AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sahadev Mane

Sahadev Mane

Author - TV9 Kannada

sahadev.mane@tv9.com
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!

ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!

ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi)  ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ 'ಬಾಕ್ಸ್ ಕ್ರಿಕೆಟ್'  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.  ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ  ನೆರವೇರಿತು. ಉದ್ಘಾಟನೆಯ ಪ್ರಯುಕ್ತ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್‌ಗೆ ಇಳಿದರು.  ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ ಬೌಲಿಂಗ್​​​​ಗೆ  ಸತೀಶ್ ಜಾರಕಿಹೊಳಿ 'ಕ್ಲೀನ್ ಬೋಲ್ಡ್' ಆಗಿದ್ದಾರೆ. ಇದನ್ನು ಕಂಡ ನೆರೆದಿದ್ದ ಕಾರ್ಯಕರ್ತರು ಮತ್ತು ಜನರು ಶಿಳ್ಳೆ, ಚಪ್ಪಾಳೆ ತಟ್ಟಿದರು.

ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ

ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ

ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಕೆಲಸದವನ ನೆರವಿನಿಂದ ಆರೋಪಿಗಳು ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿದ್ದರು ಎನ್ನಲಾಗಿದೆ. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಮಾಳಮಾರುತಿ ಪೊಲೀಸರು ಮೂವರನ್ನು ಬಂಧಿಸಿದ್ದು, ಪರಾರಿಯಾಗಿರುವ ಕೆಲಸದವನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ: ಪತ್ನಿಯ ಹರಕೆ ಸಲ್ಲಿಸಲು ಪತಿಯ ಪ್ರೀತಿಯ ಆಸರೆ

ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ: ಪತ್ನಿಯ ಹರಕೆ ಸಲ್ಲಿಸಲು ಪತಿಯ ಪ್ರೀತಿಯ ಆಸರೆ

ಚಿಂಚಲಿ ಗ್ರಾಮದ ಮಾಯಕ್ಕಾ ದೇವಿ ಜಾತ್ರೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಪಂಢರಪುರದ ದಂಪತಿ ಅನಾರೋಗ್ಯದ ನಡುವೆಯೂ ಆಕ್ಸಿಜನ್ ಸಿಲಿಂಡರ್​​ ಹಿಡಿದುಕೊಂಡೇ ಬಂದು ದೇವಿಯ ದರ್ಶನ ಮಾಡಿರುವುದು ಗಮನ ಸೆಳೆದಿದೆ. ಸದ್ಯ, ದಂಪತಿ ಆಕ್ಸಿಜನ್ ಸಿಲಿಂಡರ್ ಜತೆ ದೇಗುಲದ ಆವರಣದಲ್ಲಿ ಮಾತನಾಡಿಡುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ದೃಶ್ಯ ಕಂಡ ಭಕ್ತರು ದಂಪತಿಯ ಭಕ್ತಿ ಹಾಗೂ ಪರಸ್ಪರದ ಬಾಂಧವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

ಬೆಳಗಾವಿ ಜಿಲ್ಲೆಯ ಗೋಡನಕಟ್ಟಿ ಗ್ರಾಮದಲ್ಲಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಸಿಗರೇಟ್ ಹಣ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಅಂಗಡಿಗೆ ಬಂದ ನಾಲ್ವರು ಯುವಕರು ಸಿಗರೇಟ್ ಮತ್ತು ನೀರು ತೆಗೆದುಕೊಂಡು ಹಣ ನೀಡಲು ನಿರಾಕರಿಸಿದಾಗ ಈ ಘಟನೆ ನಡೆದಿದೆ.

ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ

ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ

ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ನ್ಯಾಯಾಲಯವು ವಂಟಮೂರಿ ಗ್ರಾಮದಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ, ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟಿಸಿದೆ. 12 ಆರೋಪಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ನ್ಯಾಯಾಧೀಶ ಎಚ್.ಎಸ್. ಮಂಜುನಾಥ್ ತೀರ್ಪು ನೀಡಿದ್ದಾರೆ. ಈ ತೀರ್ಪು ಸಮಾಜದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಸಂದೇಶ ರವಾನಿಸಿದೆ.

Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ

Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ

ಅಪಘಾತದ ಪ್ರತೀಕಾರಕ್ಕೆ ಚಲಿಸುತ್ತಿದ್ದ ಲಾರಿ ಏರಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಡ್ರೈವರ್​​ನ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮತ್ತೊಂದೆಡೆ ಯಾದಗಿರಿಯಲ್ಲಿ ಕೇಸರಿ ಧ್ವಜದ ವಾಟ್ಸಾಪ್‌ ಸ್ಟೇಟಸ್ ವಿಚಾರಕ್ಕೆ ತಾಯಿ-ಮಗನ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ.

10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು: ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು: ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

ಬೆಳಗಾವಿಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ 10 ವರ್ಷಗಳ ಹಳೆಯ ದ್ವೇಷಕ್ಕೆ ಭೀಕರ ಕೊಲೆಯಾಗಿದೆ. ತಾಯಿ ಜೊತೆ ಓಡಿಹೋಗಿದ್ದವನನ್ನು ಮಚ್ಚಿನಿಂದ 16 ಬಾರಿ ಕೊಚ್ಚಿ ವ್ಯಕ್ತಿಯೋರ್ವ ಹತ್ಯೆ ಮಾಡಿದ್ದಾನೆ. ತಾನು 18 ವರ್ಷವಿದ್ದಾಗ ತಾಯಿಯನ್ನು ತನ್ನಿಂದ ದೂರ ಮಾಡಿದ ದ್ವೇಷಕ್ಕೆ ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೋಲಾರ್ ಪ್ಲಾಂಟ್ ಹೆಸರಲ್ಲಿ ಗುಡ್ಡ ಅಗೆದು ಮರಗಳ ಮಾರಣಹೋಮ: ಇದರ ಹಿಂದೆ ‘ಲಕ್ಷ್ಮೀ’ ಕೃಪಾಕಟಾಕ್ಷ?

ಸೋಲಾರ್ ಪ್ಲಾಂಟ್ ಹೆಸರಲ್ಲಿ ಗುಡ್ಡ ಅಗೆದು ಮರಗಳ ಮಾರಣಹೋಮ: ಇದರ ಹಿಂದೆ ‘ಲಕ್ಷ್ಮೀ’ ಕೃಪಾಕಟಾಕ್ಷ?

ಬೆಳಗಾವಿಯ ಬಡಲಾ ಅಂಕಲಗಿ ಗ್ರಾಮದಲ್ಲಿ ಸೌರ ವಿದ್ಯುತ್ ಸ್ಥಾವರ ಹೆಸರಿನಲ್ಲಿ ಶ್ರೀಗಂಧ ಸೇರಿದಂತೆ ಹಲವು ಮರಗಳ ಮಾರಣಹೋಮ ನಡೆದಿದೆ. 40 ಎಕರೆಗೂ ಹೆಚ್ಚು ಅರಣ್ಯ ನಾಶವಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವೆಯೊಬ್ಬರ ತವರು ಕ್ಷೇತ್ರದಲ್ಲಿ ಅರಣ್ಯ ಇಲಾಖೆ ಅನುಮತಿಯಿಲ್ಲದೆ ನಡೆದ ಈ ಕೃತ್ಯದ ಕುರಿತು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.

Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ

Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ

ಲ್ಯಾಟರೇಟ್ ಗಣಿಕಾರಿಕೆ ದಂಧೆಕೋರರ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಫುಲ್​​ ರೆಬೆಲ್​​ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಮ್ಮ ಸೂಚನೆ ಮೀರಿಯೂ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿರುವ ಆಫೀಸರ್​, ಸ್ಥಳದಲ್ಲಿದ್ದ ಜೆಸಿಬಿಗೆ ಕಲ್ಲು ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ! ಮಹಾರಾಷ್ಟ್ರ, ಗೋವಾದಿಂದಲೂ ಬಂದ ಲಕ್ಷಾಂತರ ಭಕ್ತರು

ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ! ಮಹಾರಾಷ್ಟ್ರ, ಗೋವಾದಿಂದಲೂ ಬಂದ ಲಕ್ಷಾಂತರ ಭಕ್ತರು

ಬೆಳಗಾವಿ, ಫೆಬ್ರುವರಿ 01: ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಜಾತ್ರೆ ಗೆ ಭಕ್ತಸಾಗರವೇ ಹರಿದುಬಂತು. ಉತ್ತರ ಕರ್ನಾಟಕ ಭಾಗದಲ್ಲೇ ಅತಿದೊಡ್ಡ ಮಟ್ಟದಲ್ಲಿ ನಡೆಯುವ ಈ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ಮಹಾರಾಷ್ಟ್ರ, ಗೋವಾ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದು, ದೇವಾಲಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಜನಸಾಗರ ಕಂಡುಬಂದಿದೆ. ಭಕ್ತರ ಭಾರೀ ಆಗಮನದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್

ಬೆಳಗಾವಿ ಪೊಲೀಸರು ಚೋರ್ಲಾ ಘಾಟ್ ಮಾರ್ಗದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪುಷ್ಪ ಸಿನೆಮಾದ ಶೈಲಿಯಲ್ಲಿ ಕಸದ ವಾಹನದ ಒಳಗೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಚಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು. ಮಹಾರಾಷ್ಟ್ರದ ಜಿಲ್ಲಾ ಪಂಚಾಯತ್ ಚುನಾವಣೆಗಾಗಿ ಇದನ್ನು ಸಾಗಿಸಲಾಗುತ್ತಿತ್ತು ಎಂದು ಶಂಕಿಸಲಾಗಿದೆ. ಈ ಘಟನೆ ಚೆಕ್ ಪೋಸ್ಟ್‌ಗಳ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡಿಸಿದೆ.

400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಚೋರ್ಲಾ ಘಾಟ್​ನಲ್ಲಿ 400 ಕೋಟಿ ರೂ. ರದ್ದಾದ ನೋಟುಗಳ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸುವಂತೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸತ್ಯಾಂಶಗಳು ಹೊರಬೀಳುವ ನಿರೀಕ್ಷೆಯಿದೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ
ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ
ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ..
ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ..
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ