ಪ್ರದೀಪ್ ಈಶ್ವರ್ ವಿರುದ್ಧ ಘೋಷಣೆ ಕೂಗಿ ಚಪ್ಪಲಿ ಎಸೆದ ಪ್ರಕರಣ: ನಾಲ್ವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆಯಾಜ್ಞೆ
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, 800 ಜನರಲ್ಲಿ ಈ ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ದೇಕೆ? ಎಂದು ಪೊಲೀಸರನ್ನು ಪ್ರಶ್ನಿಸಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವ ಕಾರ್ಯಕ್ರಮದ ಬಳಿಕ ಚಿಕ್ಕಬಳ್ಳಾಪುರದಲ್ಲಿ ಜೂನ್ 27ರಂದು ದೊಡ್ಡ ಹೈಡ್ರಾಮಾವೇ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್ಐ ಅಮರ್ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿದ್ದರು.
- Ramesha M
- Updated on: Jul 7, 2026
- 6:41 pm
ಮಕ್ಕಳಿಗೆ ಹೊಡೆದು ಕಲಿಸುವ ಅಗತ್ಯವಿಲ್ಲ: ಶಿಕ್ಷಕಿ ವಿರುದ್ಧದ ಕೇಸ್ಗೆ ತಡೆ ನೀಡಲು ಹೈಕೋರ್ಟ್ ನಕಾರ
ಶಾಲೆಯಲ್ಲಿ ಮಕ್ಕಳು ತಪ್ಪು ಮಾಡಿದರೂ ಶಿಕ್ಷೆ ಕೊಡಬಾರದು, ಬೈ ಬಾರದು, ಕನಿಷ್ಠ ಪಕ್ಷ ಗಂಭೀರವಾಗಿ ಮನದಟ್ಟು ಮಾಡಬಾರದು, ಸ್ನೇಹ ಪೂರ್ವಕವಾಗಿ ಹೇಳಬೇಕು ಎಂದು ಈಗಿನ ಪೋಷಕರು ಪ್ರತಿಪಾದಿಸುತ್ತಿದ್ದಾರೆ. ಹೀಗಿರುವಾಗ ಮಂಗಳೂರಿನ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಹೊಡೆದು ಇದೀಗ ಕೋರ್ಟ್ಗೆ ಅಲೆದಾಡುವಂತಾಗಿದ್ದು, ಶಿಕ್ಷಕಿಯ ಕೇಸ್ಗೆ ತಡೆ ನೀಡಲು ಹೈಕೋರ್ಟ್ ಸಹ ನಿರಾಕರಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಕೋರ್ಟ್ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
- Ramesha M
- Updated on: Jul 6, 2026
- 8:08 pm
ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್
KS Eshwarappa Case News: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿದ್ದು, ಇದೀಗ ಈ ಪ್ರಕರಣ ಈಶ್ವರಪ್ಪನವರಗೆ ಸಂಕಷ್ಟ ತಂದೊಡ್ಡಿದೆ. ಹೌದು....ಈ ಪ್ರಕರಣ ರದ್ದು ಕೋರಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದು, ಆದ್ರೆ ಹೈಕೋರ್ಟ್ ಈಶ್ವರಪ್ಪನವರ ಅರ್ಜಿಯನ್ನು ವಜಾ ಮಾಡಿದೆ.
- Ramesha M
- Updated on: Jul 3, 2026
- 2:32 pm
52 ಕ್ರಿಮಿನಲ್ ಪ್ರಕರಣ ವಾಪಸಾತಿಗೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ
52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ. ಯು.ಟಿ. ಖಾದರ್ ಶಿಫಾರಸು ಮೇರೆಗೆ ಕೈಗೊಂಡಿದ್ದ ಈ ನಿರ್ಧಾರಕ್ಕೆ ಕೋರ್ಟ್ ಬ್ರೇಕ್ ಹಾಕಿದ್ದು, ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು ಇದೇ ರೀತಿಯ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ನ ಹಿಂದಿನ ತೀರ್ಪಿಗೆ ಪ್ರಾಥಮಿಕ ದೃಷ್ಟಿಯಿಂದ ವಿರುದ್ಧವಾಗಿದೆ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
- Ramesha M
- Updated on: Jul 2, 2026
- 2:20 pm
ಆರ್ಎಸ್ಎಸ್ ನೋಂದಣಿ, ಸದಸ್ಯತ್ವದ ಬಗ್ಗೆ ಕೋರ್ಟ್ನಲ್ಲೂ ಪ್ರಿಯಾಂಕ್ ತಕರಾರು: ಸಚಿವರಿಗೆ ಉತ್ತರಿಸಿಯೇ ನ್ಯಾಯಾಲಯದಿಂದ ಸಮನ್ಸ್
Priyank Kharge: ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ಹ್ಯಾರಿಸ್ ನಲಪಾಡ್ಗೆ ಸಮನ್ಸ್ ಜಾರಿಗೂ ಮುನ್ನ ಕೋರ್ಟ್ ಸಚಿವರ ವಾದವನ್ನೂ ಪರಿಗಣಿಸಿದೆ. ಆರ್ಎಸ್ಎಸ್ ಚಟುವಟಿಕೆ ನಿರ್ಬಂಧಿಸುವ ಯತ್ನವೇ ಆರ್ಎಸ್ಎಸ್ ಗುರುತಿಸಬಹುದಾದ ಗುಂಪೆಂಬುದಕ್ಕೆ ನಿದರ್ಶನ. ಕೇರಳ ಹೈಕೋರ್ಟ್ RSS ಗುರುತಿಸಬಹುದಾದ ಗುಂಪೆಂದು ತೀರ್ಪು ನೀಡಿದೆ. ಹೀಗಾಗಿ RSS ಸದಸ್ಯರು ದಾಖಲಿಸಿದ ಮಾನನಷ್ಟ ಕೇಸ್ ವಿಚಾರಣೆಗೆ ಪರಿಗಣಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
- Ramesha M
- Updated on: Jul 2, 2026
- 11:47 am
ರೇಣುಕಾಸ್ವಾಮಿ ಕೇಸ್: 17ನೇ ಸಾಕ್ಷಿಗೆ ಬೆದರಿಕೆ ಕರೆ; ಭದ್ರತೆ ನೀಡಲು ಕೋರ್ಟ್ ಆದೇಶ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣ ನಡೆಯುತ್ತಿದೆ. ಈ ನಡುವೆ 17ನೇ ಸಾಕ್ಷಿಗೆ ಬೆದರಿಕೆ ಹಾಕಲಾಗಿದೆ ಎಂಬ ವಿಷಯ ತಿಳಿದುಬಂದಿದೆ. ಈ ಬಗ್ಗೆ ನ್ಯಾಯಾಲಯ ಖಡಕ್ ಎಚ್ಚರಿಕೆ ನೀಡಿದೆ. 17ನೇ ಸಾಕ್ಷಿಗೆ ಭದ್ರತೆ ನೀಡಲು ಕೋರ್ಟ್ ಆದೇಶಿಸಿದೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..
- Ramesha M
- Updated on: Jun 30, 2026
- 10:37 pm
ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡಬೇಕಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
High Court Order On Compensation For Divorced Wife: ವಿಚ್ಛೇದನ ಪ್ರಕರಣದಲ್ಲಿ ಪತ್ನಿಯ ಜೀವನಾಂಶ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಜೀವನಾಂಶ ನೀಡಲು ಸೂಚಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ. ಗಂಡ ಹೆಂಡ್ತಿ ವಿಚ್ಛೇದನ ಪ್ರಕರಣದ ವಿವರ ಇಲ್ಲಿದೆ.
- Ramesha M
- Updated on: Jun 29, 2026
- 7:38 pm
ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಕೋರ್ಟ್ ಸಮನ್ಸ್
ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್ಗೆ ಸಮನ್ಸ್ ಜಾರಿ ಮಾಡಿದೆ. ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮತ್ತು ಯೂಟ್ಯೂಬ್ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಜುಲೈ 21ರಂದು ಇಬ್ಬರೂ ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.
- Ramesha M
- Updated on: Jun 27, 2026
- 8:01 pm
ಯೂನಿಫಾರಂ ಇದೆ ಎಂದು ಏನು ಬೇಕಾದ್ರೂ ಮಾಡುತ್ತೀರಾ? ಆರೋಪಿ ತಮ್ಮನನ್ನು ಬಂಧಿಸಿದ ಪೊಲೀಸರಿಗೆ ಹೈಕೋರ್ಟ್ ತರಾಟೆ
ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ ಆರೋಪವಿರುವುದು ಪ್ರೊಬೇಷನರಿ ಎಸ್ಐ ಮೇಲೆ ಮಾತ್ರ. ಆದರೆ ಚಿತ್ರದುರ್ಗ ಪೊಲೀಸರು, ಆರೋಪಿಯ ಸಹೋದರನನ್ನು ಬಂಧಿಸಿದ್ದಾರೆ. ಹೀಗಾಗಿ ಪೊಲೀಸರ ವಿರುದ್ಧ ಕರ್ನಾಟಕ ಹೈಕೋರ್ಟ್ ಕೆಂಡಾಮಂಡಲವಾಗಿದ್ದು, ಕಾನೂನು ಉಲ್ಲಂಘಿಸಿ ಬಂಧಿಸುವ ಪೊಲೀಸರನ್ನು ಅಮಾನತುಪಡಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ. ಹಾಗಾದ್ರೆ, ಏನಿದು ಪ್ರಕರಣ ಎನ್ನುವ ಡಿಟೇಲ್ಸ್ ಇಲ್ಲಿದೆ.
- Ramesha M
- Updated on: Jun 25, 2026
- 6:19 pm
ನಿರೀಕ್ಷಣಾ ಜಾಮೀನು ಕೊಟ್ಟ ವಿಧಾನ ಸರಿಯಲ್ಲ: ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ಬಿಗ್ ಶಾಕ್
Daanagere News: ದಾವಣಗೆರೆಯ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ (POCSO Case) ಹೈಕೋರ್ಟ್ (High Court) ಮಹತ್ವದ ಆದೇಶ ಹೊರಡಿಸಿದೆ. ದೂರು ದಾಖಲಾಗುವ ಹಿಂದಿನ ದಿನವೇ ಜಾಮೀನು ಸಿಕ್ಕಿರುವುದು ಶ್ರೀಗಳ ನಡೆಗೆ ಹೈಕೋರ್ಟ್ ಆಘಾತ ವ್ಯಕ್ತಪಡಿಸಿದ್ದು, ನಿರೀಕ್ಷಣಾ ಜಾಮೀನು ರದ್ದುಗೊಳಿಸಿದೆ.
- Ramesha M
- Updated on: Jun 25, 2026
- 5:25 pm
‘ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ’: ಕ್ರೌರ್ಯ ಮೆರೆದ ಮಾಲೀಕನಿಗೆ ನಾಯಿ ವಾಪಸ್ ನೀಡಲು ಕೋರ್ಟ್ ನಕಾರ
Bangaluru News: ಕರ್ನಾಟಕ ಹೈಕೋರ್ಟ್ ಪ್ರಾಣಿ ಹಿಂಸೆ ಪ್ರಕರಣದಲ್ಲಿ ಮಹತ್ವದ ಆದೇಶ ನೀಡಿದೆ. 9 ನಾಯಿಗಳನ್ನು ಮಾಲೀಕನಿಂದ ರಕ್ಷಿಸಲು ಆದೇಶಿಸಿದೆ. ನಾಯಿಗಳನ್ನು ಮಾಲೀಕನಿಗೆ ಹಿಂತಿರುಗಿಸುವ ಮ್ಯಾಜಿಸ್ಟ್ರೇಟ್ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪ್ರಾಣಿಗಳಿಗೂ ಹಿಂಸೆಯಿಂದ ಮುಕ್ತವಾಗಿ ಬದುಕುವ ಹಕ್ಕಿದೆ ಎಂದು ನ್ಯಾ. ಎಂ. ನಾಗಪ್ರಸನ್ನ ಪೀಠ ಅಭಿಪ್ರಾಯಪಟ್ಟಿದೆ.
- Ramesha M
- Updated on: Jun 24, 2026
- 10:33 pm
ಡಿಕೆ ಶಿವಕುಮಾರ್ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್ ರದ್ದು
ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ನ್ನು ಬಿಜೆಪಿ (bjp) ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಗುರುವಾರ ಆದೇಶ ಹೊರಡಿಸಿದೆ. ಆ ಮೂಲಕ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ. ಕಾಂಗ್ರೆಸ್ ತಿರುಚಿದ ಪೋಸ್ಟರ್ಗಳು ಫೋರ್ಜರಿ ಮತ್ತು ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸುವ ಆರೋಪ ಕೇಳಿಬಂದಿದ್ದರಿಂದ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣದ ಸಂಬಂಧ ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದ್ದು,ಡಿಕೆಶಿ ನಿರಾಳರಾಗಿದ್ದಾರೆ.
- Ramesha M
- Updated on: Jun 19, 2026
- 6:26 pm