ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ
ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಬಾಗಲಕೋಟೆಯಲ್ಲಿ ಉದ್ವಿಗ್ನ ಸ್ಥಿತಿಗೆ ಕಾರಣವಾಗಿದೆ. ಘಟನೆ ನಡೆದು ನಾಲ್ಕು ದಿನಗಳಾದರೂ ಇಂದಿಗೂ ಹಿಂದು ಕಾರ್ಯಕರ್ತರ ಕಿಚ್ಚು ಆರುತ್ತಿಲ್ಲ. ಇದೀಗ ಫೆಬ್ರುವರಿ 26 ರಂದು ಹಿಂದು ಹೋರಾಟಗಾರರು ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ.
- Ravi H Mooki
- Updated on: Feb 23, 2026
- 8:42 am
ಕಲ್ಲು ತೂರಾಟ ಕೇಸ್: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
- Ravi H Mooki
- Updated on: Feb 21, 2026
- 10:01 pm
ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ
ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಬ್ಬಿನ ಕಟಾವಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ಕಬ್ಬು ಕಟಾವಿಗೆ ಬಂದಿದ್ದ ಮಹಾರಾಷ್ಟ್ರ ಮೂಲದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಜಮಖಂಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
- Ravi H Mooki
- Updated on: Feb 21, 2026
- 11:37 am
ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್ಲೈನ್
ಶಾಂತಿಯುತ ವಾಗಿದ್ದ ಬಾಗಲಕೋಟೆ ಆ ಒಂದು ಘಟನೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದೆ. ದುಷ್ಕರ್ಮಿಗಳ ಕೃತ್ಯದಿಂದ ನಗರದಲ್ಲಿ ಅಶಾಂತಿ ಉಂಟಾಗಿದೆ. ಶಿವಾಜಿ ಜಯಂತಿಯಲ್ಲಿ ದುಷ್ಕೃತ್ಯ ಮೆರೆದಿದ್ದ ಪುಂಡರನ್ನು ಪೊಲೀಸರು ವಿಜಯಪುರ ಜೈಲಿಗಟ್ಟಿದ್ದಾರೆ. ಆದರೆ ವಾತಾವರಣ ಮಾತ್ರ ತಿಳಿಯಾಗಿಲ್ಲ. ಈ ಮಧ್ಯೆ ಶಾಂತಿ ಸಭೆ ಕೂಡ ವಿಫಲವಾಗಿದೆ.
- Ravi H Mooki
- Updated on: Feb 21, 2026
- 6:32 am
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ.
- Ravi H Mooki
- Updated on: Feb 20, 2026
- 6:45 pm
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಎದುರು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಗರಂ ಆಗಿದ್ದು, ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
- Ravi H Mooki
- Updated on: Feb 20, 2026
- 5:25 pm
ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ!
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಎಸ್ಪಿ ಸಿದ್ಧಾರ್ಥ್ ಗೋಯಲ್ ವಿವರ ನೀಡಿದ್ದಾರೆ. 8 ಆರೋಪಿಗಳನ್ನು ಬಂಧಿಸಲಾಗಿದ್ದು, ಘಟನೆ ಪೂರ್ವ ಯೋಜಿತವಲ್ಲ, ಡಿಜೆ ವಿಚಾರಕ್ಕೂ ಸಂಬಂಧಿಸಿಲ್ಲ ಎಂದಿದ್ದಾರೆ. ಮಸೀದಿ ಶೂ ರ್ಯಾಕ್ನಿಂದ ಕಲ್ಲು ತೂರಾಟ ನಡೆದಿರುವುದಾಗಿ ತಿಳಿಸಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.
- Ravi H Mooki
- Updated on: Feb 20, 2026
- 2:38 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಘಟನೆಗೆ ಕಾರಣ ಬಿಚ್ಚಿಟ್ಟ ಎಸ್ಪಿ
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ವೇಳೆ ಕಿಲಾ ಓಣಿ ಬಳಿ ಕಲ್ಲು, ಚಪ್ಪಲಿ ತೂರಾಟ ಘಟನೆ ಬಗ್ಗೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಮಾಹಿತಿ ನೀಡಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ಹಾನಿಯಾಗಿಲ್ಲ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ವಿಡಿಯೋ ಪರಿಶೀಲಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
- Ravi H Mooki
- Updated on: Feb 20, 2026
- 7:32 am
ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ
ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಕಲ್ಲು ಎಸೆದವರ ಬಂಧನಕ್ಕೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದು, ಬಾಗಲಕೋಟೆ ಬಂದ್ಗೆ ಕರೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಘಟನೆ ನಗರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ.
- Ravi H Mooki
- Updated on: Feb 20, 2026
- 7:20 am
ಬಾಗಲಕೋಟೆ ಉಪಚುನಾವಣೆ ಮುನ್ನ ಅಕ್ರಮ ಮತದಾರರ ಸದ್ದು: ದಾಖಲೆ ಸಮೇತ ಬಯಲು ಮಾಡಿದ ಮಾಜಿ ಶಾಸಕ
ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇನ್ನೇನು ಕೆಲ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಅಕ್ರಮ ವೋಟ್ ಹಾವಳಿ ಹೆಚ್ಚಾಗಿದೆ. ಒಂದೇ ಕ್ಷೇತ್ರದಲ್ಲಿ 7 ಸಾವಿರಕ್ಕೂ ಅಧಿಕ ಡಬಲ್ ಮತದಾರರ ಆರೋಪ ಕೇಳಿಬಂದಿದೆ. ಹಾಗಾದರೆ ಏನಿದು ಸ್ಟೋರಿ ಅಂತ ತಿಳಿಯಲು ಲೇಖನ ಓದಿ.
- Ravi H Mooki
- Updated on: Feb 18, 2026
- 5:49 pm
ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ ಭವಿಷ್ಯಕ್ಕೆ ಸಚಿವ ಫುಲ್ ಖುಷ್
ಅಬಕಾರಿ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿರುವಾಗಲೇ, ಬಾಗಲಕೋಟೆ ವಿದ್ಯಾರ್ಥಿನಿಯೊಬ್ಬಳು 'ಕೊರವಂಜಿ' ವೇಷದಲ್ಲಿ ಸಚಿವರು ಮುಖ್ಯಮಂತ್ರಿಯಾಗುವ ಭವಿಷ್ಯ ನುಡಿದಿದ್ದಾಳೆ. ಈ ಕುತೂಹಲಕಾರಿ ವಿಡಿಯೋ ವೈರಲ್ ಆಗಿದ್ದು, ಸಚಿವರು ಸಂತಸ ವ್ಯಕ್ತಪಡಿಸಿ ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಇದು ಗಂಭೀರ ರಾಜಕೀಯ ಪರಿಸ್ಥಿತಿಯ ನಡುವೆ ತಮಾಷೆಯ ಚರ್ಚೆಗೆ ಕಾರಣವಾಗಿದೆ.
- Ravi H Mooki
- Updated on: Feb 7, 2026
- 5:14 pm
ಸಂತ್ರಸ್ತರ ಸೂರಿಗಾಗಿ ಕೊಟ್ಟ ಜಾಗದಲ್ಲಿ ಮಸೀದಿ ನಿರ್ಮಾಣ: ಬಾಗಲಕೋಟೆಯಲ್ಲಿ ಭುಗಿಲೆದ್ದ ಆಕ್ರೋಶ
.ಆ ನಗರ ಆಲಮಟ್ಟಿ ಜಲಾಶಯಕ್ಕೆ ಪೂರ್ಣ ಸ್ಥಳಾಂತರಗೊಂಡ ನಗರ.ಮನೆಮಠ ಬಿಟ್ಟವರಿಗೆ ಇಂದಿಗೂ ಪೂರ್ಣ ನೆಲೆ ಸಿಕ್ಕಿಲ್ಲ.ಈ ಮಧ್ಯೆ ಸಂತ್ರಸ್ತರಿಗೆ ಮನೆಗಾಗಿ ಕೊಟ್ಟ ಜಾಗದಲ್ಲಿ ಮಸೀದಿಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ನಿಯಮ ಮೀರಿ ನಡೆಯುತ್ತಿರುವ ಕೃತ್ಯದ ವಿರುದ್ದ ಹಿಂದು ಕಾರ್ಯಕರ್ತರು, ಸ್ಥಳೀಯರು ಸಿಡಿದೆದ್ದಿದ್ದಾರೆ. ಇದಕ್ಕೆ ಕುಡಲೇ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
- Ravi H Mooki
- Updated on: Feb 6, 2026
- 8:10 pm