ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆಸ್ತಿ ವಿವಾದ (3 ಎಕರೆ) ಹಾಗೂ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಕೊಲೆಯಾಗಿದ್ದು, ಪತ್ನಿ ಮತ್ತು ಪುತ್ರನ ಸಾಥ್ನಿಂದಲೇ ಕೃತ್ಯ ನಡೆದಿದೆ ಎಂಬುದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಸದ್ಯ ಘಟನೆ ಸಂಬಂಧ ನಾಲ್ವರನ್ನು ಬಂಧಿಸಿ, ತನಿಖೆ ಮುಂದುವರೆಸಲಾಗಿದೆ.
- Sahadev Mane
- Updated on: Feb 26, 2026
- 10:32 am
ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸು, ಆಸ್ತಿ ಮತ್ತು ಪ್ರೇಮ ಸಂಬಂಧಿತ ಕಾರಣಗಳಿಂದ ಈ ಹತ್ಯೆ ನಡೆದಿರಬಹುದೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ, ಬೆಳಗಾವಿ ತಾಲೂಕಿನಲ್ಲಿ ತಾಯಿ ನಿಧನದಿಂದ ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ರಕ್ಷಿಸಲಾಗಿದೆ.
- Sahadev Mane
- Updated on: Feb 22, 2026
- 12:51 pm
ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!
ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗ್ನ ಕರಾಳ ಮುಖ ಬಯಲಾಗಿದೆ. ಬಂಧಿತರ ಮೊಬೈಲ್ಗಳಲ್ಲಿ 100ಕ್ಕೂ ಹೆಚ್ಚು ನಗ್ನ ವಿಡಿಯೋಗಳು ಪತ್ತೆಯಾಗಿದ್ದು, ಇತರೆ ಅಧಿಕಾರಿಗಳನ್ನೂ ಟಾರ್ಗೆಟ್ ಮಾಡಿ ಲಕ್ಷಾಂತರ ರೂ. ವಸೂಲಿ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.
- Sahadev Mane
- Updated on: Feb 21, 2026
- 9:48 am
400 ಕೋಟಿ ರೂ. ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಮಹಾರಾಷ್ಟ್ರ ಎಸ್ಐಟಿ ತನಿಖಾ ವರದಿಯಲ್ಲಿ ಸ್ಫೋಟಕ ಅಂಶ!
ಚೋರ್ಲಾ ಘಾಟ್ನಲ್ಲಿ ನಡೆದಿತ್ತು ಎನ್ನಲಾಗಿದ್ದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮಹಾರಾಷ್ಟ್ರ ಎಸ್ಐಟಿ ತನಿಖಾ ವರದಿ ಪ್ರಕಾರ, ದರೋಡೆ ನಡೆದಿದ್ದಕ್ಕೆ ಯಾವುದೇ ಸಾಕ್ಷ್ಯ ದೊರೆತಿಲ್ಲ. ಸಂದೀಪ್ ಪಾಟೀಲ್ ನೀಡಿದ ದೂರು ಸುಳ್ಳು ಎಂದಿರುವುದಾಗಿ ಮೂಲಗಳು ತಿಳಿಸಿವೆ. ಇದೀಗ ಪಾಟೀಲ್ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ ನಡೆದಿದೆ ಎಂದೂ ಹೇಳಲಾಗಿದೆ.
- Sahadev Mane
- Updated on: Feb 16, 2026
- 10:25 am
ಬೆಳಗಾವಿಯಲ್ಲಿ 400 ಕೋಟಿ ರೂ ದರೋಡೆ ಕೇಸ್ಗೆ ಟ್ವಿಸ್ಟ್: SIT ವಿರುದ್ಧವೇ ಸ್ಫೋಟಕ ಆರೋಪ
ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿರುವ 400 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡದ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಹೈಕೋರ್ಟ್ಗೆ ದೂರು ನೀಡಿದ್ದಾರೆ. ಆ ಮೂಲಕ ತನಿಖೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಳಗಾವಿ ಎಸ್ಪಿಗೂ ಪತ್ರ ಬರೆದಿರುವ ಸಂದೀಪ್, ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
- Sahadev Mane
- Updated on: Feb 15, 2026
- 3:59 pm
ಬೆಳಗಾವಿ ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಪತ್ತೆ: ಇದರ ಹಿಂದಿದೆ ಒಂದು ಜಾಲ
ಬೆಳಗಾವಿಯ ಮಲಪ್ರಭಾ ನದಿಯಲ್ಲಿ ಮೂರು ಬೈಕ್ಗಳು ಪತ್ತೆಯಾಗಿವೆ. ಡಿಸೆಂಬರ್ 22ರಂದು ಸವದತ್ತಿಯ ಚಿನ್ನದಂಗಡಿ ದರೋಡೆಗೆ ಬಳಸಲಾದ ಬೈಕ್ಗಳು ಇವು ಎಂದು ತಿಳಿದುಬಂದಿದೆ. ಚಡ್ಡಿ ಗ್ಯಾಂಗ್ 12 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿ, ಕೃತ್ಯದ ನಂತರ ನದಿಗೆ ಬೈಕ್ಗಳನ್ನು ಎಸೆದಿತ್ತು. ಒಂದೂವರೆ ತಿಂಗಳ ನಂತರ ಬೈಲಹೊಂಗಲ ಬಳಿ ಪತ್ತೆಯಾಗಿವೆ.
- Sahadev Mane
- Updated on: Feb 11, 2026
- 8:40 pm
ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ
ಬೆಳಗಾವಿ, ಫೆಬ್ರವರಿ 11: ಸುಮಾರು 20 ವರ್ಷಗಳ ಹಿಂದೆ ಆ ಮಕ್ಕಳ ತಂದೆ-ತಾಯಿ ತೀರಿಕೊಂಡಿದ್ದರು. ಕುಟುಂಬದವರೇ ಅವರನ್ನು ಸಾಕಲು ಹಿಂದೇಟು ಹಾಕಿದ್ದರು. ಹಿಂದೆ ಮುಂದೆ ನೋಡದೆ ಅವರಿಬ್ಬರನ್ನೂ ದತ್ತು ಸ್ವೀಕರಿಸಿದ್ದ ಮೆಹಬೂಬ್ ಹಾಗೂ ನೂರ್ಜಾನ್ ದಂಪತಿ ಹಿಂದು ಸಂಪ್ರದಯದಂತೆಯೇ ಆ ಮಕ್ಕಳನ್ನು ಬೆಳೆಸಿದ್ದಾರೆ. ಈಗ ದೊಡ್ಡವನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆಯನ್ನೂ ಮಾಡಿಸಿ ಮಾದರಿಯಾಗಿದ್ದಾರೆ.
- Sahadev Mane
- Updated on: Feb 11, 2026
- 2:42 pm
“ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ
ಬೆಳಗಾವಿ ಜಿಲ್ಲೆಯ ಹೊಸೂರ ಗ್ರಾಮದ ಸಕ್ಕುಬಾಯಿ ದಿಡಗಣ್ಣವರ್ ಅವರ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪತಿ ನಾಗಪ್ಪ ದಿಡಗಣ್ಣವರ್ ವಿರುದ್ಧ ಸಕ್ಕುಬಾಯಿ ಕುಟುಂಬ ಕೊಲೆ ಆರೋಪ ಮಾಡಿದೆ. 11 ವರ್ಷಗಳ ದಾಂಪತ್ಯದಲ್ಲಿ ನಿರಂತರ ಕಿರುಕುಳ, ಕೌಟುಂಬಿಕ ಕಲಹಗಳು ಸಕ್ಕುಬಾಯಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Sahadev Mane
- Updated on: Feb 10, 2026
- 7:53 pm
10 ವರ್ಷಗಳಿಂದ ಕೇವಲ ಎಲೆಗಳನ್ನು ತಿಂದು ಗುಡ್ಡದಲ್ಲಿ ಬದುಕುತ್ತಿದ್ದಾನೆ ಈ ವ್ಯಕ್ತಿ! ವೈದ್ಯಲೋಕಕ್ಕೂ ಸವಾಲಾದ ಯುವಕ
ಕುರಿ, ಮೇಕೆಗಳೇನೋ ಎಲೆಗಳನ್ನು ತಿಂದು ಬದುಕುತ್ತವೆ. ಆದರೆ ಮನುಷ್ಯರೂ ಹಾಗೆ ವರ್ಷಾನುಗಟ್ಟಲೆ ಬರೇ ಎಲೆ, ಸೊಪ್ಪುಗಳನ್ನು ತಿಂದು ಬದುಕಲು ಸಾಧ್ಯವೇ? ಹೌದೆಂಬುದು ಬೆಳಗಾವಿಯ ಸವದತ್ತಿ ತಾಲೂಕಿನ ಉಗರಗೊಳ್ಳ ಗ್ರಾಮದ ಬುಡನ್ ಖಾನ್ ಹೊಸಮನಿ ಎಂಬಾತನ ಜೀವನದಿಂದ ದೃಢಪಟ್ಟಿದೆ. ಈತ ಕಳೆದ ಹತ್ತು ವರ್ಷಗಳಿಂದ ಎಲೆಗಳನ್ನಷ್ಟೇ ತಿಂದು ಬದುಕುತ್ತಿದ್ದು, ವೈದ್ಯಕೀಯ ಲೋಕಕ್ಕೂ ಸವಾಲಾಗಿದ್ದಾನೆ.
- Sahadev Mane
- Updated on: Feb 9, 2026
- 1:40 pm
ಊರಿಗೆಲ್ಲ ಊಟ ಹಾಕಿಸಿ ಮಗನಂತಿರುವ ಕೋಣದ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ರೈತ
ಬೆಳಗಾವಿಯ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ತಮ್ಮ ಕೋಣ ಶಾಮ್ನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಮಗನ ಮದುವೆಯಂತೆ ಮನೆ ಮುಂದೆ ಪೆಂಡಾಲ್ ಹಾಕಿ, ಕೇಕ್ ಕತ್ತರಿಸಿ, ಊರಿನ 300ಕ್ಕೂ ಹೆಚ್ಚು ಜನರಿಗೆ ಊಟ ಹಾಕಿಸಿದ್ದಾರೆ. ಪ್ರಾಣಿಗಳ ಮೇಲೆ ಸಂಜಯ್ ಅವರ ಅಪಾರ ಪ್ರೀತಿ ಮತ್ತು ಕಾಳಜಿಯನ್ನು ಈ ಘಟನೆ ಎತ್ತಿ ತೋರಿಸುತ್ತದೆ, ಇದು ಇತರರಿಗೆ ಮಾದರಿಯಾಗಿದೆ.
- Sahadev Mane
- Updated on: Feb 7, 2026
- 9:57 pm
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi) ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ 'ಬಾಕ್ಸ್ ಕ್ರಿಕೆಟ್' ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ. ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ ನೆರವೇರಿತು. ಉದ್ಘಾಟನೆಯ ಪ್ರಯುಕ್ತ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ಗೆ ಇಳಿದರು. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ ಬೌಲಿಂಗ್ಗೆ ಸತೀಶ್ ಜಾರಕಿಹೊಳಿ 'ಕ್ಲೀನ್ ಬೋಲ್ಡ್' ಆಗಿದ್ದಾರೆ. ಇದನ್ನು ಕಂಡ ನೆರೆದಿದ್ದ ಕಾರ್ಯಕರ್ತರು ಮತ್ತು ಜನರು ಶಿಳ್ಳೆ, ಚಪ್ಪಾಳೆ ತಟ್ಟಿದರು.
- Sahadev Mane
- Updated on: Feb 6, 2026
- 3:13 pm
ಮಹಿಳಾ ಅಧಿಕಾರಿಯ ಬೆಡ್ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ
ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂ.ಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಕೆಲಸದವನ ನೆರವಿನಿಂದ ಆರೋಪಿಗಳು ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿದ್ದರು ಎನ್ನಲಾಗಿದೆ. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಮಾಳಮಾರುತಿ ಪೊಲೀಸರು ಮೂವರನ್ನು ಬಂಧಿಸಿದ್ದು, ಪರಾರಿಯಾಗಿರುವ ಕೆಲಸದವನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.
- Sahadev Mane
- Updated on: Feb 6, 2026
- 8:18 am