ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಕರ್ನಾಟಕ ರಾಜ್ಯಸಭಾ ಸದಸ್ಯನ ಕುಟುಂಬ: ಎಲೆಕ್ಟ್ರಿಕ್ ಸ್ಟವ್ ಬಳಕೆ, ಸೈಕಲ್ ಸವಾರಿ
ಪ್ರಧಾನಿ ಮೋದಿಯವರ ಮಿತವ್ಯಯದ ಕರೆಗೆ ಸ್ಪಂದಿಸಿದ ಬಾಗಲಕೋಟೆಯ ರಾಜ್ಯಸಭಾ ಸದಸ್ಯನ ಕುಟುಂಬ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಗ್ಯಾಸ್ ಬದಲು ಎಲೆಕ್ಟ್ರಿಕ್ ಸ್ಟೋವ್, ಚಿನ್ನಾಭರಣ ಖರೀದಿಸದಿರುವುದು, ಕಾರು ಬಿಟ್ಟು ಸೈಕಲ್ ಹಾಗೂ ರೈಲಿನಲ್ಲಿ ಪ್ರಯಾಣಿಸಿ ಇಂಧನ ಮತ್ತು ಆರ್ಥಿಕ ಉಳಿತಾಯ ಮಾಡುತ್ತಿದೆ.
- Ravi H Mooki
- Updated on: May 15, 2026
- 10:24 pm
ಬಿಸಿಲ ಝಳಕ್ಕೆ ಭಣಗುಡುತ್ತಿವೆ ಐತಿಹಾಸಿಕ ತಾಣಗಳು: ಬಾದಾಮಿ, ಐಹೊಳೆ, ಪಟ್ಟದಕಲ್ಲಿಗೆ ಪ್ರವಾಸಿಗರ ಬರ
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಐಹೊಳೆ, ಪಟ್ಟದಕಲ್ಲು ಮತ್ತು ಕೂಡಲಸಂಗಮದಂತಹ ಐತಿಹಾಸಿಕ ಪ್ರವಾಸಿ ತಾಣಗಳು ಬೇಸಿಗೆಯ ಬಿಸಿಲ ಬೇಗೆಗೆ ಕಂಗೆಟ್ಟಿವೆ. 39-40 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದಾಗಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ಇದರಿಂದ ಸ್ಥಳೀಯ ವ್ಯಾಪಾರ-ವಹಿವಾಟುಕ್ಕೂ ತೀವ್ರ ಹೊಡೆತ ಬಿದ್ದಿದೆ. ಪ್ರವಾಸೋದ್ಯಮಕ್ಕೂ ಬಿಸಿಲ ಎಫೆಕ್ಟ್ ತಟ್ಟಿದೆ.
- Ravi H Mooki
- Updated on: May 11, 2026
- 10:17 pm
ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್ನಿಂದ ಹಲ್ಲೆ!
ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ಕೈದಿಗಳ ಗಲಾಟೆ ನಿಯಂತ್ರಿಸಲು ಹೋದ ಜೈಲರ್ ವಿ.ಡಿ. ಕುಂಬಾರ ಅವರ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಈ ಆಘಾತಕಾರಿ ಘಟನೆಯಲ್ಲಿ ಜೈಲರ್ ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದೆ. ಅಕ್ರಮ ಅಕ್ಕಿ ಸಾಗಾಟ ಪ್ರಕರಣದ ಆರೋಪಿಗಳಾದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಆತನ ಗ್ಯಾಂಗ್ ಈ ದಾಳಿ ನಡೆಸಿದ್ದು, ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Ravi H Mooki
- Updated on: May 11, 2026
- 12:42 pm
ಫುಟ್ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್ನಲ್ಲಿ ಹೈಡ್ರಾಮಾ: ವ್ಯಾಪಾರಿಗಳಿಂದ ತೀವ್ರ ಆಕ್ರೋಶ
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಫುಟ್ಪಾತ್ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶುರುವಾಗಿದೆ. ಈ ವೇಳೆ ನಗರಸಭೆ ಅಧಿಕಾರಿಗಳೊಂದಿಗೆ ವ್ಯಾಪಾರಿಗಳು ವಾಗ್ವಾದಕ್ಕಿಳಿದು, ತಮ್ಮ ಅಂಗಡಿಗಳನ್ನು ತೆರವುಗೊಳಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬಳಿಕ ಅವರ ಸಮ್ಮುಖದಲ್ಲಿಯೇ ತೆರವು ಕಾರ್ಯಾಚರಣೆ ನಡೆಸಲಾಗಿದೆ.
- Ravi H Mooki
- Updated on: May 9, 2026
- 9:39 pm
ಮಗಳ ಮದುವೆಗೆ ಖರೀದಿಸಿದ್ದ ಚಿನ್ನವನ್ನು ಹೋಟೆಲ್ನಲ್ಲಿ ಮರೆತುಹೋದ ತಾಯಿ: ಮುಂದಾಗಿದ್ದು ಭಾವುಕ ಕ್ಷಣ
ಬಾಗಲಕೋಟೆಯ ಕೆರೂರಿನಲ್ಲಿ ಹೃದಯಸ್ಪರ್ಶಿ ಘಟನೆ ನಡೆದಿದೆ. ಮಗಳ ಮದುವೆಗೆಂದು 1.5 ಲಕ್ಷ ಮೌಲ್ಯದ ಚಿನ್ನ ಖರೀದಿಸಿದ್ದ ಮಹಿಳೆ ಹೋಟೆಲ್ನಲ್ಲಿ ಅದನ್ನು ಮರೆತಿದ್ದರು. ಮೂರು ದಿನಗಳ ನಂತರ ಹೋಟೆಲ್ ಮಾಲೀಕ ಪ್ರಾಮಾಣಿಕವಾಗಿ ಚಿನ್ನವನ್ನು ಮಹಿಳೆಗೆ ಹಿಂದಿರುಗಿಸಿದ್ದಾರೆ. ಅವರ ಮಾನವೀಯತೆ ಮತ್ತು ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ವೇಳೆ ಮಹಿಳೆ ಕೆಲ ಕಾಲ ಭಾವುಕರಾದ ಪ್ರಸಂಗವೂ ನಡೆದಿದೆ.
- Ravi H Mooki
- Updated on: May 6, 2026
- 4:31 pm
ಬಾಗಲಕೋಟೆಯಲ್ಲಿ ಯತ್ನಾಳ್ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು
ಬಾಗಲಕೋಟೆ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಅವರ ಭರ್ಜರಿ ಗೆಲುವಿನ ಕುರಿತು ಸಚಿವ ಆರ್. ಬಿ. ತಿಮ್ಮಾಪುರ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮೂಹಿಕ ಶ್ರಮ, ಸಿದ್ದರಾಮಯ್ಯರ ಅಭಿವೃದ್ಧಿ ಕಾರ್ಯಗಳು, ಡಿಕೆ ಶಿವಕುಮಾರ್ ಸಂಘಟನೆ, ಗ್ಯಾರಂಟಿ ಯೋಜನೆಗಳು ಮತ್ತು ಉಮೇಶ್ ಮೇಟಿ ಅವರ ವ್ಯಕ್ತಿತ್ವವೇ ಗೆಲುವಿಗೆ ಪ್ರಮುಖ ಕಾರಣ ಎಂದು ಅವರು ಹೇಳಿದರು. ಬಿಜೆಪಿ ಹಿಂದುತ್ವದ ತಂತ್ರ ಫಲ ನೀಡಲಿಲ್ಲ ಎಂದರು.
- Ravi H Mooki
- Updated on: May 4, 2026
- 3:59 pm
ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ವಿಜಯೇಂದ್ರ ಶಾಕ್
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಾಗಲಕೋಟೆ ಉಪಚುನಾವಣೆಯ ಹಿನ್ನಡೆಯನ್ನು ಒಪ್ಪಿಕೊಂಡಿದ್ದಾರೆ. ಪಕ್ಷವು ದಾವಣಗೆರೆ ದಕ್ಷಿಣದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ ಎಂದಿರುವ ಅವರು, ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರು 15 ದಿನಗಳ ಕಾಲ ಬೀಡುಬಿಟ್ಟಿದ್ದರೂ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ಹಿನ್ನಡೆಗೆ ಕಾರಣಗಳನ್ನು ಪರಾಮರ್ಶೆ ಮಾಡಲಾಗುವುದು ಎಂದಿದ್ದಾರೆ.
- Ravi H Mooki
- Updated on: May 4, 2026
- 3:12 pm
ಬಾಗಲಕೋಟೆ ಬೈ ಎಲೆಕ್ಷನ್ ರಿಸಲ್ಟ್: ಸಹೋದರನ ಗೆಲುವಿಗೆ ಬಾಯಕ್ಕ ಖುಷಿ ಓಕೆ, ದುಃಖ ಏಕೆ?
ಹೆಚ್ ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಕಳೆದ 2023ರ ಚುನಾವಣೆಯಲ್ಲೂ ಸಹ ಕಾಂಗ್ರೆಸ್ನ ಹೆಚ್ ವೈ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಗೆದ್ದು ಬೀಗಿದ್ದರು. ಇದೀಗ ಉಪಚುನಾವಣೆಯಲ್ಲೂ ಪುತ್ರ ಉಮೇಶ್ ಮೇಟಿ ಸಹ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನ 22,332 ಮತಗಳಿಂದ ಸೋಲಿಸಿದ್ದಾರೆ. ಫಲಿತಾಂಶದ ಬಗ್ಗೆ ಹೆಚ್ ವೈ ಮೇಟಿ ಪುತ್ರಿ ಬಾಯಕ್ಕೆ ಪ್ರತಿಕ್ರಿಯಿಸಿದ್ದು, ತಮ್ಮನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ.
- Ravi H Mooki
- Updated on: May 4, 2026
- 2:57 pm
ಬಾಗಲಕೋಟೆ ಉಪಚುನಾವಣೆ: ಗೆಲುವನ್ನು ತಂದೆಗೆ ಅರ್ಪಿಸಿ ಉಮೇಶ್ ಮೇಟಿ ಭಾವುಕ
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 21,866 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ತಮ್ಮ ಗೆಲುವನ್ನು ದಿವಂಗತ ತಂದೆಗೆ ಹಾಗೂ ಕಾರ್ಯಕರ್ತರಿಗೆ ಸಮರ್ಪಿಸಿದ ಉಮೇಶ್ ಮೇಟಿ ಭಾವುಕರಾದರು. ಮುಖ್ಯಮಂತ್ರಿಗಳ ಶ್ರಮ ಮತ್ತು ಬೆಂಬಲವನ್ನು ಸ್ಮರಿಸಿದ ಅವರು, ಸಿಎಂ ಅವರನ್ನು ತಂದೆಯ ಸ್ಥಾನದಲ್ಲಿ ಕಂಡಿರುವುದಾಗಿ ಹೇಳಿದರು.
- Ravi H Mooki
- Updated on: May 4, 2026
- 1:18 pm
ಬಾಗಲಕೋಟೆ ಬೈ ಎಲೆಕ್ಷನ್: ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್ನ ಉಮೇಶ್ ಮೇಟಿ
Bagalkot By-poll Result: ಬಹು ನಿರೀಕ್ಷಿತ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯದ ನಗೆ ಬೀರಿದ್ದಾರೆ. ಎಚ್.ವೈ. ಮೇಟಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ನಡೆದಿದ್ದ ಬೈ ಎಲೆಕ್ಷನ್ನಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ, ಎದುರಿಸಿದ್ದ ಮೊದಲ ಚುನಾವಣೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ವಿಜಯ ಪತಾಕೆ ಹಾರಿಸಿದ್ದಾರೆ.
- Ravi H Mooki
- Updated on: May 4, 2026
- 12:56 pm
ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್ಗೆ ಮುನ್ನಡೆ; ಕಾರ್ಯಕರ್ತರ ಸಂಭ್ರಮ
ಬಾಗಲಕೋಟೆ ನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಕಾಂಗ್ರೆಸ್ ಬಾವುಟಗಳನ್ನು ಪ್ರದರ್ಶಿಸಿ, ಪಕ್ಷ ಹಾಗೂ ನಾಯಕರ ಪರ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.
- Ravi H Mooki
- Updated on: May 4, 2026
- 11:11 am
ಜಾತ್ರೆಗೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ: ಬಾಗಲಕೋಟೆಯಲ್ಲೊಂದು ಅಮಾನವೀಯ ಘಟನೆ
ಬಾಗಲಕೋಟೆ ಜಿಲ್ಲೆಯ ಹುಣಸಿಕಟ್ಟಿ ಗ್ರಾಮದಲ್ಲಿ ಹನುಮಂತ ದೇವರ ಜಾತ್ರೆಗೆ 600 ರೂ. ಹಣ ನೀಡದ ಕಾರಣ 7 ಕುಟುಂಬಗಳಿಗೆ ಗ್ರಾಮದಿಂದಲೇ ಅಮಾನವೀಯವಾಗಿ ಬಹಿಷ್ಕಾರ ಹಾಕಲಾಗಿದೆ. ಪೂಜಾರಿಗಳು, ಕಿರಾಣಿ ಅಂಗಡಿಯವರು ಇವರೊಂದಿಗೆ ವ್ಯವಹರಿಸದಂತೆ ಡಂಗುರ ಸಾರಲಾಗಿದೆ. ಘಟನೆಯಿಂದ ಮಾನಸಿಕವಾಗಿ ನೋವುಂಡ ಕುಟುಂಬವೊಂದು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ, ಕಾನೂನು ಕ್ರಮಕ್ಕೆ ಆಗ್ರಹಿಸಿದೆ.
- Ravi H Mooki
- Updated on: May 1, 2026
- 4:01 pm