ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ: ಖಡಕ್ ಪ್ರಶ್ನೆಗಳಿಗೆ ಕಂಗಾಲಾದ ಸಿಬ್ಬಂದಿ ಗಪ್ಚುಪ್!
ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹಣೆ ವಿಚಾರವಾಗಿ ಬೈಕ್ನಲ್ಲಿ ಬಂದ ಯುವತಿ ಹಾಗೂ ಯುವಕ ಸಿಬ್ಬಂದಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ವೈರಲ್ ಆಗಿದೆ. ನಿಯಮದಂತೆ ರಸ್ತೆ ನಿರ್ಮಾಣವಾಗದೆ ಟೋಲ್ ವಸೂಲಿ ಮಾಡುತ್ತಿರುವುದನ್ನು ಪ್ರಶ್ನಿಸಿದ ಯುವತಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿಚಾರ ಉಲ್ಲೇಖಿಸಿ ಸಿಬ್ಬಂದಿಯನ್ನು ಗಪ್ಚುಪ್ ಮಾಡಿದ್ದಾರೆ.
- Ramu Ram
- Updated on: Sep 7, 2026
- 11:02 am
ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಮೇಲೆ ಹಲ್ಲೆ: ಐವರ ವಿರುದ್ಧ ಎಫ್ಐಆರ್!
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡರ್ ಮಂಜುನಾಥ್ ಮೇಲೆ ಐವರು ಕೈದಿಗಳು ಭೀಕರ ಹಲ್ಲೆ ನಡೆಸಿದ್ದಾರೆ. ಹೆಚ್ಚುವರಿ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಅನೆಕ್ಸ್-1 ಕಟ್ಟಡದ ಕೊಠಡಿಗೆ ಎಳೆದುಕೊಂಡು ಹೋಗಿ ರಕ್ತ ಬರುವಂತೆ ಥಳಿಸಲಾಗಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್ ಸೇರಿದಂತೆ ಐವರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
- Ramu Ram
- Updated on: Sep 5, 2026
- 8:58 am
ಪರಪ್ಪನ ಅಗ್ರಹಾರದಲ್ಲಿ ಜೈಲು ಬಂಧಿಗಳ ಪುಂಡಾಟ: ವಾರ್ಡರ್ ಕೊಲೆಗೆ ಯತ್ನ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳು ಜೈಲಿನ ವಾರ್ಡರ್ ಮೇಲೆ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ತಿಂಗಳ ಹಿಂದೆ ಭದ್ರತಾ ವಿಭಾಗದಿಂದ ಅನೆಕ್ಸ್-1 ಕಾರಾಗೃಹಕ್ಕೆ ಕೆಲ ಜೈಲು ಬಂಧಿಗಳ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ಮಂಜುನಾಥ್ ಬಂಧಿಗಳ ವಸ್ತುಗಳನ್ನು ತಪಾಸಣೆ ಮಾಡಿದ್ದರು. ಅಲ್ಲದೆ, ಹೆಚ್ಚುವರಿ ವಸ್ತು ತೆಗೆದುಕೊಂಡು ಹೋಗಲು ಅವಕಾಶ ನೀಡಿರಲಿಲ್ಲ. ಇದೇ ಸಿಟ್ಟಿಗೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
- Ramu Ram
- Updated on: Sep 4, 2026
- 2:04 pm
ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ IPS ಅಧಿಕಾರಿ ಹೆಸರಲ್ಲಿ ವಂಚನೆ: ರಾಜಸ್ಥಾನ ಮೂಲದ ಅಪ್ರಾಪ್ತನ ಬಂಧನ
ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ ಎಂ. ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ರಾಜಸ್ಥಾನದ 17 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ 2 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಬಾಲಕ ಕೆಲವು ಸಹಚರರೊಂದಿಗೆ ಸೇರಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಅಲ್ಲದೆ ದೇಶಾದ್ಯಂತ ಇವರ ಜಾಲ ವಿಸ್ತರಿಸಿರುವ ಮಾಹಿತಿಯೂ ಸಿಕ್ಕಿದೆ.
- Ramu Ram
- Updated on: Sep 3, 2026
- 12:58 pm
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
Bengaluru News: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಐಟಿ ಅಧಿಕಾರಿಗಳ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಹಣ ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಮಾಲೀಕ ಸಚಿನ್ಗೆ ಸೇರಿದ್ದು ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
- Ramu Ram
- Updated on: Aug 21, 2026
- 10:10 am
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಮಹಿಳಾ ಕೈದಿಗಳ ಸಮಸ್ಯೆ ಆಲಿಸಿದರು. ಸೊಳ್ಳೆ ಕಾಟ, ಮಾನಸಿಕ ತೊಳಲಾಟ, ಸಿಬ್ಬಂದಿ ವರ್ಗದ ಕಷ್ಟಗಳನ್ನು ಕಂಡರು. ಪವಿತ್ರಾಗೌಡ ಸೇರಿದಂತೆ ಎಲ್ಲಾ ಕೈದಿಗಳನ್ನೂ ತಮ್ಮ ಮಗಳಂತೆ ನೋಡುವೆ, ಅವರೆಲ್ಲರೂ ಮಾನಸಿಕವಾಗಿ ಕುಗ್ಗಿದ್ದಾರೆ ಎಂದರು.
- Ramu Ram
- Updated on: Aug 18, 2026
- 8:30 pm
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ಜೈಲಿನಲ್ಲಿರುವ ದರ್ಶನ್ ಅವರನ್ನು ಭೇಟಿ ಮಾಡಲು ಧನ್ವೀರ್ ಗೌಡ, ಮೀನಾ ತೂಗುದೀಪ ಮತ್ತು ವಿಜಯಲಕ್ಷ್ಮಿ ದರ್ಶನ್ ಅವರು ಒಟ್ಟಿಗೆ ಬಂದಿದ್ದಾರೆ. ಭೇಟಿ ಮಾಡಿದ ಬಳಿಕ ಧನ್ವೀರ್ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿಮ್ಮ ನಡುವೆ ಮನಸ್ತಾಪ ಇದೆಯಾ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದರು.
- Ramu Ram
- Updated on: Aug 18, 2026
- 7:31 pm
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ ತೂಗುದೀಪ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ನಟ ದರ್ಶನ್ ಅವರನ್ನು ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ, ತಾಯಿ ಮೀನಾ ತೂಗುದೀಪ ಮತ್ತು ಆಪ್ತ ಧನ್ವೀರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದಾರೆ. ತಾಯಿ ಮೀನಾ ಸಮ್ಮುಖದಲ್ಲಿ ಸಂಧಾನ ಮಾಡುವ ಸಲುವಾಗಿಯೇ ದರ್ಶನ್ ಅವರು ಎಲ್ಲರನ್ನೂ ಒಟ್ಟಿಗೆ ಕರೆಸಿದ್ರಾ ಎಂಬ ಅನುಮಾನ ಮೂಡಿದೆ.
- Ramu Ram
- Updated on: Aug 18, 2026
- 6:53 pm
ಸ್ವಾತಂತ್ರ್ಯ ದಿನಾಚರಣೆ ಮುನ್ನವೇ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ, ಸ್ಪೋಟಕ ವಿಚಾರ ಬೆಳಕಿಗೆ
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ರಾಜ್ಯ ರಾಜಧಾನಿ ಸಜ್ಜಾಗುತ್ತಿರುವ ಬೆನ್ನಲ್ಲೇ ಇಂದು (ಆಗಸ್ಟ್ 14) ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರ ಸಿಕ್ಕಿಬಿದ್ದಿದ್ದಾನೆ. ಉಗ್ರ ಸಂಘಟನೆ ಜೊತೆ ಸೇರಿಕೊಂಡು ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಹೆಬ್ಬಗೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ತನಿಖೆ ವೇಳೆ ಸ್ಫೋಟಕ ವಿಚಾರಗಳು ಬಯಲಿಗೆ ಬಂದಿವೆ.
- Ramu Ram
- Updated on: Aug 14, 2026
- 11:37 pm
ಪರಪ್ಪನ ಅಗ್ರಹಾರ ಜೈಲು ಪರಿಶೀಲಿಸಿದ ಡಿಜೆಪಿ: ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್
ಸಿಸಿಬಿ ದಾಳಿ ವೇಳೆ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್, ಪೆನ್ಡ್ರೈವ್ ಸಿಕ್ಕಿದ್ದು, ಇದು ಭಾರೀ ಸಂಚಲನ ಮೂಡಿಸಿದೆ. ಪ್ರಜ್ವಲ್ಗೆ ಮೊಬೈಲ್ ಕೊಟ್ಟಿದ್ಯಾರು? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿದ್ದು, ಸಂಬಂಧ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಇಂದು (ಆಗಸ್ಟ್ 14) ಕಾರಾಗೃಹ ಮತ್ತು ಸುಧಾರಣೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜೈಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರಜ್ವಲ್ ಬ್ಯಾರಕ್ನಲ್ಲಿ ನಿಷೇಧಿತ ವಸ್ತು ಹೇಗೆ ಪತ್ತೆ ಆಯ್ತು? ಮೊಬೈಲ್, ಸಿಮ್, ಚಾರ್ಜರ್, ಪೆನ್ಡ್ರೈವ್ ಹೇಗೆ ಹೋಯ್ತು ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಅಕ್ರಮಗಳ ಕಡಿವಾಣಕ್ಕೆ ಬ್ರೇಕ್ ಹಾಕುವಂತೆ ಖಡಕ್ ಸೂಚನೆ ನೀಡಿದ್ದಾರೆ.
- Ramu Ram
- Updated on: Aug 14, 2026
- 5:37 pm
ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಕೇಸಿಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿಪಿ
ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ, ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಹಾಗೂ ಪೆನ್ಡ್ರೈವ್ ಪತ್ತೆಯಾಗಿದೆ. ಇದು ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಇನ್ನು ಪೆನ್ಡ್ರೈವ್ ಹಾಗೂ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿತ್ತು. ಈ ಸಂಬಂಧ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಡಿಸಿಪಿ ಎಂ.ನಾರಾಯಣ ಸ್ಪಷ್ಟನೆ ನೀಡಿದ್ದಾರೆ.
- Ramu Ram
- Updated on: Aug 13, 2026
- 7:05 pm
ಆಗಸ್ಟ್ 13ರಂದು ಕರ್ನಾಟಕ ಬಂದ್ ಇರುತ್ತಾ ಇಲ್ವಾ? ವಾಟಾಳ್ ನಾಗರಾಜ್ ಹೇಳಿದ್ದಿಷ್ಟು
ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಕಾವೇರಿ ಸಮಸ್ಯೆ ಇಲ್ಲ. ಹೀಗಾಗಿ ಬಂದ್ ಘೋಷಣೆಯಿಂದ ಕೆಲ ಸಂಘಟನೆ ಹಿಂದೆ ಸರಿಯುತ್ತಿದ್ದು, ಕರ್ನಾಟಕ ಬಂದ್ ಬಹುತೇಕ ಡೌಟ್ ಎನ್ನಲಾಗಿತ್ತು. ಆದರೆ ‘ಬಂದ್ ಕೈಬಿಡುವ ಪ್ರಶ್ನೆಯೇ ಇಲ್ಲ, ಬಂದ್ ಮಾಡೇ ಮಾಡುತ್ತೆವೆ. ಕರ್ನಾಟಕದ ಉದ್ದಗಲಕ್ಕೂ ಬಂದ್ಗೆ ಬೆಂಬಲವಿದೆ‘ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
- Ramu Ram
- Updated on: Aug 10, 2026
- 4:42 pm