ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.
ಫ್ರಿಡ್ಜ್ ಸ್ಫೋಟದಿಂದ ನಾಲ್ವರು ಸಾವು ಕೇಸ್: ಚಿಕಿತ್ಸೆ ಫಲಿಸದೆ ತಂದೆ, ಮಗ ಸಾವು; ಫಲಿಸದ ಕುಟುಂಬಸ್ಥರ ಪ್ರಾರ್ಥನೆ
ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಫ್ರಿಡ್ಜ್ ಸ್ಫೋಟಗೊಂಡು ದಮೋನೆ ಕುಟುಂಬದ ಆರು ಸದಸ್ಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 14ರಂದು ನಡೆದ ಈ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ತಂದೆ ಮತ್ತು ಮಗ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
- Sahadev Mane
- Updated on: Sep 16, 2026
- 7:31 pm
ಆಸ್ತಿ ವಿವಾದ: ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ತಂದೆ, ಮಗಳ ಬರ್ಬರ ಹತ್ಯೆ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Sahadev Mane
- Updated on: Sep 16, 2026
- 6:46 pm
ಬೆಳಗಾವಿಯಲ್ಲಿ ಮತ್ತೊಂದು ದುರಂತ: ಸವದತ್ತಿ ಹೊರವಲಯದಲ್ಲಿ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರ ಸಾವು
ಗಣೇಶ ಮೆರವಣಿಗೆ ನೋಡಿ ಬೈಕ್ನಲ್ಲಿ ಹಿಂದಿರುಗುತ್ತಿದ್ದ ಮೂವರು ಯುವಕರು ಬೆಳಗಾವಿಯ ಸವದತ್ತಿ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬಲಿಯಾಗಿದ್ದಾರೆ. ಇದರೊಂದಿಗೆ, ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಬೆನ್ನಲ್ಲೇ ಜಿಲ್ಲೆಯಲ್ಲೇ ಮತ್ತೊಂದು ದುರಂತ ಸಂಭವಿಸಿದಂತಾಗಿದ್ದು, ಜಿಲ್ಲೆಯಲ್ಲಿ ಹಬ್ಬದ ಬೆನ್ನಲ್ಲೇ ಸೂತಕದ ಛಾಯೆ ಆವರಿಸಿದೆ.
- Sahadev Mane
- Updated on: Sep 15, 2026
- 9:45 am
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಭೀಕರ ಅಗ್ನಿ ಅವಘಡ, ಒಂದೇ ಕುಟುಂಬದ ನಾಲ್ವರು ಸಜೀವ ದಹನ
ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಗಣೇಶ ಚತುರ್ಥಿ ಹಬ್ಬದ ಶುಭದಿನವೇ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಇಬ್ಬರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ.
- Sahadev Mane
- Updated on: Sep 15, 2026
- 9:08 am
ನಾಪತ್ತೆಯಾಗಿದ್ದ ಗೃಹಿಣಿ ಕೊಲೆ; ಬೈಕ್ ಇಎಂಐಗಾಗಿ ಪ್ರೇಯಸಿಯನ್ನೇ ಹತ್ಯೆಗೈದಿದ್ದ ಆರೋಪಿ ಅಂದರ್
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣವನ್ನು ಮೂರು ತಿಂಗಳ ಬಳಿಕ ಪೊಲೀಸರು ಭೇದಿಸಿದ್ದಾರೆ. ಅನೈತಿಕ ಸಂಬಂಧ ಮತ್ತು ಹಣದಾಸೆಗಾಗಿ ಪ್ರಿಯಕರನೇ ಮಹಿಳೆಯ ಕೊಲೆ ಮಾಡಿರುವುದು ತನಿಖೆಯಲ್ಲಿ ಪತ್ತೆ ಆಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
- Sahadev Mane
- Updated on: Sep 13, 2026
- 4:11 pm
9 ಲಕ್ಷದಲ್ಲಿ ಕೇವಲ 1 ಲಕ್ಷ ಶಾಲಾ ಮಕ್ಕಳಿಗೆ ಕಳಪೆ ಶೂ-ಸಾಕ್ಸ್: 104 ಕೋಟಿ ಶೂ ಟೆಂಡರ್ ನಲ್ಲಿ ಅವ್ಯವಹಾರ ಆರೋಪ
ಸರ್ಕಾರಿ ಶಾಲೆಗಳು ಆರಂಭಗೊಂಡು ಎರಡೂವರೆ ತಿಂಗಳು ಆಗ್ತಾ ಬಂದ್ರೂ ಶೇಕಡಾ ಎಂಬತ್ತರಷ್ಟು ಶೂ ಮತ್ತು ಸಾಕ್ಸ್ ಗಳ ವಿತರಣೆ ಆಗಿಲ್ಲ. ಕೆಲವು ಕಡೆಗಳಲ್ಲಿ ಈಗಷ್ಟೇ ಶೂಗಳ ವಿತರಣೆ ಶುರು ಮಾಡಿದ್ದು, ಅವು ಕೂಡ ಕಳೆ ಮತ್ತು ಗುಣಮಟ್ಟದವುಗಳು ಇಲ್ಲಾ ಎನ್ನುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ವಿತರಣೆಯಾದ ಶೂ- ಸಾಕ್ಸ್ ಗಳು ಹರಿದು ಹಾಳಾಗ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಶೂ ವಿತರಣೆ ಆಗಿದೆ ಆಗಬೇಕಿರೋದು ಎಷ್ಟು? ಶೂ ವಿತರಣೆಯಲ್ಲಿ ಗೋಲ್ ಮಾಲ್ ಶಂಕೆ ವ್ಯಕ್ತವಾಗಿದ್ದು ರಾಜ್ಯದವರನ್ನ ಬಿಟ್ಟು ದೆಹಲಿ ಮೂಲದವರಿಗೆ ನೀಡಿದ್ದು ಹಲವು ಅನುಮಾನ ಹುಟ್ಟು ಹಾಕಿದೆ.
- Sahadev Mane
- Updated on: Sep 11, 2026
- 5:44 pm
ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ: 2 ವರ್ಷದ ಹಿಂದೆ ಇದೇ ದಿನ ಬೆಳಗಾವಿಗೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ನಡೆದಿದೆ. ಬೆಂಗಳೂರು, ಬೆಳಗಾವಿಯ ಮನೆ ಕಚೇರಿಗಳ ಮೇಲೆ ಇಂದು (ಸೆಪ್ಟೆಂಬರ್ 09) ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಕಾಕತಾಳಿಯ ಎಂಬಂತೆ ಕಳೆದ 2 ವರ್ಷದ ಹಿಂದೆ ಇದೇ ದಿನ ಬೆಳಗಾವಿಗೆ ಆಫ್ರಿಕಾದ ರುವಾಂಡಾ ಅಧಿಕಾರಿಗಳು ಭೇಟಿ ನೀಡಿದ್ದು, ಆಗ ಸತೀಶ್ ಜಾರಕಿಹೊಳಿ ಅವರು ತಮ್ಮ ಎರಡು ಶುಗರ್ ಫ್ಯಾಕ್ಟರಿಗಳನ್ನು ತೋರಿಸಿ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದರು. ಅಲ್ಲದೇ ಜಾರಕಿಹೊಳಿ ಸಹ ಎರಡ್ಮೂರು ಬಾರಿ ರುವಾಂಡಾಕ್ಕೆ ಹೋಗಿಬಂದಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಇಡಿ ದಾಳಿಯಾಗಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ.
- Sahadev Mane
- Updated on: Sep 9, 2026
- 3:15 pm
ಸತೀಶ್ ಜಾರಕಿಹೊಳಿ ಆಪ್ತರು ಮತ್ತು ಸಂಬಂಧಿಕರಿಗೂ ಇಡಿ ಬಿಸಿ: ಪರಿಶೀಲನೆ ವೇಳೆ ಮಹತ್ವದ ದಾಖಲೆಗಳು ಪತ್ತೆ
ಸತೀಶ್ ಜಾರಕಿಹೊಳಿ ನಿವಾಸ, ಅವರ ಮಗಳು ಪ್ರಿಯಾಂಕಾ, ಪುತ್ರ ರಾಹುಲ್ ಹಾಗೂ ಬಾಮೈದ ವೈ. ಮಂಜುನಾಥ್ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ಆಪ್ತ ವೈದ್ಯ ಗಿರೀಶ್ ಸೋನಾಲ್ಕರ್, ರಾಜು ಧರಗಶೆಟ್ಟಿ, ವಿಠಲ್ ಪರ್ಸನ್ನ ನಿವಾಸಗಳ ಮೇಲೂ ಶೋಧ ನಡೆದಿದೆ. ರೇಡ್ ವೇಳೆ ವಿದೇಶಿ ಹೂಡಿಕೆ ಸಂಬಂಧ ಮಹತ್ವದ ಆಸ್ತಿ ಪತ್ರಗಳು ಸೇರಿ ಹಲವು ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.
- Sahadev Mane
- Updated on: Sep 9, 2026
- 1:12 pm
ಕರ್ನಾಟಕ ಬರದಿಂದ ನಲುಗಿದ ರೈತ: ಬೆಳಗಾವಿಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶ, 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಸಂಕಷ್ಟ
ಕರ್ನಾಟಕ ಬರ ಪರಿಸ್ಥಿತಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳಗಾವಿಯಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಕರ್ನಾಟಕದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.
- Sahadev Mane
- Updated on: Sep 9, 2026
- 7:56 am
ಸವದತ್ತಿಯಲ್ಲಿ ಪತ್ತೆಯಾಯ್ತು ಪ್ರಾಚೀನ ಚಿನ್ನದ ನಾಣ್ಯಗಳ ನಿಧಿ
ಬೆಳಗಾವಿ ಜಿಲ್ಲೆಯ ಇಂಚಲ ಗ್ರಾಮದಲ್ಲಿ ಬಿ.ಸಿ.ಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ 14 ಚಿನ್ನದ ನಾಣ್ಯಗಳ ನಿಧಿ ಪತ್ತೆಯಾಗಿದೆ. ಪ್ರಾಮಾಣಿಕತೆ ಮೆರೆದ ಕಾರ್ಮಿಕರು, ಸಿಕ್ಕ ನಿಧಿಯನ್ನು ಪಿಡಿಓ ಮೂಲಕ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಚಿನ್ನದ ನಾಣ್ಯಗಳು ಗಂಗರ ಕಾಲಕ್ಕೆ ಸೇರಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
- Sahadev Mane
- Updated on: Sep 5, 2026
- 5:07 pm
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
ಬೆಳಗಾವಿಯಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ಹತ್ತು ದಿನ ಮುಂಚಿತವಾಗಿಯೇ ಸಂಭ್ರಮಾಚರಣೆ ಆರಂಭವಾಗಿದೆ. ರಾಜ ಗಣೇಶ ಮೂರ್ತಿಯನ್ನು ಚವಾಟ್ ಗಲ್ಲಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನಗರದಾದ್ಯಂತ ಭವ್ಯ ಮೆರವಣಿಗೆಯೊಂದಿಗೆ ಹಬ್ಬದ ವಾತಾವರಣ ಮನೆಮಾಡಿದ್ದು, ಭಕ್ತರು ಭಕ್ತಿಭಾವದಿಂದ ಗಣೇಶನನ್ನು ಸ್ವಾಗತಿಸಿದರು. ಈ ಬಾರಿಯ ಗಣೇಶೋತ್ಸವವನ್ನು ಮತ್ತಷ್ಟು ಅದ್ದೂರಿಯಾಗಿ ಆಚರಿಸಲು ಬೆಳಗಾವಿ ನಗರವು ಈಗಾಗಲೇ ಸಜ್ಜಾಗಿದೆ.
- Sahadev Mane
- Updated on: Sep 5, 2026
- 9:42 am
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ: ಅಧಿಕಾರಿಗಳಿಗೆ ಚಿನ್ನದ ನಾಣ್ಯಗಳ ಹಸ್ತಾಂತರ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ ಗಡಿಗೆಯೊಳಗೆ 14 ಚಿನ್ನದ ನಾಣ್ಯಗಳು ಪತ್ತೆಯಾಗಿವೆ. 54.8 ಗ್ರಾಂ ತೂಕದ, 8.27 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಕಾರ್ಮಿಕರು ಅಧಿಕಾರಿಗಳಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇದೀಗ, ಕೂಲಿ ಕಾರ್ಮಿಕರ ಪ್ರಮಾಣಿಕತೆ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
- Sahadev Mane
- Updated on: Sep 5, 2026
- 9:08 am