ಬೆಳಗಾವಿಯಲ್ಲಿ ಮಧ್ಯರಾತ್ರಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ; ರೂಮ್ನಲ್ಲಿ ಓದುತ್ತಿದ್ದ ಪುತ್ರಿ ಕೂದಲೆಳೆ ಅಂತರದಲ್ಲಿ ಪಾರು!
ಬೆಳಗಾವಿಯ ಖ್ಯಾತ ವಕೀಲೆ ಪೂಜಾ ಕಾಕತಕರ್ ಅವರ ಮಂಡೋಳಿ ರಸ್ತೆಯ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ಪೂಜಾ ಅವರ ಪುತ್ರಿ ಸಂಸ್ಕೃತಿ ಪರೀಕ್ಷೆಗೆ ಓದುತ್ತಿದ್ದ ವೇಳೆ ಗುಂಡು ಕಿಟಕಿಗೆ ಬಡಿದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ವೃತ್ತಿ ವೈಷಮ್ಯದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ.
- Sadashiva Jadhav
- Updated on: Apr 26, 2026
- 4:33 pm
ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ, ಇಲ್ಲಾಂದ್ರೆ ಹಿಂದೂ ಸಮಾಜ ಒಡೆದು ಹಾಕುತ್ತೆ: KS ಈಶ್ವರಪ್ಪ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶ್ರೀ ರಾಮಸೇನೆಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ, ಹಿಂದೆ ಮುಸ್ಲಿಮರು ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದಾರೆ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
- Sadashiva Jadhav
- Updated on: Dec 31, 2023
- 2:54 pm