AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ, ಕಲಘಟಗಿ

Author - TV9 Kannada

ravi.mooki@tv9.com

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ ಡಿಹೆಚ್ಓ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಶಾಸಕ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಾ, 'ನಮ್ಮ ಕ್ಲಿನಿಕ್'ನಿಂದ ಮಾಸಿಕ 75,000 ರೂ. ಸರಕಾರಿ ವೇತನ ಪಡೆದಿರುವ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಈ ಕುರಿತು ತನಿಖೆಗೆ ನೋಟಿಸ್ ನೀಡಲು ಇಲಾಖೆ ಮುಂದಾಗಿದೆ.

3 ಕೋಟಿ ಹಣ, 5 ಕೆಜಿ ಚಿನ್ನ: ಪರಸ್ಪರ ಹೊಡೆದಾಡಿಕೊಂಡವರನ್ನ ಒಂದುಗೂಡಿಸಿದ ದೇವಿ: ದ್ವೇಷ ಮರೆತು ಜಾತ್ರೆಗೆ ತಯಾರಿ

3 ಕೋಟಿ ಹಣ, 5 ಕೆಜಿ ಚಿನ್ನ: ಪರಸ್ಪರ ಹೊಡೆದಾಡಿಕೊಂಡವರನ್ನ ಒಂದುಗೂಡಿಸಿದ ದೇವಿ: ದ್ವೇಷ ಮರೆತು ಜಾತ್ರೆಗೆ ತಯಾರಿ

ಬಾಗಲಕೋಟೆಯ ಗದ್ದನಕೇರಿ ದುರ್ಗಾದೇವಿ ದೇವಸ್ಥಾನದ ಲೆಕ್ಕದ ವಿವಾದ ಎರಡು ಗುಂಪುಗಳ ನಡುವೆ ಭಾರಿ ಮಾರಾಮಾರಿಗೆ ಕಾರಣವಾಗಿತ್ತು. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆದರೆ ಮುಂಬರುವ ದುರ್ಗಾದೇವಿ ಜಾತ್ರೆ ಹಿನ್ನೆಲೆ ದೇವಿ ಮಹಿಮೆಯಿಂದ ಎಲ್ಲರೂ ದ್ವೇಷ ಮರೆತು ಒಂದಾಗಿದ್ದಾರೆ. ಒಗ್ಗಟ್ಟಿನಿಂದ ಜಾತ್ರೆ ಮಾಡಲು ನಿರ್ಧರಿಸಿದ್ದು, ಸಾಮರಸ್ಯದ ಸಂದೇಶ ಸಾರಿದ್ದಾರೆ.

ಆಸ್ತಿಗಾಗಿ ವ್ಯಕ್ತಿಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ: ಪತ್ನಿ, ಮಕ್ಕಳಿಂದ ಧರಣಿ

ಆಸ್ತಿಗಾಗಿ ವ್ಯಕ್ತಿಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ: ಪತ್ನಿ, ಮಕ್ಕಳಿಂದ ಧರಣಿ

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಸ್ತಿ ವಿವಾದವು ಅಮಾನವೀಯ ರೂಪ ತಾಳಿದೆ. ತಂದೆಯ ಆಸ್ತಿಯಲ್ಲಿ ಸಮಾನ ಪಾಲು ಸಿಕ್ಕಿಲ್ಲವೆಂದು ಮಕ್ಕಳು ಮೃತ ತಂದೆ ಯಲ್ಲಪ್ಪ ವಾಗೇನವರ್ ಅವರ ಶವವನ್ನೇ ತಹಶೀಲ್ದಾರ್ ಕಚೇರಿ ಮುಂದೆ ತಂದು ಪ್ರತಿಭಟನೆ ನಡೆಸಿದ್ದಾರೆ. ಜೀವಂತವಾಗಿದ್ದಾಗಲೂ ಇದ್ದ ಆಸ್ತಿ ಕಿತ್ತಾಟ ಮರಣದ ನಂತರವೂ ಮುಂದುವರಿದಿದೆ. ನ್ಯಾಯಕ್ಕಾಗಿ ಕುಟುಂಬಸ್ಥರು ಅಧಿಕಾರಿಗಳ ಮೊರೆ ಹೋಗಿದ್ದಾರೆ.

ಭೀಕರ ಅಪಘಾತ: ಬೈಕ್‌ನಿಂದ ಬಿದ್ದ ಮಹಿಳೆಯ ಮೇಲೆಯೇ ಹರಿದ ಟಿಪ್ಪರ್, ಎಡಗಾಲು ಕಟ್

ಭೀಕರ ಅಪಘಾತ: ಬೈಕ್‌ನಿಂದ ಬಿದ್ದ ಮಹಿಳೆಯ ಮೇಲೆಯೇ ಹರಿದ ಟಿಪ್ಪರ್, ಎಡಗಾಲು ಕಟ್

ರಬಕವಿ ಪಟ್ಟಣದಲ್ಲಿ ಅವೈಜ್ಞಾನಿಕ ಗುಂಡಿ ರಸ್ತೆ ಮತ್ತೊಂದು ಭೀಕರ ಅಪಘಾತಕ್ಕೆ ಕಾರಣವಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ 25 ವರ್ಷದ ತಬಸ್ಸುಮ್ ನದಾಫ್ ರಸ್ತೆಗುಂಡಿಗೆ ಬಿದ್ದು, ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಅವರ ಎಡಗಾಲಿನ ಮೇಲೆ ಹರಿದಿದೆ. ಪರಿಣಾಮವಾಗಿ ಕಾಲು ಸಂಪೂರ್ಣವಾಗಿ ಛಿದ್ರವಾಗಿದೆ. ಈ ದುರ್ಘಟನೆ ರಸ್ತೆ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬರ ವೀಕ್ಷಣೆ ಮಾಡಲು ಸಿಎಂ ಡಿಕೆ ಶಿವಕುಮಾರ್ ಅವರು ಬಾಗಲಕೋಟೆಗೆ ಆಗಮಿಸಿದ್ದು, ಈ ವೇಳೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮದ ಸಂಗಮನಾಥ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್‌ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಇದೇ ವೇಳೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಬಾಗಲಕೋಟೆಯಲ್ಲಿ ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿದು 8 ಮಕ್ಕಳಿಗೆ ಗಾಯ ಪ್ರಕರಣ: ಮೂವರ ತಲೆದಂಡ

ಬಾಗಲಕೋಟೆಯಲ್ಲಿ ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿದು 8 ಮಕ್ಕಳಿಗೆ ಗಾಯ ಪ್ರಕರಣ: ಮೂವರ ತಲೆದಂಡ

ಬಾಗಲಕೋಟೆಯ ಮುಗಳೊಳ್ಳಿ ತಾಂಡಾ ಸರ್ಕಾರಿ ಶಾಲೆಯ ಛಾವಣಿ ಕುಸಿದು 8 ಮಕ್ಕಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನೆಲೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹಾಗೂ ಇಬ್ಬರು ಪಿಆರ್‌ಇಡಿ ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಸೆಪ್ಟೆಂಬರ್ 2ರಂದು ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆಯೇ ಕೊಠಡಿಯ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದಿತ್ತು. ಪರಿಣಾಮ 8 ಮಕ್ಕಳು ಗಾಯಗೊಂಡಿದ್ದರು.

ತರಗತಿ ನಡೆಯುತ್ತಿದ್ದ ವೇಳೆಯೇ ಕುಸಿದ ಸರ್ಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ: ಎಂಜಿನಿಯರ್ ನಿರ್ಲಕ್ಷ್ಯದಿಂದ ಅವಘಡ?

ತರಗತಿ ನಡೆಯುತ್ತಿದ್ದ ವೇಳೆಯೇ ಕುಸಿದ ಸರ್ಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ: ಎಂಜಿನಿಯರ್ ನಿರ್ಲಕ್ಷ್ಯದಿಂದ ಅವಘಡ?

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯ ಛಾವಣಿ ಕುಸಿದು 8 ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪಿಆರ್‌ಡಿ ಎಂಜಿನಿಯರ್ ನಿರ್ಲಕ್ಷ್ಯವೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಶಾಲಾ ಆರಂಭದ ವೇಳೆ ಜಿಲ್ಲೆಯಾದ್ಯಂತ ಕಟ್ಟಡ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ 628 ಶಾಲಾ ಕಟ್ಟಡಗಳು ಅನ್​​ಫಿಟ್​​ ಎಂದು ವರದಿ ನೀಡಲಾಗಿತ್ತು. ಆದರೆ ಈ ಶಾಲೆಯ ಹೆಸರು ಆ ಲಿಸ್ಟ್​​ನಲ್ಲಿ ಇರಲಿಲ್ಲ ಎನ್ನಲಾಗಿದೆ.

100 ರೂ.ನೀರಿನ ಬಾಟಲಿ ತಗೋತಾರೆ: 50 ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ ಎಂದ ಸವದಿ

100 ರೂ.ನೀರಿನ ಬಾಟಲಿ ತಗೋತಾರೆ: 50 ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ ಎಂದ ಸವದಿ

ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು. ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ.50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನೂ ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತೆ ಎಂದರು.

Bagalkote: ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

Bagalkote: ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

ಬಾಗಲಕೋಟೆ ಜಿಲ್ಲೆಯ ಅಮೀನಗಡ ಪೊಲೀಸ್ ಠಾಣೆಯ ಪಿಎಸ್‌ಐ ಜ್ಯೋತಿ ವಾಳೀಕರ್ ಅವರ ವರ್ಗಾವಣೆಯನ್ನು ಯುವಕರು ಸಂಭ್ರಮಿಸಿದ್ದಾರೆ. ಅಮೀನಗಡದಿಂದ ಕಲಾದಗಿ ಠಾಣೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಠಾಣೆಯ ಎದುರು ಪಟಾಕಿ ಸಿಡಿಸಿ ಯುವಕರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಈ ಕುರಿತು ಟಿವಿ9 ಕನ್ನಡ ಸುದ್ದಿ ಪ್ರಸಾರ ಮಾಡಿದೆ.

ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಅತಿಯಾದ ಸೌಂಡ್ ವಿರುದ್ಧ ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು

ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಅತಿಯಾದ ಸೌಂಡ್ ವಿರುದ್ಧ ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು

ಬಾಗಲಕೋಟೆಯ ಮದೀನಾ ಕಾಲೋನಿಯಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮತ್ತು ಜೋರಾದ ಅಜಾನ್ ಕೂಗಿದಕ್ಕೆ ಸ್ಥಳೀಯರು, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಅತಿಯಾದ ಧ್ವನಿ ಮಾಲಿನ್ಯದ ಬಗ್ಗೆ ದೂರು ನೀಡಿ, ಕೂಡಲೇ ಕ್ರಮ ಕೈಗೊಳ್ಳುವಂತೆ ನಗರ ಠಾಣೆಗೆ ಮೌಖಿಕ ದೂರು ನೀಡಿದ್ದಾರೆ. ಪೊಲೀಸರು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ತೆರಳಿದರು.

‘ಬೆಲ್ಲದ ನಾಡು’ ಮಹಾಲಿಂಗಪುರಕ್ಕೆ ಕಹಿ ಕಾಲ: ಗತವೈಭವ ಕಳೆದುಕೊಂಡ ಏಷ್ಯಾದ ಪ್ರಸಿದ್ಧ ಬೆಲ್ಲದ ಮಾರುಕಟ್ಟೆ!

‘ಬೆಲ್ಲದ ನಾಡು’ ಮಹಾಲಿಂಗಪುರಕ್ಕೆ ಕಹಿ ಕಾಲ: ಗತವೈಭವ ಕಳೆದುಕೊಂಡ ಏಷ್ಯಾದ ಪ್ರಸಿದ್ಧ ಬೆಲ್ಲದ ಮಾರುಕಟ್ಟೆ!

Jaggery Market Crisis: ಮಹಾಲಿಂಗಪುರ ಬೆಲ್ಲದ ಮಾರುಕಟ್ಟೆ ಹಿಂದೆ ವಿದೇಶಗಳಿಗೆ ರಫ್ತಾಗುತ್ತಾ ಗತವೈಭವದಿಂದ ಮೆರೆದಿತ್ತು. ಆದರೆ 2021ರ ಎಪಿಎಂಸಿ ಕಾನೂನು, ಸೆಸ್ ವಂಚನೆ ಮತ್ತು ಸಕ್ಕರೆ ಕಾರ್ಖಾನೆಗಳ ಪೈಪೋಟಿಯಿಂದಾಗಿ ಮಾರುಕಟ್ಟೆ ಅವನತಿಯ ಅಂಚಿಗೆ ತಲುಪಿದೆ. ಬೆಲ್ಲದ ವ್ಯಾಪಾರಸ್ಥರು ಮತ್ತು ಹಮಾಲರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಹುಬ್ಬಳ್ಳಿ-ಸೋಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿಯಾಗಿ ಇಬ್ಬರು ಸಾವು

ಹುಬ್ಬಳ್ಳಿ-ಸೋಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿಯಾಗಿ ಇಬ್ಬರು ಸಾವು

Bagalakote News: ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ಬಳಿಯ ಜಂಬಗಿ ಕ್ರಾಸ್‌ನಲ್ಲಿ ಮಹಾರಾಷ್ಟ್ರ ಮೂಲದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ವಿಜಯಪುರ ಮಾರ್ಗವಾಗಿ ಗೋವಾ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಹಾಗೂ ಬೈಕ್ ಸವಾರ ಸೇರಿದಂತೆ ಇಬ್ಬರು ಘಟನೆಯಲ್ಲಿ ದುರ್ಮರಣಕ್ಕೀಡಾಗಿದ್ದಾರೆ.