ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
ಇದೇನು ನದಿಯೋ ಇಲ್ಲಾ ಮೈದಾವೋ? ಖಾಲಿಯಾದ ಮಲಪ್ರಭೆ
ಬೇಸಿಗೆಯ ತೀವ್ರ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಿರುವಾಗಲೇ ಇತ್ತ ಮಲಪ್ರಭಾ ನದಿ ಒಡಲು ಖಾಲಿಯಾಗುತ್ತಿದೆ. ಖಾಲಿಯಾದ ಮಲಪ್ರಭಾ ನದಿ ಸದ್ಯ ಕ್ರಿಕೆಟ್ ಮೈದಾನವಾಗಿ ಮಾರ್ಪಟ್ಟಿದೆ. ಯುವಕರಿಗೆ ಕ್ರಿಕೆಟ್ ಆಡಲು ಜಾಗ ಸಿಕ್ಕಂತಾಗಿದೆ. ರೈತರು ಮತ್ತು ಜಾನುವಾರುಗಳಿಗೆ ನೀರಿನ ತೀವ್ರ ಅಭಾವ ಉಂಟಾಗಿದೆ.
- Ravi H Mooki
- Updated on: Apr 16, 2025
- 11:05 am
ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬದಲಾವಣೆ ಸುಳಿವು ನೀಡಿದ: ಕಾಶಪ್ಪನವರ್
ಕರ್ನಾಟಕ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಬದಲಾವಣೆಯ ಸುಳಿವು ನೀಡಿದ್ದಾರೆ. ಸ್ವಾಮೀಜಿಗಳ ಅವಧಿ ಮುಗಿಯುತ್ತಿರುವ ಬಗ್ಗೆ ಅವರು ಹೇಳಿದ್ದಾರೆ ಮತ್ತು ಬದಲಾವಣೆ ಅನಿವಾರ್ಯ ಎಂದು ಸೂಚಿಸಿದ್ದಾರೆ. ಇದು ಲಿಂಗಾಯತ ಸಮುದಾಯದಲ್ಲಿ ಚರ್ಚೆಗೆ ಕಾರಣವಾಗಿದೆ.
- Ravi H Mooki
- Updated on: Apr 6, 2025
- 9:43 pm
KSRTC ಬಸ್ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ನಗರದ ಬಸ್ ನಿಲ್ದಾಣದಲ್ಲಿ ಸಿಮೆಂಟ್ ಚೀಲದಲ್ಲಿ ಮಹಿಳೆ ಗೋಮಾಂಸ ಸಾಗಿಸುತ್ತಿದ್ದರು. ಮಹಿಳೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
- Ravi H Mooki
- Updated on: Apr 5, 2025
- 2:37 pm
ಬಾಗಲಕೋಟೆ: ಆ ಒಂದು ಕೊಲೆಯಿಂದ ಬಂದೂಕು ತರಬೇತಿ ಪಡೆಯಲು ಮುಂದಾದ ಕುರಿಗಾಹಿಗಳು
ಬಾಗಲಕೋಟೆಯ ಕುರಿಗಾಹಿ ಶರಣಪ್ಪ ಎಂಬುವರು ಇಡೀ ಕುಟುಂಬಕ್ಕೆ ಆಸರೆಯಾಗಿದ್ದರು. ಆದರೆ, ಕುರಿ ಕಳ್ಳರಿಂದ ಕೊಲೆಯಾಗಿ ಜೀವ ಕಳೆದುಕೊಂಡಿದ್ದಾರೆ. ಇವರ ಕೊಲೆ, ಕುರುಬ ಸಮುದಾಯ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕುವಂತೆ ಮಾಡಿದೆ. ಇವರ ಪ್ರಯತ್ನಕ್ಕೆ ಬಾಗಲಕೋಟೆ ಎಸ್ಪಿ ಸಾಥ್ ನೀಡಿದ್ದಾರೆ. ಏನದು ಹೊಸ ಪ್ರಯತ್ನ? ಇಲ್ಲಿದೆ ಓದಿ
- Ravi H Mooki
- Updated on: Mar 31, 2025
- 10:34 pm
ಯುಗಾದಿ ಹಬ್ಬದಂದು ಕರ್ನಾಟಕದಲ್ಲಿ ಜಲ ಗಂಡಾಂತರ: ಐವರು ನೀರುಪಾಲು
ಯುಗಾದಿ ಹಬ್ಬದಂದು ಕರ್ನಾಟಕದ ವಿವಿಧೆಡೆ ಐವರು ನೀರುಪಾಲಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಮೂವರು ಬಾಲಕರು ನೀರುಪಾಲಾದ ಘಟನೆ ದೊಡ್ಡ ದುರಂತವಾಗಿದೆ. ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಇಂತಹ ಘಟನೆಗಳು ನಡೆದಿವೆ. ನದಿಗಳ ಬಳಿ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಈ ದುರಂತಗಳು ಸಂಭವಿಸಿವೆ ಎಂದು ಆರೋಪಿಸಲಾಗಿದೆ.
- Ravi H Mooki
- Updated on: Mar 30, 2025
- 6:23 pm
ಭೂಕಂಪ, ರಾಜಕೀಯ ವ್ಯಕ್ತಿಗಳಿಗೆ ಕಂಟಕ: ಯುಗಾದಿಯಂದು ಬೀಳಗಿಯ ಜಕನೇರನಕಟ್ಟೆ ಶಾಕಿಂಗ್ ಭವಿಷ್ಯ
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಯುಗಾದಿ ಪಾಡ್ಯದ ದಿನ ಜಕನೇರನಕಟ್ಟೆ ಎಂಬ ವಿಶೇಷ ಭವಿಷ್ಯ ನುಡಿಯಲಾಗುತ್ತದೆ. ಈ ಬಾರಿಯ ಭವಿಷ್ಯವೂ ಜನರಲ್ಲಿ ಆತಂಕ ಉಂಟುಮಾಡಿದೆ. ಮುಂದಿನ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳಿಗೆ ಕಂಟಕ ಎದುರಾಗಲಿದೆ. ಭೂಕಂಪ ಸಂಭವಿಸಲಿದೆ ಎಂದು ಶಾಕಿಂಗ್ ಭವಿಷ್ಯ ನುಡಿಯಲಾಗಿದೆ.
- Ravi H Mooki
- Updated on: Mar 30, 2025
- 2:03 pm
ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ
ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿ ಬತ್ತಿ ಹೋಗುತ್ತಿರುವುದರಿಂದ ರೈತರು ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯಲ್ಲಿ ನದಿಯ ನೀರಿನ ಮಟ್ಟ ತೀವ್ರವಾಗಿ ಇಳಿದಿದ್ದು, ರೈತರ ಬೆಳೆಗಳು ಮತ್ತು ಜಾನುವಾರುಗಳಿಗೆ ಅಪಾಯ ಎದುರಾಗಿದೆ. ಹಿಪ್ಪರಗಿ ಬ್ಯಾರೇಜ್ ನಿಂದ ನೀರು ಬಿಡುಗಡೆ ಮಾಡುವಂತೆ ಮತ್ತು ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಪಡೆಯುವಂತೆ ರೈತರು ಆಗ್ರಹಿಸುತ್ತಿದ್ದಾರೆ.
- Ravi H Mooki
- Updated on: Mar 29, 2025
- 6:42 pm
ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಕ್ಕವರ ಮುಂದೆ ಲಕ್ಷ ಲಕ್ಷ ಹಣ ಎಣಿಸಿದ
ಬಾಗಲಕೋಟೆ ಜಿಲ್ಲೆಯ ರೈತ ಶ್ರೀಶೈಲ್ ತೇಲಿ ಅವರು ಕಬ್ಬು ಬೆಳೆಯುವ ಪ್ರದೇಶದಲ್ಲಿ ಸೇಬು ಬೆಳೆಯುವ ಮೂಲಕ ಅಪಾರ ಯಶಸ್ಸು ಕಂಡಿದ್ದಾರೆ. ಏಳು ಎಕರೆ ಜಮೀನಿನಲ್ಲಿ ಸಾವಯವ ವಿಧಾನದಿಂದ ಸೇಬು ಬೆಳೆದು ಅವರು ಲಕ್ಷಾಂತರ ರೂಪಾಯಿ ಗಳಿಸಿದ್ದಾರೆ. ಈ ಯಶಸ್ಸಿನಿಂದ ಇತರ ರೈತರಿಗೆ ಸ್ಪೂರ್ತಿಯಾಗಿದ್ದಾರೆ ಮತ್ತು ಸೇಬು ಕೃಷಿಯ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
- Ravi H Mooki
- Updated on: Mar 29, 2025
- 1:54 pm
ಬಾಗಲಕೋಟೆ: ಕುಸಿದ ಬಿಳಿಜೋಳದ ಬೆಲೆ, ರೈತರು ಕಂಗಾಲು
ಉತ್ತರ ಕರ್ನಾಟಕದ ಜನರಿಗೆ ರೊಟ್ಟಿ ಊಟ ಅಂದರೆ ಪಂಚಪ್ರಾಣ. ರೊಟ್ಟಿ ಇಲ್ಲದೆ ಉತ್ತರ ಕರ್ನಾಟಕದ ಜನರ ಊಟ ಸಂಪೂರ್ಣವಾಗುವುದಿಲ್ಲ. ಆದ್ದರಿಂದ ಬಿಳಿಜೋಳವನ್ನು ಈ ಭಾಗರ ರೈತರು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಈ ವರ್ಷ ಬಿಳಿ ಜೋಳದ ಬೆಲೆ ಪಾತಾಳಕ್ಕೆ ಕುಸಿದಿದೆ. ಕ್ವಿಂಟಲ್ಗೆ ಈ ಹಿಂದೆ 6-7 ಸಾವಿರ ರೂ. ಇರುತ್ತಿದ್ದ ಬೆಲೆ, ಈಗ ದಿಢೀರ್ನೆ ಕುಸಿದಿದೆ. ಇದರಿಂದ ರೈತರಿಗೆ ಹಾಕಿದ ಬಂಡವಾಳವೂ ಬಾರದಂತಾಗಿದೆ. ಕೆಲ ರೈತರು ಬಂದಷ್ಟು ಬರಲಿ ಅಂತ ಮಾರಾಟ ಮಾಡಿದರೆ, ಎಷ್ಟೋ ರೈತರು ಬೆಲೆ ನಿರೀಕ್ಷೆಯಲ್ಲಿ ಮಾರಾಟ ಮಾಡದೆ ನೂರಾರು ಕ್ವಿಂಟಲ್ ಬಿಳಿಜೋಳವನ್ನು ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದಾರೆ.
- Ravi H Mooki
- Updated on: Mar 24, 2025
- 7:37 am
ಬಾಗಲಕೋಟೆಯ ಲಕ್ಷ್ಮೀ ರಂಗನಾಥ ಸ್ವಾಮಿಗೆ ಎಣ್ಣೆ ನೈವೇದ್ಯ, ಜಾತ್ರೆಯಲ್ಲಿ ಮದ್ಯ ತೀರ್ಥ
ದೇವರಿಗೆ ಹಣ್ಣು ಕಾಯಿ, ಪಾಯಸ ಹೀಗೆ ವಿವಿಧ ಆಹಾರ ಪದಾರ್ಥಗಳ ನೈವೇದ್ಯ ಅರ್ಪಿಸುತ್ತಾರೆ. ಇದಕ್ಕೆ ಪ್ರತಿಯಾಗಿ ದೇವಾಲಯದಲ್ಲಿ ತೆಂಗಿನ ಹಾಲು, ನೀರು ತೀರ್ಥ ಅಂತ ಕೊಡುತ್ತಾರೆ. ಆದರೆ, ದೇವಸ್ಥಾನದಲ್ಲಿ ಮದ್ಯವೇ ದೇವರಿಗೆ ನೈವೇದ್ಯ, ಸಾರಾಯಿಯೇ ಭಕ್ತರಿಗೆ ತೀರ್ಥ ಪ್ರಸಾದ. ಫೋಟೋಸ್ ನೋಡಿ.
- Ravi H Mooki
- Updated on: Mar 23, 2025
- 8:42 am
SSLC ಪರೀಕ್ಷೆಗೆ ಕ್ಷಣಗಣನೆ: ಇನ್ನೂ ಹಾಲ್ ಟಿಕೆಟ್ ಸಿಗದೇ ವಿದ್ಯಾರ್ಥಿಗಳು ಕಂಗಾಲು, ಪೋಷಕರು ಆತಂಕ
ಬಾಗಲಕೋಟೆಯ ಸರ್ಕಾರಿ ಶಾಲೆಯಲ್ಲಿ ಎಂಟು ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿಂದಾಗಿ ಎಸ್ಎಸ್ಎಲ್ಸಿ ಹಾಲ್ ಟಿಕೆಟ್ ನಿರಾಕರಿಸಲಾಗಿದೆ. ಈ ವಿಚಾರವಾಗಿ ಪೋಷಕರು ಮತ್ತು ಮುಖ್ಯ ಶಿಕ್ಷಕಿರ ಮಧ್ಯ ಮಾತಿನಿ ಚಕಮಕಿ ನಡೆದಿದೆ. ಉದ್ದೇಶಪೂರ್ವಕ ಹಾಜರಾತಿ ಕಡಿಮೆ ಕೊಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಬಿಇಒ ಪರಿಸ್ಥಿತಿಯನ್ನು ಪರಿಶೀಲಿಸಿ ಎರಡನೇ ಪರೀಕ್ಷೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.
- Ravi H Mooki
- Updated on: Mar 20, 2025
- 9:49 pm
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡದಲ್ಲಿ ಆಚರಿಸುವ ಹೋಳಿ ಹಬ್ಬ ಬೇರೆಡೆಗಳಿಗಿಂತ ಭಿನ್ನವಾಗಿದೆ. ಋತುಮತಿಯಾಗದ ಬಾಲಕಿಯನ್ನು ಮೆರವಣಿಗೆ ಮಾಡುವ ಆಚರಣೆ ಇಲ್ಲಿದೆ. ಕಳೆದ ಐವತ್ತು ವರ್ಷದಿಂದ ಈ ವಿಶೇಷ ಆಚರಣೆ ನಡೆದುಕೊಂಡು ಬಂದಿದೆ. ಈ ವೇಳೆ ನಾಗಾಸಾಧುಗಳ ವೇಷದಲ್ಲಿ ಮಕ್ಕಳು ಗಮನ ಸೆಳೆದಿದ್ದಾರೆ.
- Ravi H Mooki
- Updated on: Mar 15, 2025
- 6:30 pm