ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ಇಬ್ಬರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸಲಾಗಿದ್ದು, ಪೌಲ್ಟ್ರಿ ಫೀಡ್ಸ್ ವಾಹನದಲ್ಲಿ ಒಡಿಶಾದಿಂದ ಗಾಂಜಾ ಸಾಗಿಸಲಾಗುತ್ತಿತ್ತು. ಪ್ರಮುಖ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.
- Ramu Ram
- Updated on: May 8, 2026
- 3:01 pm
ಬೀದಿ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮುನ್ನ ಎಚ್ಚರ: ಗೋಡೆಯ ಮುಂದೆ ನಿಂತರೆ ಎಲ್ಲರಿಗೂ ಕಾಣುತ್ತದೆ! ಪಾಲಿಕೆಯಿಂದ ‘ಕನ್ನಡಿ’ ಭಾಗ್ಯ
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಬಸ್ ನಿಲ್ದಾಣಗಳ ಬಳಿ ಸ್ಟೇನ್ಲೆಸ್ ಸ್ಟೀಲ್ ಶೀಟ್ಗಳನ್ನು ಅಳವಡಿಸಲಾಗಿದ್ದು, ಇದು ಕನ್ನಡಿಯಂತೆ ಕಾರ್ಯನಿರ್ವಹಿಸುತ್ತದೆ. ಮೂತ್ರ ವಿಸರ್ಜನೆಗೆ ಮುಂದಾಗುವ ವ್ಯಕ್ತಿಗಳ ಪ್ರತಿಬಿಂಬ ಸ್ಪಷ್ಟವಾಗಿ ಕಾಣಿಸುವುದರಿಂದ ಅವರಿಗೆ ಮುಜುಗರ ಉಂಟಾಗಿ, ಈ ಕೃತ್ಯದಿಂದ ವಿಮುಖರಾಗುತ್ತಾರೆ. 9.5 ಲಕ್ಷ ರೂ. ವೆಚ್ಚದ ಈ ಯೋಜನೆಯು ರಾಜ್ಯದಲ್ಲೇ ಮೊದಲಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದೆ.
- Ramu Ram
- Updated on: May 6, 2026
- 12:43 pm
ಡಿ ಸುಧಾಕರ್ ಆರೋಗ್ಯ ಸಹಜಸ್ಥಿತಿಯಲ್ಲಿದೆ: ಸಚಿವರ ಹೆಲ್ತ್ ಅಪ್ಡೇಟ್ ಕೊಟ್ಟ ಗೃಹಸಚಿವ ಡಾ ಜಿ ಪರಮೇಶ್ವರ್
ಬೆಂಗಳೂರಿನ ಎಲೆಕ್ಟ್ರಾನಿಕ್ಸಿಟಿ ಬಳಿಯಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ.ಸುಧಾಕರ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಇನ್ನೂ ಹಲವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
- Ramu Ram
- Updated on: Apr 27, 2026
- 4:06 pm
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಒಂದೇ ವರ್ಷದಲ್ಲಿ ಹರಿದು ಬಂತು 64 ಕೋಟಿ ರೂ.: ಪ್ರಾಣಿ ದತ್ತು ಪಡೆಯುವಲ್ಲಿ ಬೆಂಗಳೂರಿಗರು ನಂಬರ್ 1
ಬನ್ನೇರುಘಟ್ಟ ಜೈವಿಕ ಉದ್ಯಾನವನವು (BBP) 2024-26ನೇ ಸಾಲಿನಲ್ಲಿ ₹64 ಕೋಟಿ ಆದಾಯ ಮತ್ತು 22 ಲಕ್ಷ ಪ್ರವಾಸಿಗರೊಂದಿಗೆ ಹೊಸ ದಾಖಲೆ ಬರೆದಿದೆ. ಪ್ರಾಣಿ ದತ್ತು ಮತ್ತು ದೇಣಿಗೆಯೂ ₹80 ಲಕ್ಷಕ್ಕೆ ಏರಿಕೆಯಾಗಿದೆ. ಇದಲ್ಲದೆ, 'ಚಿಣ್ಣರ ಮೃಗಾಲಯ ದರ್ಶನ' ಅಡಿಯಲ್ಲಿ 4,000 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇದು ಬೆಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣದ ಹಣಕಾಸು ಪ್ರಗತಿ ಮತ್ತು ಸಾಮಾಜಿಕ ಕಳಕಳಿಯನ್ನು ತೋರಿಸುತ್ತದೆ.
- Ramu Ram
- Updated on: Apr 26, 2026
- 3:35 pm
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ ಎಂದ ಚಾಲಕರು
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕ ರಮೇಶ್ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಸಾವಿಗೆ ನ್ಯಾಯ ಸಿಗುವವರೆಗೂ ಬಸ್ ಓಡಿಸುವುದಿಲ್ಲ ಎಂದು ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂದಿನ ಪ್ರಕರಣಗಳಲ್ಲೂ ಪರಿಹಾರ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿರುವ ಚಾಲಕರು, ಮೃತ ರಮೇಶ್ಗೆ ಸೂಕ್ತ ಪರಿಹಾರ ಮತ್ತು ಭವಿಷ್ಯದಲ್ಲಿ ಚಾಲಕರಿಗೆ ಸುರಕ್ಷತೆ ಖಾತರಿಪಡಿಸುವಂತೆ ಒತ್ತಾಯಿಸಿದ್ದಾರೆ.
- Ramu Ram
- Updated on: Apr 25, 2026
- 10:26 pm
ಆಸ್ಪತ್ರೆಯಿಂದಲೇ ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸುಧಾಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಏಪ್ರಿಲ್ 25) ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.
- Ramu Ram
- Updated on: Apr 25, 2026
- 6:10 pm
D Sudhakar Health Bulletin: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್
ಕರ್ನಾಟಕದ ಯೋಜನೆ ಮತ್ತು ಸಾಂಖಿಕ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸುಧಾಕರ್ ಅವರಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಇವರ ಆರೋಗ್ಯದ ಬಗ್ಗೆ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದರ ಜೊತೆಗೆ ಡಾಕ್ಟರ್ ಸಹ ಸಚಿವರ ಆರೋಗ್ಯದ ಸ್ಥಿತಿಗತಿ ಹೇಗಿದೆ ಎಂಬ ಬಗ್ಗೆ ವಿವರ ನೀಡಿದ್ದಾರೆ.
- Ramu Ram
- Updated on: Apr 24, 2026
- 3:10 pm
ಕತ್ತಲಲ್ಲಿ ಬಂದ್ರು, ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು! ಕಳ್ಳರ ಕೈ ಚಳಕದ ಹಿಂದಿದ್ಯಾ ಬೇರೆ ದಂಧೆ?
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಸು ಕಳ್ಳತನದ ಪ್ರಕರಣ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಆಗ್ಸ್ಟೈನ್ ಮತ್ತು ಪ್ರಸಾದ್ ಎಂಬ ಹಸು ಸಾಕಾಣಿಕಾರರ ಮನೆ ಪಾರ್ಕಿಂಗ್ ಪ್ರದೇಶದಿಂದ ಮೂರು ಹಸುಗಳು ಹಾಗೂ ಒಂದು ಕರು ಕಳ್ಳತನವಾಗಿವೆ. ಜರ್ಸಿ ಮತ್ತು ಎರಡು ಹೆಚ್ಎಫ್ ತಳಿಯ ಹಸುಗಳನ್ನು ರಾತ್ರಿ ವೇಳೆ ಕಾರಿನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಸುಗಳಿಗೆ ಹುಲ್ಲು ಹಾಕಿ ಮಲಗಿದ್ದ ಮಾಲೀಕರು ಬೆಳಿಗ್ಗೆ ನೋಡಿದಾಗ ಅವು ಕಾಣೆಯಾಗಿದ್ದು ಶಾಕ್ ಆಗಿದ್ದಾರೆ. ಕಳ್ಳರು ಹಸುಗಳನ್ನು ಬೇರೆಡೆ ಮಾರಾಟಕ್ಕೆ ಅಥವಾ ಕಸಾಯಿಖಾನೆಗೆ ಕೊಂಡೊಯ್ದಿರಬಹುದು ಎನ್ನಲಾಗಿದೆ. ಒಟ್ಟಾರೆ ಕದ್ದೊಯ್ದ ಹಸುಗಳ ಬೆಲೆ ಒಂದೂ ವರೆ ಲಕ್ಷಗಳಗಳಷ್ಟಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
- Ramu Ram
- Updated on: Apr 21, 2026
- 9:46 am
ಆಫ್ರಿಕಾದಿಂದ ಬಂದ ಚೀತಾಗಳು ಹೇಗಿವೆ ನೋಡಿ!
ದಕ್ಷಿಣ ಆಫ್ರಿಕಾದಿಂದ ತರಲಾಗಿರುವ ನಾಲ್ಕು ಚೀತಾಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ಆಗಮಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ತರಲಾಗಿರುವ ಈ ಎರಡು ಗಂಡು ಹಾಗೂ ಎರಡು ಹೆಣ್ಣು ಚೀತಾಗಳನ್ನು 40 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ.
- Ramu Ram
- Updated on: Apr 18, 2026
- 12:38 pm
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯಿಸಿದ್ದು ಹೇಗೆ ನೋಡಿ..
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇರುವ ಅವರನ್ನು ನೋಡಲು ಇಂದು (ಏ.16) ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದರು. ಅವರ ಜತೆ ನಟ ಧನ್ವೀರ್ ಸಹ ಬಂದಿದ್ದಾರೆ. ಜೈಲಿನ ಆವರಣದಲ್ಲಿ ನಡೆದು ಬರುವಾಗ ಮಾಧ್ಯಮಗಳ ಕ್ಯಾಮೆರಾ ನೋಡಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
- Ramu Ram
- Updated on: Apr 16, 2026
- 9:51 pm
ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಕೈದಿಗಳನ್ನು ಚದುರಿಸಲು ಜೈಲು ಸಿಬ್ಬಂದಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾಗಿದ್ದು, ಗಲಾಟೆ ಮಾಡಿದ ನಾಲ್ವರು ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
- Ramu Ram
- Updated on: Apr 14, 2026
- 9:47 am
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಇಂಜಿನೀಯರ್ ಅನ್ಕೊಂಡೇ ಹೆಣ್ಮಕ್ಕಳಿಗೆ ಖೆಡ್ಡಾ
ಮದುವೆಯನ್ನೇ ಒಂದು ವ್ಯವಹಾರ ಮಾಡಿಕೊಂಡಿದ್ದ ಕಾಮುಕ ಇಂಜಿನಿಯರ್ ಒಬ್ಬನ ಸರಣಿ ವಂಚನೆಗಳು ಬಟಾಬಯಲಾಗಿವೆ.. ಇಬ್ಬರು ಯುವತಿಯರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಅಮಾಯಕ ಹೆಣ್ಣುಮಕ್ಕಳ ಜೀವನದ ಜೊತೆ ಆಟವಾಡುತ್ತಿದ್ದ ರವಿಗೆ ಧರ್ಮದೇಟು ಬಿದ್ದಿವೆ. ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದ ರವಿ, ಬೆಂಗಳೂರಿನ ಜಿಗಣಿ ಬಳಿಯ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದು, 2024ರ ಜನವರಿಯಲ್ಲಿ ಒಂದು ಮದುವೆಯಾಗಿದೆ.
- Ramu Ram
- Updated on: Apr 13, 2026
- 5:21 pm