ಎಂಎಲ್ಸಿ ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್, ಬಂಧನದಿಂದ ಬಚಾವ್
ನೀಟ್ ಪರೀಕ್ಷೆ ಕುರಿತ ಪ್ರತಿಭಟನೆಗಳ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇನ್ನೊಂದೆಡೆ ಕರ್ನಾಟಕ ಹೈಕೋರ್ಟ್, ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.
- Ramesha M
- Updated on: Jul 27, 2026
- 5:09 pm
ಸುಳ್ಳು ಆದಾಯ ಪ್ರಮಾಣಪತ್ರ ವಿವಾದ: ಸುಮಾ ಸಾಹುಕಾರ್ಗೆ ಹೈಕೋರ್ಟ್ ತರಾಟೆ, ಕೆಪಿಎಸ್ಸಿ ಕಾರ್ಯವೈಖರಿ ಬಗ್ಗೆ ಗರಂ
ಸುಮಾ ಸಾಹುಕಾರ್ ಅವರು ಕೆಪಿಎಸ್ಸಿ ನೇಮಕಾತಿಗಾಗಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪದ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಾರ್ಷಿಕ 30 ಲಕ್ಷ ಆದಾಯವಿದ್ದರೂ 40,000 ಎಂದು ನಮೂದಿಸಿದ ಬಗ್ಗೆ ನ್ಯಾಯಾಲಯ ತೀವ್ರ ಪ್ರಶ್ನೆಗಳನ್ನು ಎತ್ತಿದಾಗ, ಸುಮಾ ಸಾಹುಕಾರ್ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಈ ಪ್ರಕರಣ ಕೆಪಿಎಸ್ಸಿ ನೇಮಕಾತಿಗಳಲ್ಲಿನ ಅಕ್ರಮಗಳನ್ನು ಮತ್ತೊಮ್ಮೆ ಎತ್ತಿ ಹಿಡಿದಿದೆ.
- Ramesha M
- Updated on: Jul 27, 2026
- 2:43 pm
ಪ್ರಜ್ವಲ್ ರೇವಣ್ಣ ಕೇಸ್: ಪೆನ್ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ 8 ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಈ ಸಂಬಂಧ 42 ನೇ ಎಸಿಜೆಎಂ ಕೋರ್ಟ್ ಮಹತ್ವ ಆದೇಶ ಹೊರಡಿಸಿದ್ದು, ಪೆನ್ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ ಎದುರಾಗಿದೆ.
- Ramesha M
- Updated on: Jul 25, 2026
- 8:02 pm
ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ
ನಿರ್ಲಕ್ಷಿತ ಹಿರಿಯ ನಾಗರಿಕರ ಆರೈಕೆ ಮತ್ತು ರಕ್ಷಣೆಗಾಗಿ ಸಮಗ್ರ ಕಾಯ್ದೆ ರೂಪಿಸಲು ಹೈಕೋರ್ಟ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಅಸಹಾಯಕ ವೃದ್ಧರಿಗೆ 24 ಗಂಟೆಗಳ ತುರ್ತು ಸ್ಪಂದನೆ, ಸಹಾಯವಾಣಿ, ತಾತ್ಕಾಲಿಕ ಆಶ್ರಯ ತಾಣಗಳು, ಸಮಗ್ರ ಆರೋಗ್ಯ ಸೇವೆಗಳು, ಮಾನಸಿಕ ಸಮಾಲೋಚನೆ ಮತ್ತು ಕಾನೂನು ನೆರವು ಒದಗಿಸುವ ಅಂಶಗಳನ್ನು ಈ ಕಾಯ್ದೆ ಒಳಗೊಂಡಿರಬೇಕು ಎಂದು ಪೀಠ ಸೂಚಿಸಿದೆ.
- Ramesha M
- Updated on: Jul 24, 2026
- 8:02 pm
RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್ಗೆ ಬಿಗ್ ಶಾಕ್
ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುತ್ತಿದ್ದಂತೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh) ವಿರುದ್ಧ ಮುಗಿಬಿದ್ದಿದ್ದಾರೆ. ಕಳೆದೊಂದು ತಿಂಗಳಿನಿಂದ ಆರ್ಎಸ್ಎಸ್ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದಾರೆ. ಇದರ ಮಧ್ಯೆ ಆರ್ಎಸ್ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಕೇಳಿಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ಗೆ ಬಿಗ್ ಶಾಕ್ ಕೊಟ್ಟಿದೆ.
- Ramesha M
- Updated on: Jul 21, 2026
- 6:09 pm
‘ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆಯಿರುವ ಯುವಜನತೆ ನರಳುತ್ತಾರೆ’: KPSC ಅಧ್ಯಕ್ಷಗೆ ಶಾಕ್ ಕೊಟ್ಟ ಕೋರ್ಟ್
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಯತ್ನಾಳ್ ಹಾಗೂ ವಿದ್ಯಾರ್ಥಿಗಳ ಸಂಘಟನೆ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಪೀಠ, ಸಾಹುಕಾರ್ ಪುತ್ರಿಯರ ಅಕ್ರಮ ನೇಮಕಾತಿ ಆರೋಪಗಳು ಆಘಾತಕಾರಿ ಎಂದಿದ್ದು, ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದೆ.
- Ramesha M
- Updated on: Jul 20, 2026
- 10:22 pm
ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಜೈಲಿನಲ್ಲಿರುವ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ (Parole) ಕೋರಿ ಯಾವುದೇ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ಟಿವಿಯಲ್ಲೇ ಅಜ್ಜಿಯ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಇದರ ಮಧ್ಯೆ ಇದೀಗ ಪ್ರಜ್ವಲ್ಗೆ ಕೋರ್ಟ್ನಿಂದ ಕೊಂಚ ರಿಲೀಫ್ ಸಿಕ್ಕಿದೆ.
- Ramesha M
- Updated on: Jul 20, 2026
- 9:57 pm
ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ:ಲಾಲ್ ಬಾಗ್ ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಕೆ
ರಾಜಧಾನಿ ಬೆಂಗಳೂರಿನ 'ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ವರೆಗೂ ಸುರಂಗ ರಸ್ತೆ ನಿರ್ಮಾಣ ಯೋಜನೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಮುಂದೂಡಿದೆ. ಅಲ್ಲದೇ ಲಾಲ್ಬಾಗ್ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಯಲಿದೆ.
- Ramesha M
- Updated on: Jul 16, 2026
- 6:05 pm
ಪರ್ಯಾಯ ಎಸ್ಐಆರ್ಗೆ ಆದೇಶಿಸಿದ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್
ಕೇಂದ್ರ ಚುನಾವಣೆ ಆಯೋಗ ದೇಶಾದ್ಯಂತ ಹಮ್ಮಿಕೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ, ರಾಜ್ಯ ಚುನಾವಣೆ ಆಯೋಗ ಬೆಂಗಳೂರಿನ ಕೆಲವು ವಾರ್ಡ್ಗಳಿಗೆ ಪ್ರತ್ಯೇಕ ಹಾಗೂ ಸಮಾನಾಂತರ ಪರಿಷ್ಕರಣೆಗೆ ಆದೇಶಿಸಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
- Ramesha M
- Updated on: Jul 8, 2026
- 1:12 pm
ಪ್ರದೀಪ್ ಈಶ್ವರ್ ವಿರುದ್ಧ ಘೋಷಣೆ ಕೂಗಿ ಚಪ್ಪಲಿ ಎಸೆದ ಪ್ರಕರಣ: ನಾಲ್ವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆಯಾಜ್ಞೆ
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, 800 ಜನರಲ್ಲಿ ಈ ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ದೇಕೆ? ಎಂದು ಪೊಲೀಸರನ್ನು ಪ್ರಶ್ನಿಸಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವ ಕಾರ್ಯಕ್ರಮದ ಬಳಿಕ ಚಿಕ್ಕಬಳ್ಳಾಪುರದಲ್ಲಿ ಜೂನ್ 27ರಂದು ದೊಡ್ಡ ಹೈಡ್ರಾಮಾವೇ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್ಐ ಅಮರ್ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿದ್ದರು.
- Ramesha M
- Updated on: Jul 7, 2026
- 6:41 pm
ಮಕ್ಕಳಿಗೆ ಹೊಡೆದು ಕಲಿಸುವ ಅಗತ್ಯವಿಲ್ಲ: ಶಿಕ್ಷಕಿ ವಿರುದ್ಧದ ಕೇಸ್ಗೆ ತಡೆ ನೀಡಲು ಹೈಕೋರ್ಟ್ ನಕಾರ
ಶಾಲೆಯಲ್ಲಿ ಮಕ್ಕಳು ತಪ್ಪು ಮಾಡಿದರೂ ಶಿಕ್ಷೆ ಕೊಡಬಾರದು, ಬೈ ಬಾರದು, ಕನಿಷ್ಠ ಪಕ್ಷ ಗಂಭೀರವಾಗಿ ಮನದಟ್ಟು ಮಾಡಬಾರದು, ಸ್ನೇಹ ಪೂರ್ವಕವಾಗಿ ಹೇಳಬೇಕು ಎಂದು ಈಗಿನ ಪೋಷಕರು ಪ್ರತಿಪಾದಿಸುತ್ತಿದ್ದಾರೆ. ಹೀಗಿರುವಾಗ ಮಂಗಳೂರಿನ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಹೊಡೆದು ಇದೀಗ ಕೋರ್ಟ್ಗೆ ಅಲೆದಾಡುವಂತಾಗಿದ್ದು, ಶಿಕ್ಷಕಿಯ ಕೇಸ್ಗೆ ತಡೆ ನೀಡಲು ಹೈಕೋರ್ಟ್ ಸಹ ನಿರಾಕರಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಕೋರ್ಟ್ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
- Ramesha M
- Updated on: Jul 6, 2026
- 8:08 pm
ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್
KS Eshwarappa Case News: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿದ್ದು, ಇದೀಗ ಈ ಪ್ರಕರಣ ಈಶ್ವರಪ್ಪನವರಗೆ ಸಂಕಷ್ಟ ತಂದೊಡ್ಡಿದೆ. ಹೌದು....ಈ ಪ್ರಕರಣ ರದ್ದು ಕೋರಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದು, ಆದ್ರೆ ಹೈಕೋರ್ಟ್ ಈಶ್ವರಪ್ಪನವರ ಅರ್ಜಿಯನ್ನು ವಜಾ ಮಾಡಿದೆ.
- Ramesha M
- Updated on: Jul 3, 2026
- 2:32 pm