ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದ ಸಿದ್ದೇಶ್ವರ ಜಾತ್ರೆ ವೇಳೆ ಒಂದು ಭಯಾನಕ ಘಟನೆ ನಡೆದಿದೆ. ವಿರೋಧಿಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಹತ್ಯೆಗೈಯಲಾಗಿದೆ. ಘಟನೆ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು ಎಂಟು ಆರೋಪಿಗಳನ್ನು ಬಂಧಿಸಲಾಗಿದೆ.
- Sahadev Mane
- Updated on: Apr 8, 2026
- 4:51 pm
ವಿಚ್ಛೇದಿತ ಮಹಿಳೆಗೂ, ಮನೆ ಕಟ್ಟಲು ಬಂದ ಗೌಂಡಿಗೂ ಲವ್: ಆಸ್ತಿಗಾಗಿ ನಡೆದಿದ್ದು ಭೀಕರ ಕೊಲೆ!
ಆಕೆ ಗಂಡನಿಗೆ ಡಿವೋರ್ಸ್ ಕೊಟ್ಟು ತವರಿಗೆ ಬಂದು ಜೀವನ ನಡೆಸುತ್ತಿದ್ದಾಕೆ. ಸ್ವಂತದೊಂದು ಮನೆ ಕಟ್ಟಿಕೊಳ್ಳುವ ಆಸೆ ಹೊಂದಿದ್ದ ಈಕೆಗೆ ಗೌಂಡಿಯೊಬ್ಬನ ಪರಿಚಯವಾಗಿತ್ತು. ಆತನ ಬಣ್ಣದ ಮಾತುಗಳನ್ನ ನಂಬಿ ಮಹಿಳೆ ಹಾಸಿಗೆಯನ್ನೂ ಹಂಚಿಕೊಂಡಿದ್ದಳು. ಆದ್ರೆ ಬರ ಬರುತ್ತಾ ಆತನ ಅಸಲಿ ಮುಖ ಅನಾವರಣವಾಗಿದೆ. ಮನೆ ಕಟ್ಟಲು ಬಂದವ ಅದೇ ಮನೆ ಮೇಲೆ ಕಣ್ಣು ಹಾಕಿದ್ದು, ವಿಚ್ಚೇದಿತ ಮಹಿಳೆಯ ಭೀಕರ ಕೊಲೆ ನಡೆದಿದೆ.
- Sahadev Mane
- Updated on: Apr 7, 2026
- 4:25 pm
ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
ಬೆಳಗಾವಿ ಜಿಲ್ಲೆಯಲ್ಲಿ ದಂಪತಿ ಒಂದೇ ದಿನ ಸಾವನ್ನಪ್ಪಿದ್ದು, ಮೂವರು ಮಕ್ಕಳು ಅನಾಥರಾಗಿದ್ದಾರೆ. ಬೈಲಹೊಂಗಲದ ಮಧುರಾ (30) ಹೊಟ್ಟೆನೋವಿನಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಪತಿ ಕರೆಪ್ಪ (36) ಈ ಸುದ್ದಿ ಕೇಳಿ ಆಸ್ಪತ್ರೆಗೆ ಧಾವಿಸುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ದುರಂತ ಕುಟುಂಬದಲ್ಲಿ ಶೋಕ ಆವರಿಸಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
- Sahadev Mane
- Updated on: Apr 6, 2026
- 2:09 pm
ಬಣ್ಣದ ಮಾತಿಗೆ ಮರುಳಾದ ಯುವತಿ ಬದುಕು ಬರಡು: ಅಶ್ಲೀಲ ವಿಡಿಯೋ ಇಟ್ಟುಕೊಂಡು 19 ಲಕ್ಷ ರೂ. ಲೂಟಿ
ಬೆಳಗಾವಿಯ ಶಹಾಪುರದಲ್ಲಿ ಅಮಾನವೀಯ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತ ಯುವತಿಯನ್ನು ಪ್ರೀತಿಸುವ ಸೋಗಿನಲ್ಲಿ ಮದುವೆಯಾಗುವ ನೆಪದಲ್ಲಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದಾನೆ. ನಂತರ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ 150 ಗ್ರಾಂ ಚಿನ್ನಾಭರಣ ಹಾಗೂ 19 ಲಕ್ಷ ರೂ. ಹಣವನ್ನು ಲೂಟಿ ಮಾಡಿದ್ದಾನೆ. ಈ ಪ್ರಕರಣದಲ್ಲಿ ಶಹಾಪುರ ಪೊಲೀಸರ ಪಾತ್ರದ ಬಗ್ಗೆ ಸಂತ್ರಸ್ತೆ ಅನುಮಾನ ವ್ಯಕ್ತಪಡಿಸಿದ್ದಾರೆ.
- Sahadev Mane
- Updated on: Apr 6, 2026
- 1:21 pm
ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ತಾಯಿ-ಮಗನಿಗೆ ಗಾಯ
ಬೆಳಗಾವಿಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಭೀಕರ ಬಿರುಗಾಳಿ ಮಳೆಯಿಂದ ಭಾರೀ ಅನಾಹುತ ಸಂಭವಿಸಿದೆ. ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು, ಮನೆಯಲ್ಲಿದ್ದ ನೀಲವ್ವ (70) ಮತ್ತು ಅವರ ಮಗ ಉಳವಪ್ಪ (37) ತೀವ್ರವಾಗಿ ಗಾಯಗೊಂಡಿದ್ದಾರೆ. ಗ್ರಾಮಸ್ಥರು ತಕ್ಷಣ ರಕ್ಷಣಾ ಕಾರ್ಯದಲ್ಲಿ ತೊಡಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಕಾಲಿಕ ಮಳೆಯಿಂದ ಮನೆಗೆ ಹಾನಿ, ದಿನಬಳಕೆ ವಸ್ತುಗಳು ನಾಶವಾಗಿವೆ.
- Sahadev Mane
- Updated on: Apr 2, 2026
- 9:44 am
ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು
ಬೇಸಿಗೆ ರಜೆ ಶುರುವಾಗಿದೆ. ಅದರ ಬೆನ್ನಲ್ಲೇ ರಾಜ್ಯದಲ್ಲಿ ಕೆಲ ಕಹಿ ಘಟನೆಗಳು ಸಂಭವಿಸುತ್ತಿವೆ. ಕೆರೆಗಳಲ್ಲಿ ಈಜಲು ಹೋಗಿ ಅಪ್ರಾಪ್ತ ಬಾಲಕರು ಸಾವನ್ನಪ್ಪುತ್ತಿದ್ದಾರೆ. ನಿನ್ನೆ ಯಾದಗಿರಿಯಲ್ಲಿ ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ಜಲಸಮಾಧಿ ಆಗಿದ್ದರು. ಇದೇ ರೀತಿಯಾಗಿ ಇಂದು ಬೆಳಗಾವಿ, ಗದಗ, ಚಿತ್ರದುರ್ಗ ಮತ್ತು ತುಮಕೂರಿನಲ್ಲೂ ಘಟನೆಗಳು ಸಂಭವಿಸಿವೆ.
- Sahadev Mane
- Updated on: Mar 30, 2026
- 9:05 pm
ಪ್ರಧಾನಿ ಮೋದಿ ಮನಮೆಚ್ಚಿದ ಬೆಳಗಾವಿ ರೈತನ ಸಾಧನೆ ಬಗ್ಗೆ ತಿಳಿಯಿರಿ
ಬೆಳಗಾವಿಯ ರೈತನ ಮೀನು ಸಾಕಾಣಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಫಿದಾ ಆಗಿದ್ದಾರೆ. ಅವರ ಸಾಧನೆ ಕಂಡು ಇಂದಿನ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಾಡಿಹೊಗಳಿದ್ದಾರೆ. ಆ ಮೂಲಕ ಕನ್ನಡಿಗ ಕೃಷಿಕನ ಹೆಸರು ದೇಶಾದ್ಯಂತ ಮೊಳಗಿದೆ. ಹಾಗಾದರೆ ಯಾರು ಈ ರೈತ, ಅವರು ಮಾಡಿದ ಸಾಧನೆಯಾದರೂ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
- Sahadev Mane
- Updated on: Mar 29, 2026
- 8:39 pm
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್ ಭೇಟಿ: ಶ್ರೀಗಳ ನೇತೃತ್ವದಲ್ಲಿ ತುಲಾಭಾರ
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದರು. ಅವರು ಪೂಜೆ ಸಲ್ಲಿಸಿ, ಗೋ ತುಲಾಭಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶ್ರೀಶೈಲ ಜಗದ್ಗುರು ಶ್ರೀಗಳ ನೇತೃತ್ವದಲ್ಲಿ ಗೋವುಗಳಿಗೆ ಮೇವು ಹಾಕಿ ಗೋ ಪೂಜೆ ನೆರವೇರಿಸಿದರು.
- Sahadev Mane
- Updated on: Mar 28, 2026
- 2:44 pm
ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: ಗೋವಾ ಮೂಲದ ಖೋಟಾ ನೋಟ್ ಗ್ಯಾಂಗ್ ಲಾಕ್
ಬೆಳಗಾವಿಯಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನಿಸಿದ್ದ ಗೋವಾ ಮೂಲದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಆ ಮೂಲಕ ಖೋಟಾ ನೋಟು ದಂಧೆಯನ್ನು ಬಯಲಿಗೆ ಎಳೆದಿದ್ದಾರೆ. ಬೆಳಗಾವಿ ಪೊಲೀಸ್ ಕಮಿಷನರ್ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸದ್ಯ ನಾಲ್ವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
- Sahadev Mane
- Updated on: Mar 26, 2026
- 6:37 pm
ಬೆಳಗಾವಿಯಲ್ಲಿ ಪೆಟ್ರೋಲ್, ಡಿಸೇಲ್ ಅಭಾವ? ಬಂಕ್ಗಳಿಗೆ ಏಕಾಏಕಿ ಮುಗಿಬಿದ್ದ ಜನ
ಬೆಳಗಾವಿಯಲ್ಲಿ ನಾಲ್ಕು ದಿನಗಳ ಕಾಲ ಪೆಟ್ರೋಲ್ ಸಿಗುವುದಿಲ್ಲ ಎಂಬ ಸಾಮಾಜಿಕ ಜಾಲತಾಣದ ವದಂತಿಯ ಪರಿಣಾಮ ಇಂಧನ ಬಂಕ್ಗಳಲ್ಲಿ ಭಾರೀ ನೂಕುನುಗ್ಗಲು ಉಂಟಾಗಿದೆ. ವಾಹನ ಸವಾರರು ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದು, ಅಜಮ್ ನಗರ, ಕೊಲ್ಲಾಪುರ ಸರ್ಕಲ್ ಸೇರಿದಂತೆ ಹಲವೆಡೆ ಜನಸಾಗರ ಕಂಡುಬಂತು. ಬಂಕ್ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.
- Sahadev Mane
- Updated on: Mar 24, 2026
- 10:06 am
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು?
ಅವರಿಬ್ಬರೂ ಹದಿನೈದು ವರ್ಷದ ಹಿಂದೆ ಪ್ರೀತಿಸಿ ಕುಟುಂಬಸ್ಥರ ವಿರೋಧದ ನಡುವೆಯೂ ಅಂತರ್ಜಾತಿ ಮದುವೆಯಾದವರು. ಮೂರು ಮುದ್ದಾದ ಮಕ್ಕಳು ಈ ದಂಪತಿ ಅನ್ಯೋನ್ಯತೆಗೆ ಸಾಕ್ಷಿಯಾಗಿದ್ದರು. ಆದರೀಗ ಅದೊಂದು ಕಾರಣಕ್ಕೆ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಪತಿ ಮನೆಯಿಂದ ಎಳೆತಂದು ಕಲ್ಲಿನಿಂದ ಜಜ್ಜಿ ನಡು ರಸ್ತೆಯಲ್ಲೇ ಬರ್ಬರ ಹತ್ಯೆ ಮಾಡಿದ್ದಾನೆ. ಈ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಿವಕ್ಕ ಹಾಗೂ ಬಸವರಾಜ 15 ವರ್ಷಗಳ ಹಿಂದೆ ಪ್ರೀತಿಸಿ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದರು. ಶಿವಕ್ಕ ಮೊದಲ ಪತಿ ಅಕಾಲಿಕ ಮರಣದ ನಂತರ ತನ್ನದೇ ಗ್ರಾಮದ ಬಸವರಾಜನನ್ನ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು.
- Sahadev Mane
- Updated on: Mar 23, 2026
- 8:21 pm
ಬೆಳಗಾವಿ: ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದ ಅದೊಂದು ಘಟನೆಗೆ ಇಡೀ ಗ್ರಾಮದ ಜನರು ಬೆಚ್ಚಿಬಿದ್ದಿದ್ದಾರೆ. ಪ್ರೀತಿಸಿ ಮದುವೆಯಾದ ಹೆಂಡತಿಗೆ ಪತಿಯೇ ಚಟ್ಟಕಟ್ಟಿದ್ದಾನೆ. ಆ ಮೂಲಕ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Sahadev Mane
- Updated on: Mar 23, 2026
- 3:19 pm