AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹದೇವ್​ ಮಾನೆ

ಸಹದೇವ್​ ಮಾನೆ

ಜಿಲ್ಲಾ ವರದಿಗಾರ - TV9 Kannada

sahadev.mane@tv9.com

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಮಹಿಳಾ PSI ಅಶ್ಲೀಲ ವಿಡಿಯೋ ಪ್ರಕರಣ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೋರ್ಟ್ ಮೆಟ್ಟಿಲೇರಿದ ಸಹಾಯಕ ಅಧೀಕ್ಷಕ

ಮಹಿಳಾ PSI ಅಶ್ಲೀಲ ವಿಡಿಯೋ ಪ್ರಕರಣ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೋರ್ಟ್ ಮೆಟ್ಟಿಲೇರಿದ ಸಹಾಯಕ ಅಧೀಕ್ಷಕ

ಕೆಐಎಸ್‌ಎಫ್ ಮಹಿಳಾ ಪಿಎಸ್‌ಐ ಅಶ್ಲೀಲ ವಿಡಿಯೋವನ್ನು ಹಿಂಡಲಗಾ ಜೈಲಿಗೆ ತಪ್ಪಾಗಿ ಲಿಂಕ್ ಮಾಡಿ, ಜೈಲಿನ ಘನತೆಗೆ ಧಕ್ಕೆ ತಂದ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ಜೈಲಿನ ಸಹಾಯಕ ಅಧೀಕ್ಷಕರು ಸಂಧ್ಯಾ ನಾಗರಾಜ್ ಮತ್ತು ಸಾಯಿಕುಮಾರ್ ವಿರುದ್ಧ ಬೆಳಗಾವಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕ್ರಮಕ್ಕೆ ಕೋರಲಾಗಿದೆ.

ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಡ್ರಗ್ಸ್ ಫ್ಯಾಕ್ಟರಿಯೇ ಪತ್ತೆ: 1.13 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್​​, 7 ಜನರ ಬಂಧನ

ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಡ್ರಗ್ಸ್ ಫ್ಯಾಕ್ಟರಿಯೇ ಪತ್ತೆ: 1.13 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್​​, 7 ಜನರ ಬಂಧನ

ಕರ್ನಾಟಕ-ಮಹಾರಾಷ್ಟ್ರ ಗಡಿಯ ಕೊಲ್ಲಾಪುರ ಜಿಲ್ಲೆಯಲ್ಲಿ ಕೋಳಿ ಫಾರ್ಮ್‌ ಒಂದರಲ್ಲಿ ನಡೆಸುತ್ತಿದ್ದ ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿದ ಮಹಾರಾಷ್ಟ್ರ ಟಾಸ್ಕ್ ಫೋರ್ಸ್, 1.13 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿ ಬೆಳಗಾವಿಯ ಇಬ್ಬರು ಸೇರಿ 7 ಜನರನ್ನು ಬಂಧಿಸಿದೆ. ಮುಂಬೈನಲ್ಲಿ ನಡೆದ ಡ್ರಗ್ಸ್ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದ ಸುಳಿವಿನ ಆಧಾರದ ಮೇಲೆ ಈ ರೇಡ್​​ ನಡೆದಿದ್ದು, ಬೆಳಗಾವಿಯಿಂದ ಕೇವಲ 25ಕಿಮೀ ದೂರದಲ್ಲಿರುವ ಹಾಜಗೋಳಿಯಲ್ಲಿ ನಡೆದ ಮೂರನೇ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದೆ.

‘ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ’: ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ

‘ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ’: ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಹಣ ಕೊಟ್ಟರೆ ಗಾಂಜಾ, ಮೊಬೈಲ್, ಐಷಾರಾಮಿ ಜೀವನ ಮತ್ತು ವೇಶ್ಯಾವಾಟಿಕೆಯಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂದು ಕೈದಿ ಸಾಯಿಕುಮಾರ್ ಸ್ಫೋಟಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಆರೋಪಗಳಿಗೆ ತನ್ನ ಬಳಿ ಪುರಾವೆಗಳಿವೆ ಎಂದು ಹೇಳಿರುವ ಸಾಯಿಕುಮಾರ್, ಜೈಲು ಅಧಿಕಾರಿಗಳ ನೇರ ಪಾತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ

‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ

ಹಿಂಡಲಗಾ ಜೈಲಿನ ಅಧಿಕಾರಿಗಳು ವೇಶ್ಯಾವಾಟಿಕೆ ಮತ್ತು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಮಾಜಿ ಕೈದಿ ಸುರೇಶ್ ಅಲಿಯಾಸ್ ಸಾಯಿ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಹಣ ಪಡೆದು ಮೊಬೈಲ್, ಗಾಂಜಾ, ಸಿಮ್, ಮದ್ಯ ಹಾಗೂ ಐಷಾರಾಮಿ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದಿರುವ ಕೈದಿ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಕ್ಷ್ಯಗಳನ್ನು ತನ್ನ ಬಳಿ ಇರುವುದಾಗಿ ಹೇಳಿಕೊಂಡಿದ್ದಾನೆ.

ಒಂದೆಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ: ಬೆಳಗಾವಿ ಜಿಲ್ಲೆಯಲ್ಲಿ 70 ಸಾವಿರ ಹೆಕ್ಟೇರ್ ಬೆಳೆ ನಾಶ, ಸಂಕಷ್ಟದಲ್ಲಿ ರೈತರು

ಒಂದೆಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ: ಬೆಳಗಾವಿ ಜಿಲ್ಲೆಯಲ್ಲಿ 70 ಸಾವಿರ ಹೆಕ್ಟೇರ್ ಬೆಳೆ ನಾಶ, ಸಂಕಷ್ಟದಲ್ಲಿ ರೈತರು

ಬೆಳಗಾವಿ ಜಿಲ್ಲೆಯಲ್ಲಿ ರೈತರು ಅತಿವೃಷ್ಟಿ ಹಾಗೂ ಅನಾವೃಷ್ಟಿ ಎರಡರ ಸಂಕಷ್ಟವನ್ನೂ ಎದುರಿಸುತ್ತಿದ್ದಾರೆ. ನದಿ ಪಾತ್ರದಲ್ಲಿ ಪ್ರವಾಹದಿಂದ ಬೆಳೆ ಕೊಳೆತರೆ, ರಾಮದುರ್ಗ, ಯರಗಟ್ಟಿ, ಸವದತ್ತಿ ತಾಲೂಕುಗಳಲ್ಲಿ ತೀವ್ರ ಬರದಿಂದ ಬಿತ್ತನೆ ಮಾಡಿದ 22 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ನಾಶವಾಗಿದೆ. ಪರಿಹಾರ ಮತ್ತು ಸಮೀಕ್ಷೆಗಾಗಿ ರೈತರು ಆಗ್ರಹಿಸಿದ್ದಾರೆ. ಜಿಲ್ಲಾಡಳಿತ ಮೇವು ಬ್ಯಾಂಕ್ ತೆರೆಯುವ ಭರವಸೆ ನೀಡಿದೆ.

ಸಂತೆಯಲ್ಲಿ ಬೈಕ್ ಎಗರಿಸಿ ಜಮೀನಿನಲ್ಲಿ ಬಚಿಟ್ಟು ಕಮ್ಮಿ ಬೆಲೆಗೆ ಮಾರುತ್ತಿದ್ದ ಖದೀಮ: 43 ಬೈಕ್ ಕದ್ದ ಕಳ್ಳ ಸಿಕ್ಕಿಬಿದ್ದಿದ್ದು ಹೇಗೆ?

ಸಂತೆಯಲ್ಲಿ ಬೈಕ್ ಎಗರಿಸಿ ಜಮೀನಿನಲ್ಲಿ ಬಚಿಟ್ಟು ಕಮ್ಮಿ ಬೆಲೆಗೆ ಮಾರುತ್ತಿದ್ದ ಖದೀಮ: 43 ಬೈಕ್ ಕದ್ದ ಕಳ್ಳ ಸಿಕ್ಕಿಬಿದ್ದಿದ್ದು ಹೇಗೆ?

ಬೆಳಗಾವಿಯಲ್ಲಿ ಸರಣಿ ಬೈಕ್‌ ಕಳ್ಳತನ ಮಾಡುತ್ತಿದ್ದ ನಾರಾಯಣ್ ಕದಂ ಎಂಬಾತನನ್ನು ಕಿತ್ತೂರು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳ ಕಾರ್ಯಾಚರಣೆ ಬಳಿಕ ಸೆರೆಸಿಕ್ಕ ಆರೋಪಿಯಿಂದ ಬರೋಬ್ಬರಿ 43 ಕಳವು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಕದ್ದ ಬೈಕ್‌ಗಳ ಚಾಸಿಸ್ ನಂಬರ್ ಬದಲಾಯಿಸಿ ಹಳ್ಳಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಹಿಂಡಲಗಾ ಜೈಲಿಗೆ ಕಳುಹಿಸಿದ್ದು, ಕದ್ದ ಬೈಕ್ ಮಾಲೀಕರಿಗೆ ಸಂತಸ ತಂದಿದೆ.

ಕೇದಾರನಾಥ ದೇಗುಲದ ಮಾಜಿ ಪ್ರಧಾನ ಅರ್ಚಕ ಗುರುಲಿಂಗಯ್ಯ ಲಿಂಗೈಕ್ಯ: ಬೆಳಗಾವಿಯಲ್ಲಿ ಇಂದು ಕ್ರಿಯಾ ಸಮಾಧಿ

ಕೇದಾರನಾಥ ದೇಗುಲದ ಮಾಜಿ ಪ್ರಧಾನ ಅರ್ಚಕ ಗುರುಲಿಂಗಯ್ಯ ಲಿಂಗೈಕ್ಯ: ಬೆಳಗಾವಿಯಲ್ಲಿ ಇಂದು ಕ್ರಿಯಾ ಸಮಾಧಿ

ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇಗುಲದ ಮಾಜಿ ಪ್ರಧಾನ ಅರ್ಚಕ ಬೆಳಗಾವಿ ಮೂಲದ ಗುರುಲಿಂಗಯ್ಯ (76) ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಲಿಂಗೈಕ್ಯರಾಗಿದ್ದಾರೆ. 1970 ರಿಂದ ಸುಮಾರು 40 ವರ್ಷಗಳ ಕಾಲ ಕೇದಾರನಾಥೇಶ್ವರನ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಇವರ ಕ್ರಿಯಾ ಸಮಾಧಿ ಇಂದು ಸಂಜೆ ಸ್ವಗ್ರಾಮ ಚಿಕ್ಕ ಬಾಗೇವಾಡಿಯಲ್ಲಿ ನಡೆಯಲಿದೆ.

ಲಕ್ಷ್ಮೀ ಹೆಬ್ಬಾಳ್ಕರ್​​ ಪರ ನಿಂತ ಸತೀಶ್ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?

ಲಕ್ಷ್ಮೀ ಹೆಬ್ಬಾಳ್ಕರ್​​ ಪರ ನಿಂತ ಸತೀಶ್ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?

ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವ ಸ್ಥಾನ ಮೀಸಲಿರಿಸಲಾಗಿದೆ. ಸಚಿವ ಸಂಪುಟ ಪುನಾರಚನೆ ವೇಳೆ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಅವರಿಗೆ ಮಣೆ ಹಾಕಲಾಗಿತ್ತು. ಆದ್ರೆ, ಬದಲಾದ ಸನ್ನವೇಶಗಳಿಂದ ಅವರು ಸಚಿವರಾಗಿ ಅಧಿಕಾರಿ ಸ್ವೀಕಾರ ಮಾಡಲಿಲ್ಲ. ಹೀಗಾಗಿ ಅದೊಂದು ಸ್ಥಾನ ಖಾಲಿ ಉಳಿದಿದ್ದು, ಇದಕ್ಕೆ ಉಮಾಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ರೇಸ್​​ನಲ್ಲಿದ್ದಾರೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಪರವಾಗಿ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿರುವುದು ಅಚ್ಚರಿ ಮೂಡಿಸಿದೆ. ಹೌದು..ರಾಜ್ಯ ರಾಜಕಾರಣವೇ ಬೇರೆ ಬೆಳಗಾವಿ ರಾಜಕಾರಣವೇ ಬೇರೆ, ಬೆಳಗಾವಿಯಲ್ಲಿ ಕುಟುಂಬ ಕುಟುಂಬಗಳ ನಡುವಿನ ಜಿದ್ದಾಜಿದ್ದಿ ಇದೆ. ಲಕ್ಷ್ಮೀ ಹೆಬ್ಬಾಳ್ಕರ್​​​​​ ಹಾಗೂ ಜಾರಕಿಹಿಳಿ ಕುಟುಂಬ ಒಂದು ರೀತಿ ಹಾವು ಮುಂಗಸಿ ಇದ್ದಂತೆ. ಆದರೂ ಇದೀಗ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟಿಂಗ್ ಮಾಡಿದ್ದಾರೆ ಕುತೂಹಲ ಮೂಡಿಸಿದೆ.

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!

ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಆಕೆ ತನ್ನ ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ್ದ ಪತಿಗೇ ಚಟ್ಟ ಕಟ್ಟಿದ್ದಳು. ಯಾರಿಗೂ ಅನುಮಾನ ಬಾರದಂತೆ ಶವವನ್ನು ಗದ್ದೆಯಲ್ಲಿ ಹೂತು, ಗಂಡ ಪರ ಊರಿಗೆ ಹೋಗಿದ್ದಾನೆ ಎಂದು ಹೇಳುತ್ತಾ ಓಡಾಡಿಕೊಂಡಿದ್ದಳು. ಆದರೆ ಅದೊಂದು ಘಟನೆ ಈಕಯ ಕಪಟ ನಾಟಕವನ್ನು ಕುಟುಂಬಸ್ಥರ ಎದುರು ಬಯಲು ಮಾಡಿದೆ. ತಪ್ಪು ಮಾಡಿದ್ದ ಆರೋಪಿಗಳು ಬರೋಬ್ಬರಿ 6 ತಿಂಗಳ ಬಳಿಕ ಜೈಲು ಸೇರಿದ್ದಾರೆ.

ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್! ಬೆಳಗಾವಿಯಲ್ಲಿ ಮೂರು ಕಡೆಗಳಲ್ಲಿ ದಾಳಿ

ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್! ಬೆಳಗಾವಿಯಲ್ಲಿ ಮೂರು ಕಡೆಗಳಲ್ಲಿ ದಾಳಿ

Shivanand Neelannavar Case: ಬೆಳಗಾವಿಯ ಶಿವಂ ಅಸೋಸಿಯೇಟ್ ಕಂಪನಿಯಿಂದ ಹೂಡಿಕೆದಾರರಿಗೆ ವಂಚನೆ ಪ್ರಕರಣ ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿತ್ತು. ಸದ್ಯ ಇದೇ ಪ್ರಕರಣದಲ್ಲಿ ಇದೀಗ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದ್ದು, ಆ ಮೂಲಕ ಕಂಪನಿ ಮಾಲೀಕ ಶಿವಾನಂದ ನೀಲಣ್ಣನವರ್​​ಗೆ ದೊಡ್ಡ ಶಾಕ್ ಎದುರಾಗಿದೆ.

ಬೆಳಗಾವಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಮಗು ಸೇರಿ ಮೂವರು ಸಾವು

ಬೆಳಗಾವಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಮಗು ಸೇರಿ ಮೂವರು ಸಾವು

KSRTC Bus Accident: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಈ ಕುರಿತಾಗಿ ಗೋಕಾಕ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇಟಗಿ ಗ್ರಾಮದ ಬಳಿ ಇರುವ ಅಕ್ಕ ಗಂಗಾಂಬಿಕಾ ಐಕ್ಯ ಸ್ಥಳ ಸಂಪೂರ್ಣ ಜಲಾವೃತಗೊಂಡಿದೆ. ಸುಮಾರು 7000 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ನವಿಲುತೀರ್ಥ ಜಲಾಶಯದ ಕಡೆಗೆ ಸಾಗುತ್ತಿದೆ. ಇದರಿಂದ ರೈತ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.