AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ, ಕಲಘಟಗಿ

Author - TV9 Kannada

ravi.mooki@tv9.com

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ರೋಗಿಗಳ ಜೀವದ ಜೊತೆ ಚೆಲ್ಲಾಟ: ಪತಿ ಸರಕಾರಿ ವೈದ್ಯ, ಆದರೆ ಚಿಕಿತ್ಸೆ ನೀಡೋದು ಪತ್ನಿ!

ರೋಗಿಗಳ ಜೀವದ ಜೊತೆ ಚೆಲ್ಲಾಟ: ಪತಿ ಸರಕಾರಿ ವೈದ್ಯ, ಆದರೆ ಚಿಕಿತ್ಸೆ ನೀಡೋದು ಪತ್ನಿ!

Bagalakot News: ಬಾಗಲಕೋಟೆ ಜಿಲ್ಲೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ಬದಲು, ಯಾವುದೇ ಅರ್ಹತೆ ಇಲ್ಲದ ಅವರ ಪತ್ನಿಯೇ ರೋಗಿಗಳಿಗೆ ಹಾಗೂ ಗರ್ಭಿಣಿಯರಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಇದೇ ವಿಚಾರವಾಗಿ ಆಸ್ಪತ್ರೆಯ ವೈದ್ಯಾಧಿಕಾರಿಯನ್ನು ಸ್ಥಳೀಯರು ತರಾಟೆಗೂ ಪಡೆದಿದ್ದು, ಈ ಸಂಬಂಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಇಂದು ಮತ್ತೊಮ್ಮೆ ನಡೆಸಲಾಗಿದ್ದು, ಭಾರೀ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಅಕ್ರಮ ನಡೆಬಾರದು ಎಂದು ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದರಂತೆ ಬಾಲಕೋಟೆಯಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಕತ್ತಲ್ಲಿ ಇದ್ದ ಚೈನ್, ರುದ್ರಾಕ್ಷಿ ತೆಗೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಮೂಗುತಿಯನ್ನು ಸಹ ಸಿಬ್ಬಂದಿ ಕಟ್ ಮಾಡಿ ಪರೀಕ್ಷೆ ಕೇಂದ್ರದ ಒಳಗೆ ಬಿಟ್ಟಿರುವ ಪ್ರಸಂಗ ನಡೆದಿದೆ.

ಕರ್ನಾಟಕದ ಹಲವು ಜಿಲ್ಲಾ ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಕರೆ

ಕರ್ನಾಟಕದ ಹಲವು ಜಿಲ್ಲಾ ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಕರೆ

ಬಾಗಲಕೋಟೆ, ದಾವಣಗೆರೆ, ಧಾರವಾಡ ಮತ್ತು ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ಮಾಡಲಾಗಿದೆ. ಸದ್ಯ ಇದು ಹುಸಿ ಬಾಂಬ್ ಬೆದರಿಕೆ ಎಂದು ಶಂಕಿಸಲಾಗಿದೆ.

ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ

ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ಗೋಟೆ ಗ್ರಾಮದ ತರಕಾರಿ ಮಾರುಕಟ್ಟೆ ಜಲಾವೃತಗೊಂಡು ವ್ಯಾಪಾರಿಗಳಿಗೆ ಭಾರಿ ನಷ್ಟ ಉಂಟಾಯಿತು. ಇತ್ತ ಚಿಕ್ಕಪಡಸಲಗಿ ಬಳಿ ಜಮಖಂಡಿ-ವಿಜಯಪುರ ಮುಖ್ಯ ರಸ್ತೆಗೆ ಬೃಹತ್ ಮರಗಳು ಉರುಳಿ ಬಿದ್ದು ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?

ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?

ಜಿಲ್ಲೆಯ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ) ನೀಲಕಂಠ ಅಂಗಡಿ ಅವರ ಮೇಲೆ ರೈತ ಬಸಪ್ಪ ದೊಡ್ಡಮನಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಆತಂಕ ಮೂಡಿಸಿದೆ. ಪರಿಹಾರ ಹಣದ ವಿಳಂಬ ಹಾಗೂ ತಾರತಮ್ಯ ಆರೋಪದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ.

ನಕಲಿ ಜಡ್ಜ್, ನಕಲಿ ಕೋರ್ಟ್ ಸೃಷ್ಟಿಸಿ ಬಾಗಲಕೋಟೆಯ ಸರ್ಕಾರಿ ನೌಕರನಿಗೆ 83 ಲಕ್ಷ ರೂ. ಟೋಪಿ ಹಾಕಿದ ಸೈಬರ್ ವಂಚಕರು

ನಕಲಿ ಜಡ್ಜ್, ನಕಲಿ ಕೋರ್ಟ್ ಸೃಷ್ಟಿಸಿ ಬಾಗಲಕೋಟೆಯ ಸರ್ಕಾರಿ ನೌಕರನಿಗೆ 83 ಲಕ್ಷ ರೂ. ಟೋಪಿ ಹಾಕಿದ ಸೈಬರ್ ವಂಚಕರು

ಬಾಗಲಕೋಟೆಯಲ್ಲಿ ಆಘಾತಕಾರಿ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಹಿರಿಯ ಸರ್ಕಾರಿ ನೌಕರರೊಬ್ಬರು ನಕಲಿ ಪೊಲೀಸರು ಮತ್ತು ನ್ಯಾಯಾಲಯದ ನಾಟಕಕ್ಕೆ ಬಲಿಯಾಗಿ 83.22 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಆಧಾರ್ ಕಾರ್ಡ್ ದುರ್ಬಳಕೆ ಆರೋಪದ ಮೇಲೆ ಬೆದರಿಸಿ, ವರ್ಚುವಲ್ ವಿಚಾರಣೆ ನಡೆಸಿ ಹಣ ಸುಲಿಗೆ ಮಾಡಲಾಗಿದೆ. ಇಂತಹ ಸೈಬರ್ ಅಪರಾಧಗಳಿಂದ ಸಾರ್ವಜನಿಕರು ಎಚ್ಚರದಿಂದಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ

ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ

ಮೃತದೇಹವನ್ನು ಉಪ್ಪಿನಲ್ಲಿ ಮುಚ್ಚಿ ಬದುಕಿಸಲು ಪ್ರಯತ್ನಿಸಿದ ಘಟನೆಗ ವರದಿಯಾಗಿದೆ. ಹೌದು..ಬಾಗಲಕೋಟೆಯಲ್ಲಿ 18 ತಿಂಗಳ ಮಗುವೊಂದು ಸಂಪ್​​​ಗೆ ಬಿದ್ದು ಸಾವನ್ನಪ್ಪಿದೆ. ಆದ್ರೆ, ಸಾವನ್ನಪ್ಪಿದ ನಂತರ ಮಗುವನ್ನು ಬದುಕಿಸಲು ಪೋಷಕರು ನಡೆಸಿದ ವಿಲಕ್ಷಣ ಪ್ರಯತ್ನ ಮತ್ತು ಮೂಢನಂಬಿಕೆಯ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸೋಷಿಯಲ್ ಮೀಡಿಯಾದ ವೈರಲ್ ಪೋಸ್ಟ್​​ ಗಳನ್ನ ನಂಬಿ ಈ ರೀತಿ ಮಾಡಿದ್ರೂ ಸಹ ಮಗು ಬದುಕುಳಿದಿಲ್ಲ. ಇದರೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನು ಮತ್ತೆ ಬದುಕಿಸಬಹುದು ಎಂಬ ವೈರಲ್ ಮೆಸೇಜ್​ನ ಸತ್ಯಾಸತ್ಯತೆ ಅನಾವಣವಾಗಿದೆ.

ಧಾರಾಕಾರ ಮಳೆಗೆ ಕುಸಿದ ಮನೆ‌ ಮೇಲ್ಚಾವಣಿ: ತಂದೆ, ಮಗನ ಜೀವ ಉಳಿಸಿದ ಸಾಕು ಬೆಕ್ಕು

ಧಾರಾಕಾರ ಮಳೆಗೆ ಕುಸಿದ ಮನೆ‌ ಮೇಲ್ಚಾವಣಿ: ತಂದೆ, ಮಗನ ಜೀವ ಉಳಿಸಿದ ಸಾಕು ಬೆಕ್ಕು

ಬಾಗಲಕೋಟೆಯಲ್ಲಿ ಧಾರಾಕಾರ ಮಳೆಗೆ ಹಣ್ಣಿನ ವ್ಯಾಪಾರಿಯ ಮನೆ ಮೇಲ್ಛಾವಣಿ ಕುಸಿದಿದೆ. ಆದರೆ ಅದೃಷ್ಟವಶಾತ್, ಸಾಕು ಬೆಕ್ಕಿನಿಂದಾಗಿ ತಂದೆ ಮತ್ತು ಮಗನ ಪ್ರಾಣ ಉಳಿದಿದೆ. ಬಾಗಲಕೋಟೆಯ ವಲ್ಲಭಬಾಯಿ ವೃತ್ತದ ಬಳಿ ಘಟನೆ ನಡೆದಿದೆ. ಲಕ್ಷಾಂತರ ರೂ ಮೌಲ್ಯದ ವಸ್ತುಗಳು ನಾಶವಾಗಿದ್ದು, ಸೂಕ್ತ ಪರಿಹಾರಕ್ಕೆ ಮನವಿ ಮಾಡಿದ್ದಾರೆ.

ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ್ದ ಸರ್ಕಾರಿ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣ: ಹೇಳೋರು ಇಲ್ಲ ಕೇಳೋರು ಇಲ್ಲ!

ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ್ದ ಸರ್ಕಾರಿ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣ: ಹೇಳೋರು ಇಲ್ಲ ಕೇಳೋರು ಇಲ್ಲ!

ಬಾಗಲಕೋಟೆಯ ನವನಗರದಲ್ಲಿ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಸರ್ಕಾರಿ ನರ್ಸರಿ ಶಾಲೆ ಕಟ್ಟಡ ಬಳಕೆಯಾಗದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿರುವ ಬಗ್ಗೆ ಕಿಡಿ ಕಾರಿದ್ದಾರೆ. ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನಿಸಿದರೆ ಮೆಡಿಕಲ್ ಕಾಲೇಜಿಗೆ ಕಟ್ಟಡವನ್ನು ಇತ್ತೀಚೆಗೆ ಹಸ್ತಾಂತರ ಮಾಡಿದ್ದೇವೆ ಎನ್ನುವ ಮೂಲಕ ನುಣುಚಿಕೊಳ್ಳುತ್ತಿದ್ದಾರೆ.

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ!

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ!

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ 62 ಗ್ರಾಂ ಚಿನ್ನ ಹಾಗೂ ಸಿಇಐಆರ್ ಪೋರ್ಟಲ್ ನೆರವಿನಿಂದ 30 ಮೊಬೈಲ್‌ಗಳನ್ನು ರಿಕವರಿ ಮಾಡಿದ್ದಾರೆ. ಪೊಲೀಸರ ಈ ಅದ್ಭುತ ಕಾರ್ಯಕ್ಷಮತೆಯನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರು ಇಡೀ ತಂಡಕ್ಕೆ ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಬಾಗಲಕೋಟೆಯಲ್ಲಿ ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ನಿಷೇಧಕ್ಕೆ ಹಿಂದೂಪರ ಸಂಘಟನೆಗಳು ತೀವ್ರ ಆಗ್ರಹಿಸಿವೆ. ಶ್ರೀರಾಮ ಸೇನೆ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ಮಾಡಿ ಬಳಿಕ ಡಿಸಿಗೆ ಮನವಿ ಸಲ್ಲಿಸಿದ್ದಾರೆ. ಅಕ್ರಮ ಕಸಾಯಿಖಾನೆಗಳು ಮತ್ತು ಗೋಸಾಗಾಟ ತಡೆಯಲು ಪೊಲೀಸ್ ಇಲಾಖೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ

ಬಾಗಲಕೋಟೆಯಲ್ಲಿ ಯುವಕನೊಬ್ಬ ಹುಚ್ಚು ನಾಯಿ ಕಡಿತಕ್ಕೆ ಸಕಾಲದಲ್ಲಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳದೆ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ನಾಯಿ ಕಡಿತದ ನಂತರ ರೇಬಿಸ್ ಲಸಿಕೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ರೇಬಿಸ್ ಮಾರಕವಾಗಬಹುದು. ಸಾರ್ವಜನಿಕರು ಇಂತಹ ದುರಂತಗಳಿಂದ ಪಾಠ ಕಲಿಯಬೇಕು ಮತ್ತು ಆರೋಗ್ಯ ಇಲಾಖೆಯ ಜಾಗೃತಿ ಕರೆಗೆ ಸ್ಪಂದಿಸಬೇಕು.