ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ವ್ಯಾನಿಟಿ ಬ್ಯಾಗ್ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮಹಿಳೆಯರಿಗೆ ಮುತಾಲಿಕ್ ಕಿವಿಮಾತು
ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಹುಬ್ಬಳ್ಳಿಯಲ್ಲಿ ಹಿಂದೂ ಮಹಿಳೆಯರಿಗೆ ತ್ರಿಶೂಲ ವಿತರಿಸಿ, ಆತ್ಮರಕ್ಷಣೆಗಾಗಿ ಬಳಸುವಂತೆ ಹೇಳಿದ್ದಾರೆ. ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ, ಮುತಾಲಿಕ್ ಅವರು ಲವ್ ಜಿಹಾದ್ ವಿರುದ್ಧ ಎಚ್ಚರಿಸಿದ್ದಾರೆ. ಅಲ್ಲದೇ ನೇಹಾ ಹಿರೇಮಠರನ್ನು ಹತ್ಯೆ ಮಾಡಿದ ಆರೋಪಿಯನ್ನು ಗಲ್ಲಿಗೆ ಏರಿಸಿ ಎಂದು ಆಗ್ರಹಿಸಿದ್ದಾರೆ.
- Sanjayya Chikkamath
- Updated on: Apr 18, 2025
- 3:57 pm
ಹುಬ್ಬಳ್ಳಿ ಬಾಲಕಿ ಹತ್ಯೆ, ಎನ್ಕೌಂಟರ್: ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ
ಐದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿ ರಿತೇಶ್ ಕುಮಾರ್ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿ, ತನಿಖೆಯಲ್ಲಿ ಪಾರದರ್ಶಕತೆಗೆ ಒತ್ತಾಯಿಸಿದೆ. ಪೊಲೀಸರ ಕ್ರಮದ ಬಗ್ಗೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
- Sanjayya Chikkamath
- Updated on: Apr 15, 2025
- 3:58 pm
ಹುಬ್ಬಳ್ಳಿ ಎನ್ಕೌಂಟರ್ ಕೇಸ್: ಪಿಎಸ್ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ, ಯಾರೀ ಲೇಡಿ ಸಿಂಗಂ?
ಹುಬ್ಬಳ್ಳಿಯ ಬಾಲಕಿಯ ಹತ್ಯೆ ಆರೋಪಿಯನ್ನು ಎನ್ಕೌಂಟರ್ ಪ್ರಕರಣ ಸದ್ಯ ದೇಶಾದ್ಯಂತ ಸಾಕಷ್ಟು ಚರ್ಚೆ ಆಗುತ್ತಿದೆ. ಗಟ್ಟಿಗಿತ್ತಿ ಪಿಎಸ್ಐ ಅನ್ನಪೂರ್ಣ ಮಾಡಿದ ಸಾಹಸಕ್ಕೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದುಬರ್ತಿದೆ. ಆರೋಪಿಯ ಕತೆ ಮುಗಿಸಿದ ಈ ಲೇಡಿ ಪಿಎಸ್ಐ ಯಾರು ಎಂದು ಜನರು ತಲೆಕೆಡಿಸಿಕೊಂಡಿದ್ದಾರೆ. ಅದಕ್ಕೆ ಉತ್ತರ ಇಲ್ಲಿದೆ.
- Sanjayya Chikkamath
- Updated on: Apr 14, 2025
- 9:00 pm
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್ ಗುಂಡೇಗೆ ಬಲಿ: ಕಮಿಷನರ್ಗೆ ಜೈಕಾರ
ಹುಬ್ಬಳ್ಳಿಯಲ್ಲಿ ಬಾಲಕಿಯ ಹತ್ಯೆಗೈದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜನರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಚಪ್ಪಾಳೆ ತಟ್ಟಿ, ಜೈಕಾರ ಹಾಕಿದರು. ಬಾಲಕಿಯ ಘಟನೆ ಹುಬ್ಬಳ್ಳಿಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
- Sanjayya Chikkamath
- Updated on: Apr 13, 2025
- 9:49 pm
ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್ ಗುಂಡಿಗೆ ಬಲಿ
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಹತ್ಯೆ ನಡೆದಿದೆ. ಬಿಹಾರ ಮೂಲದ ಯುವಕ ಆರೋಪಿಯಾಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿ ಬಾಲಕಿಯನ್ನು ಎತ್ತುಕೊಂಡು ಹೋಗಿರುವ ದೃಶ್ಯ ಸೆರೆಯಾಗಿದೆ. ಬಾಲಕಿಯ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆಗಳು ನಡೆದವು.
- Sanjayya Chikkamath
- Updated on: Apr 13, 2025
- 9:31 pm
ಹುಬ್ಬಳ್ಳಿ- ಧಾರವಾಡ ಮಂದಿಗೆ ಸಿಹಿ ಸುದ್ದಿ: ಮೆಟ್ರೋ ಮಾದರಿ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸಂಪರ್ಕಿಸುವ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (e-RT) ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಹೆಚ್ಇಎಸ್ಎಸ್ ಎಜಿ, ಹೆಸ್ ಇಂಡಿಯಾ ಮತ್ತು ಎಸ್ಎಸ್ಬಿ ಎಜಿ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಮೂರು ತಿಂಗಳಲ್ಲಿ ಡಿಪಿಆರ್ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಈ ಯೋಜನೆಯು ಯುರೋಪಿನಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಾದರಿಯನ್ನು ಅನುಸರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
- Sanjayya Chikkamath
- Updated on: Apr 12, 2025
- 4:29 pm
ಯತ್ನಾಳ್ಗೆ ಬೆಂಬಲ: ಜಯಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಎಚ್ಚರಿಕೆ ನೀಡಿದೆ. ಯತ್ನಾಳ್ ಅವರು ಟ್ರಸ್ಟ್ ಬಗ್ಗೆ ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ. ಕೂಡಲೇ ಕ್ಷಮೆ ಕೇಳುವಂತೆ ಆಗ್ರಹಿಸಿದೆ. ಸ್ವಾಮೀಜಿ ರಾಜಕೀಯ ವ್ಯಕ್ತಿಗಳ ಪರವಾಗಿ ಮಾತನಾಡದಂತೆ ಎಚ್ಚರಿಕೆ ನೀಡಿದೆ. ಮುಂದಿನ ವಾರ ಮತ್ತೆ ಸಭೆ ನಡೆಸಿ, ವರ್ತನೆ ಬದಲಾವಣೆಯಾಗದಿದ್ದರೆ ಕ್ರಮ ಕೈಗೊಳ್ಳುವುದಾಗಿ ಟ್ರಸ್ಟ್ ತಿಳಿಸಿದೆ.
- Sanjayya Chikkamath
- Updated on: Apr 11, 2025
- 6:12 pm
ಹುಬ್ಬಳ್ಳಿ: ಆರೋಪಿಗಳ ವಿಚಾರಣೆ ಮಾಡ್ತಿದ್ದಾಗಲೇ ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಸಂಪೂರ್ಣ ಶಿಥಿಲವಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್, ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿರುವಾಗಲೇ ಕುಸಿದು ಬಿದ್ದಿದೆ. ಅದೃಷ್ಟವಶಾತ್, ಸ್ವಲ್ಪದರಲ್ಲೇ ಪೊಲೀಸರು ಹಾಗೂ ಆರೋಪಿಗಳು ಅಪಾಯದಿಂದ ಬಚಾವಾಗಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಮೇಲ್ಚಾವಣಿ ಕಾಂಕ್ರೀಟ್ ಕುಸಿದುಬಿದ್ದ ವಿಡಿಯೋ ಇಲ್ಲಿದೆ.
- Sanjayya Chikkamath
- Updated on: Apr 11, 2025
- 8:05 am
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ, ಮೊಹಮ್ಮದ್ ಅರೆಸ್ಟ್
ಕಾಮಿಯೊಬ್ಬ ಬೇಕರಿಗೆ ಬಂದ 6 ವರ್ಷದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಗ್ಗೆ ಬಾಲಕಿ ಮನೆಗೆ ಹೋಗಿ ಪೋಷಕರಿಗೆ ತಿಳಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತಯೇ ಸಂಬಂಧಿಕರು, ಸಾರ್ವಜನಿಕರು ಬೇಕರಿಗೆ ನುಗ್ಗಿ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
- Sanjayya Chikkamath
- Updated on: Apr 6, 2025
- 12:17 pm
ಅಂಜನಾದ್ರಿ ಆಂಜನೇಯನ ದರ್ಶನಕ್ಕೆ ರೋಪ್ ವೇ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್
ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ವೃದ್ಧರು ಮತ್ತು ಅನಾರೋಗ್ಯದಿಂದ ಬಳಲುವ ಭಕ್ತರಿಗೆ ಬೆಟ್ಟ ಹತ್ತುವುದು ಕಷ್ಟಕರವಾಗಿದ್ದರಿಂದ ಈ ನಿರ್ಧಾರ ಮಹತ್ವದ್ದಾಗಿದೆ. ಮೂರು ರೋಪ್ ವೇಗಳನ್ನು ನಿರ್ಮಿಸುವ ಯೋಜನೆಯಿದೆ. ಇದರಿಂದ ಪ್ರತಿ ಗಂಟೆಗೆ 800 ಭಕ್ತರು ಬೆಟ್ಟಕ್ಕೆ ಏರಿ ದರ್ಶನ ಪಡೆಯಬಹುದು. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
- Sanjayya Chikkamath
- Updated on: Mar 30, 2025
- 4:29 pm
ರಾತೋರಾತ್ರಿ ಮುನ್ನಲೆಗೆ ಬಂದ ಕೊಪ್ಪಳ ರಾಘವೇಂದ್ರಸ್ವಾಮಿ ಮಠದ ವಿವಾದ: ಏನದು?
ಅದು ಕೊಪ್ಪಳದ ಸುಪ್ರಸಿದ್ದ ರಾಘವೇಂದ್ರ ಸ್ವಾಮಿ ಮಠ. ಆದರೆ ಈ ಮಠಕ್ಕೆ ಮುಂಜಾನೆಯೇ ನೂರಾರು ಭಕ್ತರ ಆಗಮನವಾಗಿತ್ತು. ಕೇವಲ ಭಕ್ತರು ಮಾತ್ರವಲ್ಲ, ಪೊಲೀಸರು ಕೂಡ ಎಂಟ್ರಿಯಾಗಿದ್ದರು. ಮಠದ ಮುಂಭಾಗದಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಇದಕ್ಕೆಲ್ಲಾ ಮಠದ ಆಡಳಿತ ವಿವಾದ ಕಾರಣವಾಗಿದೆ.
- Sanjayya Chikkamath
- Updated on: Mar 27, 2025
- 12:44 pm
ಕೊಪ್ಪಳ ನಗರದಲ್ಲಿ ಕುಡಿಯುವ ನೀರಿಗಾಗಿ ತತ್ವಾರ: ವಾರಕ್ಕೊಮ್ಮೆ ನೀರು ಪೂರೈಕೆ, ಆಕ್ರೋಶ
ಕೊಪ್ಪಳ ನಗರದ ಬಳಿ ತುಂಗಭದ್ರಾ ಜಲಾಶಯವಿದ್ದರೂ, ಜನರು ನೀರಿಗಾಗಿ ಪರದಾಡುವಂತಾಗಿದೆ. ಬೇಸಿಗೆಯಲ್ಲಿ ನೀರಿನ ಅಗತ್ಯ ಹೆಚ್ಚಾಗಿರುವಾಗ, ಸಮರ್ಪಕ ನೀರು ಪೂರೈಕೆಯಾಗದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ವಾರಕ್ಕೊಮ್ಮೆ ಮಾತ್ರ ನೀರು ಬರುತ್ತಿದ್ದು, ಅದು ಸಹ ಸರಿಯಾಗಿ ಬರುತ್ತಿಲ್ಲ. ನೀರಿಗಾಗಿ ಜನರು ಪರದಾಡುತ್ತಿದ್ದಾರೆ ಮತ್ತು ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
- Sanjayya Chikkamath
- Updated on: Mar 25, 2025
- 12:11 pm