AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ, ಕಲಘಟಗಿ

Author - TV9 Kannada

ravi.mooki@tv9.com

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
100 ರೂ.ನೀರಿನ ಬಾಟಲಿ ತಗೋತಾರೆ: 50 ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ ಎಂದ ಸವದಿ

100 ರೂ.ನೀರಿನ ಬಾಟಲಿ ತಗೋತಾರೆ: 50 ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ ಎಂದ ಸವದಿ

ಸಕ್ಕರೆ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು. ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನೂ ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ.50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನೂ ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುತ್ತೆ ಎಂದರು.

Bagalkote: ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

Bagalkote: ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

ಬಾಗಲಕೋಟೆ ಜಿಲ್ಲೆಯ ಅಮೀನಗಡ ಪೊಲೀಸ್ ಠಾಣೆಯ ಪಿಎಸ್‌ಐ ಜ್ಯೋತಿ ವಾಳೀಕರ್ ಅವರ ವರ್ಗಾವಣೆಯನ್ನು ಯುವಕರು ಸಂಭ್ರಮಿಸಿದ್ದಾರೆ. ಅಮೀನಗಡದಿಂದ ಕಲಾದಗಿ ಠಾಣೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಠಾಣೆಯ ಎದುರು ಪಟಾಕಿ ಸಿಡಿಸಿ ಯುವಕರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಈ ಕುರಿತು ಟಿವಿ9 ಕನ್ನಡ ಸುದ್ದಿ ಪ್ರಸಾರ ಮಾಡಿದೆ.

ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಅತಿಯಾದ ಸೌಂಡ್ ವಿರುದ್ಧ ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು

ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಅತಿಯಾದ ಸೌಂಡ್ ವಿರುದ್ಧ ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು

ಬಾಗಲಕೋಟೆಯ ಮದೀನಾ ಕಾಲೋನಿಯಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮತ್ತು ಜೋರಾದ ಅಜಾನ್ ಕೂಗಿದಕ್ಕೆ ಸ್ಥಳೀಯರು, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಅತಿಯಾದ ಧ್ವನಿ ಮಾಲಿನ್ಯದ ಬಗ್ಗೆ ದೂರು ನೀಡಿ, ಕೂಡಲೇ ಕ್ರಮ ಕೈಗೊಳ್ಳುವಂತೆ ನಗರ ಠಾಣೆಗೆ ಮೌಖಿಕ ದೂರು ನೀಡಿದ್ದಾರೆ. ಪೊಲೀಸರು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ತೆರಳಿದರು.

‘ಬೆಲ್ಲದ ನಾಡು’ ಮಹಾಲಿಂಗಪುರಕ್ಕೆ ಕಹಿ ಕಾಲ: ಗತವೈಭವ ಕಳೆದುಕೊಂಡ ಏಷ್ಯಾದ ಪ್ರಸಿದ್ಧ ಬೆಲ್ಲದ ಮಾರುಕಟ್ಟೆ!

‘ಬೆಲ್ಲದ ನಾಡು’ ಮಹಾಲಿಂಗಪುರಕ್ಕೆ ಕಹಿ ಕಾಲ: ಗತವೈಭವ ಕಳೆದುಕೊಂಡ ಏಷ್ಯಾದ ಪ್ರಸಿದ್ಧ ಬೆಲ್ಲದ ಮಾರುಕಟ್ಟೆ!

Jaggery Market Crisis: ಮಹಾಲಿಂಗಪುರ ಬೆಲ್ಲದ ಮಾರುಕಟ್ಟೆ ಹಿಂದೆ ವಿದೇಶಗಳಿಗೆ ರಫ್ತಾಗುತ್ತಾ ಗತವೈಭವದಿಂದ ಮೆರೆದಿತ್ತು. ಆದರೆ 2021ರ ಎಪಿಎಂಸಿ ಕಾನೂನು, ಸೆಸ್ ವಂಚನೆ ಮತ್ತು ಸಕ್ಕರೆ ಕಾರ್ಖಾನೆಗಳ ಪೈಪೋಟಿಯಿಂದಾಗಿ ಮಾರುಕಟ್ಟೆ ಅವನತಿಯ ಅಂಚಿಗೆ ತಲುಪಿದೆ. ಬೆಲ್ಲದ ವ್ಯಾಪಾರಸ್ಥರು ಮತ್ತು ಹಮಾಲರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಹುಬ್ಬಳ್ಳಿ-ಸೋಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿಯಾಗಿ ಇಬ್ಬರು ಸಾವು

ಹುಬ್ಬಳ್ಳಿ-ಸೋಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿಯಾಗಿ ಇಬ್ಬರು ಸಾವು

Bagalakote News: ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ಬಳಿಯ ಜಂಬಗಿ ಕ್ರಾಸ್‌ನಲ್ಲಿ ಮಹಾರಾಷ್ಟ್ರ ಮೂಲದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ವಿಜಯಪುರ ಮಾರ್ಗವಾಗಿ ಗೋವಾ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಹಾಗೂ ಬೈಕ್ ಸವಾರ ಸೇರಿದಂತೆ ಇಬ್ಬರು ಘಟನೆಯಲ್ಲಿ ದುರ್ಮರಣಕ್ಕೀಡಾಗಿದ್ದಾರೆ.

ಬಾಗಲಕೋಟೆಯಲ್ಲಿ ಮೇಳೈಸಿದ ‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು

ಬಾಗಲಕೋಟೆಯಲ್ಲಿ ಮೇಳೈಸಿದ ‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು

ಬಾಗಲಕೋಟೆಯಲ್ಲಿ ಕೇರಳಿಗರ ಸಾಂಪ್ರದಾಯಿಕ ಹಬ್ಬ ಓಣಂ ಅದ್ಧೂರಿಯಾಗಿ ಆಚರಿಸಲಾಯಿತು. ಬಸವೇಶ್ವರ ವಿದ್ಯಾ ವರ್ಧಕ ಸಂಘದ ಸಜ್ಜಲಶ್ರೀ ನರ್ಸಿಂಗ್ ಕಾಲೇಜಿನ ನೂರಾರು ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ತವರೂರಿನ ಸಂಭ್ರಮವನ್ನು ಇಲ್ಲಿ ಪುನರಾವರ್ತಿಸಿದರು. ಸಾಂಪ್ರದಾಯಿಕ ಉಡುಗೆ-ತೊಡುಗೆಯೊಂದಿಗೆ ಮೋಹಿನಿ ಆಟ್ಟಂ ಮತ್ತು ಚಂಡೆ ಮದ್ದಳೆ ನೃತ್ಯಗಳ ಮೂಲಕ ಹಬ್ಬಕ್ಕೆ ಹೊಸ ಮೆರುಗು ನೀಡಿದರು.

ಬಾಗಲಕೋಟೆ ಕಾರು ಸ್ಫೋಟ ಕೇಸ್​​ಗೆ ಟ್ವಿಸ್ಟ್​​! ವೈನ್ ಶಾಪ್ ಮ್ಯಾನೇಜರ್​​​ ಕೊಲೆ ಯತ್ನದ ರಹಸ್ಯ ಬಯಲು

ಬಾಗಲಕೋಟೆ ಕಾರು ಸ್ಫೋಟ ಕೇಸ್​​ಗೆ ಟ್ವಿಸ್ಟ್​​! ವೈನ್ ಶಾಪ್ ಮ್ಯಾನೇಜರ್​​​ ಕೊಲೆ ಯತ್ನದ ರಹಸ್ಯ ಬಯಲು

Bagalkot Car Blast Case: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ ಕಾರು ಸ್ಫೋಟ ಪ್ರಕರಣದ ರಹಸ್ಯ ಬಯಲಾಗಿದೆ. ಸತತ 20 ದಿನಗಳ ತನಿಖೆ ಬಳಿಕ ಪೊಲೀಸರು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಅಷ್ಟೇ ಅಲ್ಲದೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ವಾತಂತ್ರ್ಯೋತ್ಸವ: ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಭವ್ಯ ತಿರಂಗಾ ಯಾತ್ರೆ, ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ

ಸ್ವಾತಂತ್ರ್ಯೋತ್ಸವ: ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಭವ್ಯ ತಿರಂಗಾ ಯಾತ್ರೆ, ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ

BJP Tiranga Ytra ahead of Independence Day: ಸ್ವಾತಂತ್ರ್ಯೋತ್ಸವ ಹಿನ್ನೆಲೆ ಬಾಗಲಕೋಟೆಯಲ್ಲಿ ಬಿಜೆಪಿ ವತಿಯಿಂದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜದೊಂದಿಗೆ ತಿರಂಗಾ ಯಾತ್ರೆ ನಡೆಯಿತು. ಮಾಜಿ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದ ಯಾತ್ರೆಯಲ್ಲಿ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು.

ಮೊದಲ ಸಭೆಯಲ್ಲೇ ಅಧಿಕಾರಿಗಳ ಬೆವರಿಳಿಸಿದ ನೂತನ ಸಚಿವ ಕಾಶಪ್ಪನವರ್: ಕಚೇರಿಗಳಿಗೆ ತಡವಾಗಿ ಬರುವವರಿಗೆ ವಾರ್ನ್

ಮೊದಲ ಸಭೆಯಲ್ಲೇ ಅಧಿಕಾರಿಗಳ ಬೆವರಿಳಿಸಿದ ನೂತನ ಸಚಿವ ಕಾಶಪ್ಪನವರ್: ಕಚೇರಿಗಳಿಗೆ ತಡವಾಗಿ ಬರುವವರಿಗೆ ವಾರ್ನ್

Minister Vijayanand Kashappanavar: ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಬರ ಪರಿಸ್ಥಿತಿ ಕುರಿತು ಸಭೆ ಮಾಡಿದ ನೂತನ ಸಚಿವ ವಿಜಯಾನಂದ ಕಾಶಪ್ಪನವರ್​​, ಮೊದಲ ಸಭೆಯಲ್ಲೇ ಅಧಿಕಾರಿಗಳ ಬೆವರಿಳಿಸಿದರು. ಅಷ್ಟೇ ಅಲ್ಲದೆ ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ಬಾರದ ಅಧಿಕಾರಿಗೂ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ;  ಕೈ ನಾಯಕರ ಆಡಿಯೋ ವೈರಲ್!

ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್!

ಸಚಿವ ಸಂಪುಟ ವಿಸ್ತರಣೆ ಹಾಗೂ 'ಪೇಮೆಂಟ್ ಸೀಟ್' ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಈ ಸಂಭಾಷಣೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಪ್ರಹಾರ ಮಾಡಲು ಅಸ್ತ್ರ ಸಿಕ್ಕಂತಾಗಿದೆ.

ದೇವಸ್ಥಾನದ 3 ಕೋಟಿ ಹಣ, 5 ಕೆಜಿ ಚಿನ್ನದ ವಿವಾದ: ಎರಡು ಗುಂಪುಗಳ ನಡುವೆ ಮಾರಾಮಾರಿ

ದೇವಸ್ಥಾನದ 3 ಕೋಟಿ ಹಣ, 5 ಕೆಜಿ ಚಿನ್ನದ ವಿವಾದ: ಎರಡು ಗುಂಪುಗಳ ನಡುವೆ ಮಾರಾಮಾರಿ

Bagalkote temple dispute: ಬಾಗಲಕೋಟೆ ಗದ್ದನಕೇರಿ ತಾಂಡಾದ ದುರ್ಗಾದೇವಿ ದೇವಸ್ಥಾನದ ಲೆಕ್ಕಪತ್ರ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಕೊಡಲಿ, ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆಯ ನಂತರ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆದಿದ್ದು, ಎರಡೂ ಗುಂಪುಗಳು ಪರಸ್ಪರ ಆರೋಪಿಸಿವೆ.

ಲೋಕಾಪುರ ಡಿಸಿಸಿ ಬ್ಯಾಂಕ್​​ನಲ್ಲಿ ಗೋಲ್​ಮಾಲ್: ಪರ್ಸನಲ್ ಖಾತೆಗೆ ಹಣ ಹಾಕಿಸಿಕೊಂಡು ಮ್ಯಾನೇಜರ್ ಎಸ್ಕೇಪ್

ಲೋಕಾಪುರ ಡಿಸಿಸಿ ಬ್ಯಾಂಕ್​​ನಲ್ಲಿ ಗೋಲ್​ಮಾಲ್: ಪರ್ಸನಲ್ ಖಾತೆಗೆ ಹಣ ಹಾಕಿಸಿಕೊಂಡು ಮ್ಯಾನೇಜರ್ ಎಸ್ಕೇಪ್

DCC Bank Lokapur fraud: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಮ್ಯಾನೇಜರ್​​ನಿಂದಲೇ ಲಕ್ಷಾಂತರ ರೂ ದೋಖಾ ನಡೆದಿರುವ ಘಟನೆ ನಡೆದಿದೆ. ಸದ್ಯ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಮ್ಯಾನೇಜರ್​​ಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.