ಇಡಿ ದಾಳಿ ಮಾಡಿದ ವೈ ಮಂಜುನಾಥ ಯಾರು? ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಡಿಟೇಲ್ಸ್ ಇಲ್ಲಿದೆ
ಬೆಳಗಾವಿ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ನಿವಾಸದ ಮೇಲೆ ಇಡಿ ದಾಳಿಯಾಗಿದ್ದು, ಇವರು ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿ ಗಂಡ ಹಾಗೂ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿದ್ದಾರೆ. ಪಿಎಸ್ಐ ಆಗಿ ವೃತ್ತಿ ಆರಂಭಿಸಿ ನಂತರ ಕೆಎಎಸ್ ಅಧಿಕಾರಿಯಾದ ಇವರ ಸಂಪೂರ್ಣ ಹಿನ್ನೆಲೆ, ರಾಜ್ಯಾದ್ಯಂತ ಹೊಂದಿರುವ ಬೇನಾಮಿ ಬಾರ್ ಜಾಲ ಹಾಗೂ ಹವಾಲಾ ದಂಧೆಯ ಗಂಭೀರ ಆರೋಪಗಳ ಸಂಪೂರ್ಣ ವರದಿ ಇಲ್ಲಿದೆ.
- Sahadev Mane
- Updated on: Jun 26, 2026
- 2:48 pm
ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಸತೀಶ್ ಜಾರಕಿಹೊಳಿ ಅವರ ಭಾವಮೈದ, ಬೆಳಗಾವಿ ಅಬಕಾರಿ ಅಧಿಕಾರಿ ಮಂಜುನಾಥ್ ಅವರ ಮನೆ ಮತ್ತು 10 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿದೆ. ಸತತ 25 ಗಂಟೆಗಳ ಕಾಲ ನಡೆದ ಶೋಧದಲ್ಲಿ ಬೇನಾಮಿ ಬಾರ್ ದಾಖಲೆಗಳು, ಅಕ್ರಮ ಆಸ್ತಿ, ಚಿನ್ನಾಭರಣಗಳು ಪತ್ತೆಯಾಗಿವೆ. ಗೋವಾಕ್ಕೂ ತನಿಖೆ ವಿಸ್ತರಿಸಿದ್ದು, ಹವಾಲಾ ಹಣ ವರ್ಗಾವಣೆ ಶಂಕೆ ವ್ಯಕ್ತವಾಗಿದೆ.
- Sahadev Mane
- Updated on: Jun 25, 2026
- 10:09 am
ಇಡಿ ಖೆಡ್ಡಾಕ್ಕೆ ಬಿದ್ದ ಸಚಿವ ಜಾರಕಿಹೊಳಿ ಬಾಮೈದ: ಮೆಗಾ ಕಾರ್ಯಾಚರಣೆಯಲ್ಲಿ ಏನೆಲ್ಲಾ ಸಿಕ್ತು?
Belagavi News: ಬೆಳಗಾವಿಯ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ನಿವಾಸದ ಮೇಲೆ ದಾಳಿ ಮಾಡಿರುವ ಇಡಿ ಅಧಿಕಾರಿಗಳು, ಸತತ 10 ಗಂಟೆಗಳಿಂದ ದಾಖಲೆ ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳ ಈ ಭರ್ಜರಿ ದಾಳಿ ವೇಳೆ ಆಯುಕ್ತನ ಮನೆಯಲ್ಲಿ ಮಹತ್ವದ ದಾಖಲೆಗಳು ಪತ್ತೆ ಆಗಿವೆ. ಸದ್ಯ ಮಂಜುನಾಥ್ಗೆ ಬಂಧನದ ಭೀತಿ ಎದುರಾಗಿದೆ.
- Sahadev Mane
- Updated on: Jun 24, 2026
- 6:39 pm
ಮಂಜುನಾಥ್ ಆಪ್ತರಿಗೂ ತಟ್ಟಿದ ಇಡಿ ಬಿಸಿ: ಅಬಕಾರಿ ಎಸ್ಪಿ, ಡಿವೈಎಸ್ಪಿ ಮನೆಗಳ ಮೇಲೂ ರೇಡ್
Belagavi News: ಬೆಳಗಾವಿ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ನಿವಾಸದ ಮೇಲಿನ ದಾಳಿ ಬೆನ್ನಲ್ಲೇ, ಅವರ ಆಪ್ತರಾದ ತುಮಕೂರು ಅಬಕಾರಿ ಎಸ್ಪಿ ಹಾಗೂ ಚಿಕ್ಕೋಡಿ ಡಿವೈಎಸ್ಪಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ಭಾರಿ ರೇಡ್ ನಡೆಸಿದ್ದಾರೆ. ಇನ್ನು 2013ರಲ್ಲಿ ಮೈಸೂರು ಅಬಕಾರಿ ಡಿಸಿಯಾಗಿದ್ದ ವೇಳೆ ಮಂಜುನಾಥ್ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಲೈಸೆನ್ಸ್ಗಳ ರಿನೀವಲ್ನಲ್ಲಿ ಅಕ್ರಮ ಹಣ ಸಂಪಾದನೆ ಆರೋಪ ಹಿನ್ನೆಲೆ ದಾಳಿ ನಡೆದಿತ್ತು ಎಂಬುದು ಗೊತ್ತಾಗಿದೆ.
- Sahadev Mane
- Updated on: Jun 24, 2026
- 12:38 pm
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಸಚಿವ ಸಂಪುಟ ವಿಸ್ತರಣೆಯ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಪ್ರಾದೇಶಿಕತೆ ಮತ್ತು ಜಾತಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಹಾಸನಕ್ಕೆ ಇನ್ನೂ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ತಿಳಿಸಿದ ಅವರು, ಪಕ್ಷಕ್ಕೆ ಅನುಕೂಲವಾಗುವಂತೆ ಮುಸ್ಲಿಂ ಸಮುದಾಯಕ್ಕೆ ಇನ್ನಿಬ್ಬರಿಗೆ ಸ್ಥಾನ ನೀಡುವ ಬಗ್ಗೆ ಹೇಳಲಾಗಿದೆ. ಸಂಪುಟ ವಿಸ್ತರಣೆ ದಿನಾಂಕ ನಿಗದಿಯಾಗಿಲ್ಲ, ಶೀಘ್ರ ನಿರ್ಧಾರದ ನಿರೀಕ್ಷೆಯಿದೆ.
- Sahadev Mane
- Updated on: Jun 23, 2026
- 5:32 pm
ದೀಪದ ಬುಡವೇ ಕತ್ತಲೆ: ವಿದ್ಯುತ್ ನೀಡುವ ಹಿಡಕಲ್ ಡ್ಯಾಂನ ನೀರಾವರಿ ನಿಗಮದ ಕಚೇರಿಯಲ್ಲೇ ಕರೆಂಟಿಲ್ಲ!
Belagavi News: ಬೆಳಗಾವಿಯ ಹಿಡಕಲ್ ಡ್ಯಾಂ ನೀರಾವರಿ ನಿಗಮದ ಕಚೇರಿಗಳು ಬರೋಬ್ಬರಿ 1.98 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು, ಅಧಿಕಾರಿಗಳು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. 2022ರ ಸೆಪ್ಟಂಬರ್ನಲ್ಲಿ ಅವರು ವಿದ್ಯುತ್ ಬಿಲ್ ಪಾವತಿಸಿರೋದು. ಆ ಬಳಿಕ ಒಂದು ರೂಪಾಯಿಯನ್ನೂ ಇಲಾಖೆ ಪಾವತಿಸಿಲ್ಲ ಎನ್ನಲಾಗಿದೆ.
- Sahadev Mane
- Updated on: Jun 23, 2026
- 3:43 pm
ರಾಕಸಕೊಪ್ಪ ಡ್ಯಾಂ ಖಾಲಿ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
Belagavi News: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರಾಕಸಕೊಪ್ಪ ಡ್ಯಾಂ ಸಂಪೂರ್ಣ ಬರಿದಾಗಿದೆ. ಕುಡಿಯುವ ನೀರಿಗಾಗಿ ಡೆಡ್ ಸ್ಟೋರೇಜ್ ನೀರನ್ನೇ ಬಳಸಲಾಗುತ್ತಿದೆ. ಬೆಳಗಾವಿ ನಗರಕ್ಕೆ 12 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದ್ದು, ಕೇವಲ 15 ದಿನಗಳ ನೀರು ಸಂಗ್ರಹ ಮಾತ್ರ ಉಳಿದಿದೆ. ಮಳೆ ಬಾರದಿದ್ದರೆ ತೀವ್ರ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ.
- Sahadev Mane
- Updated on: Jun 23, 2026
- 2:24 pm
ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ: ಕನ್ನಡ ಕಡ್ಡಾಯ ಆದೇಶದ ವಿರುದ್ಧ ಕಿಡಿ
ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಕನ್ನಡ ಕಡ್ಡಾಯ ಆದೇಶ ಪತ್ರಿ ಹರಿದು ಹಾಕಿ, ಸರ್ಕಾರದ ವಿರುದ್ಧ ನಾಡದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆ. ಮರಾಠಿ ನಾಮಫಲಕ ಮತ್ತು ದಾಖಲೆಗಳಿಗಾಗಿ ಆಗ್ರಹಿಸಿದ್ದಾರೆ. ಈ ಪುಂಡಾಟಿಕೆ ಖಂಡಿಸಿದ ಕರವೇ ಕಾರ್ಯಕರ್ತರು ಎಂಇಎಸ್ ನಿಷೇಧಿಸಿ, ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
- Sahadev Mane
- Updated on: Jun 22, 2026
- 3:21 pm
ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ
ಬೆಳಗಾವಿಯ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಶಶಾಂಕಾಸನ, ನಾಡಿಶೋಧನ ಪ್ರಾಣಾಯಾಮ ಸೇರಿದಂತೆ ವಿವಿಧ ಯೋಗಾಭ್ಯಾಸಗಳನ್ನು ಪ್ರದರ್ಶಿಸಲಾಯಿತು. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಣೆಗೆ, ಒತ್ತಡ ನಿವಾರಣೆಗೆ ಹಾಗೂ ರಕ್ತಪರಿಚಲನೆ ಹೆಚ್ಚಿಸಲು ಸಹಕಾರಿ ಎಂದು ತಿಳಿಸಲಾಯಿತು.
- Sahadev Mane
- Updated on: Jun 21, 2026
- 9:37 am
ಮಗಳ ಮನೆ ಹಾಳು ಕೃತ್ಯ: ಮರ್ಯಾದೆಗೆ ಹೆದರಿ ದುರಂತ ಅಂತ್ಯ ಕಂಡ ತಾಯಿ!
ಎರಡು ಕೋಟಿ ರೂ ವಿಮೆ ಹಣಕ್ಕಾಗಿ ಪತ್ನಿಯಿಂದ ಮಾಜಿ ಸೈನಿಕರ ಹತ್ಯೆ ಇಡೀ ಬೆಳಗಾವಿಯನ್ನು ಬೆಚ್ಚಿ ಬೀಳಿಸಿದ ಪ್ರಕರಣ. ಈ ಮರ್ಡರ್ ಮಿಸ್ಟ್ರಿ ಸೂತ್ರಧಾರಿ ಸುಮಾ ತಾಯಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪುತ್ರಿ ದುಷ್ಕೃತ್ಯದಿಂದ ಊರಿನಲ್ಲಿ ತಲೆ ಎತ್ತಿ ಓಡಾಡದ ಸ್ಥಿತಿ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
- Sahadev Mane
- Updated on: Jun 20, 2026
- 10:45 pm
ನಾಯಿ ಜೀವ ಉಳಿಸಲು ಹೋಗಿ ತಾಯಿಯನ್ನು ಕಳೆದುಕೊಂಡ ಮಗ: ಆಸ್ಪತ್ರೆ ಆವರಣದಲ್ಲಿ ಅಮ್ಮನಿಗಾಗಿ ಗೋಳಾಟ
ಬೆಳಗಾವಿ ಹೊರವಲಯದ ಸಾಂಬ್ರಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮಗ ಬೈಕ್ ಚಲಾಯಿಸುತ್ತಿದ್ದಾಗ, ರಸ್ತೆಗೆ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಬೈಕ್ ಆಯತಪ್ಪಿದೆ. ತೀವ್ರ ಪೆಟ್ಟು ಬಿದ್ದಿದ್ದರಿಂದ ತಾಯಿ ಶಾಂತವ್ವ ಸ್ಥಳದಲ್ಲೇ ಮೃತಪಟ್ಟರು. ಮಗ ಈರಣ್ಣಾ ತಾಯಿಯ ಅಗಲಿಕೆಯಿಂದ ತೀವ್ರ ದುಃಖಿತನಾಗಿದ್ದು, ಈ ದಾರುಣ ಘಟನೆ ಎಲ್ಲರ ಹೃದಯವನ್ನೂ ಕಲಕಿದೆ.
- Sahadev Mane
- Updated on: Jun 19, 2026
- 12:30 pm
ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ:ಪೊಲೀಸರೇ ಶಾಕ್, ಬೆಚ್ಚಿಬಿದ್ದ ಜನ
ಬೆಳಗಾವಿ (Belagavi) ನಗರದ ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು (Live Bullets) ಪತ್ತೆಯಾಗಿವೆ. ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡುವ ವೇಳೆಯಲ್ಲಿ ಗುಂಡುಗಳು ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿಯ ಉದ್ಯಮಭಾಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಗುಂಡುಗಳನ್ನು ಕಂಡು ಶಾಕ್ ಆಗಿದ್ದಾರೆ.
- Sahadev Mane
- Updated on: Jun 16, 2026
- 6:19 pm