ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು
ಬಾಗಲಕೋಟೆಯ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ 16 ವರ್ಷದ ಬಾಲಕನ ಮೇಲೆ ಶಿಕ್ಷಕ ದಂಪತಿ ಅಮಾನವೀಯವಾಗಿ ಹಲ್ಲೆ ನಡೆಸಿ, ಖಾರದಪುಡಿ ಎರಚಿ, ಪೈಪ್ನಿಂದ ಥಳಿಸಿ ವಿಕೃತಿ ಮೆರೆದಿದ್ದರು. ಈ ಪ್ರಕರಣದ ಹಿನ್ನೆಲೆ ದಂಪತಿಯನ್ನು ಬಂಧಿಸಲಾಗಿದೆ. ಯಾವುದೇ ಪರವಾನಗಿ ಪಡೆಯದೆ ಶಾಲೆ ನಡೆಸುತ್ತಿದ್ದ ವಿಷಯವೂ ತಿಳಿದುಬಂದಿದೆ. ಸರ್ಕಾರ ಕೂಡಲೇ ಶಾಲೆ ಮುಚ್ಚಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.
- Ravi H Mooki
- Updated on: Dec 21, 2025
- 1:03 pm
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಎಸ್ಪಿ
ಬಾಗಲಕೋಟೆಯ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿಯು 16 ವರ್ಷದ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ ಎಂದು ಎಸ್ಪಿ ಸಿದ್ಧಾರ್ಥ್ ಗೋಯಲ್ ತಿಳಿಸಿದ್ದಾರೆ.
- Ravi H Mooki
- Updated on: Dec 20, 2025
- 5:55 pm
ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ
ಬಾಗಲಕೋಟೆಯ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿ 16 ವರ್ಷದ ಬುದ್ಧಿಮಾಂದ್ಯ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಬೆಲ್ಟ್, ಪ್ಲಾಸ್ಟಿಕ್ ಪೈಪ್ನಿಂದ ಹೊಡೆದು, ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಕೌರ್ಯ ಮೆರೆದಿದ್ದಾರೆ. ಅಮಾನವೀಯ ಕೃತ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ravi H Mooki
- Updated on: Dec 20, 2025
- 3:21 pm
ಅಪ್ರಾಪ್ತೆ ಮೇಲೆ ಮ್ಯೂಸಿಕ್ ಮೈಲಾರಿ ಅತ್ಯಾಚಾರ ಕೇಸ್ಗೆ ಟ್ವಿಸ್ಟ್: ಸಂತ್ರಸ್ತೆ ವಿಡಿಯೋ ವೈರಲ್
ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಕೇಳಿಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಹೊಸ ತಿರುವು ಪಡೆದಿದೆ. ಸಂತ್ರಸ್ತೆಯ ವಿಡಿಯೋವಂದು ವೈರಲ್ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಕೆ ಇದು ಹಳೆಯ ವಿಡಿಯೋ ಎಂದಿದ್ದಾಳೆ. ಪ್ರಕರಣ ಸಂಬಂಧ ಡಿಸೆಂಬರ್ 17ರಂದು ಮ್ಯೂಸಿಕ್ ಮೈಲಾರಿ ಬಂಧನವಾಗಿತ್ತು.
- Ravi H Mooki
- Updated on: Dec 19, 2025
- 11:09 am
ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಸಿಂಗರ್ ಮೈಲಾರಿ ಅರೆಸ್ಟ್
ಮ್ಯೂಸಿಕ್ ಮೈಲಾರಿ ಬಂಧನ: ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ' ಸಂಕಷ್ಟ ಎದುರಾಗಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಮೈಲಾರಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಮಹಾರಾಷ್ಟ್ರಕ್ಕೆ ಹೊರಟಿದ್ದಾಗ ಮಹಾಲಿಂಗಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಪ್ರಕರಣದ ಬಗ್ಗೆ ಬಾಗಲಕೋಟೆ ಎಸ್ಪಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದು, ಅದು ಈ ಕೆಳಗಿನಂತಿದೆ.
- Ravi H Mooki
- Updated on: Dec 17, 2025
- 4:10 pm
ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್
ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿದಂತೆ 7 ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 2025ರ ಅ.24ರಂದು ಮಹಾಲಿಂಗಪುರ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ ಎನ್ನಲಾಗಿದ್ದು, ಇದೀಗ ಪ್ರಕರಣ ದಾಖಲಾಗಿರುವುದು ಅಚ್ಚರಿಗೆ ಕಾರಣವಾಗಿದೆ.
- Ravi H Mooki
- Updated on: Dec 16, 2025
- 9:37 am
ಶಿವಾಜಿಯನ್ನು ಮುಸ್ಲಿಂ ವಿರೋಧಿ ಅನ್ನಬಾರದು: ಲಾಡ್ ಹೇಳುತ್ತಿದ್ದಂತೆಯೇ ಮೊಳಗಿತು ಜೈ ಶ್ರೀರಾಮ್ ಘೋಷಣೆ
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಇಂದು ಶಿವಾಜಿ ಪ್ರತಿಮೆ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ನಾನು ಮರಾಠ ಸಮುದಾಯದವನು. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ. ಹೀಗಾಗಿ ಇಲ್ಲಿ ಯಾರೂ ಇತಿಹಾಸದ ಬಗ್ಗೆ ಸುಳ್ಳು ಹೇಳಬಾರದು ಎಂದಿದ್ದಾರೆ.
- Ravi H Mooki
- Updated on: Dec 14, 2025
- 4:12 pm
ಬಾಗಲಕೋಟೆ: ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ಹಾಸ್ಟೆಲ್ ಬಿಟ್ಟ SSLC ವಿದ್ಯಾರ್ಥಿನಿಯರು
ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ಮೊಬೈಲ್ ಬಳಸಬೇಡಿ ಎಂಬ ಸಿಬ್ಬಂದಿಯ ಎಚ್ಚರಿಕೆಗೆ ನಾಲ್ವರು SSLC ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಘಟನೆ ನಡೆದಿದೆ. ಈ ಬಗ್ಗೆ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಾಲ್ಕೇ ಗಂಟೆಗಳಲ್ಲಿ, ನಾಪತ್ತೆಯಾದ ವಿದ್ಯಾರ್ಥಿನಿಯರನ್ನು ವಿಜಯಪುರದಲ್ಲಿ ಪತ್ತೆ ಹಚ್ಚಲಾಗಿದೆ.
- Ravi H Mooki
- Updated on: Dec 12, 2025
- 11:45 am
ಬಾಗಲಕೋಟೆ: ಪತ್ನಿ ಜೊತೆ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಡ್ಯಾನ್ಸ್
ಪತ್ನಿ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಜೊತೆ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಇಳಕಲ್ ನಗರದ ವೀರಮಣಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾರ್ಯಕ್ರಮದ ವೇಳೆ ಪತ್ನಿ ಜೊತೆಗಿನ ಶಾಸಕ ಡ್ಯಾನ್ಸ್ ವಿಡಿಯೋ ಫುಲ್ ವೈರಲ್ ಆಗಿದೆ. 'ನಾ ಡ್ರೈವರ್, ನಿ ನನ್ನ ಲವರ್' ಸಾಂಗ್ಗೆ ಶಾಸಕರು ಹೆಜ್ಜೆ ಹಾಕುತ್ತಿದ್ದಂತೆ ನೆರೆದಿದ್ದವರು ಹುಚ್ಚೆದ್ದು ಕುಣಿದಿದ್ದಾರೆ.
- Ravi H Mooki
- Updated on: Dec 7, 2025
- 12:39 pm
HIV ಪಾಸಿಟಿವಿಟಿ ರೇಟಿಂಗ್ನಲ್ಲಿ ಕರ್ನಾಟಕದಲ್ಲೇ ಬಾಗಲಕೋಟೆ ನಂಬರ್ 1
ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಐವಿ ಪ್ರಮಾಣ ಕಡಿಮೆಯಾಗಿದೆ. ಮೊದಲನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದೆ. ಆದರೆ ರಾಜ್ಯದಲ್ಲೇ ಪಾಸಿಟಿವಿಟಿ ರೇಟ್ನಲ್ಲಿ ಇಂದಿಗೂ ಬಾಗಲಕೋಟೆ ನಂಬರ್ ಒನ್ ಸ್ಥಾನದಲ್ಲಿದೆ. ಸದ್ಯ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳು ಜನರ ನಿದ್ದೆಗೆಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.
- Ravi H Mooki
- Updated on: Dec 3, 2025
- 6:57 pm
ಬಾಗಲಕೋಟೆ ವಿಜಯಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು
ಜಮಖಂಡಿಯ ಸಿದ್ದಾಪುರ ಗ್ರಾಮದ ಬಳಿ ಬಾಗಲಕೋಟೆ–ವಿಜಯಪುರ ಹೆದ್ದಾರಿಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಸಿದ್ದಾಪುರದವರೇ ಎಂಬುದು ಗೊತ್ತಾಗಿದೆ. ಜಮಖಂಡಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Ravi H Mooki
- Updated on: Dec 3, 2025
- 9:39 am
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಹಿಂಸಾಚಾರ: ಕಿಡಿಗೇಡಿಗಳಿಗೆ ಖಾಕಿ ಶಾಕ್; 17 ಮಂದಿ ಅರೆಸ್ಟ್
ಬಾಗಲಕೋಟೆ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಆರೋಪಿಗಳಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಜೊತೆಗೆ ಘಟನೆಗೆ ಕಾರಣರಾದವರು ರೈತರಲ್ಲ, ಕಿಡಿಗೇಡಿಗಳು ಎಂಬುದು ತನಿಖೆಯಲ್ಲಿ ಬಹಿರಂಗಗೊಂಡಿದೆ. ವಿಡಿಯೋ ಸಾಕ್ಷ್ಯ ಆಧರಿಸಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
- Ravi H Mooki
- Updated on: Nov 26, 2025
- 4:20 pm