AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ, ಕಲಘಟಗಿ

Author - TV9 Kannada

ravi.mooki@tv9.com

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ ಉಪಚುನಾವಣೆ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಏಪ್ರಿಲ್ 9 ರಂದು ಮತದಾನ ನಡೆಯಲಿದೆ. ಈ ಮಧ್ಯೆ ಸಿಎಂ-ಡಿಸಿಎಂ ನಿನ್ನೆ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮನೆಗೆ ಭೇಟಿ ನೀಡುವ ಮೂಲಕ ರಾಜಕೀಯ ತಂತ್ರ ಹೊಣೆದಿದ್ದಾರೆ. ಪ್ರಬಲ ಆಕಾಂಕ್ಷಿಗಳು ಕಣಕ್ಕಿಳಿಯಲು ಸಜ್ಜಾಗಿದ್ದು, ಚುನಾವಣಾ ಅಖಾಡ ರಂಗೇರಿದೆ.

ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕೊಂದ್ರಾ?

ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕೊಂದ್ರಾ?

ಬಾಗಲಕೋಟೆಯ ಸಾವಳಗಿ ಗ್ರಾಮದಲ್ಲಿ ನಡೆದ ದಲಿತ ಯುವಕನ ಹತ್ಯೆ ಪ್ರಕರಣ ತೀವ್ರ ಗೊಂದಲ ಸೃಷ್ಟಿಸಿದೆ. ಶಾಲಾ ಸ್ನೇಹ ಸಮ್ಮೇಳನದಲ್ಲಿ ವಿದ್ಯಾರ್ಥಿನಿಯರಿಗೆ ಕಲ್ಲು ಹೊಡೆದಿದ್ದಕ್ಕೆ ಥಳಿಸಿ ಕೊಲ್ಲಲಾಯಿತು ಎಂಬ ಆರೋಪವಿದ್ದರೆ, ದಲಿತ ಮುಖಂಡರು ಮಲಗಿದ್ದ ವ್ಯಕ್ತಿಯನ್ನು ಎಳೆದು ಹಲ್ಲೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಸದ್ಯ ಸಾವಳಗಿ ಠಾಣೆಯಲ್ಲಿ ಕೊಲೆ ಪ್ರಕರಣ ಕೂಡ ದಾಖಲಾಗಿದೆ.

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳು ಬಟ್ಟೆ ಬದಲಾಯಿಸುತ್ತಿದ್ದಾಗ ಕದ್ದು ನೋಡಿದ ಆರೋಪದಲ್ಲಿ ಯುವಕನೊಬ್ಬನನ್ನು ಸ್ಥಳೀಯರು ಥಳಿಸಿದ ಪರಿಣಾಮ ಆತ ಹೃದಯಾಘಾತದಿದ ಮೃತಪಟ್ಟ ಘಟನೆ ಜಮಖಂಡಿಯ ಸಾವಳಗಿ ಗ್ರಾಮದ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ನಡೆದಿದೆ. ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ, ಹಲ್ಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಮುಸ್ಲಿಂ ವ್ಯಕ್ತಿಯನ್ನು ಲವ್ ಮಾಡಿ ಮತಾಂತರಗೊಂಡ ವಿವಾಹಿತ ಮಹಿಳೆ: ಈಗ ಅಸಲಿ ರೂಪ ತೋರಿಸಿದ ಪತಿ

ಮುಸ್ಲಿಂ ವ್ಯಕ್ತಿಯನ್ನು ಲವ್ ಮಾಡಿ ಮತಾಂತರಗೊಂಡ ವಿವಾಹಿತ ಮಹಿಳೆ: ಈಗ ಅಸಲಿ ರೂಪ ತೋರಿಸಿದ ಪತಿ

ಬಾಗಲಕೋಟೆಯ ಶ್ರೀದೇವಿ, ಮತಾಂತರಗೊಂಡು 'ಹಬೀಬಾ' ಹೆಸರಿನಲ್ಲಿ ಮದುವೆಯಾದ ನಂತರ ಪತಿಯಿಂದ ವಂಚನೆ ಹಾಗೂ ಕಿರುಕುಳ ಅನುಭವಿಸಿದ್ದಾರೆ. ಹಣ-ಬಂಗಾರ ದೋಚಿ ಬೀದಿಗೆ ತಳ್ಳಿದ ಪತಿ ವಿರುದ್ಧ ಮಹಿಳೆ ಎಸ್ಪಿ ಕಚೇರಿ ಮುಂದೆ ಕಣ್ಣೀರಿಟ್ಟಿದ್ದಾರೆ. ಮುಧೋಳ ಪೊಲೀಸರು ಸ್ಪಂದಿಸದ ಕಾರಣ, ಎಸ್ಪಿ ಕಾನೂನು ಕ್ರಮದ ಭರವಸೆ ನೀಡಿದ್ದಾರೆ.

ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು.

ಕಲ್ಲು ತೂರಾಟ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಮತ್ತೊಂದು ವಿವಾದ: ಮಸೀದಿ ಕಾಂಪೌಂಡ್‌ ಮೇಲೆ ಮಗನಿಂದ ಜೈ ಶ್ರೀರಾಮ್‌ ಬರಹ ಬರೆಸಿದ ತಂದೆ

ಕಲ್ಲು ತೂರಾಟ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಮತ್ತೊಂದು ವಿವಾದ: ಮಸೀದಿ ಕಾಂಪೌಂಡ್‌ ಮೇಲೆ ಮಗನಿಂದ ಜೈ ಶ್ರೀರಾಮ್‌ ಬರಹ ಬರೆಸಿದ ತಂದೆ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮುಸ್ಮಿಮರು ಕಲ್ಲು ತೂರಾಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದು ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಇದರಿಂದ ಬಾಗಲಕೋಟೆಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಕಿಡಿ ಹಾರುವ ಮುನ್ನವೇ ಬಾಗಲಕೋಟೆಯಲ್ಲಿ ಮತ್ತೊಂದು ವಿವಾದ ಬೆಳಕಿಗೆ ಬಂದಿದೆ. ಮಸೀದಿ ಕಾಂಪೌಂಡ್ ಗೋಡೆ ಮೇಲೆ ವ್ಯಕ್ತಿಯೋರ್ವ ತನ್ನ ಮಗನ ಕೈಯಿಂದ ಜೈ ಶ್ರೀರಾಮ್ ಬರಹ ಬರೆಸಿದ್ದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ಬದುಕಿದ್ದ ವ್ಯಕ್ತಿ ಸತ್ತನೆಂದು ತಿಳಿದು ಸಂಬಂಧಿಕರ ಯಡವಟ್ಟು; ಜೀವಂತವಾಗಿದ್ದಾಗಲೇ ನಡೀತಿತ್ತು ಅಂತ್ಯ ಸಂಸ್ಕಾರ!

ಬದುಕಿದ್ದ ವ್ಯಕ್ತಿ ಸತ್ತನೆಂದು ತಿಳಿದು ಸಂಬಂಧಿಕರ ಯಡವಟ್ಟು; ಜೀವಂತವಾಗಿದ್ದಾಗಲೇ ನಡೀತಿತ್ತು ಅಂತ್ಯ ಸಂಸ್ಕಾರ!

ಬಾಗಲಕೋಟೆಯ ಜಮಖಂಡಿಯಲ್ಲಿ ಅಚ್ಚರಿಯ ಘಟನೆ ನಡೆದಿದೆ. ಬದುಕಿರುವ ವ್ಯಕ್ತಿ ಸತ್ತಿದ್ದಾನೆಂದು ಭಾವಿಸಿ ಅಂತ್ಯಸಂಸ್ಕಾರಕ್ಕೆ ಕರೆದೊಯ್ಯುತ್ತಿದ್ದ ಹಾಜಿ ಮುಬಾರಕ್ ಅವಟಿ, ಮಾರ್ಗ ಮಧ್ಯೆ ಉಸಿರಾಟ ಪುನರಾರಂಭಿಸಿ ಜೀವಂತವಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಆಸ್ಪತ್ರೆಯಲ್ಲಿದ್ದ ಇವರನ್ನು ಕುಟುಂಬಸ್ಥರು ವೈದ್ಯರ ಸಲಹೆಗೆ ವಿರುದ್ಧವಾಗಿ ಮನೆಗೆ ತರುತ್ತಿದ್ದರು. ಈ ಗಲಿಬಿಲಿಗೊಂಡು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು!

ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು!

ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಅಚ್ಚರಿಯ ಘಟನೆ ನಡೆದಿದೆ. ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾಗ ಮನೆಯ ಕೆಳಮಹಡಿಗೆ ಕೆರೆ ಹಾವು ನುಗ್ಗಿದ್ದು ಕೆಲಕಾಲ ಆತಂಕ ಸೃಷ್ಟಿಸಿತು. ಅಕ್ರಮ ಆಸ್ತಿ ಆರೋಪದಡಿ ಹಲವೆಡೆ ಏಕಕಾಲದಲ್ಲಿ ದಾಳಿ ಮುಂದುವರಿದಿದೆ. ಹಾವು ಕಾಣಿಸಿಕೊಂಡ ವಿಡಿಯೋ ಇಲ್ಲಿದೆ ನೋಡಿ.

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ಚಪ್ಪಲಿ ಎಸೆತದ‌ ಕಿಚ್ಚು ಇಂದಿಗೂ ಆರಿಲ್ಲ.ಮಸೀದಿಯಿಂದ ಚಪ್ಪಲಿ ಕಲ್ಲು ಎಸೆತದಿಂದ ಕೇಸರಿ‌ಕಲಿಗಳ ಕೋಪ ಇಂದಿಗೂ ಆರಿಲ್ಲ.ಇದರ ಮಧ್ಯೆ ನಗರದಲ್ಲಿ ಇಂದು ಬೃಹತ್ ವಿರಾಟ್ ಹಿಂದೂ ಸಮ್ಮೇಳನ ನಡೆಯಿತು.ವಿವಾದಿತ ಸ್ಥಳದಲ್ಲೇ‌ ಭರ್ಜರಿ ಮೆರವಣಿಗೆ ಮಾಡಿ ಹಿಂದೂಗಳು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದರು. ಇದೇ ವೇಳೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಇತ್ತೀಚೆಗೆ ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿ ಭಾರೀ ಸುದ್ದಿಯಲ್ಲಿದ್ದ ಕನ್ನೇರಿ ಸ್ವಾಮೀಜಿ , ಇದೀಗ ಮತ್ತೆ ಗುಡುಗಿದ್ದಾರೆ. ಶರಣರು ಹಿಂದೂಗಳಲ್ಲ ಎಂದು ವಿವದಾತ್ಮಕ ಹೇಳಿಕೆ ನೀಡಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳುತ್ತೆ ಎಂದು ಕಾದುನೋಡಬೇಕಿದೆ.

ಹೋದ ಜೀವ ವಾಪಸ್‌ ಕೊಡ್ತೀರಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ

ಹೋದ ಜೀವ ವಾಪಸ್‌ ಕೊಡ್ತೀರಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ

ಬಾಗಲಕೋಟೆಯ ಬನಹಟ್ಟಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಕೆ.ಎಸ್. ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಹತ್ಯೆ ಪ್ರಕರಣ, ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲಿನ ಕ್ರಮ ಮತ್ತು ಮಸೀದಿಗಳಿಗೆ ಸಂಬಂಧಿಸಿದಂತೆ ಎಚ್ಚರಿಕೆಗಳನ್ನು ನೀಡಿದ ಅವರು, ಕರ್ನಾಟಕವನ್ನು ಕೇಸರಿಮಯ ರಾಜ್ಯವನ್ನಾಗಿ ಮಾಡುವಂತೆ ಕರೆ ನೀಡಿದರು.

ಬಾಗಲಕೋಟೆ ಕಲ್ಲು ತೂರಾಟ: ಹಿಂದೂ ಯುವಕರ ಬಂಧನಕ್ಕೆ ಹೋಗಿದ್ದ ಪೊಲೀಸರನ್ನ ಅಡ್ಡಗಟ್ಟಿದ ಮಹಿಳೆಯರು

ಬಾಗಲಕೋಟೆ ಕಲ್ಲು ತೂರಾಟ: ಹಿಂದೂ ಯುವಕರ ಬಂಧನಕ್ಕೆ ಹೋಗಿದ್ದ ಪೊಲೀಸರನ್ನ ಅಡ್ಡಗಟ್ಟಿದ ಮಹಿಳೆಯರು

ಬಾಗಲಕೋಟೆ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರ ಬಂಧನಕ್ಕೆ ಬಂದ ಪೊಲೀಸರ ಕ್ರಮಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಯುವಕನ ಬಂಧನಕ್ಕೆ ಮುಂದಾದಾಗ ಸಾರ್ವಜನಿಕರು ತಡೆದಿದ್ದಾರೆ. ಕಲ್ಲು ತೂರಾಟದ ನಿಜವಾದ ಆರೋಪಿಗಳನ್ನು ಬಿಟ್ಟು ಅಮಾಯಕರನ್ನು ಗುರಿ ಮಾಡುತ್ತಿದ್ದಾರೆಂದು ಮಹಿಳೆಯರು ಸೇರಿದಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ ವೀರಣ್ಣ ಚರಂತಿಮಠ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ

ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ಮೇಲಿನ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆತ ಘಟನೆಯನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಖಂಡಿಸಿದ್ದಾರೆ. ಇದು ದೊಡ್ಡ ಸಂಚು ಎಂದು ಶಂಕಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಗೆ ಮನವಿ ಮಾಡಿದ್ದಾರೆ. ಘಟನೆಯನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ನಗರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.