ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
ಕುರಿ ಕಳ್ಳತನ ಮಾಡಲು ಬಂದು ಕುರಿಗಾಯಿಯನ್ನೇ ಕೊಂದರು: ಆತ್ಮರಕ್ಷಣೆಗೆ ಗನ್ ಬೇಕೆಂದ ಕುರುಬರು
ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಾಹಿಯೊಬ್ಬನ ಕೊಲೆಯಿಂದ ಕುರುಬ ಸಮುದಾಯ ಆಕ್ರೋಶಗೊಂಡಿದೆ. ಕುರಿ ಕಳ್ಳರ ದಾಳಿಯಲ್ಲಿ ಯುವಕ ಕೊಲೆಯಾಗಿದ್ದಾನೆ. ಈ ಘಟನೆಯಿಂದ ಆತ್ಮರಕ್ಷಣೆಗೆ ಗನ್ ನೀಡಬೇಕೆಂದು ಕುರುಬ ಸಮುದಾಯ ಒತ್ತಾಯಿಸಿದ್ದು, ಜಿಲ್ಲಾಡಳಿತ ಎದುರು ಪ್ರತಿಭಟನೆ ಮಾಡಲಾಗಿದೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಲವಾಗಿ ಒತ್ತಾಯಿಸಲಾಗಿದೆ.
- Ravi H Mooki
- Updated on: Mar 12, 2025
- 7:11 pm
ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ: ಬಿಜೆಪಿ ರಾಜ್ಯಸಭಾ ಸದಸ್ಯ ವ್ಯಂಗ್ಯ
ಸಿಎಂ ಸಿದ್ದರಾಮಯ್ಯ ಮಂಡಿಸಿರೋ ಬಜೆಟ್ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ. ಹೌದು, ಸಿಎಂ ಸಿದ್ದರಾಮಯ್ಯ ಇಂದು (ಮಾರ್ಚ್ 07) ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. ಕಳೆದ ವರ್ಷ 3 ಲಕ್ಷ 71 ಸಾವಿರದ 383 ಕೋಟಿ ರೂ. ಬಜೆಟ್ ಗಾತ್ರವಿತ್ತು. ಈ ಬಾರಿ ಈ ಅಂಕಿ 4 ಲಕ್ಷ ಕೋಟಿ ದಾಟಿದೆ. ಅಂದ್ರೆ 4 ಲಕ್ಷ 9 ಸಾವಿರದ 549 ಕೋಟಿ ರೂಪಾಯಿಯ ದಾಖಲೆಯ ಬಜೆಟ್ ಇದಾಗಿದೆ. ಆದ್ರೆ, ಈ ಬಜೆಟ್ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ನಾನಾ ರೀತಿ ವ್ಯಂಗ್ಯವಾಡುತ್ತಿದ್ದಾರೆ.
- Ravi H Mooki
- Updated on: Mar 7, 2025
- 3:20 pm
ಹಳ್ಳಿ ಬಾಹುಬಲಿಯ ಸಾಹಸ: ಏಕಾಂಗಿಯಾಗಿ 30 ಟನ್ ಕಬ್ಬು ಲೋಡ್ ಮಾಡಿದ ಯುವಕ
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬುದ್ನಿ ಪಿಎಂ ಗ್ರಾಮದ 22 ವರ್ಷದ ಯುವಕ ಏಕಾಂಗಿಯಾಗಿ 30 ಟನ್ ಕಬ್ಬನ್ನು 6.5 ಗಂಟೆಗಳಲ್ಲಿ ಟ್ರ್ಯಾಕ್ಟರ್ಗೆ ಲೋಡ್ ಮಾಡಿ ದಾಖಲೆ ನಿರ್ಮಿಸಿದ್ದಾನೆ. ಇದು ಸಾಮಾನ್ಯವಾಗಿ 20 ಜನರ ತಂಡ ಮಾಡುವ ಕೆಲಸ. ಆದರೆ ಆತ ಏಕಾಂಗಿಯಾಗಿ ಮಾಡಿದ್ದಾರೆ. ಅವನ ಸಾಧನೆಗೆ ಸ್ಥಳೀಯರು ಹಾರ ಹಾಕಿ ಸನ್ಮಾನಿಸಿದ್ದಾರೆ.
- Ravi H Mooki
- Updated on: Mar 5, 2025
- 3:56 pm
ಐತಿಹಾಸಿಕ ಬೆಂಕಿ ಬಬಲಾದಿ ಮಠದ ಕಾಲಜ್ಞಾನ ವಾಣಿಗೆ ಅಪಸ್ವರ: ಏನದು?
ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೊಪ್ಪದ ಗಂಗಾಧರ ಅಜ್ಜನವರ ವಂಶಸ್ಥ ರವೀಂದ್ರ ಮುತ್ಯಾ, ಕಾಲಜ್ಞಾನ ಪುಸ್ತಕ ನನ್ನ ಬಳಿ ಇದ್ದಾಗ ಕಾಲಜ್ಞಾನ ಹೇಳುವುದಕ್ಕೆ ಹೇಗೆ ಸಾಧ್ಯ. ಮೂಲಬಬಲಾದಿ ಕಾಲಜ್ಞಾನ ಪುಸ್ತಕದ ಪ್ರಕಾರ ಕಾಲಜ್ಞಾನ ಸಾರಿಲ್ಲ. ಇದು ಜನರ ದಾರಿ ತಪ್ಪಿಸುವ ವಾಣಿ ಎಂದು ಆರೋಪಿಸಿದ್ದಾರೆ.
- Ravi H Mooki
- Updated on: Mar 3, 2025
- 3:00 pm
ಪರೀಕ್ಷೆಯಲ್ಲಿ ನಕಲು ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
17 ವರ್ಷದ ತೇಜಸ್ವಿನಿ ದೊಡ್ಡಮನಿ ಎಂಬ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಕಾಲೇಜು ಸಿಬ್ಬಂದಿ ನಕಲು ಮಾಡುತ್ತಿರುವುದನ್ನು ಗಮನಿಸಿ ಪ್ರಶ್ನಿಸಿದ್ದರು. ಮನನೊಂದ ತೇಜಸ್ವಿನಿ ಕಾಣೆಯಾಗಿದ್ದು, ನಂತರ ಅವರ ಮೃತದೇಹ ಮಹಾರಾಣಿ ಕೆರೆಯಲ್ಲಿ ಪತ್ತೆಯಾಗಿದೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Ravi H Mooki
- Updated on: Mar 2, 2025
- 2:16 pm
“ಬ್ಯಾನ್ ರಮ್ಮಿ ಮತ್ತು ಡ್ರೀಮ್ 11 ಇನ್ ಇಂಡಿಯಾ” ಇಳಕಲ್ ಸೀರೆ ಮೇಲೆ ನೇಯ್ದು ಮೋದಿಗೆ ಮನವಿ
ಬಾಗಲಕೋಟೆಯ ಇಳಕಲ್ನ ಮೇಘರಾಜ್ ಗುದ್ದಟ್ಟಿ ಅವರು "ಬ್ಯಾನ್ ರಮ್ಮಿ ಮತ್ತು ಡ್ರೀಮ್ 11" ಎಂದು ನೇಯ್ದ ಇಳಕಲ್ ಸೀರೆಯ ಮೇಲೆ ನೇಯ್ದು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಆನ್ಲೈನ್ ಜೂಜಿನಿಂದಾಗಿ ಅನೇಕ ಕುಟುಂಬಗಳು ಮತ್ತು ಯುವಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸೀರೆಯನ್ನು ಪ್ರಧಾನಿ ಕಾರ್ಯಾಲಯಕ್ಕೆ ಕಳುಹಿಸುವ ಯೋಜನೆಯಲ್ಲಿದ್ದಾರೆ.
- Ravi H Mooki
- Updated on: Feb 22, 2025
- 12:26 pm
ಕಳ್ಳರ ಹಾವಳಿ ತಡೆಯಲು ಮಹಿಳೆಯರ ರಾತ್ರಿ ಗಸ್ತು
ಮುಧೋಳದ ಜಯನಗರದಲ್ಲಿ ಕಳ್ಳತನದ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸ್ಥಳೀಯ ಮಹಿಳೆಯರು ರಾತ್ರಿ ಗಸ್ತು ತಿರುಗಲು ಆರಂಭಿಸಿದ್ದಾರೆ. ಪೊಲೀಸರ ಸಹಾಯದಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಅವರು ಕೈಯಲ್ಲಿ ಕೋಲು ಹಿಡಿದು ರಸ್ತೆಗಳಲ್ಲಿ ಸಂಚರಿಸುತ್ತಿದ್ದಾರೆ.ಇತ್ತೀಚೆಗೆ ಕಳ್ಳತನದ ಅನುಮಾನದ ಮೇಲೆ ಇಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಈ ಘಟನೆಗಳು ಮುಧೋಳದಲ್ಲಿ ಸುರಕ್ಷತಾ ಕ್ರಮಗಳ ಅಗತ್ಯವನ್ನು ಎತ್ತಿಹಿಡಿಯುತ್ತವೆ.
- Ravi H Mooki
- Updated on: Feb 14, 2025
- 10:57 am
ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು
ಕುಂಭಮೇಳಕ್ಕೆ ತೆರಳಿದ್ದ ಬಾಗಲಕೋಟೆ ಜಿಲ್ಲೆಯ 44 ವರ್ಷದ ವ್ಯಕ್ತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ನ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಸತೀಶ್, ಒಂದು ವಾರದ ಹಿಂದೆ ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಭಾಗವಹಿಸಿ ಕಾಶಿಗೆ ತೆರಳಿದ್ದರು. ಈ ವೇಳೆ ಸ್ನಾನ ಮಾಡುವಾಗ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
- Ravi H Mooki
- Updated on: Feb 9, 2025
- 11:54 am
ಆಯತಪ್ಪಿ ಬಿದ್ದಿದ್ದ ಬೈಕ್ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಲೋಕಾಪುರದ ಬಳಿ ಬೈಕ್ ಅಪಘಾತಕ್ಕೀಡಾದ ಬೈಕ್ ಸವಾರನಿಗೆ ಸಚಿವ ಸಂತೋಷ್ ಲಾಡ್ ಸಹಾಯ ಮಾಡಿದ್ದಾರೆ. ಅವರು ತಮ್ಮ ವಾಹನದಲ್ಲಿ ಗಾಯಾಳುವನ್ನು ಲೋಕಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿದರು.
- Ravi H Mooki
- Updated on: Feb 7, 2025
- 6:53 pm
ಜೊತೆಗೆ ಕುಳಿತು ಕುಡಿದು ಚಿತ್ರಾನ್ನ ತಿಂದು ತೇಗಿ ಸ್ನೇಹಿತನನ್ನೇ ಸುಟ್ಟು ಹಾಕಿ ಡ್ರಾಮಾ ಮಾಡಿದ
ಅದು ಬೆಳಿಗ್ಗೆ 11 ರಿಂದ 12ರ ಸಮಯ ಬಿಸಿಲು ನೆತ್ತಿಗೇರುತ್ತಾ ಇತ್ತು. ಮಟ ಮಟ ಮಧ್ಯಾಹ್ನ ಹಾಡು ಹಗಲೇ ಅದೊಬ್ಬ ವ್ಯಕ್ತಿ ಮನೆಯಿಂದ ಹೊರ ಬಂದು ಚೀರಾಡಿದ್ದ. ನನ್ನ ಸ್ನೇಹಿತ ಬೆಂಕಿ ಹಚ್ಚಿಕೊಂಡು ಸತ್ತ .ನನ್ನ ಸ್ನೇಹಿತ ಹೋದ ಹಣವೂ ಹೋಯ್ತು ಎಂದು ಕೂಗಾಡಿದ್ದ. ಏನಾಯ್ತು ಎಂದು ಅಕ್ಕಪಕ್ಕದ ಜನ ಮನೆಯ ಒಳ ಹೊಕ್ಕು ನೋಡಿದರೆ ಅದೊಬ್ಬ ವ್ಯಕ್ತಿ ದೇಹ ಸುಟ್ಟು ಕರಕಲಾಗಿತ್ತು. ಅಷ್ಟಕ್ಕೂ ಆಗಿದ್ದೇನು?
- Ravi H Mooki
- Updated on: Feb 6, 2025
- 7:45 pm
ಕುಂಭಮೇಳದಲ್ಲೂ ಸದ್ದು ಮಾಡಿದ ಕರ್ನಾಟಕದ ಗುತ್ತಿಗೆ ಬಿಲ್ ಬಾಕಿ: ಪುಣ್ಯ ಸ್ನಾನದ ವೇಳೆ ಗುತ್ತಿಗೆದಾರ ಹರಕೆ
ಕುಂಭಮೇಳದಲ್ಲೂ ಸದ್ದು ಮಾಡಿದ ಕರ್ನಾಟಕದ ಗುತ್ತಿಗೆ ಬಿಲ್ ಬಾಕಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಕಾಮಗಾರಿಗಳ ಬಿಲ್ ಬಾಕಿ ಬಿಡುಗಡೆಯಾಗದೆ ಕಂಗಾಲಾಗಿರುವ ಗುತ್ತಿಗೆದಾರರು ಇದೀಗ ಪ್ರಯಾಗ್ರಾಜ್ ಕುಂಭಮೇಳದಲ್ಲಿ ಅಳಲು ತೋಡಿಕೊಂಡಿದ್ದಾರೆ. ಬಾಗಲಕೋಟೆಯ ಗುತ್ತಿಗೆದಾರರು ಬಿಲ್ ಬಿಡುಗಡೆಗೆ ಹರಕೆ ಹೊತ್ತು ಪುಣ್ಯಸ್ನಾನ ಮಾಡಿದ ವಿಡಿಯೋ ಈಗ ವೈರಲ್ ಆಗುತ್ತಿದೆ.
- Ravi H Mooki
- Updated on: Feb 5, 2025
- 11:46 am
ಬಾಗಲಕೋಟೆ: ಹುಚ್ಚೆದ್ದ ಗೋವಿನಿಂದ ಜನರ ಮೇಲೆ ದಾಳಿ
ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಗೋವು ಒಬ್ಬ ವ್ಯಕ್ತಿಯ ಮೇಲೆ ದಾಳಿ ಮಾಡಿದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದಲ್ಲಿ ಹಲವರ ಮೇಲೆ ಗೋವು ದಾಳಿ ಮಾಡಿದ್ದರಿಂದ ಹಿಂದು ಸೇವಾ ಸಮಿತಿ ಗೋವನ್ನು ಸೆರೆಹಿಡಿದಿದೆ. ಆದರೆ ಆಸ್ಪತ್ರೆಗೆ ಸಾಗಿಸುವಾಗ ಗೋವು ದಾರಿಯಲ್ಲಿಯೇ ಮೃತಪಟ್ಟಿತು. ಸಮಿತಿ ಸದಸ್ಯರು ಗೋವಿನ ಅಂತ್ಯಕ್ರಿಯೆ ನೆರವೇರಿಸಿದರು.
- Ravi H Mooki
- Updated on: Feb 2, 2025
- 2:44 pm