ಬಿಆರ್ ಪಾಟೀಲ್ ಬೆನ್ನಲ್ಲೇ ಶಾಸಕ ರಾಜು ಕಾಗೆ ಹೊಸ ಬಾಂಬ್: ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ
ಕಾಂಗ್ರೆಸ್ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗದಿರುವುದಕ್ಕೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೋಟಿ ರೂ ಅನುದಾನ ಬಂದಿದ್ದರೂ ಕೆಲಸ ಆರಂಭವಾಗಿಲ್ಲ ಎಂದು ಅವರು ದೂರಿದ್ದಾರೆ. ರಾಜೀನಾಮೆ ನೀಡುವ ಬಗ್ಗೆಯೂ ಅವರು ಸುಳಿವು ನೀಡಿದ್ದಾರೆ.
- Sahadev Mane
- Updated on: Jun 23, 2025
- 12:46 pm
ಬೆಳಗಾವಿ: ಮಹಿಳೆಯೊಂದಿಗೆ ಇರುವಾಗಲೇ ಸಿಕ್ಕಬಿದ್ದ ಸ್ವಾಮೀಜಿ, ರಾತ್ರೋರಾತ್ರಿ ಮಠದಿಂದ ಓಡಿಸಿದ ಗ್ರಾಮಸ್ಥರು
ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಮಠಕ್ಕೆ ನುಗ್ಗಿ ಕೆಲ ಯುವಕರು ಸ್ವಾಮೀಜಿ ಮೇಲೆ ಹಲ್ಲೆ ಮಾಡಿ ಮಹಿಳೆ ಮತ್ತು ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುವ ಮೂಲಕ ನೈತಿಕ ಪೊಲೀಸಗಿರಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಘಟನೆ ನಡೆದಿದೆ.
- Sahadev Mane
- Updated on: Jun 23, 2025
- 11:40 am
ಬೆಳಗಾವಿ: ಕೃಷ್ಣಾ ನದಿ ಪ್ರವಾಹಕ್ಕೆ ಚಿಕ್ಕೋಡಿ ಸುತ್ತಮುತ್ತ 7 ಸೇತುವೆಗಳು ಜಲಾವೃತ
ಮುಂಗಾರು ಮಳೆ ಅಬ್ಬರ ಜೋರಾಗಿರುವುದು ಮತ್ತು ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರ ಪರಿಣಾಮ ಬೆಳಗಾವಿ ಮೇಲಾಗಿದೆ. ಜಿಲ್ಲೆಯಲ್ಲಿ ಕೃಷ್ಣಾ, ದೂದಗಂಗಾ ನದಿ ಪ್ರವಾಹದೋಪಾದಿಯಲ್ಲಿ ಹರಿಯುತ್ತಿದ್ದು, ಚಿಕ್ಕೋಡಿ ವ್ಯಾಪ್ತಿಯ 7 ಸೇತುವೆಗಳು ಮುಳುಗಡೆಯಾಗಿವೆ. ಪರಿಣಾಮವಾಗಿ ಜನರು ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಅವಲಂಬಿಸಬೇಕಾಗಿ ಬಂದಿದೆ. ಬೆಳಗಾವಿ ಪ್ರವಾಹದ ವಿಡಿಯೋ ಇಲ್ಲಿದೆ.
- Sahadev Mane
- Updated on: Jun 23, 2025
- 9:00 am
ಹಣಕಾಸಿನ ವಿಚಾರಕ್ಕೆ ಗಲಾಟೆ: ಅಂಗನವಾಡಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ
ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಹಣಕಾಸಿನ ವಿಚಾರವಾಗಿ ನಡೆದ ಜಗಳದಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
- Sahadev Mane
- Updated on: Jun 22, 2025
- 10:50 am
30 ವರ್ಷ ಹಿಂದೆ 500 ರೂ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ ನಿವೃತ್ತಿಯಾದ 10 ವರ್ಷದ ಬಳಿಕ ಜೈಲು!
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ 2006ರಲ್ಲಿ 500 ರೂ ಲಂಚ ಪಡೆದ ಆರೋಪದ ಮೇಲೆ 10 ವರ್ಷಗಳ ಬಳಿಕ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಲೋಕಾಯುಕ್ತ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರುದಾರ ಮೃತಪಟ್ಟ ಐದು ವರ್ಷಗಳ ನಂತರ ಇದೀಗ ತೀರ್ಪು ಪ್ರಕಟವಾಗಿದೆ.
- Sahadev Mane
- Updated on: Jun 20, 2025
- 1:20 pm
ಗ್ಯಾರಂಟಿ ಯೋಜನೆಯಿಂದ ಜನಪ್ರಿಯರಾಗಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಇನ್ನಿಲ್ಲ
Kakasaheb Patil passes away: ನಿಪ್ಪಾಣಿ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲಿ ಸಿಎಂ ಸಿದ್ದರಾಮಯ್ಯ "ಕಾಕಾ ಪಾಟೀಲ್ ನಿಂಗೂ ಫ್ರೀ" ಎಂದು ಹೇಳಿದ್ದ ಮಾಜಿ ಶಾಸಕ ಇದೀಗ ನೆನಪು ಮಾತ್ರ.
- Sahadev Mane
- Updated on: Jun 18, 2025
- 2:54 pm
ಬೆಳಗಾವಿ: ಬಸ್ನಲ್ಲಿ ಕಿಟಕಿ ಪಕ್ಕದ ಸೀಟ್ಗಾಗಿ ಯುವಕರ ಮಧ್ಯೆ ಗಲಾಟೆ, ಚಾಕು ಇರಿತ
ಬೆಳಗಾವಿಯ ತಾಲೂಕಿನ ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಹೋಗುತ್ತಿದ್ದ ಬಸ್ನಲ್ಲಿ ಸೀಟ್ಗಾಗಿ ಯುವಕರ ನಡುವೆ ಜಗಳ ನಡೆದು ಚಾಕು ಇರಿತ ಸಂಭವಿಸಿರುವಂತಹ ಘಟನೆ ನಡೆದಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Sahadev Mane
- Updated on: Jun 18, 2025
- 1:38 pm
ಬೆಳಗಾವಿಯಲ್ಲಿ ಹೆಚ್ಚಾದ ಮಳೆ ಅಬ್ಬರ: 6 ಸಂಪರ್ಕ ಸೇತುವೆಗಳು ಮುಳುಗಡೆ
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಇತ್ತ ಬೆಳಗಾವಿ ಜಿಲ್ಲೆಯಲ್ಲೂ ಯಲ್ಲೋ ಅಲರ್ಟ್ ಇದ್ದು ಮಳೆ ಅಬ್ಬರ ನಿಲ್ಲುತ್ತಿಲ್ಲ. ಹೀಗಾಗಿ ಚಿಕ್ಕೋಡಿ ಉಪ ವಿಭಾಗದಲ್ಲಿ ಮತ್ತೊಮ್ಮೆ ಆರು ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿದ್ದು, ಕೃಷ್ಣಾ ನದಿಯ ಒಳ ಹರಿವು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದು ನದಿ ಪಾತ್ರದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
- Sahadev Mane
- Updated on: Jun 18, 2025
- 7:35 am
ಅಣ್ಣನ ಕೊಂದು ನಾಟಕವಾಡಿದ್ದ ತಮ್ಮ: ಮಾಲೀಕನ ಕೊಲೆ ಸುಳಿವು ಕೊಟ್ಟ ನಾಯಿ, ಕುರಿಗಳು
ಹುಟ್ಟತ್ತಾ ಸಹೋದರರು ಬೆಳೆಯುತ್ತಾ ಬೆಳೆಯುತ್ತಾ ದಾಯಾದಿಗಳು ಎನ್ನುವ ಗಾದೆ ಮಾತು ಇದೆ. ಈ ಪ್ರಕರಣಕ್ಕೆ ಈ ಮಾತು ಪಕ್ಕಾ ಅನ್ವಯ ಆಗುತ್ತದೆ. ದುಡಿದು ಮನೆಗೆ ನೆರವಾಗು ಎಂದು ಬುದ್ದಿವಾದ ಹೇಳಿದಕ್ಕೆ ಒಡಹುಟ್ಟಿದ ಅಣ್ಣನನ್ನೇ ತಮ್ಮ ಭೀಕರವಾಗಿ ಕೊಲೆಗೈದು ಬಿಂದಾಸ್ ಆಗಿದ್ದ. ಯಾವುದೇ ಸುಳಿವು ಇಲ್ಲದ ಪ್ರಕರಣವನ್ನು ಬರೊಬ್ಬರಿ ಒಂದು ತಿಂಗಳ ಬಳಿಕ ಪೊಲೀಸರು ಭೇದಿಸಿದ್ದಾರೆ. ಕ್ಲಿಷ್ಟಕರ ಪ್ರಕರಣ ಬೆನ್ನತ್ತಿದ್ದ ಪೊಲೀಸರಿಗೆ ಮೂಕ ಪ್ರಾಣಿಗಳೇ ಕೊಲೆಯ ಮಹತ್ವ ಸುಳಿವು ಕೊಟ್ಟಿರುವುದು ವಿಶೇಷ. ಅದು ಹೇಗೆ ಅಂತೀರಾ ಈ ಸ್ಟೋರಿ ನೋಡಿ.
- Sahadev Mane
- Updated on: Jun 17, 2025
- 5:20 pm
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಬೆಳಗಾವಿ-ಗೋವಾ (Belagavi-Goa) ರಸ್ತೆ ಸಂಚಾರ ಮತ್ತೆ ಬಂದ್ ಆಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಇದಾಗಿದ್ದು, ಈ ಸೇತುವೆ ಕುಸಿಯುವ ಕೆಲವೇ ಸೆಕೆಂಡ್ ಹಿಂದೆ ಬಸ್ ಪಾಸ್ ಆಗಿದೆ. ಅದೃಷ್ಟವಶಾತ್ ಬಸ್ ದಾಟಿದ ಬಳಿಕ ಸೇತುವೆ ನದಿಗೆ ಕೊಚ್ಚಿ ಹೋಗಿದೆ.
- Sahadev Mane
- Updated on: Jun 15, 2025
- 1:37 pm
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್ಗೆ ವಂಚಿಸಿದ್ದವರು ಸಿಕ್ಕಿಬಿದ್ದರು
ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ 23 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಸಂಜನ್, ದಿವಾಕರ್ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರಕರಣ ಮಾಹಿತಿ ಬಿಚ್ಚಿಟ್ಟಿದ್ದಾರೆ.
- Sahadev Mane
- Updated on: Jun 10, 2025
- 9:45 pm
Laxman Savadi: ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಕಾರು ಅಪಘಾತ, ವಿಡಿಯೋ ನೋಡಿ
Laxman Savadi: ಮಾಜಿ ಉಪಮುಖ್ಯಮಂತ್ರಿ, ಕಾಂಗ್ರೆಸ್ ಹಾಲಿ ಶಾಸಕ ಲಕ್ಷ್ಮಣ್ ಸವದಿ ಅವರು ಕಾರು ಅಪಘಾತಕ್ಕೀಡಾಗಿದೆ. ಗೋಕಾಕ್ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಪಿಕಪ್ ವಾಹನ ಶಾಸಕ ಲಕ್ಷ್ಮಣ್ ಸವದಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಸಕರ ಕಾರಿನ ಮುಂಭಾಗದಲ್ಲಿ ಜಖಂ ಆಗಿದೆ.
- Sahadev Mane
- Updated on: Jun 9, 2025
- 8:23 pm