ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
ಹೆಚ್ಚಿನ ಬಡ್ಡಿ ಆಸೆ ತೋರಿಸಿ ಕೋಟಿ ಕೋಟಿ ವಂಚನೆ: ಮಹಿಳಾ ಸಂಘದ ಹೆಸರಲ್ಲಿ ಲೂಟಿ ಹೊಡೆದ ಮಹಿಳೆಯರು
Bilagi fraud: ಬಾಗಲಕೋಟೆಯ ಬೀಳಗಿಯಲ್ಲಿ ದುರ್ಗಾದೇವಿ ಮಹಿಳಾ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹೆಸರಿನಲ್ಲಿ ಕೋಟ್ಯಂತರ ರೂ ವಂಚನೆ ಬಯಲಾಗಿದೆ. ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಹಣ ವಾಪಸ್ ನೀಡದೆ ಮೋಸ ಮಾಡಿದ್ದಾರೆ. ನಕಲಿ ಚೆಕ್ಗಳನ್ನು ನೀಡಿ ಬೆದರಿಕೆ ಕೂಡ ಹಾಕಿದ್ದಾರೆ. ಸದ್ಯ ಬೀಳಗಿ ಪೊಲೀಸರಿಗೆ ಮಹಿಳೆಯರು ದೂರು ಕೊಡಲು ಮುಂದಾಗಿದ್ದಾರೆ.
- Ravi H Mooki
- Updated on: Jul 13, 2026
- 4:55 pm
ಹೊಳೆ ದಾಟೋಕೆ ದೊಣ್ಣೆನಾಯಕನ ಅಪ್ಪಣೆ ಬೇಕೆ: ಪ್ರಿಯಾಂಕ್ ಖರ್ಗೆಗೆ ಪ್ರಲ್ಹಾದ್ ಜೋಶಿ ತಿರುಗೇಟು
ಆರ್ಎಸ್ಎಸ್ ಸಭೆಗಳ ನಂತರ ಗಲಭೆಗಳು ಸಂಭವಿಸುತ್ತವೆ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಲವಾಗಿ ಖಂಡಿಸಿದ್ದಾರೆ. ಖರ್ಗೆಯವರ ಹೇಳಿಕೆಯನ್ನು ಮಕ್ಕಳಾಟಿಕೆ ಎಂದು ಕರೆದ ಜೋಶಿ, ಆಡಳಿತ ಪಕ್ಷವು ರಾಜ್ಯದ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅನಗತ್ಯ ವಿಷಯಗಳ ಮೇಲೆ ಗಮನ ಹರಿಸುತ್ತಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ.
- Ravi H Mooki
- Updated on: Jul 12, 2026
- 8:11 pm
ಮಳೆ ಇಲ್ಲದಿದ್ದರೂ ಬಾಗಲಕೋಟೆಯಲ್ಲಿ ಬೊರ್ಗರೆಯುತ್ತಿರುವ ನದಿಗಳು, ಬೆಳೆಗಳಿಗಿಲ್ಲ ನೀರು!
ಕರ್ನಾಟಕದ ಕೆಲವೆಡೆ ಮಳೆಯಾಗುತ್ತಿದ್ದರೆ, ಇನ್ನೂ ಹಲವೆಡೆ ವರುಣ ಕೃಪೆ ತೋರುತ್ತಿಲ್ಲ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಆದ್ರೆ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯೇ ಇಲ್ಲ. ಹೀಗಾಗಿ ಬರದ ಛಾಯೆ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಮಳೆ ಇಲ್ಲದಿದ್ದರೂ ಸಹ ನದಿಗಳು ಬೊರ್ಗರೆಯುತ್ತಿವೆ.
- Ravi H Mooki
- Updated on: Jul 7, 2026
- 7:08 pm
ಸರ್ಕಾರಿ ಶಾಲೆ ಗೇಟ್ ಬಿದ್ದು ದುರಂತ: ನಾಲ್ವರು ಮಕ್ಕಳಿಗೆ ಗಾಯ; ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯ
ಬಾಗಲಕೋಟೆ ಜಿಲ್ಲೆಯ ಬಲಕುಂದಿ ಸರ್ಕಾರಿ ಶಾಲೆಯಲ್ಲಿ ಗೇಟ್ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಘಟನೆ ನಡೆದಿದೆ. ನಾಲ್ವರ ಪೈಕಿ ಓರ್ವ ವಿದ್ಯಾರ್ಥಿನಿಗೆ ತೀವ್ರ ಗಾಯಗಾಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಓರ್ವ ಆಯಾಳಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಶಾಲಾ ಸುರಕ್ಷತಾ ಕ್ರಮಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ravi H Mooki
- Updated on: Jul 6, 2026
- 4:19 pm
ಒಂದೇ ವರ್ಷದಲ್ಲಿ 10 ಕೋಟಿ ರೂ ಟ್ರಾಫಿಕ್ ಫೈನ್: ವಸೂಲಾಗಿದ್ದು 1 ಕೋಟಿ ರೂ. ಮಾತ್ರ
ಬಾಗಲಕೋಟೆ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘಿಸಿದವರ ವಿರುದ್ಧ ಸಮರ ಸಾರಿದ್ದಾರೆ. ಒಂದೇ ವರ್ಷದಲ್ಲಿ 10 ಕೋಟಿಗೂ ಹೆಚ್ಚು ದಂಡ ವಿಧಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಆದರೆ ವಿಧಿಸಿದ ದಂಡದಲ್ಲಿ ಕೇವಲ 1.72 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಇನ್ನು ಹೈಟೆಕ್ ತಂತ್ರಜ್ಞಾನದಿಂದಾಗಿ ಅಪಘಾತ ಹಾಗೂ ಅಪರಾಧ ಪ್ರಮಾಣ ಶೇ.20ರಷ್ಟು ಕಡಿಮೆ ಆಗಿದೆ.
- Ravi H Mooki
- Updated on: Jul 2, 2026
- 8:29 pm
ವಿಪತ್ತು ನಿರ್ವಹಣಾ ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್ ಗರಂ
ಸಚಿವ ಎಂ.ಬಿ. ಪಾಟೀಲ್ ಅವರು ಬಾಗಲಕೋಟೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಗೆ ಗೈರಾದ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಗರಂ ಆದ ಪ್ರಸಂಗ ನಡೆದಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ನೀರು ಸರಬರಾಜಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆ ಕಠಿಣ ಕ್ರಮದ ಎಚ್ಚರಿಕೆಯನ್ನು ಅಧಿಕಾರಿಗಳಿಗೆ ಅವರು ನೀಡಿದ್ದಾರೆ.
- Ravi H Mooki
- Updated on: Jun 30, 2026
- 5:05 pm
ಬಾಗಲಕೋಟೆಯಲ್ಲಿ ಸರಕಾರಿ ನೌಕರರ ಅಂಧಾ ದರ್ಬಾರ್: ನಗರಸಭೆಯಲ್ಲಿ ಹೊರಗಿನವರಿಂದ ಕಚೇರಿ ಕಾರ್ಯ!
Bagalkot News: ಬಾಗಲಕೋಟೆ ನಗರಸಭೆಯಲ್ಲಿ ಸರ್ಕಾರಿ ನೌಕರರ ಬೇಜವಾಬ್ದಾರಿತನ ಬಯಲಾಗಿದೆ. ಕಚೇರಿ ಕೆಲಸವನ್ನು ಬಿಲ್ ಕಲೆಕ್ಟರ್ ಹೊರಗಿನ ಯುವಕರಿಂದ ಮಾಡಿಸುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರ ಸಭೆಯಿಂದ ನೇಮಕವಾಗದ, ಹೊರಗುತ್ತಿಗೆ ನೌಕರರೂ ಅಲ್ಲದವರು ರಾಜಾರೋಷವಾಗಿ ನಗರಸಭೆ ಕೊಠಡಿಯಲ್ಲಿ ಕೂತು ಕೆಲಸ ಮಾಡುವ ಆರೋಪ ಸಂಬಂಧ ಆಯುಕ್ತರು ಪ್ರತಿಕ್ರಿಯಿಸಿದ್ದು, ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.
- Ravi H Mooki
- Updated on: Jun 30, 2026
- 12:21 pm
ಬಾಗಲಕೋಟೆಯಲ್ಲಿ ದಾಳಿಂಬೆ ಬೆಳೆಗೆ ಅಂಡಮಾರಿ ರೋಗದ ಕಂಟಕ; 10 ಸಾವಿರಕ್ಕೂ ಅಧಿಕ ಎಕರೆ ಬೆಳೆ ನಾಶ!
ಬಾಗಲಕೋಟೆ ಜಿಲ್ಲೆಯ ಪ್ರಸಿದ್ಧ ಕಲಾದಗಿ ಭಾಗದಲ್ಲಿ ದೇಶ-ವಿದೇಶಕ್ಕೆ ರಫ್ತಾಗುವ ದಾಳಿಂಬೆ ಬೆಳೆಗೆ ಭೀಕರ 'ದುಂಡಾಣು ಅಂಡಮಾರಿ' ರೋಗ ತಗುಲಿದ್ದು, ಸುಮಾರು 10 ಸಾವಿರಕ್ಕೂ ಹೆಚ್ಚು ಎಕರೆ ತೋಟ ಸಂಪೂರ್ಣ ನಾಶವಾಗಿದೆ. ಎಕರೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಯನ್ನು ರೈತರು ಕೈಯಾರೆ ಕಿತ್ತು ಸುಡುತ್ತಿದ್ದಾರೆ. ಜಿಲ್ಲೆಯಲ್ಲೇ ತೋಟಗಾರಿಕೆ ವಿಶ್ವವಿದ್ಯಾಲಯವಿದ್ದರೂ ರೋಗಕ್ಕೆ ಶಾಶ್ವತ ಔಷಧಿ ಕಂಡುಹಿಡಿಯದ ವಿಜ್ಞಾನಿಗಳ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪರಿಹಾರಕ್ಕೆ ಆಗ್ರಹಿಸಿದ್ದಾರೆ.
- Ravi H Mooki
- Updated on: Jun 27, 2026
- 2:53 pm
ಭಾವೈಕ್ಯತೆಗೆ ಸಾಕ್ಷಿಯಾದ ಬಾಗಲಕೋಟೆ: ಮೊಹರಂಗೆ ಮೆರಗು ನೀಡಿದ ಹುಲಿಕುಣಿತ, ಡೊಳ್ಳು ಕುಣಿತ
ಬಾಗಲಕೋಟೆಯಲ್ಲಿ ಮೊಹರಂ ಹಬ್ಬವು ಧರ್ಮ-ಜಾತಿ ಮೀರಿದ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಹಿಂದೂ-ಮುಸ್ಲಿಂ ಬಾಂಧವರು ಒಗ್ಗೂಡಿ ಅಣ್ಣ-ತಮ್ಮಂದಿರಂತೆ ಸಂಭ್ರಮದಿಂದ ಆಚರಿಸಿದರು. ವಲ್ಲಭಬಾಯಿ ವೃತ್ತದಲ್ಲಿ 25-30 ಅಡಿ ತಾಝಿಯಾಗಳು, ಹುಲಿವೇಷ, ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ನಡೆಯಿತು. ಅಲಾವಿ ದೇವರುಗಳ ಸಮಾಗಮವು ಈ ಹಬ್ಬದ ವಿಶೇಷ. ಇದು ಸಹೋದರತ್ವ ಮತ್ತು ಸಾಂಸ್ಕೃತಿಕ ಸೌಹಾರ್ದಕ್ಕೆ ಮಾದರಿಯಾಗಿದೆ.
- Ravi H Mooki
- Updated on: Jun 26, 2026
- 10:54 pm
ರೋಗಿಗಳ ಜೀವದ ಜೊತೆ ಚೆಲ್ಲಾಟ: ಪತಿ ಸರಕಾರಿ ವೈದ್ಯ, ಆದರೆ ಚಿಕಿತ್ಸೆ ನೀಡೋದು ಪತ್ನಿ!
Bagalakot News: ಬಾಗಲಕೋಟೆ ಜಿಲ್ಲೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ಬದಲು, ಯಾವುದೇ ಅರ್ಹತೆ ಇಲ್ಲದ ಅವರ ಪತ್ನಿಯೇ ರೋಗಿಗಳಿಗೆ ಹಾಗೂ ಗರ್ಭಿಣಿಯರಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಇದೇ ವಿಚಾರವಾಗಿ ಆಸ್ಪತ್ರೆಯ ವೈದ್ಯಾಧಿಕಾರಿಯನ್ನು ಸ್ಥಳೀಯರು ತರಾಟೆಗೂ ಪಡೆದಿದ್ದು, ಈ ಸಂಬಂಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
- Ravi H Mooki
- Updated on: Jun 24, 2026
- 2:25 pm
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಇಂದು ಮತ್ತೊಮ್ಮೆ ನಡೆಸಲಾಗಿದ್ದು, ಭಾರೀ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಅಕ್ರಮ ನಡೆಬಾರದು ಎಂದು ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದರಂತೆ ಬಾಲಕೋಟೆಯಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಕತ್ತಲ್ಲಿ ಇದ್ದ ಚೈನ್, ರುದ್ರಾಕ್ಷಿ ತೆಗೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಮೂಗುತಿಯನ್ನು ಸಹ ಸಿಬ್ಬಂದಿ ಕಟ್ ಮಾಡಿ ಪರೀಕ್ಷೆ ಕೇಂದ್ರದ ಒಳಗೆ ಬಿಟ್ಟಿರುವ ಪ್ರಸಂಗ ನಡೆದಿದೆ.
- Ravi H Mooki
- Updated on: Jun 21, 2026
- 4:52 pm
ಕರ್ನಾಟಕದ ಹಲವು ಜಿಲ್ಲಾ ಕೋರ್ಟ್ಗಳಿಗೆ ಬಾಂಬ್ ಬೆದರಿಕೆ ಕರೆ
ಬಾಗಲಕೋಟೆ, ದಾವಣಗೆರೆ, ಧಾರವಾಡ ಮತ್ತು ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ಮಾಡಲಾಗಿದೆ. ಸದ್ಯ ಇದು ಹುಸಿ ಬಾಂಬ್ ಬೆದರಿಕೆ ಎಂದು ಶಂಕಿಸಲಾಗಿದೆ.
- Ravi H Mooki
- Updated on: Jun 19, 2026
- 3:23 pm