ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ 53 ಎಕರೆ ಭೂಮಿ ಪರಭಾರೆ: ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶ
ಅಸ್ತಿತ್ವಕ್ಕೇ ಬರುವ ಮುನ್ನ ವರ್ಷಗಳ ಮೊದಲೇ ‘ಲೇಕ್ವ್ಯೂ ಟೂರಿಸಂ ಕಾರ್ಪೊರೇಷನ್’ ಸಂಸ್ಥೆಗೆ ಹೆಬ್ಬಾಳದಲ್ಲಿ 53 ಎಕರೆ ಭೂಮಿ ಹಂಚಿಕೆ ಮಾಡಿದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರದ ನಡೆಯನ್ನು ‘ಸಂವಿಧಾನಕ್ಕೆ ಮಾಡಿದ ವಂಚನೆ’ ಎಂದು ಕರೆದಿರುವ ನ್ಯಾಯಾಲಯ, ಹಗರಣದ ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ಸಂಸ್ಥೆಗೆ 10 ಲಕ್ಷ ರೂ. ದಂಡ ವಿಧಿಸಿದೆ.
- Ramesha M
- Updated on: Apr 13, 2026
- 2:02 pm
ಅಜಾಗರೂಕ ಚಾಲನೆ ಕೇಸ್: ಲ್ಯಾಂಬೋರ್ಗಿನಿಯಲ್ಲೇ ತೆರಳಿ ರಸ್ತೆ ಕ್ಲೀನ್ ಮಾಡಿ ಬರ್ತೀರಾ?; ಅರ್ಜಿದಾರರಿಗೆ ಕೋರ್ಟ್ ಪ್ರಶ್ನೆ
ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರನ್ನು ಅಜಾಗರೂಕವಾಗಿ ಚಲಾಯಿಸಿದ ಪ್ರಕರಣದ ಎಫ್ಐಆರ್ ರದ್ದು ಕೋರಿ ಚಾಲಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಮುದಾಯ ಸೇವೆ ಸಲ್ಲಿಸುವ ಷರತ್ತಿನ ಮೇಲೆ ಪ್ರಕರಣ ರದ್ದುಪಡಿಸುವುದಾಗಿ ಮೌಖಿಕವಾಗಿ ಹೇಳಿದೆ. ಲ್ಯಾಂಬೋರ್ಗಿನಿಯಲ್ಲೇ ತೆರಳಿ ರಸ್ತೆ ಕ್ಲೀನ್ ಮಾಡಿ ಬರ್ತೀರಾ? ಎಂದು ಪ್ರಶ್ನಿಸಿದ ನ್ಯಾಯಾಲಯ, ಸಂಚಾರ ನಿಯಮ ಉಲ್ಲಂಘಿಸುವವರಿಗೆ ಕಠಿಣ ಸಂದೇಶ ನೀಡಿದೆ.
- Ramesha M
- Updated on: Apr 10, 2026
- 6:36 pm
SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್
ಎಸ್ಸೆಸ್ಸೆಲ್ಸಿ ತೃತೀಯ ಭಾಷಾ ಪರೀಕ್ಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿದಾರರು ಅಧಿಕೃತ ದಾಖಲೆಗಳ ಬದಲು ಪತ್ರಿಕಾ ವರದಿಗಳನ್ನು ಅವಲಂಬಿಸಿದ್ದಕ್ಕಾಗಿ ಅವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಪರೀಕ್ಷೆಗಳು ನಡೆಯುತ್ತಿರುವಾಗಲೇ ಸರ್ಕಾರ ದಿಢೀರ್ ಆಗಿ ಘೋಷಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಅತಂತ್ರ ಸ್ಥಿತಿ ನಿರ್ಮಿಸಿದೆ. ಈ ನಿರ್ಧಾರ ಸಂವಿಧಾನದ 14 ಮತ್ತು 21ನೇ ವಿಧಿಯಡಿ ನೀಡಲಾದ ಸಮಾನತೆ ಮತ್ತು ಶಿಕ್ಷಣದ ಹಕ್ಕಿಗೆ ಚ್ಯುತಿ ತರುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದರು.
- Ramesha M
- Updated on: Apr 10, 2026
- 12:34 pm
ಯೋಗೇಶ್ ಗೌಡ ಕೊಲೆ ಪ್ರಕರಣ: ಇಂದಲ್ಲ, ಏಪ್ರಿಲ್ 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಪ್ರಕರಣದ ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಅವರ ಭವಿಷ್ಯ ಅಂದು ನಿರ್ಧಾರವಾಗಲಿದೆ. ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಸಾವಿರಾರು ಪುಟಗಳ ದಾಖಲೆಗಳು ಮತ್ತು ಸಾಕ್ಷ್ಯಗಳ ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶದ ಅಗತ್ಯವಿದೆ ಎನ್ನಲಾಗಿದೆ.
- Ramesha M
- Updated on: Apr 9, 2026
- 12:41 pm
ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದ ದೈಹಿಕ ಸಂಪರ್ಕ: ಪತಿಗೆ ಶಾಕ್ ಕೊಟ್ಟ ಹೈಕೋರ್ಟ್
ಪತ್ನಿಯಿಂದ ಬೇರ್ಪಟ್ಟ ನಂತರವೂ ಒತ್ತಾಯದ ದೈಹಿಕ ಸಂಪರ್ಕ ನಡೆಸಿದ ಪ್ರಕರಣ ಸಂಬಂಧ ಕೇಸ್ ರದ್ದುಗೊಳಿಸುವಂತೆ ಪತಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ಆ ಮೂಲಕ ಪ್ರತ್ಯೇಕವಾಗಿರುವ ದಂಪತಿಗಳಲ್ಲಿ ಪತ್ನಿಯ ಸಮ್ಮತಿ ಇಲ್ಲದೆ ದೈಹಿಕ ಸಂಪರ್ಕ ಅಪರಾಧ. ಇಂತಹ ಸಂದರ್ಭ ಐಪಿಸಿ 376(ಬಿ) ಅಡಿಯಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಅಗತ್ಯವೆಂಬ ಸಂದೇಶವನ್ನು ಕೋರ್ಟ್ ನೀಡಿದೆ.
- Ramesha M
- Updated on: Apr 8, 2026
- 3:40 pm
ಆಸ್ಪತ್ರೆಯಲ್ಲಿ ತ್ರಿಕೋನ ಪ್ರೇಮಕ್ಕೆ ನರ್ಸ್ ಬಲಿ: ಹೈಕೋರ್ಟ್ ತೀರ್ಪಿನಿಂದ ಅನಸ್ತೇಶಿಯಾ ವೈದ್ಯೆಗೆ ಬಿಗ್ ರಿಲೀಫ್!
ಬೆಂಗಳೂರಿನಲ್ಲಿ ನರ್ಸ್ ಸರಿತಾ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಡೆತ್ ನೋಟ್ನಲ್ಲಿ ಹೆಸರಿಸಲಾಗಿದ್ದ ಅನಸ್ತೇಶಿಯಾಲಜಿಸ್ಟ್ ವೈದ್ಯೆಯ ಮೇಲಿನ ಪ್ರಕರಣವನ್ನು ರದ್ದುಗೊಳಿಸಿದೆ. ಆದರೆ, ಮುಖ್ಯ ಆರೋಪಿ ವೈದ್ಯ ಪೃಥ್ವಿ ವಿರುದ್ಧದ ವಿಚಾರಣೆಯನ್ನು ಮುಂದುವರಿಸಲು ಸೂಚಿಸಿದೆ. ಪ್ರೇಮ ತ್ರಿಕೋನದಿಂದಾಗಿ ಆತ್ಮಹತ್ಯೆ ನಡೆದಿದೆ ಎಂದು ಆರೋಪಿಸಲಾಗಿತ್ತು. ನ್ಯಾಯಾಲಯದ ಈ ನಿರ್ಧಾರ ಕಾನೂನು ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
- Ramesha M
- Updated on: Apr 7, 2026
- 7:06 pm
ಬಿಕ್ಲು ಶಿವ ಕೊಲೆ ಕೇಸ್: ಜೈಲಿನಿಂದ ಹೊರಬಂದಿದ್ದರೂ ಭೈರತಿ ಬಸವರಾಜ್ಗೆ ಎದುರಾಯ್ತು ಸಂಕಷ್ಟ
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೆ.ಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಶಾಸಕರ ಜಾಮೀನು ರದ್ದುಪಡಿಸುವಂತೆ ಸಿಐಡಿ ಪೊಲೀಸರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ಮತ್ತೆ ಸಂಕಷ್ಟ ಶುರುವಾಗಿದೆ.
- Ramesha M
- Updated on: Apr 6, 2026
- 8:57 pm
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ
2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಗೆದ್ದು, ಶಾಸಕರಾಗಿದ್ದ ಕಾಂಗ್ರೆಸ್ನ ಕೆವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಮರು ಮತ ಎಣಿಕೆಗೆ ಆದೇಶಿಸಿತ್ತು. ಆದ್ರೆ, ಮರುಮತದಾನದಲ್ಲಿ ನಂಜೇಗೌಡ ಅವರೇ ಗೆದ್ದಿದ್ದಾರೆ. ಹೀಗಾಗಿ ನಂಜೇಗೌಡ ಅವರ ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಮತ್ತೊರ್ವ ಶಾಸಕ ಸ್ಥಾನಕ್ಕೆ ಕುತ್ತುಬಂದಿದೆ. ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಸಲ್ಲಿಸಿದ್ದ ತಕರಾರು ಅರ್ಜಿ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
- Ramesha M
- Updated on: Apr 6, 2026
- 4:18 pm
ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣಗೆ ಬಿಗ್ ಶಾಕ್: ಜಾಮೀನು ರಹಿತ ವಾರೆಂಟ್ ಜಾರಿ
ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. 2018ರ ವಿಧಾನಸಭಾ ಚುನಾವಣೆ ವೇಳೆ ಯಾವುದೇ ಅನುಮತಿ ಪಡೆಯದೆ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ ಪ್ರಕರಣದಲ್ಲಿ ಕೋರ್ಟ್ ವಿಚಾರಣೆಗೆ ಗೈರಾದ ಕಾರಣ ವಾರೆಂಟ್ ಜಾರಿ ಮಾಡಲಾಗಿದೆ.
- Ramesha M
- Updated on: Apr 4, 2026
- 9:37 pm
ಕುಮಾರಸ್ವಾಮಿ-ಲೋಕಾಯುಕ್ತ ಎಡಿಜಿಪಿ ಜಟಾಪಟಿ ಕ್ಲೈಮ್ಯಾಕ್ಸ್ ಹಂತಕ್ಕೆ: ರಾಜಿ ಸಂಧಾನಕ್ಕೆ ಸಮ್ಮತಿ
ಭಾರೀ ಸಂಚಲನ ಮೂಡಿಸಿದ್ದ ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ಸಲಹೆ ಮೇರೆಗೆ ಈ ಪ್ರಕರಣ ರಾಜಿ ಸಂಧಾನ ಹಂತಕ್ಕೆ ಬಂದಿದೆ. ಹಾಗಾದ್ರೆ, ಕೋರ್ಟ್ ಹೇಳಿದ್ದೇನು? ಏನಿದು ಪ್ರಕರಣ ಎನ್ನುವ ವಿವರ ಇಲ್ಲಿದೆ.
- Ramesha M
- Updated on: Apr 2, 2026
- 5:22 pm
ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ
ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ಆಡಳಿತದಲ್ಲಿ ನಡೆದಿದೆ ಎನ್ನಲಾದ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಜೆಡಿಎಸ್ ಮಾಜಿ ಶಾಸಕ ಸಾ.ರಾ.ಮಹೇಶ್ ಬಯಲಿಗೆ ಎಳೆದಿರುವ ಪ್ರಕರಣದಲ್ಲಿ ಇದೀಗ ಐಎಎಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
- Ramesha M
- Updated on: Apr 1, 2026
- 10:22 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್ಪೆಕ್ಟರ್ಗೆ ಹೈಕೋರ್ಟ್ ತರಾಟೆ
ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ಮಂಗಳೂರು ಜಿಲ್ಲೆಯ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಅವರನ್ನ ಅಮಾನತು ಮಾಡಲಾಗಿದೆ. ಸದ್ಯ ಇನ್ಸ್ಪೆಕ್ಟರ್ ಕಾಮಕಾಂಡ ಬಗ್ಗೆ ತನಿಖೆ ನಡೆಯುತ್ತಿದೆ. ಇದರ ನಡುವೆ ಶಿಕ್ಷಕಿಯೊಬ್ಬರು ದಾಖಲಿಸಿದ ಅತ್ಯಾಚಾರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣವನ್ನು ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಸಂದೇಶ್ ನನ್ನು ತರಾಟೆಗೆ ತೆಗೆದುಕೊಂಡಿದೆ.
- Ramesha M
- Updated on: Apr 1, 2026
- 10:23 pm