ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಿದ್ದರಾಮಯ್ಯ, ಅವರ ಪತ್ನಿ, ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಏಪ್ರಿಲ್ 28ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ. ಇನ್ನು ಮುಡಾ ಹಗರಣದ ಪ್ರಕರಣವನ್ನು ಲೋಕಾಯುಕ್ತ ಮುಂದುವರೆಸಿದೆ.
- Ramesha M
- Updated on: Apr 16, 2025
- 7:28 pm
ಮುಡಾ ಹಗರಣ: ತನಿಖೆ ಪೂರ್ಣಗೊಳಿಸುವಂತೆ ಲೋಕಾಗೆ ಕೋರ್ಟ್ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮುಡಾ ಹಗರಣ ಪ್ರಕರಣ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿದ್ದರು. ಆದ್ರೆ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿದೆ.
- Ramesha M
- Updated on: Apr 15, 2025
- 5:40 pm
ಗರ್ಭಿಣಿ ಅಭ್ಯರ್ಥಿಗೆ ಕಲಬುರಗಿಯಲ್ಲೇ ಪರೀಕ್ಷಾ ಕೇಂದ್ರ ವ್ಯವಸ್ಥೆ ಮಾಡಿ: KPSCಗೆ ಹೈಕೋರ್ಟ್ ನಿರ್ದೇಶನ
ತುಂಬು ಗರ್ಭಿಣಿ ಮಹಾಲಕ್ಷ್ಮೀ ಎಂಬುವರು ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್ ಎ ಮತ್ತು ಬಿKAS ಪರೀಕ್ಷೆಗೆ ಕಲಬುರಗಿಯಲ್ಲಿ ಪರೀಕ್ಷಾ ಕೇಂದ್ರ ವ್ಯವಸ್ಥೆ ಮಾಡುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ದೂರ ಪ್ರಯಾಣದಿಂದ ಆರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ, ಹೈಕೋರ್ಟ್ ಕೆಪಿಎಸ್ಸಿಗೆ ಕಲಬುರಗಿಯಲ್ಲಿ ಪರೀಕ್ಷಾ ಕೇಂದ್ರ ಒದಗಿಸಲು ನಿರ್ದೇಶನ ನೀಡಿದೆ.
- Ramesha M
- Updated on: Apr 9, 2025
- 10:08 pm
ಚೆಕ್ಬೌನ್ಸ್ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್
ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು. ಈ ಹಗರಣ ಸಂಬಂಧ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ಸಹ ನೀಡಿದ್ದಾರೆ. ಇದೀಗ, ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪ್ರಕರಣವೊಂದರಲ್ಲಿ ಶಿಕ್ಷೆ ಪ್ರಕಟವಾಗಿದೆ.
- Ramesha M
- Updated on: Apr 9, 2025
- 7:20 pm
ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಕೋರ್ಟ್, ವಾದ-ಪ್ರತಿವಾದ ವಿವರ ಇಲ್ಲಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಮುಡಾ ಹಗರಣ ಪ್ರಕರಣ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ತನಿಖೆ ನಡೆಸಿ ವರದಿ ನೀಡಿದೆ. ಆದ್ರೆ, ಬಿರಿಪೋರ್ಟ್ ಸಲ್ಲಿಸಿದ್ದಕ್ಕೆ ಇಡಿ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಇಡಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ. ಹಾಗಾದ್ರೆ, ಎರಡೂ ಕಡೆಯಿಂದ ವಾದ ಪ್ರತಿವಾದ ಹೇಗಿತ್ತು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Ramesha M
- Updated on: Apr 9, 2025
- 5:23 pm
ಸರ್ಕಾರಿ ಜಮೀನು ಒತ್ತುವರಿ ಆರೋಪ: ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ!
ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ನಡುವಿನ ಸಂಘರ್ಷ ಮುಂದುವರೆದಿದೆ. ಈ ಕೇತಗಾನಹಳ್ಳಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಂತದ ಕ್ರಮಕೈಗೊಳ್ಳುವುದಿಲ್ಲವೆಂಬ ಮುಚ್ಚಳಿಕೆಯನ್ನು ಇದೀಗ ಸರ್ಕಾರ ಹಿಂಪಡೆದುಕೊಂಡಿದೆ. ಈ ಮೂಲಕ ಕುಮಾರಸ್ವಾಮಿಗೆ ಶಾಕ್ ಕೊಟ್ಟಿದೆ.
- Ramesha M
- Updated on: Apr 8, 2025
- 10:35 pm
ಆದಾಯ ಮೀರಿ ಆಸ್ತಿ ಗಳಿಗೆ ಆರೋಪ: ಕೋರ್ಟ್ ಆದೇಶ, ಕೆಎಸ್ ಈಶ್ವರಪ್ಪಗೆ ಸಂಕಷ್ಟ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಯ ಆರೋಪದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅಬರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಗೆ ಆರೋಪದ ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಹೇಳಿದೆ.
- Ramesha M
- Updated on: Apr 5, 2025
- 8:36 pm
ಮಹಿಳೆ ಅಪಹರಣ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ವಿಡಿಯೋದಲ್ಲಿರುವ ಸಂತ್ರಸ್ತ ಮಹಿಳೆಯನ್ನು ಭವಾನಿ ರೇವಣ್ಣ ಅವರು ಅಪಹರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಲಾಗಿತ್ತು. ಇದೀಗ, ಈ ಷರತ್ತನ್ನು ಹೈಕೋರ್ಟ್ ಸಡಿಲಿಸಿ, ಹೊಸ ಷರತ್ತನ್ನು ವಿಧಿಸಿದೆ. ಹಾಕಿದ್ದರೆ ಏನದು ಷರತ್ತು? ಹೊಸ ಷರತ್ತು ಏನು? ಇಲ್ಲಿದೆ ವಿವರ.
- Ramesha M
- Updated on: Apr 4, 2025
- 5:04 pm
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ನ್ಯಾಯಾಂಗ ತನಿಖೆಗೆ ಆದೇಶಿದ ಕೋರ್ಟ್
ಬೆಳಗಾವಿ ಅಧಿವೇಶನ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಪ್ರಹಾರ ಪ್ರಕರಣ ಮತ್ತೆ ಮುನ್ನೆಲೆ ಬಂದಿದೆ. ಪ್ರಕರಣವನ್ನು ಖಂಡಿಸಿ ಭಾರೀ ಪ್ರತಿಭಟನೆಗಳು ಆಗಿದ್ದು, ಲಾಠಿ ಬೀಸಿದ ಪೊಲೀಸರ ಅಮಾನತ್ತಿಗೆ ಪಂಚಮಸಾಲಿ ಸಮುದಾಯ ಆಗ್ರಹಿಸಿತ್ತು. ಇದರ ಮಧ್ಯ ಇದೀಗ ಧಾರವಾಡ ಹೈಕೋರ್ಟ್ ಪೀಠ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
- Ramesha M
- Updated on: Apr 4, 2025
- 5:49 pm
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್: ವಿನಯ ಕುಲಕರ್ಣಿ ಅರ್ಜಿ ವಜಾ
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ನ್ಯಾಯಾಲಯವು ನಾಲ್ಕು ವಾರಗಳಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಸೂಚಿಸಿದೆ. ಮುತ್ತಗಿಯ ತಪ್ಪೊಪ್ಪಿಗೆಯಿಂದ ವಿನಯ್ ಕುಲಕರ್ಣಿ ಮೇಲಿನ ಆರೋಪಗಳು ಬಲಗೊಂಡಿವೆ. ಯೋಗೇಶ್ ಗೌಡರ ಪತ್ನಿ ಮಲ್ಲವ್ವ ಅವರ ಅರ್ಜಿಯನ್ನೂ ವಜಾಗೊಳಿಸಲಾಗಿದೆ.
- Ramesha M
- Updated on: Apr 4, 2025
- 3:45 pm
ಅತ್ಯಾಚಾರ ಪ್ರಕರಣ: ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!
Prajwal Revanna assault Case:: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಿರಸ್ಕರಿಸಿದೆ.
- Ramesha M
- Updated on: Apr 3, 2025
- 9:10 pm
Bike Taxi: ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ
ಬೈಕ್ ಟ್ಯಾಕ್ಸಿ: ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕೋರ್ಟ್ನಲ್ಲಿ ಹಿನ್ನಡೆಯಾಗಿದೆ. 6 ವಾರಗಳಲ್ಲಿ ಬೈಕ್ ಟ್ಯಾಕ್ಸ್ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೇ ಈ ಬಗ್ಗೆ ಸರ್ಕಾರಕ್ಕೆ 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದೆ.
- Ramesha M
- Updated on: Apr 2, 2025
- 7:01 pm