ಊಟದ ವಿಚಾರಕ್ಕೆ ಗಂಡ-ಹೆಂಡ್ತಿ ಗಲಾಟೆ: ಮಧ್ಯಪ್ರವೇಶಿಸಿದ ಅತ್ತೆ ಮೇಲೆ ಸೊಸೆ ಹಲ್ಲೆ
ಸೊಸೆಯಿಂದ ಅತ್ತೆ ಮೇಲೆ ಕುಡುಗೋಲಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ಬೆಳಗಾವಿ ತಾಲೂಕಿನ ಮಾವಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಊಟದ ವಿಚಾರವಾಗಿ ನಡೆದ ಜಗಳ ಬಳಿಕ ಕೈ ಕೈ ಮೀಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಸೊಸೆ ತನ್ನ ಅತ್ತೆ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Sahadev Mane
- Updated on: Mar 20, 2025
- 10:24 pm
ಬೆಳಗಾವಿ: ಯುವಕನಿಂದ ದೇವಾಲಯದ ಮೇಲೆ ಕಲ್ಲು ತೂರಾಟ, ಪಾಂಗುಳ ಗಲ್ಲಿ ಉದ್ವಿಗ್ನ
ಬೆಳಗಾವಿಯ ಪಾಂಗುಳ ಗಲ್ಲಿಯಲ್ಲಿ ಅಶ್ವತ್ಥಾಮ ದೇವಸ್ಥಾನಕ್ಕೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಯುವಕ ಯಾಸೀರ್ ಎಂಬಾತ ಮದ್ಯಪಾನದ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
- Sahadev Mane
- Updated on: Mar 20, 2025
- 7:38 am
ಸಮುದಾಯಗಳ ನಡುವೆ ಘರ್ಷಣೆ, ಕಲ್ಲು ತೂರಾಟ: ಬೆಳಗಾವಿ ಬೆಕ್ಕೇರಿ ಗ್ರಾಮದಲ್ಲಿ ಹೈ ಅಲರ್ಟ್
ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿ ಅದ್ದೂರಿಯಾಗಿ ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ಇದೇ ಹೋಳಿ ಕುರಿತು ಓರ್ವ ಯುವಕ ವಾಟ್ಸಾಪ್ ಸ್ಟೇಟಸೊಂದನ್ನು ಹಾಕಿಕೊಂಡಿದ್ದಾನೆ. ಅದರಲ್ಲಿ ಅಂಬೇಡ್ಕರ್ ಕುರಿತು ಕೂಡ ಬರೆದು ಹಾಕಿದ್ದು, ಬೇರೊಂದು ಸಮುದಾಯದ ಯುವಕರನ್ನು ಕೆರಳಿಸುವಂತೆ ಮಾಡಿದೆ. ಇದರಿಂದ ಇಂದು ಇಡೀ ಗ್ರಾಮದಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ಆಗಿದ್ದೇನು ಎಂಬ ಮಾಹಿತಿ ಇಲ್ಲಿದೆ.
- Sahadev Mane
- Updated on: Mar 18, 2025
- 8:23 am
ಮಕ್ಕಳ್ಳಿಗೆ ಬೇಡವಾದ ಜನ್ಮಕೊಟ್ಟ ಪೋಷಕರು: ವೃದ್ಧಾಶ್ರಮವಾದ ಬೆಳಗಾವಿ ಬಿಮ್ಸ್ ಆಸ್ಪತ್ರೆ
ಬಿಮ್ಸ್ ಆಸ್ಪತ್ರೆಯಲ್ಲಿ ವೃದ್ಧರು ಮತ್ತು ಅನಾರೋಗ್ಯದಿಂದ ಬಳಲುವ ವ್ಯಕ್ತಿಗಳನ್ನು ಅವರ ಕುಟುಂಬದ ಸದಸ್ಯರು ಬಿಟ್ಟುಹೋಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಚಿಕಿತ್ಸೆಗೆ ಅಂತ ಆಸ್ಪತ್ರೆಗೆ ಸೇರಿಸಿ ಹೋಗುವ ಮಕ್ಕಳು ವಾಪಸ್ ಬರೋದೆ ಇಲ್ಲ. ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆ ಮತ್ತು ಆರೈಕೆ ಮಾಡಿದ್ದು, ಕುಟುಂಬಸ್ಥರು ನಿರ್ಲಕ್ಷ್ಯ ಕಾಳಜಿಗೆ ಕಾರಣವಾಗಿದೆ.
- Sahadev Mane
- Updated on: Mar 17, 2025
- 9:37 pm
ಪ್ರೀತ್ಸೇ…ಪ್ರೀತ್ಸೇ ಎಂದು ಬಾಲಕಿಯನ್ನು ಬಲಿ ಪಡೆದ ಪಾಗಲ್ ಪ್ರೇಮಿ
ಅವನದ್ದು ಇನ್ನೂ ಮೀಸೆ ಚಿಗುರದ ವಯಸ್ಸು.. ಆಕೆಯದ್ದು ಜಗತ್ತು ಅರಿಯದ ಮನಸ್ಸು. ಪ್ರೀತ್ಸೇ ಪ್ರೀತ್ಸೇ ಅಂತ ಆತ ಅವಳ ಹಿಂದೆ ಬಿದ್ದಿದ್ದ. ಶಾಲೆಗೆ ಹೋಗುವಾಗ ಬರೋವಾಗ ಹಿಂದೆ ಬಿದ್ದು ಪ್ರೀತಿ ಮಾಡು ಎಂದು ಪೀಡಿಸತೊಡಗಿದ್ದ. ಇದರಿಂದ ಮನನೊಂದ ಬಾಲಕಿ ದುರಂತ ಸಾವು ಕಂಡಿದ್ದಾಳೆ. ಬಾಳಿ ಬದುಕಬೇಕಿದ್ದ ಆ ಬಾಲಕಿ ಸಾವಿನ ಮನೆ ಸೇರಿದ್ರೆ, ಆಕೆಯ ಹಿಂದೆ ಬಿದ್ದು ಪೀಡಿಸುತ್ತಿದ್ದ ಪಾಗಲ್ ಪ್ರೇಮಿ ಪೊಲೀಸರ ಅತಿಥಿಯಾಗಿದ್ದಾನೆ.
- Sahadev Mane
- Updated on: Mar 17, 2025
- 5:10 pm
ಬಾಲಕಿ ಮೇಲೆ ಮೂರು ನಾಯಿಗಳಿಂದ ಡೆಡ್ಲಿ ಅಟ್ಯಾಕ್: ಗಂಭೀರ ಗಾಯ, ICUನಲ್ಲಿ ಚಿಕಿತ್ಸೆ
ಬೆಳಗಾವಿಯ ಗಣೇಶಪುರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಮೂರು ಬೀದಿನಾಯಿಗಳು ಭೀಕರವಾಗಿ ದಾಳಿ ನಡೆಸಿವೆ. ಬಾಲಕಿಯ ಹೊಟ್ಟೆ, ಬೆನ್ನು ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ನಾಯಿಗಳ ಕಾಟ ಹೆಚ್ಚಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Sahadev Mane
- Updated on: Mar 17, 2025
- 4:40 pm
ಮಟ ಮಟ ಮಧ್ಯಾಹ್ನ ಫುಲ್ ಟೈಟ್ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ, ಮುಂದೇನಾಯ್ತು..?
ವ್ಯಕ್ತಿಯೋರ್ವ ಕಂಠಪೂರ್ತಿ ಕುಡಿದು ಕೆಎಸ್ಆರ್ಟಿಸಿ ಬಸ್ ಚಕ್ರದಡಿ ಮಲಗಿ ದೊಡ್ಡ ಅವಾಂತರ ಸೃಷ್ಟಿಸಿದ್ದಾನೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಕೆಂಗಾನೂರಿನಲ್ಲಿ ಘಟನೆ ನಡೆದಿದೆ. ವಿಠ್ಠಲ್ ಗಾಣಿಗೇರ(24) ಎನ್ನುವ ವ್ಯಕ್ತಿ ಎಣ್ಣೆ ಹೊಡೆದು ಫುಲ್ ಟೈಟ್ ಆಗಿ ಬಳಿಕ ಬಸ್ ಕೆಳಗೆ ಬಂದು ಮಲಗಿದ್ದಾನೆ. ಇದರಿಂದ ಕುಡುಕನ ಕಾಟಕ್ಕೆ ಪೊಲೀಸರು, ಪ್ರಯಾಣಿಕರು, ಕಂಟೆಕ್ಟರ್, ಡ್ರೈವರ್ ಹೈರಾಣಾಗಿದ್ದಾರೆ.
- Sahadev Mane
- Updated on: Mar 15, 2025
- 3:37 pm
ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ
ಬೆಳಗಾವಿ ನಗರಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮಂಗೇಶ್ ಪವಾರ್ ಮೇಯರ್ ಆಗಿಯೂ, ವಾಣಿ ವಿಲಾಸ್ ಜೋಶಿ ಉಪಮೇಯರ್ ಆಗಿಯೂ ಆಯ್ಕೆಯಾಗಿದ್ದಾರೆ. ಈ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಕೈ ಎತ್ತುವ ಮೂಲಕ ಆಯ್ಕೆಗೆ ಚುನಾವಣಾಧಿಕಾರಿ ಅವಕಾಶ ನೀಡಿದ್ದರು.
- Sahadev Mane
- Updated on: Mar 15, 2025
- 3:12 pm
ಕಾರು ಅಪ್ಪಚ್ಚಿಯಾಗಿದ್ರೂ ಬದುಕುಳಿದು ಬಂದ: ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬೆಂಗಳೂರು-ಪುಣೆ ಹೈವೇನಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದು, ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದರೂ ಸಹ ಒಳಗೆ ಇದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. ಕಾರಿ ಸ್ಥಿತಿ ನೀಡಿದರೆ ಇಬ್ಬರೂ ಕಾರಿನ ಜೊತೆ ಅಪ್ಪಚ್ಚಿಯಾಗಬೇಕು. ಅದೃಷ್ಟವಶಾತ್ ಆ ರೀತಿ ಏನು ಆಗಿಲ್ಲ. ಇನ್ನು ಬದುಕುಳಿದ ಪರಪ್ಪ ಅಪಘಾತದಲ್ಲಿ ಭೀಕರತೆ ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.
- Sahadev Mane
- Updated on: Mar 15, 2025
- 1:39 pm
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು ಹಿಗೆ
ಬೆಂಗಳೂರಿನ ನೆಲಮಂಗಲದಲ್ಲಿ ಕಳೆದ ಡಿಸೆಂಬರ್ನಲ್ಲಿ ನಡೆದಿದ್ದ ಭೀಕರ ಅಪಘಾತವನ್ನು ನೆನಪಿಸುವಂಥ ರೀತಿಯಲ್ಲಿ ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದಿದೆ. ಬೆಂಗಳೂರು-ಪುಣೆ ಹೈವೇನಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದು, ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದರೂ ಸಹ ಒಳಗೆ ಇದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. ಇನ್ನು ಅಪಘಾತದ ಭೀಕರ ಹೇಗಿತ್ತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
- Sahadev Mane
- Updated on: Mar 15, 2025
- 12:57 pm
ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ, ಕಾರು ಅಪ್ಪಚ್ಚಿ..!
ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ಮಾದರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನೊಳಗೆ ಸಿಲುಕಿ ಒದ್ದಾಡುತ್ತಿದ್ದ ಇಬ್ಬರನ್ನು ಎರಡು ಕ್ರೇನ್ ಮೂಲಕ ರಕ್ಷಣೆ ಮಾಡಲಾಗಿದೆ. ಇನ್ನು ಕಾರಿನ ಸ್ಥಿತಿ ನೋಡಿದ್ರೆ ನಿಜಕ್ಕೂ ಭಯಾನಕವಾಗಿದೆ.
- Sahadev Mane
- Updated on: Mar 15, 2025
- 12:04 pm
ಹೋಳಿ ಹಬ್ಬದ ದಿನವೇ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳ ಪುಂಡಾಟ: ಕರ್ನಾಟಕ ಬಸ್ ಮೇಲೆ ಬಾಟಲಿ ತೂರಾಟ
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಆ ಮೂಲಕ ಮತ್ತೆ ಗಡಿಯಲ್ಲಿ ಮಹಾರಾಷ್ಟ್ರ ಪುಂಡರು ಕ್ಯಾತೆ ಶುರು ಮಾಡಿದ್ದಾರೆ. ಚಿಕ್ಕೋಡಿ ಮತ್ತು ಇಚಲಕರಂಜಿ ನಡುವೆ ಸಂಚರಿಸುತ್ತಿದ್ದ ಬಸ್ಗೆ ಕಲ್ಲು ತೂರಾಟದಿಂದ ಹಿಂಬದಿಯ ಗಾಜು ಪುಡಿಪುಡಿಯಾಗಿದೆ.
- Sahadev Mane
- Updated on: Mar 14, 2025
- 6:15 pm