವರು, ಹೋಟೆಲ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ ಮನಬಂದಂತೆ ಥಳಿಸಿದ್ದಾರೆ.
- Ramesh B Jawalagera
- Updated on: Jul 3, 2025
- 2:43 pm
ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣದ ಬೆನ್ನಲ್ಲೇ ಇದೀಗ ಬೆಂಗಳೂರು ಗ್ರಮಾಂತರ ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದು, ಇದಕ್ಕೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆಯಾಗಲಿದೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರು ಬದಲಾವಣೆಗೂ ಸಂಪುಟ ಒಪ್ಪಿಗೆ ಸೂಚಿಸಿದೆ.
- Ramesh B Jawalagera
- Updated on: Jul 2, 2025
- 4:46 pm
ಡಿಕೆಶಿ, ಸುರ್ಜೆವಾಲಾ ಖಡಕ್ ಸ್ಪಷ್ಟನೆ: ನಾಯಕತ್ವ ಬದಲಾವಣೆ ಅಂತೆ-ಕಂತೆಗಳಿಗೆ ಫುಲ್ ಸ್ಟಾಪ್
ಆಡಳಿತರೂಢ ಕಾಂಗ್ರೆಸ್ನಲ್ಲಿ ಭುಗಿಲೆದ್ದಿರೋ ಅಸಮಾಧಾನಕ್ಕೆ ಮದ್ದರೆಯಲು ರಾಜ್ಯ ಉಸ್ತುವಾರಿ ಸುರ್ಜೇವಾಲ ಎಂಟ್ರಿಕೊಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶಾಸಕರೊಂದಿಗೆ ಒನ್ ಟು ಒನ್ ಸಭೆ ಮಾಡ್ತಿದ್ದಾರೆ. ನಿನ್ನೆ 7 ಶಾಸಕ ಜೊತೆ ಮಾತುಕತೆ ನಡೆಸಿದ ಸುರ್ಜೇವಾಲ, ಇವತ್ತು ಕೂಡ ಶಾಸಕರ ಜೊತೆ ಒನ್ ಟು ಒನ್ ಮಾತುಕತೆ ನಡೆಸಿದರು. ಇದೇ ವೇಳೆ ನಾಯಕತ್ವ ಬದಲಾವಣೆ ಉದ್ಭವಿಸಿದ್ದ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.
- Ramesh B Jawalagera
- Updated on: Jul 1, 2025
- 10:33 pm
ಸುರ್ಜೆವಾಲ ಬೆಂಗಳೂರಿನಲ್ಲಿ ಇರುವಾಗಲೇ ಸಿಎಂ ಬದಲಾವಣೆ ಮಾತು: ಶಾಸಕ ಇಕ್ಬಾಲ್ ಹುಸೇನ್ಗೆ ಶಾಕ್
ಕರ್ನಾಟಕ ಕಾಂಗ್ರೆಸ್ ನಲ್ಲಿ ಶಾಸಕರ ಅಸಮಾಧಾನದ ಕಿಚ್ಚು ಕಾವೇರುತ್ತಿದೆ. ಒಬ್ಬೊಬ್ಬರದ್ದು ಒಂದೊಂದು ಕಥೆ, ಮುನಿಸು, ಬೇಸರ. ಹೀಗಾಗಿ ಈ ಕಿಚ್ಚು ಮತ್ತಷ್ಟು ಸ್ಫೋಟಗೊಳ್ಳುವ ಮೊದಲೇ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಶಾಸಕರ ಅಸಮಾಧಾನ ತಣಿಸಲು ಬಂದಿದ್ದಾರೆ. ಆದ್ರೆ ಸುರ್ಜೇವಾಲ ಸಭೆ ಪಕ್ಷದ ನಾಯಕರ ಅಸಮಾಧಾನ ತಣಿಸೋ ಬದಲು ಬಹಿರಂಗ ಕಿತ್ತಾಟಕ್ಕೆ ವೇದಿಕೆ ಮಾಡಿಕೊಟ್ಟಿದ್ದು, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಬಹಿರಂಗವಾಗಿ ಅಬ್ಬರಿಸಿದ್ದಾರೆ. ಹೀಗಾಗಿ ಇದೀಗ ಅವರಿಗೆ ಡಿಕೆಶಿ ಶಾಕ್ ಕೊಟ್ಟಿದ್ದಾರೆ.
- Ramesh B Jawalagera
- Updated on: Jul 1, 2025
- 8:27 pm
ಬೆಂಗಳೂರು ಕಾಲ್ತುಳಿತ: ಸಾರ್ವಜನಿಕ ಸಭೆಗಳ ಜನಜಂಗುಳಿ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ
ಆರ್ ಸಿಬಿ ವಿಜಯೋತ್ಸವ ವೇಲೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಇದು ರಾಷ್ಟ್ರಮಟ್ಟದಲ್ಲೂ ಬಾರೀ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಪೊಲಿಸ್ ಇಲಾಖೆ ಸಹ ಸಾರ್ವಜನಿಕ ಸಭೆಗಳ ಜನಸಂದಣಿ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
- Ramesh B Jawalagera
- Updated on: Jul 1, 2025
- 5:32 pm
ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟ ಡಿಕೆ ಶಿವಕುಮಾರ್: ಬೆಂಬಲಿಗ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ
ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇದರಿಂದ ಕೆರಳಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಯಾವ ನಾಯಕತ್ವ ಕೂಡ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಬಲಪಡಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎರಡುವರೆ ವರ್ಷದ ಬಳಿಕ ಸಿಎಂ ಬದಲಾವಣೆ ಗೊಂದಲಗಳಿಗೆ ಸ್ವತಃ ಡಿಕೆ ಶಿವಕುಮಾರ್ ತೆರೆ ಎಳೆದರು.
- Ramesh B Jawalagera
- Updated on: Jul 1, 2025
- 4:06 pm
ಸಿದ್ದರಾಮಯ್ಯ ಬಗ್ಗೆ ಇದೆಂಥಾ ಮಾತು: ಬಿಆರ್ ಪಾಟೀಲ್ ಸ್ಫೋಟಕ ಆಡಿಯೋ ವೈರಲ್
ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ. ಇದೇ ಅಳಂದ ಶಾಸಕ ಬಿ.ಆರ್ ಪಾಟೀಲ್ ಆಡಿದ ಈ ಅಬ್ಬರದ ಮಾತು ಕಾಂಗ್ರೆಸ್ ಮನೆಯನ್ನ ನಡುಗಿಸಿತ್ತು. ಸರ್ಕಾರವನ್ನ ಅಲುಗಾಡಿಸಿತ್ತು. ವಸತಿ ಯೋಜನೆಯಲ್ಲಿ ಮನೆ ನೀಡಲು ಲಂಚ ಪಡೆಯಲಾಗ್ತಿದೆ ಎಂಬ ಬಿ.ಆರ್ ಪಾಟೀಲ್ ಆರೋಪದಿಂದ ಶುರುವಾದ ಅಸಮಾಧಾನದ ಜ್ವಾಲೆ ಕೈಪಡೆಯನ್ನ ಬಡೆದೆಬ್ಬಿಸಿತ್ತು. ಇದರ ಬೆನ್ನಲ್ಲೇ ಶಾಸಕ ಬಿ.ಆರ್.ಪಾಟೀಲ್ ಮಾತಾನಾಡಿರುವ ವಿಡಿಯೋ ವೈರಲ್ ಆಗಿದೆ.
- Ramesh B Jawalagera
- Updated on: Jul 1, 2025
- 3:41 pm
ಅಕ್ರಮವಾಗಿ ಭಾರತ ಗಡಿ ದಾಟಲು ಯತ್ನಿಸಿದ ಪಾಕಿಸ್ತಾನದ ಜೋಡಿ: ನೀರಿಲ್ಲದೆ ಮರುಭೂಮಿಯಲ್ಲಿ ದುರಂತ ಸಾವು
ಪ್ರೀತಿಸಿದಾಕೆಯನ್ನು ಮದುವೆಯಾಗಿ ಹೊಸ ಸಂಸಾರ ಕಟ್ಟಿಕೊಂಡು ತಮ್ಮದೇ ಆದ ಕನಸುಗಳನ್ನು ಹೊಂದಿದ್ದ ಅಪ್ರಾಪ್ತ ನವ ದಂಪತಿ ಕುಡಿಯಲು ನೀರಲ್ಲದೇ ಸಾವನ್ನಪ್ಪಿರುವ ಘೋರ ದುರಂತ ರಾಜಸ್ಥಾನದಲ್ಲಿ ನಡೆದಿದೆ. ಮದುವೆಯಾಗಿ ಭಾರತದಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಪಾಕಿಸ್ತಾನದ ಮೂಲದ ಹಿಂದೂ ನವಜೋಡಿ ಬಯಸಿತ್ತು. ಆದರೆ, ವಿಧಿ ವೀಸಾ ಮೂಲಕ ಈ ದಂಪತಿಯನ್ನು ಬಲಿಪಡೆದುಕೊಂಡಿದೆ.
- Ramesh B Jawalagera
- Updated on: Jun 30, 2025
- 9:45 pm
ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ: ಸತ್ತ ಸಾಕು ನಾಯಿ ಜತೆ 3 ದಿನ ಕಳೆದ ಯುವತಿ!
ಮನುಷ್ಯನಿಗೆ ನಡುಕ ಹುಟ್ಟಿಸುತ್ತೆ ಈ ಸ್ಟೋರಿ. ಮಹಿಳೆಯ ಈ ಕೃತ್ಯಕ್ಕೆ ಪ್ರಾಣಿ ಪ್ರಿಯರು, ಪೊಲೀಸರು ಹಾಗೂ ಅಕ್ಕಪಕ್ಕದ ಮನೆಯವರು ಬೆಚ್ಚಿ ಬಿದ್ದಿದ್ದಾರೆ. ಹೌದು.. ಬೆಂಗಳೂರಿನ ಮಹದೇವಪುರದ ಅಪಾರ್ಟ್ಮೆಂಟ್ ವೊಂದರಲ್ಲಿ ಯುವತಿಯೊಬ್ಬಳು ತಾನು ಸಾಕಿದ್ದ ಲ್ಯಾಬ್ರಡಾರ್ ರಿಟ್ರೈವರ್ ನಾಯಿಗೆ ಚಿತ್ರ ಹಿಂಸೆ ಕೊಟ್ಟು ಸಾಯಿಸಿದ್ದಾಳೆ. ಅಲ್ಲದೇ ಜೀವ ಬಿಟ್ಟಿರೋ ನಾಯಿ ಮೃತದೇಹದ ಜೊತೆ ಮೂರ್ನಾಲ್ಕು ದಿನ ವಾಸ ಮಾಡಿರುವ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ.
- Ramesh B Jawalagera
- Updated on: Jun 29, 2025
- 4:31 pm
ಅಬ್ಬಬ್ಬಾ….ಅದೇನು ಕಿಲಾಡಿತನ: ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ
ಬುರ್ಖಾ (Burqa) ಹಾಕಿಕೊಂಡು ಬಂದ ಮಹಿಳೆಯರು ಗೃಹಬಳಕೆಯ ಸಾಮಾಗ್ರಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ (Theft) ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಘಟನೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ (Karatagi) ಪಟ್ಟಣದಲ್ಲಿ ನಡೆದಿದೆ. ವಿಎ ಬಜಾರ್ನಲ್ಲಿ ಜೂನ್ 18ರಂದು ಘಟನೆ ನಡೆದಿದ್ದು, ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುರ್ಖಾ ಧರಿಸಿಕೊಂಡು ಬಂದ ಇಬ್ಬರು ಮಹಿಳೆಯರು ಆಹಾರ ಸಾಮಾಗ್ರಿಗಳನ್ನು ಬುರ್ಖಾದೊಳಗೆ ಹಾಕಿಕೊಂಡು ಎಸ್ಕೇಪ್ ಆಗಿದ್ದಾರೆ.
- Ramesh B Jawalagera
- Updated on: Jun 29, 2025
- 1:55 pm
ಹಾವುಗಳ ಪ್ರೇಮದ ಬೆಸುಗೆ: ಬರೋಬ್ಬರಿ ಅರ್ಧ ಗಂಟೆ ಮಿಲನ ದೃಶ್ಯ ಸೆರೆ
ಎರಡು ಹಾವುಗಳ ಮಿಲನ ಮಹೋತ್ಸವವೇ ಕಣ್ಣಿಗೆ ಬೀಳುವುದು ಅಪರೂಪ. ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದ ಜಮೀನಿನಲ್ಲಿ ಹಾವುಗಳ ಮಿಲನದ ದೃಶ್ಯ ಕಂಡುಬಂದಿದೆ. ಬರೋಬ್ಬರಿ ಅರ್ಧಗಂಟೆಗಳ ಕಾಲ ನಡೆದ ಮಿಲನ ಮಹೋತ್ಸವದಲ್ಲಿ ಎರಡು ದೊಡ್ಡ ಹಾವುಗಳು ತೆಕ್ಕೆ ಹಾಕಿಕೊಂಡು ಹೊರಳಾಡುವುದನ್ನು ವ್ಯಕ್ತಿಯೋರ್ವ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ.
- Ramesh B Jawalagera
- Updated on: Jun 29, 2025
- 12:24 pm