ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .
ಬೆಂಗಳೂರಿನಲ್ಲಿ 1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು; ವಿಡಿಯೋ ವೈರಲ್
ಬೆಂಗಳೂರಿನ ಬನ್ನೇರುಘಟ್ಟ-ಜಿಗಣಿ ರಸ್ತೆಯಲ್ಲಿ ATM ನಗದು ಸಾಗಣೆ ವಾಹನ ದರೋಡೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ 1.79 ಕೋಟಿ ರೂಪಾಯಿ ನಗದಿದ್ದ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಗದ್ದಲ ಸೃಷ್ಟಿಸಿ ವಾಹನದ ಚಾಲಕನಿಂದ ಕೀಲಿಕೈ ಕದ್ದು ಪರಾರಿಯಾಗಿದ್ದಾರೆ. ಸಾರ್ವಜನಿಕರು ಸೇರುತ್ತಿದ್ದಂತೆ ಪ್ಲಾನ್ ಬದಲಾಯಿಸಿದ ಕಳ್ಳರು, ವಾಹನವನ್ನು ಲಾಕ್ ಮಾಡಿ ಸಿಬ್ಬಂದಿಯನ್ನು ಅಸಹಾಯಕರನ್ನಾಗಿ ಬಿಟ್ಟಿದ್ದಾರೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Ramu Ram
- Updated on: Jul 10, 2026
- 10:42 am
ಶಿಕ್ಷಕಿ ಬೈದಿದ್ದಕ್ಕೆ ದುಡುಕಿನ ನಿರ್ಧಾರ: ಪ್ರಾಣ ಕಳೆದುಕೊಂಡ 8ನೇ ತರಗತಿ ವಿದ್ಯಾರ್ಥಿನಿ
Government School Girl Death Case ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ಆನೇಕಲ್ನ ಮರಸೂರು ಸರ್ಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಬಾಲಕಿ ಬರೆದಿಟ್ಟಿರುವ ಹೃದಯ ವಿದ್ರಾವಕ ಡೆತ್ನೋಟ್ ಲಭ್ಯವಾಗಿದ್ದು, ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Ramu Ram
- Updated on: Jul 9, 2026
- 4:58 pm
ಕಲ್ಲಾಡಿಯಲ್ಲಿ ಮೂವರ ಸಾವು, ಹಲವರು ಸಿಲುಕಿರುವ ಆತಂಕ; ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ದೇವರನಾಡು ಕೇರಳದ ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಇನ್ನೂ ಮಣ್ಣಿನಡಿ ಸಿಲುಕಿದ್ದಾರೆ. ಮಳೆ ಕಡಿಮೆಯಾಗಿದ್ದರೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸುರಂಗ ಕಾಮಗಾರಿಗಾಗಿ ಅಗೆದ ಮಣ್ಣು ಮತ್ತು ಬೆಟ್ಟದಿಂದ ಕುಸಿದ ಮಣ್ಣು, ಭಾರೀ ಮಳೆಯೊಂದಿಗೆ ಸೇರಿಕೊಂಡು ಈ ದುರಂತಕ್ಕೆ ಕಾರಣವಾಗಿದೆ. Kerala Landslide Tragedy: Eyewitnesses Detail Devastation at Wayanad Tunnel Site ದೇವರನಾಡು ಕೇರಳದ ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಇನ್ನೂ ಮಣ್ಣಿನಡಿ ಸಿಲುಕಿದ್ದಾರೆ. ಮಳೆ ಕಡಿಮೆಯಾಗಿದ್ದರೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸುರಂಗ ಕಾಮಗಾರಿಗಾಗಿ ಅಗೆದ ಮಣ್ಣು ಮತ್ತು ಬೆಟ್ಟದಿಂದ ಕುಸಿದ ಮಣ್ಣು, ಭಾರೀ ಮಳೆಯೊಂದಿಗೆ ಸೇರಿಕೊಂಡು ಈ ದುರಂತಕ್ಕೆ ಕಾರಣವಾಗಿದೆ.
- Ramu Ram
- Updated on: Jul 7, 2026
- 10:44 pm
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ನಾನು ಸೆಲೆಬ್ರಿಟಿ ಇನ್ಚಾರ್ಜ್ ಅಲ್ಲ; ಪ್ರಿಯಾಂಕ್ ಖರ್ಗೆ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ವ್ಯವಸ್ಥೆಗಳ ಪರಿಶೀಲನೆ ಮಾಡಿದರು. ಈ ವೇಳೆ 24 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಡಗಿದೆ. ನಾನು ಸೆಲೆಬ್ರಿಟಿ ಇನ್ಚಾರ್ಜ್ ಅಲ್ಲ, ಗೃಹ ಇಲಾಖೆಯ ಉಸ್ತುವಾರಿ ಎಂದು ಹೇಳಿದ್ದಾರೆ.
- Ramu Ram
- Updated on: Jul 4, 2026
- 10:01 pm
“ಕೋಪದ ಕೈಗೆ ಬುದ್ಧಿ ಕೊಡಬೇಡಿ, ಜೈಲಿನಲ್ಲಿ ಎಲ್ಲ ಕಳೆದುಕೊಂಡೆ”: ಕೊಲೆ ಕೇಸ್ನಲ್ಲಿ ಜೈಲಿಗೆ ಹೋದ್ರೂ ಕೈಬಿಡದ ಪ್ರೇಯಸಿ
ಕೊಲೆ ಕೇಸ್ನಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ಮಣಿಕಂಠ ಅವರ ಕಥೆ ಇದು. ಸಿಟ್ಟಿನಿಂದ ಮಾಡಿದ ತಪ್ಪಿಗೆ ಜೈಲು ಸೇರಿದರೂ, ಅವರ ಪ್ರೇಯಸಿ ನಿಷ್ಠೆಯಿಂದ ಕಾದಿದ್ದರು. ಜೈಲಿಂದ ಹೊರಬಂದಾಗ ಮದುವೆಯಾಗಿ, ಈಗ ಮಗನ ಜೊತೆ ಹೊಸ ಜೀವನ ಆರಂಭಿಸಿದ್ದಾರೆ. ಕೋಪಕ್ಕೆ ಬುದ್ಧಿ ಕೊಡಬೇಡಿ, ಅಮೂಲ್ಯ ಸಮಯ ಕಳೆದುಕೊಳ್ಳಬೇಡಿ ಎಂದು ಯುವಕರಿಗೆ ಕಿವಿಮಾತು ಹೇಳಿದ್ದಾರೆ.
- Ramu Ram
- Updated on: Jul 4, 2026
- 7:57 pm
ಮೈಸೂರಿನಲ್ಲಿ ಮೂವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೈಸೂರಿನ ಟಿ. ನರಸೀಪುರದಲ್ಲಿ ಉಲ್ಲಾಸ್ಗೌಡನ ಕಿರುಕುಳಕ್ಕೆ ದಂಪತಿ ಹಾಗೂ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ನಲ್ಲಿ ಉಲ್ಲಾಸ್ಗೌಡನೇ ಸಾವಿಗೆ ಕಾರಣವೆಂದು ಉಲ್ಲೇಖಿಸಲಾಗಿದೆ. ಶಾಸಕ ಪುಟ್ಟರಂಗಶೆಟ್ಟಿ ಅವರು ಆರೋಪಿಗೆ ಕಠಿಣ ಶಿಕ್ಷೆ, ಕುಟುಂಬಕ್ಕೆ ಪರಿಹಾರ ಹಾಗೂ ಜಮೀನು ಹಸ್ತಾಂತರಕ್ಕೆ ಒತ್ತಾಯಿಸಿದ್ದಾರೆ. ಕಾನೂನು ಮೂಲಕ ನ್ಯಾಯ ಒದಗಿಸಲು ಬದ್ಧ ಎಂದು ತಿಳಿಸಿದ್ದಾರೆ.
- Ramu Ram
- Updated on: Jun 23, 2026
- 8:15 pm
ಜಿಮ್ ಟ್ರೈನರ್ ವಿಜಯ್ ಕೊಲೆಗೆ ಬಿಗ್ ಟ್ವಿಸ್ಟ್: ಪ್ರಭಾವಿ ಉದ್ಯಮಿಯ ಕೈವಾಡ, ಯಾರದು?
ಜಿಮ್ ಟ್ರೈನರ್ ವಿಜಯ್ ಕೊಲೆ ಪ್ರಕರಣಕ್ಕೆ ಪ್ರಮುಖ ತಿರುವು ಸಿಕ್ಕಿದೆ. ಉದ್ಯಮಿ ಮಗಳನ್ನ ಲವ್ ಮಾಡಿದ್ದಕ್ಕೆ ಸುಪಾರಿ ನೀಡಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಪ್ರೇಯಸಿ ತಂದೆ, ನಾಲ್ವರು ಆರೋಪಿಗಳ ಮೂಲಕ ವಿಜಯ್ನನ್ನು ಕೊಲೆ ಮಾಡಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣ ತನಿಖೆ ಮುಂದುವರೆದಿದ್ದು, ಮೃತನ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿದೆ.
- Ramu Ram
- Updated on: Jun 21, 2026
- 8:13 pm
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು
ಮೈಸೂರಿನ ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಯುವಕರಲ್ಲಿ ಹೆಚ್ಚುತ್ತಿರುವ ಇಂತಹ ಪ್ರಕರಣಗಳು ತೀವ್ರ ಆತಂಕ ಮೂಡಿಸಿವೆ. ಮಂಡ್ಯ ಮೂಲದ ಮಾದೇಶ್ ಕಾಲೇಜು ಆವರಣದಲ್ಲಿ ಕುಸಿದುಬಿದ್ದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ದುರ್ಘಟನೆ ಪೋಷಕರಲ್ಲಿ ಕಳವಳ ಹೆಚ್ಚಿಸಿದ್ದು, ಸಣ್ಣ ವಯಸ್ಸಿನಲ್ಲೇ ಹೃದಯಾಘಾತದ ಕುರಿತು ಜಾಗೃತಿ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಚಿಂತನೆಗೆ ಹಚ್ಚಿದೆ.
- Ramu Ram
- Updated on: Jun 19, 2026
- 10:58 am
ಕಾಕನಕೋಟೆ ಸಫಾರಿಯಲ್ಲಿ ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ಕಬಿನಿ ಹಿನ್ನೀರು ಪ್ರದೇಶದ ಕಾಕನಕೋಟೆ ಸಫಾರಿಯಲ್ಲಿ ಪ್ರವಾಸಿಗರಿಗೆ ಆನೆ ಹಿಂಡಿನ ಅದ್ಭುತ ದೃಶ್ಯ ಲಭಿಸಿದೆ. ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಗೆ ಬರುವ ಈ ಸ್ಥಳದಲ್ಲಿ ಆನೆಗಳ ದೊಡ್ಡ ಹಿಂಡಿನ ನಡುವೆ ಪುಟಾಣಿ ಆನೆ ಮರಿಗಳು ಮಲಗಿದ್ದ ಅಪರೂಪದ ಕ್ಷಣಗಳು ಎಲ್ಲರ ಗಮನ ಸೆಳೆದಿವೆ. ವನ್ಯಜೀವಿ ಛಾಯಾಗ್ರಾಹಕ ಜಿ.ಎಸ್. ರವಿಶಂಕರ್ ಸೆರೆಹಿಡಿದ ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕೃತಿ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿವೆ.
- Ramu Ram
- Updated on: Jun 19, 2026
- 8:19 am
ಮಾಜಿ ಎಂಎಲ್ಸಿಯನ್ನೇ ಅಪಹರಿಸಿ 2 ಕೋಟಿ ಹಣಕ್ಕೆ ಡಿಮ್ಯಾಂಡ್: ದುಷ್ಟರಿಂದ ದಯಾನಂದರೆಡ್ಡಿ ಬಚಾವ್ ಆಗಿದ್ದೇ ರೋಚಕ!
ಬೆಂಗಳೂರಿನ ಆನೇಕಲ್ ಬಳಿ ಮಾಜಿ ಎಂಎಲ್ಸಿ ದಯಾನಂದರೆಡ್ಡಿ ಅವರನ್ನು ಗನ್ ತೋರಿಸಿ ಕಿಡ್ನ್ಯಾಪ್ ಮಾಡಿದ್ದ ದುಷ್ಕರ್ಮಿಗಳು, 2 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿರುವ ಸಂಬಂಧ ಅತ್ತಿಬೆಲೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ಕಿಡ್ನ್ಯಾಪರ್ಸ್ ಹಿಂದೆ ಬಿಂದ್ದಿದ್ದು, ತಡರಾತ್ರಿ 12.15ರ ಸುಮಾರಿಗೆ ನಡೆದಿರುವ ಈ ಘಟನೆ ಭಾರಿ ಆತಂಕಕ್ಕೆ ಕಾರಣವಾಗಿದೆ.
- Ramu Ram
- Updated on: Jun 2, 2026
- 4:36 pm
ಸುಪ್ರೀಂ ಕೋರ್ಟ್ ಹೆಸರಲ್ಲೇ ವಂಚನೆ: ಜೈಲಿನಿಂದ ಎಸ್ಕೇಪ್ ಆಗಿದ್ದ ಕೈದಿಯ ಕಳ್ಳಾಟ 8 ವರ್ಷದ ಬಳಿಕ ಬಯಲು
ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ತನ್ನ ಬುದ್ಧಿವಂತಿಯಿಂದ ಸುಪ್ರೀಂ ಕೋರ್ಟ್ ನಕಲಿ ಆದೇಶ ಸೃಷ್ಟಿಸಿ 2018ರಲ್ಲಿ ರಾಜಾರೋಷವಾಗಿ ಹೊರಬಿದ್ದಿದ್ದ. ಆದರೆ ಇದೀಗ ಬರೋಬ್ಬರಿ ಎಂಟು ವರ್ಷಗಳ ಬಳಿಕ ಕೈದಿಯ ಮಹಾ ವಂಚನೆ ಬಯಲಾಗಿದೆ. ಸದ್ಯ ಪೊಲೀಸರು ವಂಚಕ ಕೈದಿಯ ಪತ್ತೆಗೆ ಜಾಲ ಬೀಸಿದ್ದಾರೆ.
- Ramu Ram
- Updated on: May 24, 2026
- 9:08 pm
ಆನೇಕಲ್ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ ನಿರ್ಮಾಣವಾಗಲಿರುವ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಧಿಕೃತವಾಗಿ ಭೂಮಿಪೂಜೆ ನೆರವೇರಿಸುತ್ತಿದ್ದಾರೆ. ಬರೋಬ್ಬರಿ 80,000 ಆಸನ ಸಾಮರ್ಥ್ಯದ ಈ ಬೃಹತ್ ಕ್ರೀಡಾಂಗಣವು ಭಾರತದ ಎರಡನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಿ ತಲೆಯೆತ್ತಲಿದೆ.
- Ramu Ram
- Updated on: May 23, 2026
- 1:46 pm