ಹೊಸ ವರ್ಷದ ಹೊತ್ತಲ್ಲಿ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ಇಡಿ ಪ್ರಕರಣದಲ್ಲಿ ಜಾಮೀನು
ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪಪ್ಪಿ ಅವರಿಗೆ ಹೊಸ ವರ್ಷದ ಮುನ್ನವೇ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಕ್ರಮ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಇಡಿ , ನಂತರ ಅವರನ್ನು ಬಂಧಿಸಿತ್ತು.
- Ramesha M
- Updated on: Dec 30, 2025
- 5:35 pm
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್
ಮಾಜಿ ಸಚಿವ, ಹಾಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಕೋರ್ಟ್ ನಿರಾಕರಿಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ರೇವಣ್ಣ ಇದೀಗ ಕೋರ್ಟ್ ಆದೇಶದಿಂದ ನಿರಾಳರಾಗಿದ್ದಾರೆ. ಹಾಗಾದ್ರೆ, ಕೋರ್ಟ್ ಕೈಬಿಟ್ಟ ಸೆಕ್ಷನ್ ಯಾವುದು? ಏನು ಅಪರಾಧ, ಏನು ಶಿಕ್ಷೆ ಎನ್ನುವ ವಿವರ ಇಲ್ಲಿದೆ.
- Ramesha M
- Updated on: Dec 29, 2025
- 7:39 pm
ಗಾನವಿ ಕೇಸ್: ಕೋರ್ಟ್ ಮೆಟ್ಟಿಲೇರಿದ ಸೂರಜ್ ಕುಟುಂಬ; ಕಾರಣ ಇಲ್ಲಿದೆ
ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲಿ ಪತಿ ಸೂರಜ್ ಕುಟುಂಬ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದೆ. ಗಾನವಿ ಹಿಂದೆ ಹರ್ಷ ಎಂಬಾತನನ್ನು ಪ್ರೀತಿಸುತ್ತಿದ್ದಳು, ಮದುವೆ ನಂತರ ಪ್ರೀತಿ ವಿಚಾರವನ್ನು ಆಕೆ ಸೂರಜ್ಗೆ ತಿಳಿಸಿದ್ದಳು. ಹೀಗಾಗಿಯೇ ಹನಿಮೂನ್ನಿಂದ ಅವರು ಅರ್ಧಕ್ಕೇ ವಾಪಸ್ ಆಗಿದ್ದು, ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಕುಟುಂಬಸ್ಥರ ಆರೋಪಗಳಿಗೆ ನೊಂದು ಸೂರಜ್ ಕೂಡ ಪ್ರಾಣ ಬಿಟ್ಟಿದ್ದಾರೆ ಎಂದು ಕೋರ್ಟ್ಗೆ ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.
- Ramesha M
- Updated on: Dec 29, 2025
- 5:23 pm
ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ರಿಲೀಫ್, ಬಂಧನದಿಂದ ಪಾರು
ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದಾಗಿದ್ದರಿಂದ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಸದ್ಯಕ್ಕೆ ಬಂಧನದಿಂದ ಪಾರಾಗಿದ್ದಾರೆ.
- Ramesha M
- Updated on: Dec 26, 2025
- 8:09 pm
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಬಿಗ್ ಶಾಕ್
ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಬಂಧನದ ಭೀತಿ ಹಿನ್ನಲೆಯಲ್ಲಿ ತಲೆಮರೆಸಿಕೊಂಡಿರುವ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಜಾಮೀನಿ ನಿರೀಕ್ಷೆಯಲ್ಲಿದ್ದ ಎಂಎಲ್ಗೆ ನಿರಾಸೆಯಾಗಿದ್ದು, ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದು.
- Ramesha M
- Updated on: Dec 23, 2025
- 6:44 pm
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ, ಬಂಧನ ಭೀತಿ
ಬಿಜೆಪಿ ನಾಯಕ ಭೈರತಿ ಬಸವರಾಜುಗೆ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇದೀಗ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್, ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದು ಭೈರತಿ ಬಸವರಾಜುರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
- Ramesha M
- Updated on: Dec 19, 2025
- 1:55 pm
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ಗಿಲ್ಲ ರಿಲೀಫ್: ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ದುಬೈಯಿಂದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ನಲ್ಲಿ ನಿರಾಸೆ ಆಗಿದೆ. ಆರೋಪಿಗಳು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ, ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸಂಕಷ್ಟ ಮುಂದುವರಿದಂತಾಗಿದೆ.
- Ramesha M
- Updated on: Dec 19, 2025
- 11:55 am
ಮುಡಾ ಕೇಸ್ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?
ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಲೋಕಾಯುಕ್ತ ಬಿ-ವರದಿಗೆ ದೂರುದಾರ ಸ್ನೇಹಮಯಿ ಕೃಷ್ಣ ಆಕ್ಷೇಪ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ತನಿಖೆ ಅಂತಿಮ ಹಂತದಲ್ಲಿದೆ ಎಂದು ಲೋಕಾಯುಕ್ತ ತಿಳಿಸಿದ್ದು, ದೂರುದಾರರು ತನಿಖೆ ವಿಳಂಬದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಬಿ ರಿಪೋರ್ಟ್ ಸಂಬಂಧಿಸಿದಂತೆ ಹೆಚ್ಚುವರಿ ವಾದಮಂಡನೆಯಿದ್ದರೆ ಸಲ್ಲಿಸಿ ಎಂದು ಇಡಿ, ದೂರುದಾರಿಗೆ ಸೂಚಿಸಿದೆ.
- Ramesha M
- Updated on: Dec 18, 2025
- 5:31 pm
ರೇಣುಕಾಸ್ವಾಮಿ ಕೇಸ್: ಎ1 ಪವಿತ್ರಾ ಗೌಡ ಇರುವ ಸೆಲ್ಗೆ ಟಿವಿ ನೀಡಲು ಕೋರ್ಟ್ ಸೂಚನೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಇಂದಿನಿಂದ (ಡಿಸೆಂಬರ್ 17) ಆರಂಭ ಆಗಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ರೇಣುಕಾಸ್ವಾಮಿ ತಂದೆ, ತಾಯಿ ವಿಚಾರಣೆಗೆ ಹಾಜರಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಳಿತು ದರ್ಶನ್, ಪವಿತ್ರಾ ಗೌಡ ಅವರು ಕೋರ್ಟ್ ಕಲಾಪ ವೀಕ್ಷಣೆ ಮಾಡಿದ್ದಾರೆ.
- Ramesha M
- Updated on: Dec 17, 2025
- 7:33 pm
ರೇಣುಕಾಸ್ವಾಮಿ ಪ್ರಕರಣ: ದರ್ಶನ್ ಕೇಸ್ ಟ್ರಯಲ್ ಆರಂಭಕ್ಕೆ ಸಕಲ ಸಿದ್ಧತೆ
ಬುಧವಾರ (ಡಿಸೆಂಬರ್ 17) ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳು ಹಾಜರಾಗಲಿದ್ದಾರೆ. 7, 8ನೇ ಸಾಕ್ಷಿಗಳಾದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಹಾಗೂ ತಾಯಿ ರತ್ನಪ್ರಭ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಈ ಪ್ರಕರಣದಲ್ಲಿನ ಪ್ರಮುಖ ಸಾಕ್ಷಿಗಳ ವಿಚಾರಣೆ ಬಳಿಕ ದರ್ಶನ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
- Ramesha M
- Updated on: Dec 16, 2025
- 7:30 pm
ಕಿಡ್ನಿ ದಾನಕ್ಕೆ ಮನವಿ ಮಾಡಿದ್ದ ವೈದ್ಯೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರಿನ ವೈದ್ಯೆಯೊಬ್ಬರು ಯಾವುದೇ ಪ್ರತಿಫಲ ಬಯಸದೆ ಕಿಡ್ನಿ ದಾನ ಮಾಡಲು ಮುಂದಾಗಿದ್ದರು, ಆದರೆ ಆಸ್ಪತ್ರೆ ಅವಕಾಶ ನೀಡಿರಲಿಲ್ಲ. ಈ ಅಪರೂಪದ ಪ್ರಕರಣವನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ವೈದ್ಯೆಯ ಮನವಿಯನ್ನು ಪುರಸ್ಕರಿಸಿದೆ. ಅಂಗಾಂಗ ಕಸಿ ಸಮಿತಿಗೆ ಅರ್ಹ ರೋಗಿಗಳನ್ನು ಪರಿಶೀಲಿಸಿ, ವೈದ್ಯೆಯ ದಾನವನ್ನು ಸ್ವೀಕರಿಸಲು ಸೂಚಿಸಿದೆ.
- Ramesha M
- Updated on: Dec 16, 2025
- 4:10 pm
ಇನ್ಮುಂದೆ ರೌಡಿಶೀಟರ್ಗಳನ್ನು ಬೇಕಾಬಿಟ್ಟಿ ಠಾಣೆಗೆ ಕರೆಸುವಂತ್ತಿಲ್ಲ: ಪ್ರಕ್ರಿಯೆ ನಿಗದಿಪಡಿಸಿದ ಹೈಕೋರ್ಟ್
ಚುನಾವಣೆ, ಹಬ್ಬ ಹರಿ ದಿನಗಳಂದು ಸೇರಿ ಕೆಲ ಸಂದರ್ಭದಲ್ಲಿ ಮೌಖಿಕವಾಗಿ ಠಾಣೆಗೆ ರೌಡಿಶೀಟರ್ಗಳನ್ನು ಕರೆಸಿ ಪೊಲೀಸರು ಎಚ್ಚರಿಕೆ ನೀಡುತ್ತಿದ್ದರು. ಸದ್ಯ ಈ ವಿಧಾನಕ್ಕೆ ಬ್ರೇಕ್ ಬೀಳಲಿದೆ. ರೌಡಿಶೀಟರ್ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
- Ramesha M
- Updated on: Dec 10, 2025
- 9:31 pm