ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .
ಕುಡಿದ ಅಮಲಿನಲ್ಲಿ ಕಿರಿಕ್: ವ್ಯಕ್ತಿ ತಲೆಗೆ ಬಿಯರ್ ಬಾಟಲಿಂದ ಹೊಡೆದ ಗ್ಯಾಂಗ್
ಬೆಂಗಳೂರಿನ ಆನೇಕಲ್ನಲ್ಲಿರುವ ಮಾರುತಿ ಬಾರ್ ಆಂಡ್ ರೆಸ್ಟೋರೆಂಟ್ನಲ್ಲಿ ಡಿ.16ರಂದು ಕುಡಿದ ಮತ್ತಿನಲ್ಲಿ ಪ್ರಕಾಶ್ ಎಂಬುವವರ ಮೇಲೆ ಮೂವರು ವ್ಯಕ್ತಿಗಳು ಏಕಾಏಕಿ ಹಲ್ಲೆ ಮಾಡಿದ್ದಾರೆ. ಸಣ್ಣ ಕಿರಿಕಿರಿ ಕಾರಣಕ್ಕೆ ಈ ದಾಳಿ ನಡೆದಿದ್ದು, ಗಾಯಗೊಂಡ ಪ್ರಕಾಶ್ ಅವರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
- Ramu Ram
- Updated on: Dec 16, 2025
- 8:38 pm
ಮೊದಲ ಭೇಟಿಯಲ್ಲೇ ಪರಪ್ಪನ ಅಗ್ರಹಾರದಲ್ಲಿ ಎಲ್ಲರ ಬೆವರಿಳಿಸಿದ ನೂತನ ಡಿಜಿಪಿ ಅಲೋಕ್ ಕುಮಾರ್
ಕೈದಿಗಳಿಗೆ ರಾಜಾತಿಥ್ಯದಿಂದ ರಾಜ್ಯದಲ್ಲಿ ಸುದ್ದಿಯಲ್ಲಿರೋ ಪರಪ್ಪನ ಅಗ್ರಹಾರ ಜೈಲಿಗೆ ಬಂದಿಖಾನೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ. ಜೈಲಿನ ಹೊರಾಂಗಣ ಸೇರಿ ಪ್ರತಿ ಬ್ಯಾರಕ್, ಅಡುಗೆ ಮನೆ, ಆಸ್ಪತ್ರೆ, ಬೇಕರಿಗಳಿಗೂ ವಿಸಿಟ್ ನೀಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾರ್ಕಿಂಗ್ ವಿಚಾರವಾಗಿ ಅಧಿಕಾರಿಗಳನ್ನು ಈ ವೇಳೆ ಅವರು ತರಾಟೆಗೆ ಪಡೆದ ಪ್ರಸಂಗವೂ ನಡೆದಿದೆ.
- Ramu Ram
- Updated on: Dec 15, 2025
- 2:31 pm
ಅಂತರಾಜ್ಯ ಕಳ್ಳ ಅಕ್ಕನ ಮನೆಗೆ ಬಂದು ಖಾಕಿ ಕೈಲಿ ತಗಲಾಕ್ಕೊಂಡ!
ಕನಾರ್ಟಕ ಸೇರಿದಂತೆ ಆಂದ್ರಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡಿನಲ್ಲೂ ಕಳ್ಳತನ, ಸುಲಿಗೆ ಮಾಡಿದ್ದ ನಟೋರಿಯಸ್ ಕಳ್ಳನನ್ನು ಜಿಗಣಿ ಪೊಲೀಸರು ಹಿಡಿದಿದ್ದು, ಕಳ್ಳತನವಾದ ಬೈಕ್ಗಳು ಮತ್ತು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿ ತನ್ನ ಅಕ್ಕನ ಮನೆಗೆ ಬಂದ ಸಮಯದಲ್ಲಿ ಪೊಲೀಸರು ಲಾಕ್ ಮಾಡಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
- Ramu Ram
- Updated on: Dec 14, 2025
- 2:45 pm
ಆನೇಕಲ್ ಬಳಿ ಬಸ್ಸನ್ನೇ ಕದಿಯಲು ಹೋದ ಕುಡುಕರು: ಮುಂದಾಗಿದ್ದು ಅನಾಹುತ
ಕುಡಿದ ಮತ್ತಿನಲ್ಲಿ ಬಸ್ ಕದಿಯಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ಬಸ್ ಅಪಘಾತವಾಗಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ ಮುಂಭಾಗ ಜಖಂಗೊಂಡಿದ್ದು, ರಾತ್ರಿ ವೇಳೆ ಅಪಘಾತ ನಡೆದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಪ್ರಕರಣ ಸಂಬಂಧ ಸಾರ್ವಜನಿಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೂವರು ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದಾರೆ.
- Ramu Ram
- Updated on: Dec 14, 2025
- 10:09 am
ಭಾರಿ ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು! ಮೈ ಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ
ಬೈಕ್ ಸವಾರರು ರಸ್ತೆ ಗುಂಡಿಯಿಂದಾಗಿ ಬೈಕ್ ಸಮೇತ ಕೆಳಗೆ ಬಿದ್ದರೂ ಭಾರಿ ಗಾತ್ರದ ಲಾರಿ ಅಡಿ ಬೀಳುವುದರಿಂದ ಬಚಾವಾದ ಸಿನಿಮೀಯ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳೆ ಚಂದಾಪುರದ ನೆರಳೂರು ಸಮೀಪ ನಡೆದಿದೆ. ಘಟನೆಯ ಮೈಜುಮ್ಮೆನಿಸುವ ವಿಡಿಯೋ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
- Ramu Ram
- Updated on: Dec 12, 2025
- 2:53 pm
ಆನೇಕಲ್ ಬಳಿ ಭೀಕರ ಬೈಕ್ ಅಪಘಾತ: ಎದೆ ಝಲ್ ಎನಿಸುವಂತಿದೆ ದೃಶ್ಯ
ಭೀಕರ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಆನೇಕಲ್-ಚಂದಾಪುರ ಮುಖ್ಯರಸ್ತೆಯ ಆವಡದೇನಹಳ್ಳಿ ಗೇಟ್ ಬಳಿ ನಡೆದಿದೆ. ಅಡ್ಡಬಂದ ಸೈಕಲ್ ಸವಾರನ ತಪ್ಪಿಸಲು ಹೋದ ಪರಿಣಾಮ ಬೈಕ್ ಡಿವೈಡರ್ಗೆ ಗುದ್ದಿ ಪಲ್ಟಿಯಾಗಿದೆ. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಅದಾಗಲೇ ಆತ ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ.
- Ramu Ram
- Updated on: Dec 11, 2025
- 7:13 pm
ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ವಿರುದ್ಧವೇ FIR: ಆನೇಕಲ್ ಪೊಲೀಸರ ನಡೆಗೆ ಆಕ್ರೋಶ
ಬೆಂಗಳೂರಿನ ಆನೇಕಲ್ನಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ವಿರುದ್ಧವೇ ಪೊಲೀಸರು ಎಫ್ಐಆರ್ ದಾಖಲಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಾಕ್ಷ್ಯಗಳಿಲ್ಲದಿದ್ದರೂ ಸಂತ್ರಸ್ತೆ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರ ನಡೆಗೆ ಸಾರ್ವಜನಿಕರು ಮತ್ತು ಸಂತ್ರಸ್ತೆ ಕಿಡಿ ಕಾರಿದ್ದಾರೆ. ಮೇಲಧಿಕಾರಿಗಳು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಬೇಕು ಮತ್ತು ತನಿಖಾಧಿಕಾರಿಯನ್ನು ಬದಲಾಯಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.
- Ramu Ram
- Updated on: Dec 7, 2025
- 11:35 am
ಪರಪ್ಪನ ಅಗ್ರಹಾರದಲ್ಲಿ ನಿಲ್ಲದ ಕಳ್ಳಾಟ: ನಿಷೇಧಿತ ವಸ್ತು ಜೈಲಿನೊಳಗೆ ತರುವಾಗ ಸಿಬ್ಬಂದಿ ಲಾಕ್
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯಕ್ಕೆ ಐಪಿಎಸ್ ಅಧಿಕಾರಿ ನೇತೃತ್ವದ ತಂಡ ಬ್ರೇಕ್ ಹಾಕಲು ಮುಂದಾಗಿದ್ರೆ, ಇತ್ತ ಕೆಲ ಜೈಲು ಸಿಬ್ಬಂದಿ ಮಾತ್ರ ಕೈದಿಗಳ ತಾಳಕ್ಕೆ ತಕ್ಕಂತೆ ಕುಣಿಯೋದನ್ನ ಮುಂದುವರಿಸಿದ್ದಾರೆ. ಹಣದಾಸಗೆ ಮಾಡಬಾರದನ್ನು ಮಾಡಲು ಹೋಗಿ ಜೈಲು ಸಿಬ್ಬಂದಿಯೋರ್ವ ಈಗ ಲಾಕ್ ಆಗಿದ್ದಾನೆ. ಜೈಲಿನ ಹಲವು ವಿಡಿಯೋಗಳು ವೈರಲ್ ಆದ ಬಳಿಕವೂ ಇದರಿಂದ ಕೆಲ ಸಿಬ್ಬಂದಿಗಳು ಪಾಠ ಕಲಿತಿಲ್ಲ ಎಂಬುದು ಈ ಘಟನೆಯಿಂದ ಸಾಬೀತಾಗಿದೆ.
- Ramu Ram
- Updated on: Dec 7, 2025
- 7:25 am
ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಾಯ
KSRTC ಬಸ್ ಚಾಲಕನ ಯಡವಟ್ಟಿನಿಂದ ಆನೇಕಲ್ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದರೆ, ಕಾರಿಗೆ ಹಿಂಬದಿಯಿಂದ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಅಪಘಾತದ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ.
- Ramu Ram
- Updated on: Dec 5, 2025
- 1:04 pm
ರಸ್ತೆಗುಂಡಿ ತಪ್ಪಿಸಲು ಹೋಗಿ ಆನೇಕಲ್ ಬಳಿ ಕೆರೆಗೆ ಬಿದ್ದ ಲಾರಿ: ಮುಂದಾಗಿದ್ದು ದುರಂತ
ಆನೇಕಲ್ನ ಅತ್ತಿಬೆಲೆ-ಸರ್ಜಾಪುರ ರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಕೆರೆಗೆ ಬಿದ್ದ ಅಘಾತಕಾರಿ ಘಟನೆ ನಡೆದಿದೆ. ಕಿರಿದಾದ, ಹೊಂಡಗಳಿಂದ ಕೂಡಿದ ರಸ್ತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ವರ್ಷವೂ ಇದೇ ಸ್ಥಳದಲ್ಲಿ ಬಸ್ ಅಪಘಾತ ಸಂಭವಿಸಿತ್ತು. ಹೀಗಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
- Ramu Ram
- Updated on: Nov 25, 2025
- 4:14 pm
ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ಪೊಲೀಸರಿಗೆ ಸಿಕ್ತು ಸ್ಫೋಟಕ ಮಾಹಿತಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಪ್ರಕರಣದಲ್ಲಿ ತನಿಖೆ ತೀವ್ರಗೊಂಡಿದೆ. ರೌಡಿಶೀಟರ್ ಕುದುರೆ ಮಂಜನ ವಿಚಾರಣೆ ವೇಳೆ ಪೊಲೀಸರಿಗೆ ಸ್ಫೋಟಕ ಮಾಹಿತಿ ಲಭಿಸಿದೆ. ಜೈಲಿನಲ್ಲಿ ಡ್ಯಾನ್ಸ್ ಮಾಡಿದ್ದನ್ನು ಮಂಜ ಒಪ್ಪಿಕೊಂಡಿದ್ದು, ವಿಡಿಯೋವನ್ನು ಕೆಲವರಿಗೆ ಹಂಚಿದ್ದಾಗಿ ತಿಳಿಸಿದ್ದಾನೆ. ಆ ಮೂಲಕ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದ್ದು, ವಿಜಯಲಕ್ಷ್ಮೀ ದರ್ಶನ್ ಕುರಿತು ಹರಿದಾಡಿದ್ದ ಊಹಾಪೋಹಗಳಿಗೂ ತೆರೆ ಬಿದ್ದಿದೆ.
- Ramu Ram
- Updated on: Nov 23, 2025
- 10:21 am
ಒಡ ಹುಟ್ಟಿದವನಿಗೇ ಚಟ್ಟ ಕಟ್ಟಿದ ಅಣ್ಣ: ಊರಿನಿಂದ ಕರೆಸಿ ತಮ್ಮನ ಡೆಡ್ಲಿ ಮರ್ಡರ್
ಆನೇಕಲ್ನ ಬನ್ನೇರುಘಟ್ಟದಲ್ಲಿ ಯುವಕನ ಕೊಳೆತ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಕುಡುಕ ಮತ್ತು ಕಳ್ಳತನ ಮಾಡುತ್ತಿದ್ದ ತಮ್ಮನನ್ನು ಅಣ್ಣನೇ ಸ್ನೇಹಿತರೊಂದಿಗೆ ಸೇರಿ ಕೊಲೆ ಮಾಡಿರೋದು ತನಿಖೆ ವೇಳೆ ಬಯಲಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
- Ramu Ram
- Updated on: Nov 21, 2025
- 7:24 pm