AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sahadev Mane

Sahadev Mane

Author - TV9 Kannada

sahadev.mane@tv9.com
ಬೆಳಗಾವಿಯಲ್ಲಿ ಬಸ್ ಸೌಕರ್ಯದ ಕೊರತೆ; ಜೀವದ ಹಂಗು ತೊರೆದು ಫುಟ್‌ಬೋರ್ಡ್ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು

ಬೆಳಗಾವಿಯಲ್ಲಿ ಬಸ್ ಸೌಕರ್ಯದ ಕೊರತೆ; ಜೀವದ ಹಂಗು ತೊರೆದು ಫುಟ್‌ಬೋರ್ಡ್ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು

ಬೆಳಗಾವಿಯಲ್ಲಿ KSRTC ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು ಪ್ರತಿದಿನ ಜೀವದ ಹಂಗು ತೊರೆದು ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಶಾಲಾ-ಕಾಲೇಜು ಸಮಯದ ಬಸ್‌ಗಳ ಸಂಖ್ಯೆ ವಿರಳವಾಗಿದ್ದು, ಸಣ್ಣ ಆಯತಪ್ಪಿದರೂ ದೊಡ್ಡ ದುರಂತ ಸಂಭವಿಸುವ ಭೀತಿ ಇದೆ. ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅಪಾಯಕಾರಿ ಪರಿಸ್ಥಿತಿಗೆ ಕಾರಣವಾಗಿದ್ದು, ಪೋಷಕರಿಂದ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಬಸ್ ಸೌಲಭ್ಯ ಹೆಚ್ಚಿಸುವಂತೆ ಒತ್ತಾಯ ಕೇಳಿಬಂದಿದೆ.

ಬೆಳಗಾವಿಯಲ್ಲಿ ಮತ್ತೊಂದು ಬಹುಕೊಟಿ ವಂಚನೆ ಪ್ರಕರಣ: 165 ಕೋಟಿ ರೂ. ದೋಖಾ

ಬೆಳಗಾವಿಯಲ್ಲಿ ಮತ್ತೊಂದು ಬಹುಕೊಟಿ ವಂಚನೆ ಪ್ರಕರಣ: 165 ಕೋಟಿ ರೂ. ದೋಖಾ

ಹೂಡಿಕೆದಾರರಿಗೆ ಹೆಚ್ಚಿನ ಬಡ್ಡಿ ಆಮಿಷ ತೋರಿಸಿ ನೂರಾರು ಕೋಟಿ ರೂಪಾಯಿ ವಂಚನೆ ನಡೆಸಿರುವ ಆರೋಪ ಬೆಳಗಾವಿಯಲ್ಲಿ ಕೇಳಿಬಂದಿದೆ. ಅಪೆಕ್ಸ್​ ಬಿಜ್ ಕಾರ್ಪ್ LLP ಸಂಸ್ಥೆಯಿಂದ ಮೋಸ ನಡೆದಿದ್ದು, ಮಾಲೀಕರಾದ ಕಾಶೀನಾಥ್ ವಾಗ್ಮೋರೆ ಮತ್ತು ಗಣೇಶ್ ಭಂಡಾರಿ ಕಚೇರಿಗೆ ಬೀಗ ಜಡಿದು ಪರಾರಿಯಾಗಿದ್ದಾರೆ. ಹೂಡಿಕೆದಾರರ ದೂರಿನನ್ವಯ ಎಫ್ಐಆರ್ ದಾಖಲಾಗಿದ್ದು,50 ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿರುವುದರಿಂದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗುತ್ತೆ ಎಂದು ಬೆಳಗಾವಿ ನಗರ ಪೊಲೀಸ್ ಕಮಿಷನರ್​ ಭೂಷಣ್ ಬೊರಸೆ ತಿಳಿಸಿದ್ದಾರೆ.

ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ ಎಂದ ಸತೀಶ್ ಜಾರಕಿಹೊಳಿ

ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ ಎಂದ ಸತೀಶ್ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೋಳಿ ಚಿಕ್ಕೋಡಿಗೆ ಭೇಟಿ ನೀಡಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿದರು. ನಿರೀಕ್ಷೆಗಿಂತ ಕಡಿಮೆ ಮಳೆಯಾಗಿದ್ದರೂ, ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ, ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಪ್ರತಿಕ್ರಿಯಿಸಿದರು. ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ಅಥಣಿಯಲ್ಲಿ ಭೀಕರ ದುರಂತ: ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು

ಅಥಣಿಯಲ್ಲಿ ಭೀಕರ ದುರಂತ: ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ದುರಂತವೊಂದು ನಡೆದಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸೋರುತ್ತಿದ್ದ ಮನೆಯನ್ನು ದುರಸ್ತಿ ಮಾಡುವಾಗ ಮನೆ ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಐಗಳಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.

ಆರ್‌ಎಸ್‌ಎಸ್​​ ಸಭೆ ಮುಕ್ತಾಯ: ರಾಮಮಂದಿರ ದೇಣಿಗೆ ದುರ್ಬಳಕೆಗೆ ವಿಷಾದ, ಜನಸಂಖ್ಯೆ ಅಸಮತೋಲನದ ಬಗ್ಗೆ ಕಳವಳ

ಆರ್‌ಎಸ್‌ಎಸ್​​ ಸಭೆ ಮುಕ್ತಾಯ: ರಾಮಮಂದಿರ ದೇಣಿಗೆ ದುರ್ಬಳಕೆಗೆ ವಿಷಾದ, ಜನಸಂಖ್ಯೆ ಅಸಮತೋಲನದ ಬಗ್ಗೆ ಕಳವಳ

Belagavi RSS Meeting End: ಬೆಳಗಾವಿಯಲ್ಲಿ ನಡೆದ ಆರ್‌ಎಸ್‌ಎಸ್‌ನ ಮೂರು ದಿನಗಳ ವಾರ್ಷಿಕ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ಮೋಹನ್​ ಭಾಗವತ್‌, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸೇರಿದಂತೆ 226 ಪ್ರಚಾರಕರು ಭಾಗಿಯಾಗಿದ್ದರು. 2026ರ ಶಾಖಾ ವಿಸ್ತರಣೆ ಮತ್ತು ಪ್ರಶಿಕ್ಷಣ ವರ್ಗಗಳ ವಿಶ್ಲೇಷಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಳೆ ಅಬ್ಬರಕ್ಕೆ ಅಂಬೋಲಿ ಫಾಲ್ಸ್​​ಗೆ ಜೀವ ಕಳೆ: ಜಲಪಾತ ನೋಡಲು ಮುಗಿಬಿದ್ದ ಪ್ರವಾಸಿಗರು

ಮಳೆ ಅಬ್ಬರಕ್ಕೆ ಅಂಬೋಲಿ ಫಾಲ್ಸ್​​ಗೆ ಜೀವ ಕಳೆ: ಜಲಪಾತ ನೋಡಲು ಮುಗಿಬಿದ್ದ ಪ್ರವಾಸಿಗರು

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಜಲಪಾತಗಳಿಗೆ ಜೀವಕಳೆ ಬಂದಿವೆ. ಆದರೆ ಬೆಳಗಾವಿ ಜಿಲ್ಲೆಯ ಜಲಪಾತಗಳಿಗೆ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ, ನೂರು ಅಡಿ ಎತ್ತರದಿಂದ ಧುಮ್ಮಿಕ್ಕುವ ಮಹಾರಾಷ್ಟ್ರದ ಪ್ರಸಿದ್ಧ ಅಂಬೋಲಿ ಜಲಪಾತದತ್ತ ಪ್ರವಾಸಿಗರು ಕುಟುಂಬ ಸಮೇತ ಲಗ್ಗೆ ಇಡುತ್ತಿದ್ದಾರೆ.

ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ ಡಿಕೆ ಶಿವಕುಮಾರ್

ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ ಡಿಕೆ ಶಿವಕುಮಾರ್

ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಪ್ರಧಾನಿ ಮೋದಿಯವರ ಎಚ್ಚರಿಕೆ ಕುರಿತು ಪ್ರಸ್ತಾಪಿಸಿದರು. ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಮತ್ತು ಹೂಳು ಸಮಸ್ಯೆ ಪರಿಹರಿಸಲು ಆಂಧ್ರ, ತೆಲಂಗಾಣ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಡಿಕೆ ಶಿವಕುಮಾರ್​​

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಡಿಕೆ ಶಿವಕುಮಾರ್​​

DK Shivakumar on Irrigation Projects: ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ನದಿ ಜೋಡಣೆಗೆ 1 ಲಕ್ಷ ಕೋಟಿ ರೂ. ಯೋಜನೆಗೆ ಮುಂದಅಗಿರೋದಾಗಿ ತಿಳಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ನೀರಿನ‌ ಸಮಸ್ಯೆ ಬಹಳ‌ ಇರುವ ಕಾರಣ ಗ್ರಾಮೀಣ ಕ್ಷೇತ್ರದ ಎಲ್ಲ ಶಾಸಕರಿಗೆ 1 ಕೋಟಿ ಅನುದಾನ ನೀಡುತ್ತೇವೆ. ಕುಡಿಯುವ ನೀರಿಗೆ ಕೊರತೆ ಆಗಬಾರದೆಂದು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಎಡವಟ್ಟು: ಶಾಲಾ ಮಕ್ಕಳನ್ನು ಬಳಸಿಕೊಂಡ ಮತಗಟ್ಟೆ ಅಧಿಕಾರಿಗಳು

ಬೆಳಗಾವಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಎಡವಟ್ಟು: ಶಾಲಾ ಮಕ್ಕಳನ್ನು ಬಳಸಿಕೊಂಡ ಮತಗಟ್ಟೆ ಅಧಿಕಾರಿಗಳು

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ - 2026: ಕರ್ನಾಟಕದಲ್ಲಿ ಎಸ್​​ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಹಲವೆಡೆ ಕೆಲ ಎಡವಟ್ಟುಗಳು ಆಗುತ್ತಿವೆ. ಚುನಾವಣೆ ಆಯೋಗವು ಬಿಎಲ್​​​ಒಗಳಿಗೆ ಮತದಾರರ ಮನೆ ಮನೆಗೆ ತೆರಳಿ ಎಸ್​​​ಐಆರ್ ಮಾಡುವಂತೆ ಹೇಳಿದೆ. ಆದ್ರೆ, ಕೆಲ ಬಿಎಲ್​​​ಒಗಳು ದೇವಸ್ಥಾನ, ಮಸೀದಿ, ಊರಿನ ಕಟ್ಟೆಗಳಲ್ಲಿ ಕುಳಿತು ಎಸ್​​ಐಆರ್ ಪ್ರಕ್ರಿಯೆ ಮಾಡುತ್ತಿರುವುದು ಕಂಡುಬಂದಿದೆ. ಇದರ ಮಧ್ಯೆ ಇದೀಗ ಬೆಳಗಾವಿಯಲ್ಲಿ ಎಸ್​​ಐಆರ್​​​ಗೆ ಶಾಲಾ ಮಕ್ಕಳನ್ನು ಬಳಕೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠದ ಗ್ರಾಮಸ್ಥರನ್ನು ಬಿಎಲ್​​​ಒಗಳು ಶಾಲೆಗೆ ಕರೆಸಿ ಎಸ್ಐಆರ್ ಮಾಡುತ್ತಿದ್ದು,ಫೋಟೋ ಅಂಟಿಸಲು ಮತ್ತು ಫಾರಂ ತುಂಬಲು ವಿದ್ಯಾರ್ಥಿಗಳನ್ನು ಬಳಕೆ ಮಾಡಲಾಗಿದೆ.

ಮಹಾ ಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ

ಮಹಾ ಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಸದ್ಯ ನದಿಗೆ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಹರಿದುಬರುತ್ತಿದ್ದು, ಚಿಕ್ಕೋಡಿ ತಾಲೂಕಿನ ಮಾಂಜರಿ ಮತ್ತು ಅಂಕಲಿ ಭಾಗದಲ್ಲಿ ಜಮೀನುಗಳಿಗೆ ನೀರು ನುಗ್ಗಿದೆ. ಬೆಳೆ ಹಾನಿಯ ಭೀತಿಯಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿ

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿ

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಕೆಲವು ಕಡೆಗಳನ್ನು ಸೇತುವೆಗಳು ಮುಳುಗಡೆಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ಸದ್ಯಕ್ಕೆ ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧವಿದೆ. ಬೆಳಗಾವಿಯಲ್ಲಿ ಈವರೆಗೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ವ್ಯಾಪ್ತಿಯಲ್ಲಿ 7 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ನದಿಗಳಿಗೂ ಒಳಹರಿವು ಹೆಚ್ಚಳವಾಗಿದೆ. ಮಳೆಯಿಂದ ಬೆಳಗಾವಿಗೆ ಕುಡಿಯುವ ನೀರಿನ ಸಮಸ್ಯೆ ದೂರ ಆಗಿದೆ. ಈವರೆಗೆ ಜಿಲ್ಲೆಯಲ್ಲಿ ಮಳೆಗೆ 5 ಮನೆಗಳಿಗೆ ಹಾನಿಯಾಗಿದೆ. ಸದ್ಯಕ್ಕೆ ಜಲಪಾತಗಳು ಸೇಫ್ ಇಲ್ಲ, ಹೀಗಾಗಿ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!; ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!; ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಗೆ ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ದೈತ್ಯ ಮರವೊಂದು ಮುರಿದು ಬಿದ್ದಿದೆ. ಶಿವೋಲಿ ಗ್ರಾಮದ ರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಟ್ರ್ಯಾಕ್ಟರ್‌ನ ಮುಂಭಾಗ ಭಾರಿ ಹಾನಿಗೊಳಗಾಗಿದ್ದು, ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ನೆರವಾಗಿದ್ದಾರೆ. ಮಳೆಗಾಲದಲ್ಲಿ ಸುರಕ್ಷತೆಯ ಬಗ್ಗೆ ಈ ಘಟನೆ ಎಚ್ಚರಿಕೆ ನೀಡಿದೆ.