AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ, ಕಲಘಟಗಿ

Author - TV9 Kannada

ravi.mooki@tv9.com

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ

ಬಾಗಲಕೋಟೆ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ (Bagalkot University Convocation) ಅದ್ಧೂರಿಯಾಗಿ ಜರುಗಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ, ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಲಾಯ್ತು. ಇನ್ನು ಮಕ್ಕಳ ತಾಯಿ ಆಗಿರುವ ಅಯಿಷಾ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಎಲ್ಲರ ಗಮನಸೆಳೆದಿದರು.

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಗೋಲ್ಡ್​​ ಮೆಡಲ್​​ ಪಡೆದ ರೈತ ಕುಟುಂಬದ ವಿದ್ಯಾರ್ಥಿನಿ

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಗೋಲ್ಡ್​​ ಮೆಡಲ್​​ ಪಡೆದ ರೈತ ಕುಟುಂಬದ ವಿದ್ಯಾರ್ಥಿನಿ

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಉಪಸ್ಥಿತಿಯಲ್ಲಿ ರೈತ ಕುಟುಂಬದ ಸನ್ಮತಿ ಜಿನಪ್ಪ ಕುಪ್ಪಿ (ಎಂಎಸ್ಸಿ ಭೌತಶಾಸ್ತ್ರ) ಮತ್ತು ಪ್ರಿಯಾಂಕ ಅಟ್ಪತ್ (ಎಂಎ ಇತಿಹಾಸ) ಚಿನ್ನದ ಪದಕ ಗಳಿಸಿ ಸಂಭ್ರಮಿಸಿದ್ದಾರೆ. ಕೆಸೆಟ್ ಉತ್ತೀರ್ಣರಾಗಿರುವ ಇವರು ಉನ್ನತ ಶಿಕ್ಷಣ ಹಾಗೂ ಸಂಶೋಧನೆಯ ಕನಸು ಕಾಣುತ್ತಿದ್ದಾರೆ. ತಮ್ಮ ಪೋಷಕರ ಪ್ರೋತ್ಸಾಹವೇ ಯಶಸ್ಸಿಗೆ ಕಾರಣ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ: ಮುಂದಾಗಿದ್ದೇನು ಗೊತ್ತಾ?

ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ: ಮುಂದಾಗಿದ್ದೇನು ಗೊತ್ತಾ?

ಬಾಗಲಕೋಟೆ ಜಿಲ್ಲೆಯಲ್ಲಿ ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಕಾರ್ಮಿಕರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಂಡು ಕೋಟಿಗಟ್ಟಲೆ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಬಾಗಲಕೋಟೆ ಸಿಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಇನ್ನು ಸಾರ್ವಜನಿಕರು ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ.

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು

ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಯುವಕ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ. 

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ

ಬಾಗಲಕೋಟೆಯ ಕನ್ನೊಳ್ಳಿ ಗ್ರಾಮದಲ್ಲಿ ಕಾರಿನಲ್ಲಿ ವ್ಯಕ್ತಿಯ ಸಜೀವ ದಹನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಕಸ್ಮಿಕ ಸಾವಲ್ಲ ಇದೊಂದು ಭೀಕರ ಕೊಲೆ ಎಂದು ತನಿಖೆಯಿಂದ ಬಯಲಾಗಿದೆ. ಪತ್ನಿಯೊಂದಿಗಿನ ಅನೈತಿಕ ಸಂಬಂಧದ ಕಾರಣಕ್ಕೆ ಸಂಬಂಧಿಯೇ ವ್ಯಕ್ತಿಯನ್ನು ಕೊಲೆ ಮಾಡಿ, ನಂತರ ಶವವನ್ನು ಕಾರಿನಲ್ಲಿಟ್ಟು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನದ ನಾಟಕ ಆಡಿದ್ದ ಎಂಬುದು ಗೊತ್ತಾಗಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಗಲಕೋಟೆಯಲ್ಲಿ ನದಿಗಳು ಖಾಲಿ ಖಾಲಿ, ಕುಸಿಯುತ್ತಿರುವ ಅಂತರ್ಜಲ: 114 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ

ಬಾಗಲಕೋಟೆಯಲ್ಲಿ ನದಿಗಳು ಖಾಲಿ ಖಾಲಿ, ಕುಸಿಯುತ್ತಿರುವ ಅಂತರ್ಜಲ: 114 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ

ಬಾಗಲಕೋಟೆಯಲ್ಲಿ 39 ಡಿಗ್ರಿ ತಾಪಮಾನದ ನಡುವೆ ಜಲಕ್ಷಾಮದ ಆತಂಕ ಶುರುವಾಗಿದೆ. ಕೃಷ್ಣಾ, ಮಲಪ್ರಭಾ ಮತ್ತು ಘಟಪ್ರಭಾ ನದಿಗಳು ಬತ್ತುತ್ತಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯ ಒಟ್ಟು 114 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದೆ. ನೀರಿನ ಮಿತವ್ಯಯ ಬಳಕೆಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಹನುಮನ ಭಕ್ತನ ಅದ್ಭುತ ಸಾಹಸ: 105 ಕೆಜಿ ಹೊತ್ತು ದೀಡ್ ನಮಸ್ಕಾರ ಹಾಕಿದ 19ರ ಯುವಕ!

ಹನುಮನ ಭಕ್ತನ ಅದ್ಭುತ ಸಾಹಸ: 105 ಕೆಜಿ ಹೊತ್ತು ದೀಡ್ ನಮಸ್ಕಾರ ಹಾಕಿದ 19ರ ಯುವಕ!

ಬಾಗಲಕೋಟೆಯ 19ರ ಹರೆಯದ ಬಾಲರಾಜ ಕುರಿ, ಗ್ರಾಮದ ಒಳಿತಿಗಾಗಿ ಅಸಾಧ್ಯವೆನಿಸುವ ಸಾಹಸ ಮೆರೆದಿದ್ದಾರೆ. ಕೇವಲ 47 ಕೆಜಿ ತೂಕವಿದ್ದರೂ, 105 ಕೆಜಿ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ದೀಡ್ ನಮಸ್ಕಾರ ಹಾಕಿದರು. ಈ ಭಕ್ತಿ ಮತ್ತು ಸಂಕಲ್ಪದ ಪ್ರದರ್ಶನ ಇಳಕಲ್ ತಾಲ್ಲೂಕಿನ ಗೋನಾಳ ಎಸ್.ಟಿ. ಗ್ರಾಮದ ಜಾತ್ರಾ ಮಹೋತ್ಸವದಲ್ಲಿ ನಡೆಯಿತು. ಇದು ಯುವಕನ ಅಪ್ರತಿಮ ಶ್ರದ್ಧೆ ಮತ್ತು ಸಾಮರ್ಥ್ಯಕ್ಕೆ ಹಿಡಿದ ಕೈಗನ್ನಡಿ.

ಬಾಡಿಗೆ ಜಗಳಕ್ಕೆ ಮನನೊಂದು ಟೆಲಿಫೋನ್ ಟವರ್ ಏರಿ ಯುವಕನ ಹೈಡ್ರಾಮಾ!

ಬಾಡಿಗೆ ಜಗಳಕ್ಕೆ ಮನನೊಂದು ಟೆಲಿಫೋನ್ ಟವರ್ ಏರಿ ಯುವಕನ ಹೈಡ್ರಾಮಾ!

ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆ ಹಿನ್ನೆಲೆ ಯುವಕನೊಬ್ಬ ಟೆಲಿಫೋನ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನವನಗರದಲ್ಲಿ ನಡೆದಿದೆ. ನಿನ್ನೆ ಬಾಡಿಗೆ ವಿಚಾರದಲ್ಲಿ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಸೆಕ್ಟರ್ 35ರ ಮನೆಯ ಮಾಲೀಕರ ಮಗ ಭೀಮು ಬಸಪ್ಪ ವಡ್ಡರ್, ಬಾಡಿಗೆದಾರ ಮಹಿಳೆಯೊಂದಿಗೆ ನಡೆದ ವಾಗ್ವಾದದಿಂದ ಮನನೊಂದು ಸೆಕ್ಟರ್ 36ರ ಟವರ್ ಏರಿದ್ದಾನೆ.

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಟಿಕೆಟ್​​​ ಗಾಗಿ ಶುರುವಾದ ಅಸಮಾಧಾನ ಇದೀಗ ಕೆಲ ಮುಸ್ಲಿಂ ನಾಯಕರ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ನಸೀರ್ ಅಹ್ಮದ್ ಹಾಗೂ ಸಚಿವ ಜಮೀರ್ ಅಹಮ್ಮದ್ ಖಾನ್ ಅಸಮಾಧಾನಗೊಂಡಿದ್ದು, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಇಬ್ಬರು ನಾಯಕರ ಮೇಲೆ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್​​ನಲ್ಲೂ ಸಹ ಪಕ್ಷ ವಿರೋಧಿ ಚಟುವಟಿಕೆ ನಡೆದಿರುವುದು ಬೆಳಕಿಗೆ ಬಂದಿದೆ.

ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ

ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರತಾ ವ್ಯವಸ್ಥೆ, ಸೌಲಭ್ಯಗಳು ಹಾಗೂ ಸ್ವಚ್ಛತೆ ಕುರಿತು ಮಾಹಿತಿ ಪಡೆದ ಅವರು, ಕೈದಿಗಳೊಂದಿಗೆ ನೇರವಾಗಿ ಮಾತನಾಡಿದ್ದಾರೆ. ಜೈಲುಗಳಲ್ಲಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ್ದಾರೆ.

ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಬಾಗಲಕೋಟೆಯಲ್ಲಿ ಮುಸ್ಲಿಂ ಹುಡುಗ ಮತ್ತು ಹಿಂದೂ ಯುವತಿ ಪ್ರೇಮ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸದ್ಯ ಇಬ್ಬರ ಫೋನ್​​ಗಳನ್ನ ಸೀಜ್​ ಮಾಡಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ. ಯುವತಿಯ ತಾಯಿ ದೂರಿನನ್ವಯ ಹಲವು ವರ್ಷಗಳಿಂದ ಹುಡುಗ ರಿಲೇಷನ್‌ಶಿಪ್​​​ನಲ್ಲಿದ್ದ ಎಂಬ ಸ್ಫೋಟಕ ವಿಚಾರವನ್ನು ಎಸ್​ಪಿ ಬಹಿರಂಗ ಮಾಡಿದ್ದಾರೆ.

ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ

ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ

ಕೊಪ್ಪಳ ಹಾಗೂ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಯುವಕ-ಯವತಿಯ ಪ್ರೇಮ ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಅದರಲ್ಲೂ ಹುಬ್ಬಳ್ಳಿ ಕಳೆದ ಎರಡು ತಿಂಗಳಿನಿಂದ ಲವ್ ಜಿಹಾದ್ ಆರೋಪ ಪ್ರಕರಣಗಳು ಒಂದಾದ ಮೇಲೊಂದು ಬೆಳಕಿಗೆ ಬರುತ್ತಿವೆ. ಇದರ ಮಧ್ಯೆ ಇದೀಗ ಬಾಗಲಕೋಟೆಯಲ್ಲಿ ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.