ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .
ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಸೂರ್ಯನಗರ ಜನ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕಿಡಿ
ಬೆಂಗಳೂರು ಹೊರವಲಯದ ಆನೇಕಲ್ ಚಂದಾಪುರ ಸಮೀಪದ ಸೂರ್ಯನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದೆ. ಮಕ್ಕಳು, ಪಾದಚಾರಿಗಳು, ಬೈಕ್ ಸವಾರರ ಮೇಲೆ ನಿತ್ಯ ದಾಳಿ ನಡೆಯುತ್ತಿದೆ. ಪುರಸಭೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ನಿವಾಸಿಗಳು ಆಸ್ಪತ್ರೆಗೆ ಅಲೆಯುವಂತಾಗಿದೆ. ಸಾವು ನೋವು ಸಂಭವಿಸುವ ಮುನ್ನ ಕರ್ನಾಟಕ ಗೃಹ ಮಂಡಳಿ ಮತ್ತು ಚಂದಾಪುರ ಪುರಸಭೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
- Ramu Ram
- Updated on: Apr 1, 2026
- 6:56 am
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮೋಹನ್ ಗೌಡ ಎನ್ನುವಾತ ತಾಯಿ ಆಶಾ(55), ಅಕ್ಕ ವರ್ಷಿತಾ(34) ಮತ್ತು ಅಕ್ಕನ ಮಗ ಮಯಾಂಕನ ಕತ್ತು ಕೊಯ್ದು ಕೊಯ್ದಿದ್ದಾನೆ. ಬಳಿಕ ಮೋಹನ್ ಗೌಡ ಸಹ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ ಹಾಗೂ ಅಕ್ಕ ವರ್ಷಿತಾ ಸಾವನ್ನಪ್ಪಿದ್ದು, ಅಕ್ಕನ ಮಗ ಮಯಾಂಕ ಹಾಗೂ ಆರೋಪಿ ಮೋಹನ್ ಗೌಡ ಸ್ಥಿತಿ ಗಂಭೀರವಾಗಿದೆ.
- Ramu Ram
- Updated on: Mar 29, 2026
- 4:51 pm
ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?
ಆನೇಕಲ್ನ ಮಲ್ಲೇನಹಳ್ಳಿಯಲ್ಲಿ ಸಾಲದ ಕಾಟಕ್ಕೆ ಬೇಸತ್ತ 27 ವರ್ಷದ ಮೋಹನ್ ಗೌಡ ತಾಯಿ ಆಶಾ ಮತ್ತು ಅಕ್ಕ ವರ್ಷಿತಾರನ್ನು ಕೊಲೆಗೈದು, ಅಕ್ಕನ ಮಗ ಮಯಂಕ್ ಗೌಡನಿಗೆ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಚಿಟ್ ಫಂಡ್ ವ್ಯವಹಾರದಲ್ಲಿ ನಷ್ಟವೇ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Ramu Ram
- Updated on: Mar 29, 2026
- 12:14 pm
ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ನ ಮಲ್ಲೇನಹಳ್ಳಿಯಲ್ಲಿ ಸಾಲಬಾಧೆಯಿಂದ ದಾರುಣ ಘಟನೆ ನಡೆದಿದೆ. ಚೀಟಿ ವ್ಯವಹಾರದ ಸಾಲ ಮತ್ತು ದುಂದು ವೆಚ್ಚದಿಂದ ಬೇಸತ್ತ ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಘಟನೆಯಲ್ಲಿ ತಾಯಿ ಮತ್ತು ಅಕ್ಕ ಮೃತಪಟ್ಟಿದ್ದು, ಯುವಕ ಮತ್ತು ಬಾಲಕ ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Ramu Ram
- Updated on: Mar 29, 2026
- 7:01 am
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ ಎಂದ ರಂಜಿತ್ ತಾಯಿ
ಆನೇಕಲ್ನಲ್ಲಿ ನಡೆದ ಭೀಕರ ಕೊಲೆ ಪ್ರಕರಣದಲ್ಲಿ ಭಾವನಿಂದಲೇ ಬಾಮೈದ ಕೊಲೆಯಾಗಿದ್ದಾನೆ. ಮದುವೆಯಾದ ಕೇವಲ ಮೂರು ತಿಂಗಳಲ್ಲೇ ತನ್ನ ವಿವಾಹಿತ ತಂಗಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಾಮೈದನನ್ನು ಕೊಲೆ ಮಾಡಲಾಗಿದೆ. ಘಟನೆ ಕುರಿತು ಮೃತನ ತಾಯಿ ನೋವು ತೋಡಿಕೊಂಡಿದ್ದು, ಕೊಲೆ ಆರೋಪಿ ಶ್ರೀನಿವಾಸ್ ಪೊಲೀಸರಿಗೆ ಶರಣಾಗಿದ್ದಾನೆ.
- Ramu Ram
- Updated on: Mar 27, 2026
- 9:42 pm
ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ? ಅಕ್ರಮ ಸಂಬಂಧಕ್ಕೆ ಕೊಲೆಯಾದ ರಂಜಿತ್ ತಾಯಿ ಅಳಲು
ಆನೇಕಲ್ನಲ್ಲಿ ನಡೆದ ಭೀಕರ ಕೊಲೆ ಪ್ರಕರಣದಲ್ಲಿ, ಅಕ್ರಮ ಸಂಬಂಧದ ವಿಚಾರದಲ್ಲಿ ಭಾವನಿಂದ ಬಾಮೈದ ಹತ್ಯೆಗೀಡಾಗಿದ್ದಾನೆ. ಕೌಟುಂಬಿಕ ಕಲಹ, ಅಕ್ರಮ ಸಂಬಂಧ, ಮನೆಗೆ ಬೆಂಕಿ ಹಚ್ಚಿದ ಘಟನೆಗಳ ಬಳಿಕ ಈ ಕೊಲೆ ನಡೆದಿದೆ. ಹತ್ಯೆ ಮಾಡಿದ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇದೀಗ ಘಟನೆ ಬಗ್ಗೆ ಮೃತ ರಂಜಿತ್ ತಾಯಿ ಮಾತನಾಡಿದ್ದಾರೆ. ಅವರು ಹೇಳಿದ್ದೇನೆಂದು ನೋಡಿ.
- Ramu Ram
- Updated on: Mar 27, 2026
- 10:22 am
ಬಾಮೈದನೊಂದಿಗೆ ತಂಗಿ ಪರಾರಿ: ಕೋಪದಲ್ಲಿ ಭಾವ ಮಾಡಿದ್ದೇನು ಗೊತ್ತಾ?
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶಕ್ಕೆ ಬಾಮೈದನನ್ನ ಕರೆತಂದ ಭಾವ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ಕೊಲೆ ಮಾಡಿ ತನ್ನ ಬಾಮೈದನ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿದ್ದಾನೆ. ಬಳಿಕ ಪೊಲೀಸರಿಗೆ ಹೋಗಿ ಶರಣಾಗಿದ್ದಾನೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Ramu Ram
- Updated on: Mar 27, 2026
- 9:44 pm
ಗಂಡನ ಕಳೆದುಕೊಂಡವರೇ ಟಾರ್ಗೆಟ್! ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಬೆಂಗಳೂರಿನ ಖಾಸಗಿ ಕಂಪನಿ ಮಾಲೀಕ 38 ವರ್ಷದ ರಾಮಾಂಜಿ ವಿರುದ್ಧ ಹಲವು ಮಹಿಳೆಯರಿಗೆ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಪತಿ ಕಳೆದುಕೊಂಡ, ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆಯಾಗುವ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ, ಹಣ ಹಾಗೂ ಚಿನ್ನಾಭರಣ ಪಡೆದು ಮೋಸ ಮಾಡಿದ್ದಾನೆ. ಸದ್ಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Ramu Ram
- Updated on: Mar 23, 2026
- 12:47 pm
ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ
ಶಿವಮೊಗ್ಗದ ವನ್ಯಜೀವಿ ಕೇಂದ್ರದಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿನ ಕುರಿತು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕಾಡು ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಸಮೀಕ್ಷಾ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಿಪ್ಪೋ ಸಮೀಪಕ್ಕೆ ಹೋಗಿ ಮೃತಪಟ್ಟಿದ್ದಾರೆ. ಗರ್ಭಿಣಿ ಹಿಪ್ಪೋ ಬಳಿ ಅನುಭವವಿಲ್ಲದ ಯುವತಿಯನ್ನು ಕಳುಹಿಸಿದ್ದು ಸಾಮಾನ್ಯ ಜ್ಞಾನವಿಲ್ಲದ ಕೆಲಸ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮೃತ ಸಮೀಕ್ಷಾ ಮಾವ ನವೀನ್ ಆಗ್ರಹಿಸಿದ್ದಾರೆ.
- Ramu Ram
- Updated on: Mar 21, 2026
- 4:49 pm
ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ : ಜನರ ಸಾಗರ!
ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ 3,000 ಉಚಿತ ಕೋಳಿ ವಿತರಿಸಲಾಯಿತು. ಹೊಸತೊಡಕು ಮಾಂಸದ ಬೇಡಿಕೆ ಹಿನ್ನೆಲೆಯಲ್ಲಿ ಬಡವರಿಗೆ ಹಾಗೂ ಸಾರ್ವಜನಿಕರಿಗೆ ಹೆಚ್.ಎಸ್.ಆರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಉಚಿತ ಕೋಳಿ ಪಡೆಯಲು ಸಾವಿರಾರು ಜನ ಕಿಲೋಮೀಟರ್ ಉದ್ದದ ಸರತಿ ಸಾಲಿನಲ್ಲಿ ನಿಂತಿದ್ದು, ಸ್ಥಳೀಯರಲ್ಲಿ ಹಬ್ಬದ ಸಂಭ್ರಮ ಹೆಚ್ಚಿಸಿತು.
- Ramu Ram
- Updated on: Mar 20, 2026
- 10:02 am
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2.34 ಕೋಟಿ ರೂ. ಹಣ ಸೀಜ್
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಜೂಜುವಾಡಿ ಚೆಕ್ಪೋಸ್ಟ್ನಲ್ಲಿ 2.34 ಕೋಟಿ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ದಾಖಲೆಗಳು ಮತ್ತು ಭದ್ರತೆ ಇಲ್ಲದ ಕಾರಣ ಹಿಟಾಚಿ ಕ್ಯಾಷ್ ಮ್ಯಾನೇಜ್ಮೆಂಟ್ ಸರ್ವೀಸ್ಗೆ ಸೇರಿದ ಎಟಿಎಂ ವಾಹನವನ್ನು ಚುನಾವಣಾಧಿಕಾರಿಗಳು ತಡೆದು, ಅದರಲ್ಲಿದ್ದ ನಗದನ್ನು ವಶಕ್ಕೆ ಪಡೆದಿದ್ದಾರೆ.
- Ramu Ram
- Updated on: Mar 18, 2026
- 10:21 am
ಸಿನಿಮಾ ಸ್ಟೈಲ್ನಲ್ಲಿ 31 ಲಕ್ಷ ದೋಚಿದ್ದವರು ಅಂದರ್: ಖಾಕಿ ಖೆಡ್ಡಾಕ್ಕೆ ಬಿದ್ದ ಐವರು
ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಸಿನಿಮಾ ಶೈಲಿಯಲ್ಲಿ ನಡೆದ 31 ಲಕ್ಷ ರೂ. ದರೋಡೆ ಪ್ರಕರಣದಲ್ಲಿ, ಐವರನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಿ, ಆರೋಪಿಗಳನ್ನು ಬಲೆಗೆ ಬೀಳಿಸಲಾಗಿದೆ. ಬಂಧಿತರಿಂದ 10 ಲಕ್ಷ ರೂ. ಜಪ್ತಿ ಮಾಡಲಾಗಿದ್ದು, ಎಲ್ಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
- Ramu Ram
- Updated on: Mar 17, 2026
- 7:33 pm