ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
ವೋಟ್ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ!
ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಅಕ್ರಮದ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. 18 ವರ್ಷದೊಳಗಿನವರು ಮತ್ತು ಅನ್ಯ ಜಿಲ್ಲೆಯ ಮತದಾರರನ್ನು ಅಕ್ರಮವಾಗಿ ಲಿಸ್ಟ್ಗೆ ಸೇರಿಸಲಾಗಿದೆ ಎಂದು ದಾಖಲೆ ಸಮೇತ ದೂರು ನೀಡಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿಯೂ ಬಿಜೆಪಿ ಎಚ್ಚರಿಕೆ ನೀಡಿದೆ.
- Ravi H Mooki
- Updated on: Dec 31, 2025
- 6:14 pm
KSRTC ಬಸ್-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ
ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯ ಲೋಕಾಪುರ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬಸ್ ಚಾಲಕನ ಕಾಲು ತುಂಡಾಗಿದ್ದರೆ, ಹಲವು ಪ್ರಯಾನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲೋಕಾಪೂರ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
- Ravi H Mooki
- Updated on: Dec 31, 2025
- 3:25 pm
ಬಾಗಲಕೋಟೆಯಲ್ಲೂ ಮತದಾರರ ಪಟ್ಟಿ ಅಕ್ರಮದ ಸದ್ದು: ವೋಟರ್ ಲಿಸ್ಟ್ನಲ್ಲಿದೆ ಅಪ್ರಾಪ್ತರು, ಬೇರೆ ಊರಿನವರ ಹೆಸರು!
ಬಾಗಲಕೋಟೆಯ ಇಳಕಲ್ ತಾಲೂಕಿನ ಮುರಡಿ ಗ್ರಾಮದ ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. 18 ವರ್ಷದೊಳಗಿನ ಅಪ್ರಾಪ್ತರು ಹಾಗೂ ಬೇರೆ ಊರಿನವರ ಹೆಸರುಗಳು ಪಟ್ಟಿಯಲ್ಲಿ ಸೇರಿವೆ. ನಕಲಿ ದಾಖಲೆ ಸೃಷ್ಟಿಸಿ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ಸ್ಥಳೀಯರು ದೂರು ನೀಡಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷೆಯ ಮಗನ ಮೇಲೆ ಶಂಕೆ ವ್ಯಕ್ತಪಡಿಸಿ, ಸೂಕ್ತ ತನಿಖೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
- Ravi H Mooki
- Updated on: Dec 26, 2025
- 3:35 pm
ಕಾಕನೂರು SBI ದರೋಡೆ ಕೇಸ್: ಮತ್ತಿಬ್ಬರು ಆರೋಪಿಗಳು ಲಾಕ್; ಹಣ, ಬಂಗಾರ ಜಪ್ತಿ
ಬಾಗಲಕೋಟೆಯ ಕಾಕನೂರು ಎಸ್ಬಿಐ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಿಂದ 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ, ಹಣ ಹಾಗೂ ದರೋಡೆಗೆ ಬಳಸಿದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 62 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ಮತ್ತು ಹಣ ವಶಪಡಿಸಿಕೊಳ್ಳಲಾಗಿದೆ.
- Ravi H Mooki
- Updated on: Dec 25, 2025
- 3:34 pm
ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ
ಮುಸ್ಲಿಮರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತದೆ ಎಂದು ಮಹೇಶ್ವರಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದು ಕೋಟಿ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಶಾಸಕರಿದ್ದಾರೆ. ಇತರ ಸಮುದಾಯಗಳ ಪ್ರಾತಿನಿಧ್ಯಕ್ಕೆ ಹೋಲಿಸಿದರೆ ಇದು ಬಹಳ ಕಡಿಮೆ. ಮುಂದಿನ ಬಾರಿ 30 ಮುಸ್ಲಿಂ ಶಾಸಕರಾಗಬೇಕು ಎಂದು ಕರೆ ನೀಡಿದ ಅವರು, ಮುಸ್ಲಿಂರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ ಎಂದಿದ್ದಾರೆ.
- Ravi H Mooki
- Updated on: Dec 24, 2025
- 4:03 pm
ಬಾಗಲಕೋಟೆ: ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ತಾಯಿ, ಮಗು ರಕ್ಷಣೆ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ರಿಡ್ಜ್ ಮೇಲಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ತಾಯಿ ಸೇರಿದಂತೆ ಎರಡು ವರ್ಷದ ಮಗುವಿನ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಸ್ಥಳೀಯರ ಮಾಹಿತಿ ಮೇರೆಗೆ 112 ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ತಾಯಿ ಮತ್ತು ಮಗುವನ್ನು ರಕ್ಷಿಸಿದ್ದಾರೆ.
- Ravi H Mooki
- Updated on: Dec 23, 2025
- 8:45 pm
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕರ್ನಾಟಕ ಕಾಂಗ್ರೆಸ್ನಲ್ಲಿನ ಗೊಂದಲ ಒಂದೆರಡಲ್ಲ. ಸಿಎಂ ಕುರ್ಚಿ ಆಗ ಬದಲಾಗುತ್ತೆ, ಈಗ ಬದಲಾಗುತ್ತೆ ಎಂಬ ಚರ್ಚೆಗಳು ದಿನ ಕಳೆದಂತೆ ಜೋರಾಗುತ್ತಲೇ ಇವೆ. ಬ್ರೇಕ್ ಫಾಸ್ಟ್ ಮೂಲಕ ಬಗೆಹರಿಯಿತು ಎನ್ನುವಷ್ಟರಲ್ಲೇ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ಸಿಎಂ ಕುರ್ಚಿ ಕುದನ ಶುರುವಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ ಮತ್ತೆ ಆ್ಯಕ್ಟೀವ್ ಆಗಿದ್ದು, ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ನಂತರ ಬಾಗಲಕೋಟೆಯ ಜ್ಯೋತಿಷಿಯೊಬ್ಬರು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎನ್ನುವ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
- Ravi H Mooki
- Updated on: Dec 22, 2025
- 3:10 pm
ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು
ಬಾಗಲಕೋಟೆಯ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ 16 ವರ್ಷದ ಬಾಲಕನ ಮೇಲೆ ಶಿಕ್ಷಕ ದಂಪತಿ ಅಮಾನವೀಯವಾಗಿ ಹಲ್ಲೆ ನಡೆಸಿ, ಖಾರದಪುಡಿ ಎರಚಿ, ಪೈಪ್ನಿಂದ ಥಳಿಸಿ ವಿಕೃತಿ ಮೆರೆದಿದ್ದರು. ಈ ಪ್ರಕರಣದ ಹಿನ್ನೆಲೆ ದಂಪತಿಯನ್ನು ಬಂಧಿಸಲಾಗಿದೆ. ಯಾವುದೇ ಪರವಾನಗಿ ಪಡೆಯದೆ ಶಾಲೆ ನಡೆಸುತ್ತಿದ್ದ ವಿಷಯವೂ ತಿಳಿದುಬಂದಿದೆ. ಸರ್ಕಾರ ಕೂಡಲೇ ಶಾಲೆ ಮುಚ್ಚಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.
- Ravi H Mooki
- Updated on: Dec 21, 2025
- 1:03 pm
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಎಸ್ಪಿ
ಬಾಗಲಕೋಟೆಯ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿಯು 16 ವರ್ಷದ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ ಎಂದು ಎಸ್ಪಿ ಸಿದ್ಧಾರ್ಥ್ ಗೋಯಲ್ ತಿಳಿಸಿದ್ದಾರೆ.
- Ravi H Mooki
- Updated on: Dec 20, 2025
- 5:55 pm
ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ
ಬಾಗಲಕೋಟೆಯ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿ 16 ವರ್ಷದ ಬುದ್ಧಿಮಾಂದ್ಯ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಬೆಲ್ಟ್, ಪ್ಲಾಸ್ಟಿಕ್ ಪೈಪ್ನಿಂದ ಹೊಡೆದು, ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಕೌರ್ಯ ಮೆರೆದಿದ್ದಾರೆ. ಅಮಾನವೀಯ ಕೃತ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ravi H Mooki
- Updated on: Dec 20, 2025
- 3:21 pm
ಅಪ್ರಾಪ್ತೆ ಮೇಲೆ ಮ್ಯೂಸಿಕ್ ಮೈಲಾರಿ ಅತ್ಯಾಚಾರ ಕೇಸ್ಗೆ ಟ್ವಿಸ್ಟ್: ಸಂತ್ರಸ್ತೆ ವಿಡಿಯೋ ವೈರಲ್
ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಕೇಳಿಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಹೊಸ ತಿರುವು ಪಡೆದಿದೆ. ಸಂತ್ರಸ್ತೆಯ ವಿಡಿಯೋವಂದು ವೈರಲ್ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಕೆ ಇದು ಹಳೆಯ ವಿಡಿಯೋ ಎಂದಿದ್ದಾಳೆ. ಪ್ರಕರಣ ಸಂಬಂಧ ಡಿಸೆಂಬರ್ 17ರಂದು ಮ್ಯೂಸಿಕ್ ಮೈಲಾರಿ ಬಂಧನವಾಗಿತ್ತು.
- Ravi H Mooki
- Updated on: Dec 19, 2025
- 11:09 am
ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಸಿಂಗರ್ ಮೈಲಾರಿ ಅರೆಸ್ಟ್
ಮ್ಯೂಸಿಕ್ ಮೈಲಾರಿ ಬಂಧನ: ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ' ಸಂಕಷ್ಟ ಎದುರಾಗಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಮೈಲಾರಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಮಹಾರಾಷ್ಟ್ರಕ್ಕೆ ಹೊರಟಿದ್ದಾಗ ಮಹಾಲಿಂಗಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಪ್ರಕರಣದ ಬಗ್ಗೆ ಬಾಗಲಕೋಟೆ ಎಸ್ಪಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದು, ಅದು ಈ ಕೆಳಗಿನಂತಿದೆ.
- Ravi H Mooki
- Updated on: Dec 17, 2025
- 4:10 pm