Sign In

By signing in or creating an account, you agree with Associated Broadcasting Company's Terms & Conditions and Privacy Policy.

Sahadev Mane

Sahadev Mane

Author - TV9 Kannada

sahadev.mane@tv9.com
ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಕೇಸಿಗೆ ಟ್ವಿಸ್ಟ್: 3 ತಿಂಗಳ ಬಳಿಕ ಸಿಕ್ಕಿಬಿದ್ದ ಚಾಲಕ!

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಕೇಸಿಗೆ ಟ್ವಿಸ್ಟ್: 3 ತಿಂಗಳ ಬಳಿಕ ಸಿಕ್ಕಿಬಿದ್ದ ಚಾಲಕ!

lakshmi hebbalkar accident case: ಮೂರು ತಿಂಗಳ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ಅಪಘಾತ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕನನ್ನು ಕಿತ್ತೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಸಂಭವಿಸಿದ ಬಳಿಕ 3 ತಿಂಗಳ ಕಾಲ ಪೊಲೀಸರ ನಡೆಸಿದ ತನಿಖೆ ರೋಚಕವಾಗಿದೆ. ಹಾಗಾದ್ರೆ, ಪೊಲೀಸರ ಬಲೆಗೆ ಲಾರಿ ಚಾಲಕ ಬಿದ್ದಿದ್ಹೇಗೆ? ಯಾರು ಆತ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಬೆಳಗಾವಿ ಒಳಚರಂಡಿ ಕಾಮಗಾರಿ: ಮಣ್ಣಿನಡಿ ಸಿಲುಕಿ ಕಾರ್ಮಿಕರಿಬ್ಬರ ದುರ್ಮರಣ

ಬೆಳಗಾವಿ ಒಳಚರಂಡಿ ಕಾಮಗಾರಿ: ಮಣ್ಣಿನಡಿ ಸಿಲುಕಿ ಕಾರ್ಮಿಕರಿಬ್ಬರ ದುರ್ಮರಣ

ಬೆಳಗಾವಿಯಲ್ಲಿ ಒಳಚರಂಡಿ ಕಾಮಗಾರಿಯ ಸಂದರ್ಭದಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಬಸವರಾಜ್ ಮತ್ತು ಶಿವಲಿಂಗ ಎಂಬ ಕಾರ್ಮಿಕರು ಮಣ್ಣಿನಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯವೂ ಗಮನಕ್ಕೆ ಬಂದಿದೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ವ್ಯಕ್ತವಾಗಿವೆ.

ಬೆಳಗಾವಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ, 4 ಗಂಟೆ ಕಾಲ ರೈಲುಗಳ ಸಂಚಾರ ಸ್ಥಗಿತ

ಬೆಳಗಾವಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ, 4 ಗಂಟೆ ಕಾಲ ರೈಲುಗಳ ಸಂಚಾರ ಸ್ಥಗಿತ

ಬೆಳಗಾವಿ ಗೂಡ್ಸ್ ರೈಲು ಅಪಘಾತ: ಗೂಡ್ಸ್ ರೈಲೊಂದು ಬೆಳಗಾವಿ ರೈಲ್ವೆ ನಿಲ್ದಾಣದ ಸಮೀದಲ್ಲಿ ಹಳಿ ತಪ್ಪಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು. ಸರಕು ಸಾಗಣೆ ರೈಲಿನ ಅಪಘಾತದ ಪರಿಣಾಮ ರಾಣಿ ಚೆನ್ನಮ್ಮ ರೈಲು ಕೂಡ ಅಪಘಾತವಾಗುವ ಸಾಧ್ಯತೆ ಇದ್ದು, ಅಧಿಕಾರಿಗಳ ಸಮಯಪ್ರಜ್ಞೆಯಿಂದ ಸಂಭಾವ್ಯ ಭಾರೀ ದುರಂತ ತಪ್ಪಿದೆ.

ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ಬೆಳಗಾವಿಯ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕನಿಗೆ ಆಸ್ಪತ್ರೆ ಆಡಳಿತ ಮಂಡಳಿ ಕಳೆದ ನಾಲ್ಕು ತಿಂಗಳಿನಿಂದ ಸಂಬಳ ನೀಡಿಲ್ಲ. ಹೀಗಾಗಿ, ಸಂಬಳಕ್ಕಾಗಿ ಎಷ್ಟೇ ಮನವಿ ಮಾಡಿಕೊಂಡರೂ ಪ್ರಯೋಜನವಾಗದ ಕಾರಣ, ಚಾಲಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್​ದಾರೆ. ಕುಟುಂಬಸ್ಥರು ಮತ್ತು ಚಾಲಕರ ಸಂಘ ಆಸ್ಪತ್ರೆ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹನುಮ ಜಯಂತಿ: ಹನುಮಾನ್ ತೇರು ಎಳೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹನುಮ ಜಯಂತಿ: ಹನುಮಾನ್ ತೇರು ಎಳೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹನುಮ ಜಯಂತಿಯಂದು ಹನುಮನಿಗೆ ನಮನ ಸಲ್ಲಿಸಿದ ಪ್ರಲ್ಹಾದ್ ಜೋಶಿ: ಕರ್ನಾಟಕದ ವಿವಿಧೆಡೆಗಳಲ್ಲಿ ಇಂದು ಹನುಮ ಜಯಂತಿ ಆಚರಿಸಲಾಯಿತು. ಬೆಳಗಾವಿ ಜಿಲ್ಲೆಯ ಕುಲಗೋಡು ಗ್ರಾಮದಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ತೆರಳಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪೂಜೆ ಸಲ್ಲಿಸಿದರು. ನಂತರ ರಥ ಎಳೆದು ಹನುಮನ ಸೇವೆ ಮಾಡಿದರು.

ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ

ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ

ಎಲೆಕೋಸು ಬೆಲೆ ಭಾರೀ ಕುಸಿತದಿಂದಾಗಿ ರೈತರು ತಾವು ಬೆಳೆದ ಬೆಳೆಯನ್ನು ನಾಶಪಡಿಸಿದ್ದಾರೆ. ಬೆಳಗಾವಿಯ ಕಡೋಲಿ ಗ್ರಾಮದಲ್ಲಿ ನಡೆದಿದೆ. ಕೆಜಿಗೆ 70-80 ಪೈಸೆ ಮಾತ್ರ ಬೆಲೆ ಸಿಗುತ್ತಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆ ನಷ್ಟದಿಂದಾಗಿ ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ್ದಾರೆ.

ಆಗಾಗ ಅಜ್ಜಿ ಮನೆಗೆ ಬರುತ್ತಿದ್ದವ ಯುವತಿಯನ್ನೇ ಪಟಾಯಿಸಿ ಮದ್ವೆಯಾದ: ಮುಂದೇನಾಯ್ತು?

ಆಗಾಗ ಅಜ್ಜಿ ಮನೆಗೆ ಬರುತ್ತಿದ್ದವ ಯುವತಿಯನ್ನೇ ಪಟಾಯಿಸಿ ಮದ್ವೆಯಾದ: ಮುಂದೇನಾಯ್ತು?

ಅವರು ಐದು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ವಿಚಾರ ಯುವತಿ ಕುಟುಂಬಸ್ಥರಿಗೆ ಗೊತ್ತಾಗಿ ಆಕೆಗೆ ಬುದ್ದಿವಾದ ಹೇಳಿ ಬೇರೊಂದು ಹುಡುಗನ ಜೊತೆಗೆ ನಿಶ್ಚಿತಾರ್ಥ ಮಾಡಿದ್ದಾರೆ. ಅಲ್ಲದೇ ಮೇ.18ರಂದು ಮದುವೆ ಕೂಡ ನಿಶ್ಚಯ ಮಾಡಿದ್ದರು, ಆದ್ರೆ ಮನೆಯವರಿಗೆ ಹೇಳದೇ ಕೇಳದೇ ಓಡಿ ಹೋದ ಯುವತಿ ದೇವಸ್ಥಾನದಲ್ಲಿ ಮದುವೆಯಾಗಿ ಇದೀಗ ರಕ್ಷಣೆಗೆ ಪೊಲೀಸರ ಮೊರೆ ಹೋಗಿದ್ದಾರೆ.

ಕುಟುಂಬ ರಾಜಕಾರಣದಿಂದ ಬಿಜೆಪಿ ಹೊರಬರುವ ವರೆಗೂ ಮತ್ತೆ ಪಕ್ಷಕ್ಕೆ ಬರಲ್ಲ: ಯತ್ನಾಳ್ ಖಡಕ್ ನುಡಿ

ಕುಟುಂಬ ರಾಜಕಾರಣದಿಂದ ಬಿಜೆಪಿ ಹೊರಬರುವ ವರೆಗೂ ಮತ್ತೆ ಪಕ್ಷಕ್ಕೆ ಬರಲ್ಲ: ಯತ್ನಾಳ್ ಖಡಕ್ ನುಡಿ

ಕುಟುಂಬ ರಾಜಕಾರಣದ ವಶದಿಂದ ಬಿಜೆಪಿ ಹೊರ ಬರುವ ವರೆಗೂ ಪಕ್ಷಕ್ಕೆ ಮತ್ತೆ ಸೇರುವುದಿಲ್ಲ ಎಂದು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅಲ್ಲದೆ, ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಮಾತಿನ ವಿಡಿಯೋ ಇಲ್ಲಿದೆ.

ಹತ್ಯೆಗೆ ಸುಪಾರಿ: ಗಂಡನ ಕೊಲೆಯನ್ನು ವಿಡಿಯೋ ಕಾಲ್​ನಲ್ಲಿ ನೋಡಿ ಆನಂದಪಟ್ಟ ಹೆಂಡ್ತಿ!

ಹತ್ಯೆಗೆ ಸುಪಾರಿ: ಗಂಡನ ಕೊಲೆಯನ್ನು ವಿಡಿಯೋ ಕಾಲ್​ನಲ್ಲಿ ನೋಡಿ ಆನಂದಪಟ್ಟ ಹೆಂಡ್ತಿ!

ಸಂಗಾತಿಗಳಿಬ್ಬರ ನಡುವೆ ಬಾಂಧವ್ಯವನ್ನು ಈ ಸಣ್ಣ ಪುಟ್ಟ ವಿಚಾರಗಳನ್ನು ಹಾಳು ಮಾಡುತ್ತವೆ. ಹೀಗಾಗಿ ದಂಪತಿಗಳ ನಡುವಿನ ಬಾಂಧವ್ಯವು ಗಟ್ಟಿಯಾಗಿರಬೇಕಾದ್ರೆ ಈ ಕೆಲವು ವಿಷಯಗಳ ಬಗ್ಗೆ ಹೆಚ್ಚು ಗಮನ ನೀಡಬೇಕು. ಆದ್ರೆ, ಇಲ್ಲೋರ್ವ ಪತ್ನಿ ಗಂಡನ ಹತ್ಯಗೆ ಸುಪಾರಿ ನೀಡಿದ್ದಾಳೆ. ಅಲ್ಲದೇ ಗಂಡನನ್ನು ಕೊಲೆ ಮಾಡುವುದನ್ನು ವಾಟ್ಸಪ್ ವಿಡಿಯೋ ಕಾಲ್​​​ ಮೂಲಕ ನೋಡಿ ಆನಂದಪಟ್ಟಿದ್ದಾಳೆ. ಪ್ರಪಂಚದಲ್ಲಿ ಎಂಥ ಜನರು ಇರ್ತಾರೆ ನೀವೇ ನೋಡಿ.

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿದ ನೀರು

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿದ ನೀರು

ಬೆಳಗಾವಿ, ಬೆಂಗಳೂರು, ಹಾಸನ ಸೇರಿದಂತೆ ಕರ್ನಾಟಕದ ಅನೇಕ ಕಡೆಗಳಲ್ಲಿ ಗುರುವಾರ ಮಳೆಯಾಗಿದೆ. ಕೆಲವೆಡೆ ತುಂತುರು ಮಳೆಯಾಗಿದ್ದರೆ, ಇನ್ನು ಕೆಲವೆಡೆ ವರ್ಷಧಾರೆ ಸುರಿದಿದೆ. ಸವದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ನೀರು ನುಗ್ಗಿ, ಭಕ್ತರು ಪರದಾಡುವಂತಹ ಪರಿಸ್ಥಿತಿ ಗುರುವಾರ ನಿರ್ಮಾಣವಾಗಿತ್ತು. ದೇವಸ್ಥಾನಕ್ಕೆ ಪ್ರವಾಹದೋಪಾದಿಯಲ್ಲಿ ನೀರು ಹರಿದು ಬಂದ ವಿಡಿಯೋ ಇಲ್ಲಿದೆ.

ಬೆಳಗಾವಿ: ಬೈಲಹೊಂಗಲದಲ್ಲಿ ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನೇ ಮಂಗಮಾಯ!

ಬೆಳಗಾವಿ: ಬೈಲಹೊಂಗಲದಲ್ಲಿ ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನೇ ಮಂಗಮಾಯ!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ರಾಜ್ಯಪಾಲರ ಹೆಸರಿನ 5.5 ಎಕರೆ ಜಮೀನು ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಬಡವರಿಗೆ ನಿವೇಶನ ಹಂಚಲು ಖರೀದಿಸಿದ್ದ ಈ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸಲಾಗಿದೆ ಎಂದು ಆರ್‌ಟಿಐ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರ ಪಾತ್ರದ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

ಶಾಸಕ ರಾಜು ಕಾಗೆ ಸಹೋದರನ ಪುತ್ರನಿದ್ದ ಕಾರು ಅಪಘಾತ: ಓರ್ವ ಸಾವು

ಶಾಸಕ ರಾಜು ಕಾಗೆ ಸಹೋದರನ ಪುತ್ರನಿದ್ದ ಕಾರು ಅಪಘಾತ: ಓರ್ವ ಸಾವು

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಾಸಕ ರಾಜು ಕಾಗೆ ಅವರ ಸಹೋದರನ ಮಗ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತರ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.