ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಹುಬ್ಬಳ್ಳಿ: ದಕ್ಷಿಣ ಭಾರತದ ಮೊದಲ ಅತ್ಯಾಧುನಿಕ ಚಾರ್ಕೋಲ್ ಘಟಕ ಆರಂಭ; ಒಣ ಕಸದಿಂದ ಉತ್ಪತ್ತಿಯಾಗಲಿದೆ ಹಸಿರು ಇದ್ದಿಲು!
ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದ ಕಸದ ಸಮಸ್ಯೆಗೆ ಮುಕ್ತಿ ನೀಡಲು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಒಣ ಕಸದಿಂದ ಹಸಿರು ಇದ್ದಿಲು ಉತ್ಪಾದಿಸುವ ಅತ್ಯಾಧುನಿಕ ಘಟಕ ಹುಬ್ಬಳ್ಳಿಯ ಗಬ್ಬೂರಿನಲ್ಲಿ ತಲೆಎತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮುತುವರ್ಜಿಯಿಂದ NTPC ಅಂಗಸಂಸ್ಥೆ ಜಾರಿಗೆ ತಂದಿರುವ ಈ ಘಟಕವು ನಿತ್ಯ 200 ಟನ್ ಒಣ ಕಸವನ್ನು ಸಂಸ್ಕರಿಸಿ 120 ಟನ್ ಪರಿಸರಸ್ನೇಹಿ ಇದ್ದಿಲು ಉತ್ಪಾದಿಸಲಿದೆ.
- Sanjayya Chikkamath
- Updated on: Jun 27, 2026
- 1:26 pm
ಒಳಚರಂಡಿ ಮಾಡಲು ರಸ್ತೆ ಅಗೆದು ಕಾಮಗಾರಿ ಬಳಿಕ ಹಾಗೇ ಬಿಟ್ಟ ಅಧಿಕಾರಿಗಳ ನಡೆಗೆ ಆಕ್ರೋಶ: ರಸ್ತೆ ತಡೆದು ಪ್ರತಿಭಟನೆ
Hubli News: ಹುಬ್ಬಳ್ಳಿಯ ಮಂಗಳ ಓಣಿಯಲ್ಲಿ ಹೊಸದಾಗಿ ನಿರ್ಮಿಸಿದ್ದ ಸಿಸಿ ರಸ್ತೆಯನ್ನು ಚರಂಡಿ ಕಾಮಗಾರಿಗಾಗಿ ಅಗೆದು ದುರಸ್ತಿ ಮಾಡದೆ ನಿರ್ಲಕ್ಷಿಸಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮನವೊಲಿಸಲು ಸ್ಥಳಕ್ಕೆ ಬಂದ ಪೊಲೀಸರು, ಅಧಿಕಾರಿಗಳ ವಿರುದ್ಧವೇ ಪ್ರತಿಭಟನಾಕಾರರು ಗರಂ ಆದ ಪ್ರಸಂಗವೂ ನಡೆದಿದೆ. 2 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ರಸ್ತೆಯನ್ನೇ ಅಗೆದು ಕಾಮಗಾರಿ ನಡೆಸಿದ್ದಾರೆ. ಕೆಲಸ ಮುಗಿದ ಮೇಲೆ ಕನಿಷ್ಠ ರಸ್ತೆ ರಿಪೇರಿಯನ್ನೂ ಮಾಡದೆ ಹಾಗೆಯೇ ಬಿಟ್ಟ ಕಾರಣ ಓಡಾಡಲೂ ಜನ ತೊಂದರೆ ಅನುಭವಿಸಬೇಕಾದ ಆರೋಪ ಕೇಳಿಬಂದಿದೆ.
- Sanjayya Chikkamath
- Updated on: Jun 26, 2026
- 3:32 pm
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ: ಜಾತಿ, ಧರ್ಮ ಭೇದವಿಲ್ಲದೆ ಮೆರವಣಿಗೆಯಲ್ಲಿ ಭಾಗಿ
Dharwad News: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಹಿಂದೂ ಧರ್ಮೀಯರು ಸಂಭ್ರಮದಿಂದ ಆಚರಿಸಿದ್ದಾರೆ. ಹಿಂದೂಗಳೇ ಹೆಚ್ಚಾಗಿರುವ ಈ ಗ್ರಾಮದಲ್ಲಿ ಸರ್ವಧರ್ಮ ಸಮನ್ವಯತೆ ಕಾಣಸಿಕ್ಕಿದೆ. ಸಾವಿರಾರು ಜನರು ಅಲಾಯಿ ದೇವರ ಮೆರವಣಿಗೆಯಲ್ಲಿ ಭಾಗಿಯಾಗಿ, ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಈ ಆಚರಣೆಯು ಧಾರ್ಮಿಕ ಸಹಿಷ್ಣುತೆಗೆ ಉತ್ತಮ ನಿದರ್ಶನವಾಗಿದೆ.
- Sanjayya Chikkamath
- Updated on: Jun 27, 2026
- 9:19 pm
ರೈಲ್ವೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ದಿಢೀರ್ ರದ್ದು, ಕಾರಣ ನಿಜಕ್ಕೂ ಗ್ರೇಟ್!
ಕನ್ನಡ ಭಾಷೆಯ ಆಯ್ಕೆ ಇಲ್ಲದೆ ಕೇವಲ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ನಡೆಯುತ್ತಿರುವ ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯನ್ನು ವಿರೋಧಿಸಿ ಜೂನ್ 25 ರಂದು ಹಮ್ಮಿಕೊಂಡಿದ್ದ ಧರಣಿಯನ್ನು ಕನ್ನಡಪರ ಸಂಘಟನೆಗಳು ಹಿಂಪಡೆದಿವೆ. ಕನ್ನಡಿಗ ಪರೀಕ್ಷಾರ್ಥಿಗಳೇ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣ ಏನು ಗೊತ್ತೇ? ತಿಳಿಯಲು ಮುಂದೆ ಓದಿ.
- Sanjayya Chikkamath
- Updated on: Jun 23, 2026
- 7:37 am
ಟ್ರ್ಯಾಕ್ಟರ್ ಬಾಡಿಗೆ ಹೆಚ್ಚು: ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಧಾರವಾಡ ಜಿಲ್ಲೆಯಲ್ಲಿ ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಬಿತ್ತನೆ ಮಾಡಿದ ರೈತರು ಮಳೆಗಾಗಿ ಕಾಯುತ್ತಿದ್ದರೆ, ಕೆಲವರಿಗೆ ಬಿತ್ತನೆ ಮಾಡಲು ಆಗಿಲ್ಲ. ಎತ್ತುಗಳು ಮತ್ತು ಟ್ರ್ಯಾಕ್ಟರ್ಗಳ ದುಬಾರಿ ವೆಚ್ಚದಿಂದಾಗಿ, ರೈತ ಕುಟುಂಬಸ್ಥರೇ ನೊಗಕ್ಕೆ ಹೆಗಲು ಕೊಟ್ಟು ಭೂಮಿ ಉಳುಮೆ ಮಾಡುತ್ತಿದ್ದಾರೆ. ಬೆಳೆ ನಷ್ಟದ ಭೀತಿಯಲ್ಲಿ ಎದುರಿಸುತ್ತಿದ್ದಾರೆ.
- Sanjayya Chikkamath
- Updated on: Jun 22, 2026
- 12:44 pm
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಸಿದ್ದರಾಮಯ್ಯಗೆ ಜೋಶಿ ತಿರುಗೇಟು
ಸಿದ್ದರಾಮಯ್ಯನವರ ಹಿಂದೂ ರಾಷ್ಟ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಆರ್ಎಸ್ಎಸ್ ಮತ್ತು ಬಿಜೆಪಿ ಹಿಂದೂ ರಾಷ್ಟ್ರವನ್ನು ನಿರ್ಮಿಸಲು ಹೊರಟಿಲ್ಲ. ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ಇರುವ ಈ ದೇಶದಲ್ಲಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ. ಹಿಂದೂ ಬಹುಸಂಖ್ಯಾತತನ ಕಳೆದುಕೊಂಡರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.
- Sanjayya Chikkamath
- Updated on: Jun 21, 2026
- 9:53 pm
ಸೀಕ್ರೆಟ್ ಆಗಿ ಮಾಡಿದ್ದೇವೆ ಅನ್ಕೊಂಡಿದ್ದಾರೆ: ಬಿಜೆಪಿ ಶಾಸಕರ ಅಡ್ಡಮತದಾನದ ಬಗ್ಗೆ ಜೋಶಿ ಸ್ಫೋಟಕ ಹೇಳಿಕೆ
ವಿಧಾನ ಪರಿಷತ್ನ ಅಡ್ಡ ಮತದಾನ ಸದ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಆಣೆ ಪ್ರಮಾಣದ ಪಾಲಿಟಿಕ್ಸ್ ಕೂಡ ಜೋರಾಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ಶಾಸಕರಿಂದ ಅಡ್ಡಮತದಾನ ಆಗಿರುವುದು ದುರ್ದೈವದ ಸಂಗತಿ ಎಂದು ಹೇಳಿದ್ದಾರೆ.
- Sanjayya Chikkamath
- Updated on: Jun 20, 2026
- 5:28 pm
ಹತ್ತೇ ನಿಮಿಷದಲ್ಲಿ ಉಳಿಯಿತು ಇನ್ನೂರು ಮಕ್ಕಳ ಜೀವ: ಹುಬ್ಬಳ್ಳಿ ಭಂಡಿವಾಡದಲ್ಲಿ ತಪ್ಪಿದ ಭಾರೀ ಅನಾಹುತ
ಹುಬ್ಬಳ್ಳಿಯ ಭಂಡಿವಾಡ ಗ್ರಾಮದಲ್ಲಿ ಭಾರಿ ಬಿರುಗಾಳಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಶೀಟ್ಗಳು ಹಾರಿಹೋಗಿವೆ. ಶಾಲೆ ಮುಗಿದ ಕೆಲವೇ ನಿಮಿಷಗಳಲ್ಲಿ ಘಟನೆ ನಡೆದಿದ್ದರಿಂದ 200ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರಿಂದಾಗಿ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಘಟನಾ ಸ್ಥಳದಲ್ಲಿ ಪರಿಸ್ಥಿತಿ ಹೇಗಿದೆ ಎಂಬ ವಿಡಿಯೋ ಇಲ್ಲಿದೆ.
- Sanjayya Chikkamath
- Updated on: Jun 16, 2026
- 11:57 am
ಧಾರವಾಡ ಜಿಲ್ಲೆಯಲ್ಲಿ ಹಳ್ಳ ಹಿಡಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?: ಇಂದಿರಾ ಕ್ಯಾಂಟೀನ್ ಆಹಾರ ಗುಣಮಟ್ಟದ ಬಗ್ಗೆ ಆಕ್ರೋಶ
ಹುಬ್ಬಳ್ಳಿ-ಧಾರವಾಡದಲ್ಲಿ ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟ ಹದಗೆಟ್ಟಿದ್ದು, ಕಳಪೆ ಊಟ ಮತ್ತು ಸಿಬ್ಬಂದಿ ಧೋರಣೆಯ ವಿರುದ್ಧ ಸಾರ್ವಜನಿಕರು ಹಾಗೂ ಬಡ ಕಾರ್ಮಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ನೀರಿನಂತಿರುವ ಸಾರು, ಸರಿಯಾಗಿ ಬೆಂದಿರದ ಅನ್ನವನ್ನು ಇಂದಿರಾ ಕ್ಯಾಂಟೀನ್ಗಳಲ್ಲಿ ನೀಡಲಾಗ್ತಿದೆ. ಚಪಾತಿ ಮತ್ತು ರೊಟ್ಟಿ ಕೂಡ ತಿನ್ನಲು ಯೋಗ್ಯವಾಗಿರಲ್ಲ. ಹೀಗಾಗಿ ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
- Sanjayya Chikkamath
- Updated on: Jun 11, 2026
- 8:10 am
ವಾಯುವ್ಯ ಸಾರಿಗೆಗೆ ಡೀಸೆಲ್ ಬೆನ್ನಲ್ಲೇ ಬಿಡಿಭಾಗಗಳ ದರ ಏರಿಕೆ ಶಾಕ್; ಸ್ಪೇರ್ ಪಾರ್ಟ್ಸ್ ಸಿಗದೆ ಸಂಕಷ್ಟ
ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ವಾಯುವ್ಯ ಸಾರಿಗೆ ನಿಗಮಕ್ಕೆ ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಪೂರೈಕೆ ಕೊರತೆಯ ದೊಡ್ಡ ಹೊಡೆತ ಬಿದ್ದಿದೆ. ಹಳೆಯ ದರಕ್ಕೆ ಟೈರ್ ಮತ್ತು ಸ್ಪೇರ್ ಪಾರ್ಟ್ಸ್ ನೀಡಲು ಟೆಂಡರ್ದಾರರು ನಿರಾಕರಿಸುತ್ತಿರುವುದರಿಂದ ಬಸ್ಗಳ ತಾಂತ್ರಿಕ ನಿರ್ವಹಣೆ ಸಂಪೂರ್ಣ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿದೆ.
- Sanjayya Chikkamath
- Updated on: Jun 9, 2026
- 2:38 pm
ಕಾಂಗ್ರೆಸ್ ಹೈಕಮಾಂಡ್ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ
ಹೊಸ ಕರ್ನಾಟಕ ಸರ್ಕಾರ ರಚನೆಯಾದ ಬೆನ್ನಲ್ಲೇ, ಮುಸ್ಲಿಂ ಸಮುದಾಯ ಸಚಿವ ಸಂಪುಟದಲ್ಲಿ ಯು.ಟಿ. ಖಾದರ್ ಹೊರತುಪಡಿಸಿ ಇನ್ನೂ 4 ಸ್ಥಾನಗಳಿಗೆ ತೀವ್ರ ಬೇಡಿಕೆ ಇಟ್ಟಿದೆ. ಈಡೇರದಿದ್ದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ಮತದಾನವಿಲ್ಲ ಎಂದು ಹುಬ್ಬಳ್ಳಿಯ ಮುಖಂಡರು ಎಚ್ಚರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ಗೆ ಮುಸ್ಲಿಂ ಸಮುದಾಯ ಇಕ್ಕಟ್ಟು ಸೃಷ್ಟಿಸಿದ್ದು, ಸಂಪುಟ ವಿಸ್ತರಣೆ ಸವಾಲಾಗಿದೆ.
- Sanjayya Chikkamath
- Updated on: Jun 4, 2026
- 7:59 am
ಹಿಜಾಬ್ Vs ಕೇಸರಿ ಸಂಘರ್ಷ: ಹಿಂದೂಪರ ಸಂಘಟನೆಗಳಿಂದ ಹುಬ್ಬಳ್ಳಿಯ ಅನೇಕ ಕಡೆ ಕೇಸರಿ ಶಾಲು ವಿತರಣೆ
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಆದೇಶವನ್ನು ವಿರೋಧಿಸಿ ಹುಬ್ಬಳ್ಳಿಯ ಕನಕದಾಸ ಕಾಲೇಜು ಸೇರಿದಂತೆ ಹಲವೆಡೆ ಹಿಂದೂಪರ ಸಂಘಟನೆಗಳು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿ ಪ್ರತಿಭಟಿಸಿದವು. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಆವರಣಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
- Sanjayya Chikkamath
- Updated on: Jun 1, 2026
- 2:15 pm