ಗೃಹಲಕ್ಷ್ಮಿ ಹಣ ಬಾಕಿ: ಮಹಿಳೆಯರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಮಹತ್ವದ ಆದೇಶ
ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ತಾಂತ್ರಿಕ ಗೊಂದಲದಿಂದ ಫೆಬ್ರವರಿ-ಮಾರ್ಚ್ ತಿಂಗಳ ಕಂತುಗಳು ಬಾಕಿಯಿದ್ದು, ಕೂಡಲೇ ಪಾವತಿಸಲು ಅರ್ಜಿದಾರರು ಮನವಿ ಮಾಡಿದ್ದರು.
- Ramesha M
- Updated on: May 21, 2026
- 7:06 pm
ಸಾರಿಗೆ ನೌಕರರಿಗೆ ಬಿಗ್ ಶಾಕ್: ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಆದೇಶ
ನಾಳೆ (ಮೇ 20) ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಸರ್ಕಾರ ಮತ್ತು ನೌಕರರ ನಡುವೆ ಚರ್ಚೆ ನಡೆಯಲಿ, ಮುಷ್ಕರ ಬೇಡ ಎಂದು ಕೋರ್ಟ್ ಮಹತ್ವದ ಆದೇಶ ನೀಡಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ಗೆ ಕೆಲಸದ ಮಹಿಳೆ ಮತ್ತು ಕಟ್ಟಡ ಕಾರ್ಮಿಕ ಪಿಐಎಲ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
- Ramesha M
- Updated on: May 19, 2026
- 11:33 am
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದ ಕೋರ್ಟ್
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 7 ವರ್ಷ ಶಿಕ್ಷೆಗೆ ಗುರಿಯಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್, ಶಿಕ್ಷೆ ಪ್ರಶ್ನಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ವಿಭಾಗೀಯ ಪೀಠ, ಟಿಂಗರಿಕರ್ ವಿರುದ್ಧ ಗಂಭೀರ ಆರೋಪಗಳಿದ್ದು, ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟಿದೆ. ವಿಚಾರಣೆಯನ್ನು ಮುಂದೂಡಿದೆ.
- Ramesha M
- Updated on: May 14, 2026
- 4:17 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ
2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲ ಮಯವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಕಾನೂನು ಸಮರ ನಡೆಸಿದ್ದಾರೆ. ಈ ನಡುವೆ ಸುಪ್ರೀಂಕೋರ್ಟ್ ಕಾಂಗ್ರೆಸ್ನ ರಾಜೇಗೌಡಗೆ ಬಿಗ್ ರಿಲೀಫ್ ನೀಡಿದ್ದು, ಇದರಿಂದ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದೆ. ಇನ್ನೊಂದೆಡೆ ಅಂಚೆ ಮತ ಮರು ಎಣಿಕೆ ವೇಳೆ ಗೆದ್ದಿದ್ದ ಬಿಜೆಪಿಯ ಜೀವರಾಜ್ ಗೆ ಮತ್ತೆ ಹಿನ್ನಡೆಯಾಗಿದೆ.
- Ramesha M
- Updated on: May 11, 2026
- 5:29 pm
ಜಾತಿ ನಿಂದನೆ ಕೇಸ್: ಕರ್ನಾಟಕ ಬಿಜೆಪಿ ಎಂಎಲ್ಎಗೆ ಅರೆಸ್ಟ್ ವಾರೆಂಟ್, ಏನಿದು ಪ್ರಕರಣ?
ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧದ ಜಾತಿ ನಿಂದನೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಈ ಪ್ರಕರಣ ಶಾಸಕರಿಗೆ ಸಂಕಷ್ಟ ತಂದೊಡ್ಡಿದ್ದು, ಬಂಧನ ಭೀತಿಯಲ್ಲಿದ್ದಾರೆ. ಹೌದು...ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಏನಿದು ಪ್ರಕರಣ ಎನ್ನುವ ಡಿಟೇಲ್ಸ್ ಇಲ್ಲಿದೆ.
- Ramesha M
- Updated on: May 5, 2026
- 10:55 pm
ದರ್ಶನ್ ಜಾಮೀನು ಅರ್ಜಿ ವಿಚಾರಣೆ: 1 ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ
ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ತಾರತಮ್ಯ ಆಗುತ್ತಿದೆ ಎಂದು ದರ್ಶನ್ ಆರೋಪಿಸಿದ್ದರು. ಸಹ-ಕೈದಿಗಳಿಂದ ನಿಂದನೆ ಮತ್ತು ಬೆದರಿಕೆ ಇದೆ ಎಂದು ಕೂಡ ಹೇಳಿದ್ದರು. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಅವರು ಕಷ್ಟ ಹೇಳಿಕೊಂಡಿದ್ದರು. ಆ ಬಗ್ಗೆ ಸುಪ್ರೀಂ ಕೋರ್ಟ್ ವರದಿ ಕೇಳಿದೆ.
- Ramesha M
- Updated on: May 4, 2026
- 3:12 pm
ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ನಿಂದನೆ: ಹಲವು ಕಷ್ಟ ಹೇಳಿಕೊಂಡ ದರ್ಶನ್
ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ತಮಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ದೀರ್ಘಕಾಲದ ಜೈಲುವಾಸದಿಂದ ವೃತ್ತಿ ಜೀವನಕ್ಕೆ ತೊಂದರೆ ಆಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Ramesha M
- Updated on: May 3, 2026
- 5:09 pm
ಉಗ್ರ ಟಿ. ನಾಸೀರ್ ಬಿಡುಗಡೆಗೆ ಸ್ಕೆಚ್: ತಪ್ಪೊಪ್ಪಿಕೊಂಡ ಆರೋಪಿ ಚೋಟಾ ಉಸ್ಮಾನ್ಗೆ 7 ವರ್ಷ ಜೈಲು ಶಿಕ್ಷೆ
ಬೆಂಗಳೂರು ಸರಣಿ ಸ್ಫೋಟದ ಆರೋಪಿ ಟಿ. ನಾಸೀರ್ನನ್ನು ಜೈಲಿನಿಂದ ಬಿಡಿಸಿಕೊಳ್ಳಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ವಿಕ್ರಮ್ ಕುಮಾರ್ ಅಲಿಯಾಸ್ ಚೋಟಾ ಉಸ್ಮಾನ್ಗೆ ಎನ್ಐಎ ವಿಶೇಷ ನ್ಯಾಯಾಲಯ ಶನಿವಾರ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹರಿಯಾಣದಿಂದ ಗ್ರೆನೇಡ್ ತಂದು ಉಗ್ರವಾದಿ ಕೃತ್ಯಕ್ಕೆ ಸಂಚು ರೂಪಿಸಿದ್ದನ್ನು ಆರೋಪಿ ಒಪ್ಪಿಕೊಂಡಿದ್ದ.
- Ramesha M
- Updated on: May 2, 2026
- 6:50 pm
ನೈಜ ಕ್ರೈಂಗೆ ಎಫ್ಐಆರ್ ಮಾಡಲ್ಲ, 2 ವರ್ಷಗಳ ಹಳೆಯ ಹಸು ನಾಪತ್ತೆ ಕೇಸ್ಗೆ ತರಾತುರಿ ಮಾಡ್ತೀರಾ? ಪೊಲೀಸರಿಗೆ ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್, 2024ರ ಹಸು ನಾಪತ್ತೆ ಪ್ರಕರಣಕ್ಕೆ 2026ರಲ್ಲಿ FIR ದಾಖಲಿಸಿದ ಪೊಲೀಸರ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಗಂಭೀರ ಅಪರಾಧಗಳ ಎಫ್ಐಆರ್ಗೆ ಹಿಂಜರಿಯುವ ಪೊಲೀಸರು, ಇಂತಹ ಹಳೆಯ ಪ್ರಕರಣಗಳಲ್ಲಿ ವಿಳಂಬವಾಗಿ ದೂರು ದಾಖಲಿಸುವುದರ ಔಚಿತ್ಯ ಪ್ರಶ್ನಿಸಿದೆ. ನ್ಯಾಯಪೀಠವು ಆರೋಪಿಗಳ ವಿರುದ್ಧದ ಎಫ್ಐಆರ್ಗೆ ತಡೆಯಾಜ್ಞೆ ನೀಡಿ, ಪೊಲೀಸ್ ಇಲಾಖೆಯ ನಿರ್ಲಕ್ಷ್ಯಕ್ಕೆ ಚಾಟಿ ಬೀಸಿದೆ.
- Ramesha M
- Updated on: Apr 27, 2026
- 9:25 pm
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರಿಕ್ಗೆ 10 ವರ್ಷ ಕಠಿಣ ಶಿಕ್ಷೆ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. 2022ರ ನವೆಂಬರ್ 19ರಂದು ನಡೆದ ಸ್ಫೋಟದಲ್ಲಿ ಶಾರಿಕ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಈ ಕೃತ್ಯದಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಎನ್ಐಎ ತನಿಖೆ ನಂತರ ಸಾಕ್ಷ್ಯಗಳನ್ನು ಪುರಸ್ಕರಿಸಿ ಶಿಕ್ಷೆ ಪ್ರಕಟಿಸಲಾಗಿದೆ.
- Ramesha M
- Updated on: Apr 27, 2026
- 5:42 pm
‘ಎಂಥ ಮನುಷ್ಯರು ನೀವು?’: ಮೆಟ್ರೋದಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ ಆರೋಪಿಗೆ ಹೈಕೋರ್ಟ್ ಛೀಮಾರಿ, ಅರ್ಜಿ ವಜಾ
ನಮ್ಮ ಮೆಟ್ರೋ ರೈಲಿನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ 2025ರಲ್ಲಿ ಬನಶಂಕರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಆರೋಪಿ ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ. ಆದರೆ ಇತನ ಕೃತ್ಯಕೆ ಹೈಕೋರ್ಟ್ ಛೀಮಾರಿ ಹಾಕಿದೆ.
- Ramesha M
- Updated on: Apr 27, 2026
- 4:43 pm
ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ದೋಖಾ ಕೇಸ್: ಹೈಕೋರ್ಟ್ನಿಂದ ಮಹತ್ವದ ಆದೇಶ
ಬಿಜೆಪಿ ಮಾಜಿ ನಾಯಕನ ಪುತ್ರ ಕೃಷ್ಣ ಜೆ. ರಾವ್ ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಯುವತಿ ಹಾಗೂ ಮಗುವಿನ ಭವಿಷ್ಯಕ್ಕಾಗಿ ಮುಂದಿನ ಆದೇಶದವರೆಗೆ ಕೃಷ್ಣ ಜೆ. ರಾವ್ ಮಾಸಿಕ 75,000 ರೂ. ಪಾವತಿಸುವಂತೆ ನ್ಯಾಯಾಲಯ ಸೂಚಿಸಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕೇಸ್ಗೆ ಮಧ್ಯಂತರ ತಡೆ ನೀಡಿದೆ.
- Ramesha M
- Updated on: Apr 24, 2026
- 1:04 pm