ಲಕ್ಷ್ಮಣ್ ಸವದಿ ಪ್ಲ್ಯಾನ್ ಫ್ಲಾಪ್: ಶಾಸಕನ ಕನಸಿಗೆ ಎಳ್ಳು ನೀರು ಬಿಟ್ಟ ಜಾರಕಿಹೊಳಿ ಬ್ರದರ್ಸ್
ಮಂತ್ರಿ ಸ್ಥಾನ ಸಿಗದಿದ್ದರೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆದರೂ ಆಗಬೇಕೆಂದು ಕನಸು ಕಂಡಿದ್ದ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಕನಸಿಗೆ ಜಾರಕಿಹೊಳಿ ಬ್ರದರ್ಸ್ ಎಳ್ಳುನೀರು ಬಿಟ್ಟಿದ್ದಾರೆ. ಆ ಮೂಲಕ ಬೆಳಗಾವಿ ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಕಳೆದ ಎರಡು ದಶಕಗಳಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುತ್ತಿದ್ದ ಸವದಿ ಅವರಿಗೆ ಈ ಬಾರಿ ಅವಕಾಶ ತಪ್ಪಿದೆ.
- Sahadev Mane
- Updated on: Dec 4, 2025
- 3:50 pm
ಬೆಳಗಾವಿ ಅಧಿವೇಶನಕ್ಕೆ ಸುವರ್ಣಸೌಧ ಸಜ್ಜು: 12 ಸಾವಿರ ಸಿಬ್ಬಂದಿ, 3 ಸಾವಿರ ರೂಮ್ಗಳು ಬುಕ್
ಡಿಸೆಂಬರ್ 8ರಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿರಲಿದ್ದು, ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ದೆಹಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ.
- Sahadev Mane
- Updated on: Dec 4, 2025
- 6:23 am
ಬೆಳಗಾವಿ ಅಧಿವೇಶನ: ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ, ಪೊಲೀಸರು ಹೈ ಅಲರ್ಟ್
Belagavi Assembly Session Security: ದೆಹಲಿ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಹೈ ಅಲರ್ಟ್ ಘೋಷಿಸಿದೆ. ಇಂಟೆಲಿಜೆನ್ಸ್ ಅಲರ್ಟ್ ಕಾರಣ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಸುವರ್ಣ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿದ್ದು, ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
- Sahadev Mane
- Updated on: Dec 3, 2025
- 9:10 am
7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: SP ಬಿಚ್ಚಿಟ್ಟ ಶಾಕಿಂಗ್ ವಿಚಾರ
ಬೆಳಗಾವಿಯಲ್ಲಿ ಹದಿಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ಈ ಕುರಿತು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದೀಗ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್.23ರಂದು ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಕಾಮುಕರು ಬೆನ್ನಟ್ಟಿ ಪಕ್ಕದಲ್ಲಿದ್ದ ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಎಸ್ಪಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.
- Sahadev Mane
- Updated on: Dec 2, 2025
- 9:38 pm
Belagavi: ಏಳನೇ ತರಗತಿ ಬಾಲಕಿ ಮೇಲೆ ಹೀನ ಕೃತ್ಯ, ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ
ಬೆಳಗಾವಿಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. 13 ವರ್ಷದ ಬಾಲಕಿ ಮೇಲೆ ದುಷ್ಟರು ಅಟ್ಟಹಾಸ ಮೆರೆದಿದ್ದು, ಆಕೆಯ ಕುಟುಂಬಸ್ಥರಿಗೆ ಜೀವ ಬೆದರಿಕೆಯನ್ನೂ ಹಾಕಿರುವ ಆರೋಪ ಕೇಳಿಬಂದಿದೆ. ಆರೋಪಿಗಳಿಗೆ ಖಾಕಿ ಬಲೆ ಬೀಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದೆ.
- Sahadev Mane
- Updated on: Dec 2, 2025
- 2:38 pm
Belagavi: ತಳ್ಳುವ ಗಾಡಿ ತಂದು ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಗ್ಯಾಂಗ್!
ಇತ್ತೀಚೆಗೆ ಬೆಂಗಳೂರಿನಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ದರೋಡೆ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಗದು ಸಮೇತ ಎಟಿಎಂ ಯಂತ್ರದ ದರೋಡೆ ನಡೆದಿದೆ. ಇಂಡಿಯಾ ಬ್ಯಾಂಕ್ ಎಂಟಿಎಂಗೆ ಮೂವರ ಗ್ಯಾಂಗ್ ಕನ್ನಹಾಕಿದ್ದು, ಖದೀಮರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
- Sahadev Mane
- Updated on: Dec 2, 2025
- 2:19 pm
ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ ಐಫೋನ್-17 ಪ್ರೋ ಮ್ಯಾಕ್ಸ್ಗೆ ಬೇಡಿಕೆ: ಯುವಕನ ಆಡಿಯೋನ್ನೊಮ್ಮೆ ನೀವು ಕೇಳಿ
ಎಂಥೆಂಥಾ ಜನ ಇದ್ದಾರೆ ನೋಡಿ. ಮಾಜಿ ಮುಖ್ಯಮಂತ್ರಿ, ಸಂಸದರಿಗೆ ಯುವಕನೋರ್ವ ಕರೆ ಮಾಡಿ ಐಫೋನ್-17 ಪ್ರೋ ಮ್ಯಾಕ್ಸ್ ಕೊಡಿಸುವಂತೆ ಬೇಡಿಕೆ ಇಟ್ಟಿದ್ದಾನೆ. ಹೌದು ಅಚ್ಚರಿ ಅನ್ನಿಸಿದರೂ ಸತ್ಯ. ಯುವಕನೋರ್ವ, ಸಂಸದ ಜಗದೀಶ್ ಶೆಟ್ಟರ್ ದೂರವಾಣಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾನೆ. ಬಳಿಕ ಸರ್ ನನಗೊಂದು ಹೆಲ್ಪ್ ಆಗಬೇಕು ನಿಮ್ಮಿಂದ ಎಂದಿದ್ದಾನೆ. ಅದಕ್ಕೆ ಏನು ಹೇಳಪ್ಪ ಎಂದು ಶೆಟ್ಟರ್ ಅವರು ಹೇಳಿದ್ದಾರೆ. ಆಗ ಯುವಕ ಏನಿಲ್ಲ ಸರ್ ಹೊಸದಾಗಿ ಐಫೋನ್-17 ಪ್ರೋ ಮ್ಯಾಕ್ಸ್ ಲಾಂಚ್ ಆಗಿದೆ. ನನಗೆ ಐಫೋನ್-17 ಪ್ರೋ ಮ್ಯಾಕ್ಸ್ ಕೊಡಿಸಿ ಎಂದಿದ್ದಾನೆ.
- Sahadev Mane
- Updated on: Dec 1, 2025
- 10:50 pm
ಬೆಳಗಾವಿ: ಪಿಚ್ಡಿ ಗೈಡ್ನಿಂದ ಲೈಂಗಿಕ ಕಿರುಕುಳ, 19ಕ್ಕೂ ಹೆಚ್ಚು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಪಿಚ್ಡಿ ಗೈಡ್ ಲೈಂಗಿಕ ಕಿರುಕುಳ ನೀಡಿರುವ ಸಂಬಂಧ ದೂರು ನೀಡಿದ್ದನ್ನೇ ಮುಂದಿಟ್ಟುಕೊಂಡು ಪದವಿ ನೀಡದೆ ಸತಾಯಿಸಿದ ಆರೋಪದಲ್ಲಿ, ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಗೈಡ್ ಕೆ.ಎಲ್.ಎನ್. ಮೂರ್ತಿ, ಕುಲಪತಿ ಸಿ.ಎಂ. ತ್ಯಾಗರಾಜ್ ಮತ್ತು ರಿಜಿಸ್ಟರ್ ಸಂತೋಷ ಕಾಮೇಗೌಡ ವಿರುದ್ಧ ಆರೋಪ ಕೇಳಿಬಂದಿದೆ.
- Sahadev Mane
- Updated on: Dec 1, 2025
- 2:30 pm
ಬೆಳಗಾವಿ: ಬಸವ ತತ್ವದ ಕೆಲ ಸ್ವಾಮೀಜಿಗಳನ್ನು ತಾಲಿಬಾನಿಗಳಿಗೆ ಹೋಲಿಸಿದ ಕಾಡಸಿದ್ದೇಶ್ವರ ಸ್ವಾಮೀಜಿ
ರಾಯಬಾಗ ಪಟ್ಟಣದಲ್ಲಿ ಹನುಮ ಮಾಲಾಧಾರಿಗಳನ್ನು ಉದ್ದೇಶಿಸಿ ಮಾತನಾಡಿದ ಕೊಲ್ಹಾಪುರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ, ಬಸವ ತತ್ವದ ಕೆಲ ಸ್ವಾಮೀಜಿಗಳ ಕುರಿತು ‘ತಾಲಿಬಾನಿಗಳು’ ಎಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸ್ವಾಮೀಜಿಗಳ ಬಟ್ಟೆ ಹಾಕಿಕೊಂಡು ತಾಲಿಬಾನಿಗಳಂತೆ ಮಾಡುವವರು ಎಂದು ಅವರು ಹೇಳಿದ್ದಾರೆ. ಸ್ವಾಮೀಜಿ ಹೇಳಿದ್ದೇನು? ಸಂಪೂರ್ಣ ವಿಡಿಯೋ ಇಲ್ಲಿದೆ.
- Sahadev Mane
- Updated on: Dec 1, 2025
- 10:13 am
ಬೆಳಗಾವಿಯಲ್ಲಿ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ 2 ವರ್ಷಗಳಿಂದ ಅತ್ಯಾಚಾರ,ಉಪನ್ಯಾಸಕ ಅರೆಸ್ಟ್
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉಪನ್ಯಾಸಕನೋರ್ವ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ತಾಲೂಕಿನ ಬಸವನ ಕುಡಚಿ ನಿವಾಸಿ, ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕ್ಯಾಂಪ್ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆ ಉಪನ್ಯಾಸಯ ನಾಗೇಶ್ವರನನ್ನು ಬಂಧಿಸಿದ್ದಾರೆ.
- Sahadev Mane
- Updated on: Nov 30, 2025
- 5:50 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕ ಪ್ರಜೆಗಳಿಗೆ ವಂಚನೆ: ಅತೀ ದೊಡ್ಡ ವಂಚನೆ ಕೇಸ್ ಸಿಐಡಿಗೆ
ಬೆಳಗಾವಿಯಲ್ಲಿ ಕುಳಿಕೊಂಡು ಅಮೆರಿಕ ಪ್ರಜೆಗಳನ್ನು ವಂಚಿಸುತ್ತಿದ್ದ ಅತಿ ದೊಡ್ಡ ಸೈಬರ್ ವಂಚನೆ ಗ್ಯಾಂಗ್ ಅನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ಅಂತಾರಾಷ್ಟ್ರೀಯ ಮಟ್ಟದ ಪ್ರಕರಣ ಹಿನ್ನೆಲೆ ಸಿಐಡಿಗೆ ಕೇಸ್ ಹಸ್ತಾಂತರಿಸಲಾಗಿದೆ. ನಾಲ್ಕೈದು ದಿನದಲ್ಲಿ ಸಿಐಡಿ ಅಧಿಕಾರಿಗಳ ತಂಡ ಬೆಳಗಾವಿಗೆ ಭೇಟಿ ನೀಡಲಿದೆ.
- Sahadev Mane
- Updated on: Nov 28, 2025
- 10:23 pm
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ: ಡಿಕೆ ಶಿವಕುಮಾರ್ ಬೆನ್ನಿಗೆ ನಿಂತ ವೀರೇಶ್ವರ ಸ್ವಾಮೀಜಿ
ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ. 50-50 ಅಧಿಕಾರ ಹಂಚಿಕೆ ಒಪ್ಪಂದವನ್ನು ಪಾಲಿಸದಿದ್ದರೆ ಸರ್ಕಾರ ಪತನವಾಗುವ ಸಾಧ್ಯತೆಯಿದೆ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಸ್ವಾಮೀಜಿ ಹೇಳಿದ್ದೇನೆಂಬ ವಿಡಿಯೋ ಇಲ್ಲಿದೆ ನೋಡಿ.
- Sahadev Mane
- Updated on: Nov 27, 2025
- 12:15 pm