ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
ದೇವಸ್ಥಾನದ 3 ಕೋಟಿ ಹಣ, 5 ಕೆಜಿ ಚಿನ್ನದ ವಿವಾದ: ಎರಡು ಗುಂಪುಗಳ ನಡುವೆ ಮಾರಾಮಾರಿ
Bagalkote temple dispute: ಬಾಗಲಕೋಟೆ ಗದ್ದನಕೇರಿ ತಾಂಡಾದ ದುರ್ಗಾದೇವಿ ದೇವಸ್ಥಾನದ ಲೆಕ್ಕಪತ್ರ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಕೊಡಲಿ, ರಾಡ್ಗಳಿಂದ ಹಲ್ಲೆ ನಡೆಸಲಾಗಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆಯ ನಂತರ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆದಿದ್ದು, ಎರಡೂ ಗುಂಪುಗಳು ಪರಸ್ಪರ ಆರೋಪಿಸಿವೆ.
- Ravi H Mooki
- Updated on: Jul 31, 2026
- 10:33 pm
ಲೋಕಾಪುರ ಡಿಸಿಸಿ ಬ್ಯಾಂಕ್ನಲ್ಲಿ ಗೋಲ್ಮಾಲ್: ಪರ್ಸನಲ್ ಖಾತೆಗೆ ಹಣ ಹಾಕಿಸಿಕೊಂಡು ಮ್ಯಾನೇಜರ್ ಎಸ್ಕೇಪ್
DCC Bank Lokapur fraud: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಮ್ಯಾನೇಜರ್ನಿಂದಲೇ ಲಕ್ಷಾಂತರ ರೂ ದೋಖಾ ನಡೆದಿರುವ ಘಟನೆ ನಡೆದಿದೆ. ಸದ್ಯ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಮ್ಯಾನೇಜರ್ಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
- Ravi H Mooki
- Updated on: Jul 29, 2026
- 3:21 pm
ಮದುವೆಯಾದರೂ ಪರ ಪುರುಷನ ಜೊತೆ ಅನೈತಿಕ ಸಂಬಂಧ: ಪತಿಯಿಂದಲೇ ಪತ್ನಿಯ ಭೀಕರ ಕೊಲೆ
ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ 23 ವರ್ಷದ ಪತ್ನಿ ಭಾಗ್ಯಶ್ರೀಯನ್ನು ಪತಿ ಪ್ರವೀಣ ಜಿಗಲೂರು ನೇಣು ಬಿಗಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ದಂಪತಿಗೆ 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿಯ ಅನೈತಿಕ ಸಂಬಂಧದ ವಿಚಾರ 2 ವರ್ಷಗಳ ಹಿಂದೆ ಪತಿಗೆ ಗೊತ್ತಾಗಿತ್ತು. ಈ ವಿಚಾರವಾಗಿ ಇಬ್ಬರ ನಡುವೆ ಕಲಹಗಳೂ ನಡೆಯುತ್ತಿದ್ದವು ಎನ್ನಲಾಗಿದೆ.
- Ravi H Mooki
- Updated on: Jul 28, 2026
- 5:13 pm
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ (ಜುಲೈ 25) ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿದ್ದು, ರಾತ್ರಿ 10:45ರ ಸುಮಾರಿಗೆ ಏಕಾಏಕಿ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಸ್ಟೋಟದ ಶಂಕೆ ವ್ಯಕ್ತವಾಗಿದ್ದು ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
- Ravi H Mooki
- Updated on: Jul 26, 2026
- 9:15 pm
ಹಿಪ್ಪರಗಿಯಲ್ಲಿ ಬಾರ್ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ: ತಪ್ಪಿದ ಭಾರಿ ದುರಂತ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ವೈನ್ ಶಾಪ್ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್ಯುವಿ 300 ಕಾರು ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಭಾರಿ ದುರಂತ ತಪ್ಪಿದೆ. ಕಾರು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಮನೆಗಳ ಶೀಟ್ ಹಾರಿದ್ದು, ವೈನ್ ಶಾಪ್ ಗೋಡೆಯ ಸಿಮೆಂಟ್ ಉದುರಿದ್ದರೆ, ಬಿಯರ್ ಹಾಗೂ ಕೂಲ್ ಡ್ರಿಂಕ್ಸ್ ಬಾಟಲ್ಗಳು ಕೆಳಗೆ ಬಿದ್ದಿವೆ ಎನ್ನಲಾಗಿದೆ.
- Ravi H Mooki
- Updated on: Jul 26, 2026
- 7:15 am
ನಗರಸಭೆ ಆಯುಕ್ತರ ಚೇಂಬರ್ಗೆ “ಸಾರ್ವಜನಿಕರಿಗೆ ಪ್ರವೇಶವಿಲ್ಲ”: ಬೋರ್ಡ್ ನೋಡಿ ಉಪ ಲೋಕಾಯುಕ್ತ ಶಾಕ್
ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು (ಜುಲೈ 24) ಬಾಗಲಕೋಟೆಯಲ್ಲಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಗಲಕೋಟೆ ನಗರಸಭೆ ಆಯುಕ್ತರ ಚೇಂಬರ್ಗೆ "ಸಾರ್ವಜನಿಕರಿಗೆ ಪ್ರವೇಶವಿಲ್ಲ" ಎಂಬ ಬೋರ್ಡ್ ಕಂಡು ಬಂದಿದ್ದು, ಇದನ್ನು ನೋಡಿ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಶಾಕ್ ಆಗಿದ್ದಾರೆ. ಅಲ್ಲದೇ ಈ ಬೊರ್ಡ್ ಬಗ್ಗೆ ಕೆಂಡಾಮಂಡಲರಾಗಿದ್ದಾರೆ.
- Ravi H Mooki
- Updated on: Jul 24, 2026
- 10:33 pm
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟ: ಮತ್ತೆ ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ. ಮುಧೋಳದ ಸಿದ್ದೇಶ್ವರ ಬ್ಯಾರೇಜ್ ಸಂಪೂರ್ಣ ಜಲಾವೃತಗೊಂಡಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಆದರೆ, ಮುಧೋಳ ನಗರದ ಕಲುಷಿತ ನೀರು ನದಿಗೆ ಸೇರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.
- Ravi H Mooki
- Updated on: Jul 23, 2026
- 3:29 pm
ಸಿಲಿಂಡರ್ ಹೊರಗಿಡಿ, ತಾಜಾ ಎಣ್ಣೆ ಬಳಸಿ: ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಉಪಲೋಕಾಯುಕ್ತ ಬಿ. ವೀರಪ್ಪ ಅವರು ಬಾಗಲಕೋಟೆಯ ಬೇಕರಿಗಳಿಗೆ ದಿಢೀರ್ ಭೇಟಿ ನೀಡಿ ಆಹಾರ ತಿನಿಸುಗಳ ಪರಿಶೀಲನೆ ನಡೆಸಿದರು. ಎಫ್ಎಸ್ಎಸ್ಎಐ ಪ್ರಮಾಣಪತ್ರ, ಎಲ್ಪಿಜಿ ಸಿಲಿಂಡರ್ ಸುರಕ್ಷತೆ, ದಾಸ್ತಾನು ಮತ್ತು ಅವಧಿ ಮೀರಿದ ಉತ್ಪನ್ನಗಳ ಬಗ್ಗೆ ಪ್ರಶ್ನಿಸಿ, ಸುರಕ್ಷತಾ ಲೋಪಗಳಿಗಾಗಿ ಶೋ-ಕಾಸ್ ನೋಟಿಸ್ ನೀಡುವಂತೆ ಸೂಚಿಸಿದರು.
- Ravi H Mooki
- Updated on: Jul 23, 2026
- 11:18 am
ಭೀಕರ ಬರದ ಛಾಯೆಗೆ ಸಾಕ್ಷಿಯಾದ ಬಾಗಲಕೋಟೆಯ ಅದೊಂದು ಗ್ರಾಮ: ತುತ್ತಿನ ಚೀಲ ತುಂಬಿಸಿಕೊಳ್ಳಲು ಗುಳೆ ಹೋದ ಜನ
Bagalkote drought: ಬಾಗಲಕೋಟೆ ಜಿಲ್ಲೆಯ ಲಿಂಗಾಪುರ ಗ್ರಾಮದಲ್ಲಿ ಬರದ ಕರಾಳ ಛಾಯೆ ಆವರಿಸಿದೆ. ಮಳೆ ಕೈಕೊಟ್ಟ ಕಾರಣ ರೈತರು ಉದ್ಯೋಗ ಅರಸಿ ಗುಳೆ ಹೋಗಿದ್ದಾರೆ. ಕೃಷಿ ಚಟುವಟಿಕೆ ಇಲ್ಲದೆ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಸರ್ಕಾರ ಪರಿಹಾರ ನೀಡಬೇಕು ಎಂದ ಒತ್ತಾಯ ಕೇಳಿಬಂದಿದೆ.
- Ravi H Mooki
- Updated on: Jul 20, 2026
- 7:50 pm
ಇಳಕಲ್ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜಿಲ್ಲೆಯ ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸತತ 6 ರಿಂದ 7 ಗಂಟೆಗಳ ಕಾಲ ಸುರಿದ ಭರ್ಜರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸುಮಾರು ಎರಡು ಅಡಿಯಷ್ಟು ನೀರು ನಿಂತಿದ್ದರಿಂದ ಕಾರು ಮತ್ತು ಬೈಕ್ ಸವಾರರು ತೀವ್ರ ಸಂಕಷ್ಟ ಎದುರಿಸಿದರು. ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇನ್ನು ಹಲವು ವಸತಿ ಪ್ರದೇಶಗಳಲ್ಲಿ ಮಳೆ ನೀರು ಮನೆಗಳ ಬಾಗಿಲಿಗೆ ಬಂದು ನಿಂತಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.
- Ravi H Mooki
- Updated on: Jul 19, 2026
- 11:37 am
ನೀರಾವರಿ ಪೈಪ್ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು: ಓಡೋಡಿ ಬಂದ ಗ್ರಾಮಸ್ಥರು
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದಲ್ಲಿ ಬಬಲೇಶ್ವರ-ತುಬಚಿ ಏತ ನೀರಾವರಿ ಯೋಜನೆಯ ಮುಖ್ಯ ಪೈಪ್ಲೈನ್ ಒಡೆದು ಆಕಾಶದೆತ್ತರಕ್ಕೆ ನೀರು ಚಿಮ್ಮಿದೆ ಘಟನೆ ನಡೆದಿದೆ. ಈ ಘಟನೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ravi H Mooki
- Updated on: Jul 17, 2026
- 9:29 pm
ಹೆಚ್ಚಿನ ಬಡ್ಡಿ ಆಸೆ ತೋರಿಸಿ ಕೋಟಿ ಕೋಟಿ ವಂಚನೆ: ಮಹಿಳಾ ಸಂಘದ ಹೆಸರಲ್ಲಿ ಲೂಟಿ ಹೊಡೆದ ಮಹಿಳೆಯರು
Bilagi fraud: ಬಾಗಲಕೋಟೆಯ ಬೀಳಗಿಯಲ್ಲಿ ದುರ್ಗಾದೇವಿ ಮಹಿಳಾ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹೆಸರಿನಲ್ಲಿ ಕೋಟ್ಯಂತರ ರೂ ವಂಚನೆ ಬಯಲಾಗಿದೆ. ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಹಣ ವಾಪಸ್ ನೀಡದೆ ಮೋಸ ಮಾಡಿದ್ದಾರೆ. ನಕಲಿ ಚೆಕ್ಗಳನ್ನು ನೀಡಿ ಬೆದರಿಕೆ ಕೂಡ ಹಾಕಿದ್ದಾರೆ. ಸದ್ಯ ಬೀಳಗಿ ಪೊಲೀಸರಿಗೆ ಮಹಿಳೆಯರು ದೂರು ಕೊಡಲು ಮುಂದಾಗಿದ್ದಾರೆ.
- Ravi H Mooki
- Updated on: Jul 13, 2026
- 4:55 pm