ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು: ರಾಜೀವ್ ಗೌಡಗೆ ಕೋರ್ಟ್ ತರಾಟೆ
ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ FIR ರದ್ದತಿಗೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆ ಮಾಡಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ರಾಜೀವ್ ಗೌಡರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ.
- Ramesha M
- Updated on: Jan 20, 2026
- 4:23 pm
ವಾರಕ್ಕೊಮ್ಮೆಯೂ ಪವಿತ್ರಾ ಗೌಡಗೆ ಮನೆ ಊಟ ಸಿಗೋದು ಅನುಮಾನ: ಹೆಚ್ಚಿತು ಸಂಕಷ್ಟ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಪವಿತ್ರಾ ಗೌಡ ಅವರು ಮನೆ ಊಟ ಪಡೆಯಲು ಪರದಾಡುತ್ತಿದ್ದಾರೆ. ಜೈಲೂಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಪವಿತ್ರಾ ಗೌಡ ಅವರು ವಾದ ಮುಂದಿಟ್ಟಿದ್ದರು. ಹಾಗಾಗಿ ವಾರಕೊಮ್ಮೆ ಮನೆ ಊಟ ನೀಡಲು ಕೋರ್ಟ್ ಸೂಚಿಸಿತ್ತು. ಆ ಆದೇಶವನ್ನು ಈಗ ಸರ್ಕಾರ ಪ್ರಶ್ನಿಸಿದೆ.
- Ramesha M
- Updated on: Jan 19, 2026
- 8:38 pm
ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್
ಕಾಂಗ್ರೆಸ್ ಶಾಸಕ ನಾಗೇಂದ್ರ ವಿರುದ್ಧದ ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹೀಗಾಗಿ ಬಂಧನದ ಭೀತಿಯಲ್ಲಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಈಗಾಗಲೇ ಇಡಿಯಿಂದ ಬಂಧನಕ್ಕೊಳಗಾಗಿದ್ದ ನಾಗೇಂದ್ರ ಈಗ ಸಿಬಿಐ ಕುಣಿಕೆಯಿಂದ ಬಚಾವ್ ಆಗಿದ್ದಾರೆ.
- Ramesha M
- Updated on: Jan 14, 2026
- 7:11 pm
ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಿ: ಸುಪ್ರೀಂಕೋರ್ಟ್ ನಿರ್ದೇಶನ
ಜಿಬಿಎ ಚುನಾವಣೆಯಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿ ಇರುವ 5 ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಮತದಾರರ ಪಟ್ಟಿ ಮಾರ್ಚ್ 16ರೊಳಗೆ ಅಂತಿಮವಾಗಲಿದ್ದು, ಮೀಸಲಾತಿ ಅಧಿಸೂಚನೆ ಫೆಬ್ರವರಿ 20ರೊಳಗೆ ಹೊರಬೀಳಲಿದೆ. ಹಲವು ವರ್ಷಗಳಿಂದ ಮುಂದೂಡಲ್ಪಟ್ಟಿದ್ದ ಚುನಾವಣೆಗೀಗ ಮುಹೂರ್ತ ಕೂಡಿಬಂದಂತಿದೆ.
- Ramesha M
- Updated on: Jan 12, 2026
- 1:17 pm
ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ಪವಿತ್ರಾ ಗೌಡಗೆ ಮನೆ ಊಟ ನೀಡುವ ಬಗ್ಗೆ ನ್ಯಾಯಾಲಯ ಆದೇಶ ಬದಲಿಸಿದೆ. ಜೈಲು ಊಟದಿಂದ ಚರ್ಮರೋಗ, ಫುಡ್ಪಾಯ್ಸನ್ ಆಗುತ್ತಿದೆ ಎಂಬ ಪವಿತ್ರಾ ಮನವಿಗೆ ಆರಂಭದಲ್ಲಿ ಮನೆ ಊಟಕ್ಕೆ ಅನುಮತಿ ನೀಡಲಾಗಿತ್ತು. ಜೈಲಾಧಿಕಾರಿಗಳ ವಾದ ಪುರಸ್ಕರಿಸಿದ ಕೋರ್ಟ್, ಈಗ ವಾರಕ್ಕೆ ಒಮ್ಮೆ ಮಾತ್ರ ಮನೆ ಊಟ ನೀಡಲು ಆದೇಶಿಸಿದೆ.
- Ramesha M
- Updated on: Jan 12, 2026
- 1:08 pm
ಬಳ್ಳಾರಿ ಗಲಭೆ ಕೇಸ್: ಗನ್ಮ್ಯಾನ್ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು
ಬಳ್ಳಾರಿ ಬ್ಯಾನರ್ ಗಲಭೆ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೇ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಕೂಡ ಸಾವನ್ನಪ್ಪಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
- Ramesha M
- Updated on: Jan 9, 2026
- 5:17 pm
ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದೆ. ಐಪಿಸಿ ಸೆಕ್ಷನ್ 498ಎ ಅಡಿಯಲ್ಲಿ ನೆರೆಹೊರೆಯವರ ಮೇಲೆ ದೂರು ದಾಖಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಕುಟುಂಬ ಸದಸ್ಯರಲ್ಲದವರನ್ನು ಈ ಕಾಯ್ದೆಯಡಿ ಸೇರಿಸಲು ಸಾಧ್ಯವಿಲ್ಲ ಎಂದಿದೆ. ಮತ್ತೊಂದೆಡೆ ಹೈಕೋರ್ಟ್ನಲ್ಲಿ ಕಾಯಂ ಕೆಲಸ ಕೊಡಿಸುವುದಾಗಿ ಹೇಳಿ ನಂಬಿಸಿ ಹಣ ಪಡೆದು ವಂಚಿಸಿದ್ದ 7 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಆರೋಪಿಗಳು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲೆ ನಕಲಿ ಮಾಡಿ ದೋಖಾ ಎಸಗಿದ್ದಾರೆ ಎನ್ನಲಾಗಿದೆ.
- Ramesha M
- Updated on: Jan 8, 2026
- 3:15 pm
ಕೋಗಿಲು ಅಕ್ರಮ ವಸತಿ ತೆರವು ಪ್ರಕರಣ: ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ; ಬೇಡಿಕೆಗಳೇನು?
ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ವಸತಿ ತೆರವು ಪ್ರಕರಣದಲ್ಲಿ, ನಿರ್ವಸತಿಕರ ಪುನರ್ವಸತಿ ಮತ್ತು ಪರಿಹಾರ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ. ನಿರಾಶ್ರಿತರಿಗೆ 5 ಕಿ.ಮೀ. ಅಂತರದಲ್ಲಿ ಮರು ವಸತಿ ಸೇರಿ ಹಲವು ಬೇಡಿಕೆಗಳನ್ನು ಮುಂದಿಡಲಾಗಿದೆ. ಈ ನಡುವೆ ಬೆಂಗಳೂರು ನಗರ ಡಿಸಿಯುಂದ ಪಟ್ಟಿ ಬಾರದ ಹಿನ್ನೆಲೆ ನಿರಾಶ್ರಿತರಿಗೆ ನಾಳೆಯೂ ಮನೆ ಹಂಚಿಕೆ ನಡೆಯುವುದು ಅನುಮಾನ ಎನ್ನಲಾಗಿದೆ.
- Ramesha M
- Updated on: Jan 1, 2026
- 6:29 pm
ಹೊಸ ವರ್ಷದ ಹೊತ್ತಲ್ಲಿ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ಇಡಿ ಪ್ರಕರಣದಲ್ಲಿ ಜಾಮೀನು
ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪಪ್ಪಿ ಅವರಿಗೆ ಹೊಸ ವರ್ಷದ ಮುನ್ನವೇ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಕ್ರಮ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಇಡಿ , ನಂತರ ಅವರನ್ನು ಬಂಧಿಸಿತ್ತು.
- Ramesha M
- Updated on: Dec 30, 2025
- 5:35 pm
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್
ಮಾಜಿ ಸಚಿವ, ಹಾಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಕೋರ್ಟ್ ನಿರಾಕರಿಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ರೇವಣ್ಣ ಇದೀಗ ಕೋರ್ಟ್ ಆದೇಶದಿಂದ ನಿರಾಳರಾಗಿದ್ದಾರೆ. ಹಾಗಾದ್ರೆ, ಕೋರ್ಟ್ ಕೈಬಿಟ್ಟ ಸೆಕ್ಷನ್ ಯಾವುದು? ಏನು ಅಪರಾಧ, ಏನು ಶಿಕ್ಷೆ ಎನ್ನುವ ವಿವರ ಇಲ್ಲಿದೆ.
- Ramesha M
- Updated on: Dec 29, 2025
- 7:39 pm
ಗಾನವಿ ಕೇಸ್: ಕೋರ್ಟ್ ಮೆಟ್ಟಿಲೇರಿದ ಸೂರಜ್ ಕುಟುಂಬ; ಕಾರಣ ಇಲ್ಲಿದೆ
ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲಿ ಪತಿ ಸೂರಜ್ ಕುಟುಂಬ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದೆ. ಗಾನವಿ ಹಿಂದೆ ಹರ್ಷ ಎಂಬಾತನನ್ನು ಪ್ರೀತಿಸುತ್ತಿದ್ದಳು, ಮದುವೆ ನಂತರ ಪ್ರೀತಿ ವಿಚಾರವನ್ನು ಆಕೆ ಸೂರಜ್ಗೆ ತಿಳಿಸಿದ್ದಳು. ಹೀಗಾಗಿಯೇ ಹನಿಮೂನ್ನಿಂದ ಅವರು ಅರ್ಧಕ್ಕೇ ವಾಪಸ್ ಆಗಿದ್ದು, ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಕುಟುಂಬಸ್ಥರ ಆರೋಪಗಳಿಗೆ ನೊಂದು ಸೂರಜ್ ಕೂಡ ಪ್ರಾಣ ಬಿಟ್ಟಿದ್ದಾರೆ ಎಂದು ಕೋರ್ಟ್ಗೆ ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.
- Ramesha M
- Updated on: Dec 29, 2025
- 5:23 pm
ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ರಿಲೀಫ್, ಬಂಧನದಿಂದ ಪಾರು
ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದಾಗಿದ್ದರಿಂದ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಸದ್ಯಕ್ಕೆ ಬಂಧನದಿಂದ ಪಾರಾಗಿದ್ದಾರೆ.
- Ramesha M
- Updated on: Dec 26, 2025
- 8:09 pm