ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ : ಕಾನೂನು ಸಮರಕ್ಕಿಳಿದ ತೇಜಸ್ವಿ ಸೂರ್ಯ
ಬೆಂಗಳೂರು ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಸಾರ್ವಜನಿಕರಲ್ಲಿ ಆಕ್ರೋಶವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ ಮಾಡುತ್ತಿವೆ. ಈ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದರ ನಿಗದಿ ಪರಿಷ್ಕರಣೆ ಸಮಿತಿ ವರದಿ ಬಿಡುಗಡೆಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ದರ ಏರಿಕೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಬಿಎಂಆರ್ಸಿಎಲ್ ಜಾಹೀರಾತುಗಳ ಮೂಲಕ ಆರ್ಥಿಕ ನಷ್ಟವನ್ನು ತುಂಬಲು ಯತ್ನಿಸುತ್ತಿದೆ.
- Ramesha M
- Updated on: Jul 6, 2025
- 9:17 pm
ನೈಸ್ ಯೋಜನೆಗಾಗಿ 300 ಎಕರೆಗೂ ಹೆಚ್ಚಿನ ಕೆಐಎಡಿಬಿ ಭೂಸ್ವಾಧೀನ ರದ್ದು
ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಕೆಐಎಡಿಬಿ ನಡೆಸಿದ 300 ಎಕರೆಗೂ ಹೆಚ್ಚು ಭೂಸ್ವಾಧೀನ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪರಿಹಾರ ಘೋಷಣೆಯಾಗದ 50ಕ್ಕೂ ಹೆಚ್ಚು ರೈತರ ರಿಟ್ ಅರ್ಜಿಗಳನ್ನು ನ್ಯಾಯಾಲಯ ಪರಿಗಣಿಸಿ ಈ ತೀರ್ಪು ನೀಡಿದೆ. 23 ವರ್ಷಗಳಿಂದ ಪರಿಹಾರ ವಿಳಂಬವಾಗಿರುವುದು ಈ ತೀರ್ಪಿಗೆ ಕಾರಣ. ಕೆಐಎಡಿಬಿ ವಿರುದ್ಧದ ಶಕುಂತಲಮ್ಮ ಪ್ರಕರಣದ ತೀರ್ಪು ಉಲ್ಲೇಖಿಸಲಾಗಿದೆ.
- Ramesha M
- Updated on: Jul 5, 2025
- 8:56 pm
ಕನ್ನಡದ ಬಗ್ಗೆ ವಿವಾದ ಮಾಡಿಕೊಂಡ ಕಮಲ್ ಹಾಸನ್ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್
ಕಮಲ್ ಹಾಸನ್ ಅವರು "ಥಗ್ ಲೈಫ್" ಚಿತ್ರದ ಪ್ರಚಾರದ ವೇಳೆ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈಗ ನ್ಯಾಯಾಲಯವು ಅವರ ಮೇಲೆ ನಿರ್ಬಂಧ ವಿಧಿಸಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅರ್ಜಿಯನ್ನು ನ್ಯಾಯಾಲಯ ಒಪ್ಪಿಕೊಂಡು ಕನ್ನಡ ನೆಲ, ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಹೇಳಿಕೆ ನೀಡದಂತೆ ಸೂಚಿಸಿದೆ. ಈ ಆದೇಶವನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಆಗುತ್ತದೆ.
- Ramesha M
- Updated on: Jul 5, 2025
- 7:08 am
ಸಿಎಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ: ಬಿಜೆಪಿ MLC ರವಿಕುಮಾರ್ಗೆ ತಾತ್ಕಾಲಿಕ ರಿಲೀಫ್
ಕರ್ನಾಟಕ ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರರಕಣ ಸಂಬಂಧ ಬಿಜೆಪಿ ವಿಧಾನಪರಿಷತ್ ಎನ್ ರವಿಕುಮಾರ್ ಅವರಿಗೆ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಜೊತೆಗೆ ಒಂದು ಖಡಕ್ ಸೂಚನೆಯೊಂದನ್ನು ಸಹ ನೀಡಿದೆ. ಹಾಗಾದ್ರೆ, ಕೋರ್ಟ್ ನಲ್ಲಿ ನಡೆದ ವಾದ ಪ್ರತಿವಾದ ಹೇಗಿತ್ತು ಎನ್ನುವ ವಿವರ ಇಲ್ಲಿದೆ.
- Ramesha M
- Updated on: Jul 4, 2025
- 5:59 pm
ಬೈಕ್ ಟ್ಯಾಕ್ಸಿಯಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲ: ಕೋರ್ಟ್ನಲ್ಲಿ ಏನೇನಾಯ್ತು?
ಕರ್ನಾಟಕದಲ್ಲಿ ಓಲಾ, ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧದ ವಿರುದ್ಧ ಮಹಿಳಾ ಪ್ರಯಾಣಿಕರು ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಬೈಕ್ ಟ್ಯಾಕ್ಸಿ ಸುರಕ್ಷಿತ ಮತ್ತು ಅನುಕೂಲಕರ ಎಂದು ವಾದಿಸಲಾಗಿದೆ. ಹೈಕೋರ್ಟ್ ಜುಲೈ ೪ಕ್ಕೆ ವಿಚಾರಣೆ ಮುಂದೂಡಿದೆ. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲಾಗಿದೆ.
- Ramesha M
- Updated on: Jul 2, 2025
- 10:04 pm
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಕ್ರಮ ಬಯಲಿಗೆ
ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರೂಪಾಯಿ ಅವ್ಯವಹಾರದ ತನಿಖೆಯಲ್ಲಿ ಸಿಬಿಐ ಹೊಸ ಅಕ್ರಮವನ್ನು ಪತ್ತೆಹಚ್ಚಿದೆ. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಕೋಟ್ಯಾಂತರ ರೂಪಾಯಿ ಹಣ ಆರೋಪಿ ನೆಕ್ಕಂಟಿ ನಾಗರಾಜ್ಗೆ ವರ್ಗಾವಣೆಯಾಗಿದೆ ಎಂದು ಸಿಬಿಐ ಕೋರ್ಟ್ಗೆ ವರದಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ಹಲವಾರು ಸರ್ಕಾರಿ ನೌಕರರು ಮತ್ತು ಖಾಸಗಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹೈಕೋರ್ಟ್ ಸಿಐಡಿ, ಇಡಿ ಮತ್ತು ಇತರ ತನಿಖಾ ಸಂಸ್ಥೆಗಳಿಗೆ ತನಿಖೆ ನಡೆಸಲು ಸೂಚಿಸಿದೆ.
- Ramesha M
- Updated on: Jul 2, 2025
- 3:02 pm
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದು ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಸರ್ಕಾರ
ಆರ್ಸಿಬಿ ವಿಜಯೋತ್ಸವದ ಸಂದರ್ಭ ಬೆಂಗಳೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿತ ವಿಚಾರವಾಗಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡುವಣ ಕಾನೂನು ಸಮರ ಮುಂದುವರಿದಿದೆ. ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ ಮೆಟ್ಟಿಲೇರಿದೆ.
- Ramesha M
- Updated on: Jul 2, 2025
- 11:15 am
ವಾಲ್ಮೀಕಿ ನಿಗಮ ಹಗರಣ ತನಿಖೆ ಸಿಬಿಐಗೆ ನೀಡಿ ಕೋರ್ಟ್ ಆದೇಶ: ಹಲವರಿಗೆ ಢವ ಢವ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕರ್ನಾಟಕ ಹೈಕೋರ್ಟ್ ಎಸ್ಐಟಿಗೆ ಆದೇಶಿಸಿದೆ.ಸದ್ಯ ಪ್ರಕರಣದ ತನಿಖೆಯನ್ನು ಎಸ್ಐಟಿ ಮತ್ತು ಇಡಿ ನಡೆಸುತ್ತಿತ್ತು. ಇದೀಗ, ಹೈಕೋರ್ಟ್ ಸೂಚನೆ ಮೇರೆಗೆ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆಯಾಗಲಿದೆ.
- Ramesha M
- Updated on: Jul 1, 2025
- 6:22 pm
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ
ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಘಟನೆ ಸಂಭಂದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸಿಎಟಿ ಮಂಗಳವಾರ ರದ್ದುಪಡಿಸಿದೆ.
- Ramesha M
- Updated on: Jul 1, 2025
- 11:40 am
NOC ಇಲ್ಲದಿದ್ರೂ ಚಿನ್ನಸ್ವಾಮಿ ಸ್ಟೇಡಿಯಂಗೆ ಕರೆಂಟ್ ಕೊಟ್ಟಿದ್ದಕ್ಕೆ ಹೈಕೋರ್ಟ್ ಅಸಮಾಧಾನ
ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಈ ಬೆನ್ನಲ್ಲೇ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬೆಸ್ಕಾಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನೋಟಿಸ್ ನೀಡಿದೆ. ನೋಟಿಸ್ ನೀಡಲು ಕಾರಣವೇನು? ಇಲ್ಲಿದೆ ವಿವರ
- Ramesha M
- Updated on: Jun 30, 2025
- 2:56 pm
ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ವಕ್ಫ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದ ಎರಡು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಬಸವರಾಜ ಬೊಮ್ಮಾಯಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ರದ್ದು ಕೋರಿ ಬೊಮ್ಮಾಯಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
- Ramesha M
- Updated on: Jun 27, 2025
- 1:09 pm
ಕೆಆರ್ಎಸ್ ಡ್ಯಾಂ ಬಳಿ ಮನರಂಜನಾ ಪಾರ್ಕ್, ಕಾವೇರಿ ಆರತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಡಿಸ್ನಿಲ್ಯಾಂಡ್ ಶೈಲಿಯ ಮನರಂಜನಾ ಪಾರ್ಕ್ ನಿರ್ಮಾಣ ಮತ್ತು ಕಾವೇರಿ ಆರತಿಯನ್ನು ಕೆಆರ್ಎಸ್ ಡ್ಯಾಮ್ ಬಳಿ ಹಮ್ಮಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮದಿಂದ ವಿವರಣೆ ಕೋರಿದೆ. ಡ್ಯಾಮ್ನ ಸುರಕ್ಷತೆ ಮತ್ತು ಪರಿಸರದ ಮೇಲಿನ ಪರಿಣಾಮಗಳ ಕುರಿತು ಪ್ರಶ್ನಿಸಲಾಗಿದೆ.
- Ramesha M
- Updated on: Jun 27, 2025
- 12:28 pm