ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಘೋರ ದುರಂತ, ಬಿಜೆಪಿ ಮುಖಂಡನ ಪುತ್ರ ಬಲಿ
ರೀಲ್ಸ್ ಹುಚ್ಚಾಟ ಹೆಚ್ಚಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರು ರೀಲ್ಸ್ ಹುಚ್ಚಾಟಕ್ಕೆ ಬಿದ್ದು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ರಸ್ತೆ, ಬೆಟ್ಟ, ರೈಲು ಸೇರಿದಂತೆ ಯಾವ ಜಾಗವನ್ನೂ ಬಿಡದೆ ರೀಲ್ಸ್ ಮಾಡುವವರು ಸಂಖ್ಯೆ ಹೆಚ್ಚಾಗಿದೆ. ಅದರಂತೆ ಅಪಾಯಕಾರಿ ರೀಲ್ಸ್ ಮಾಡಲು ಹೋಗಿ ಬಿಜೆಪಿ ಮುಖಂಡನ ಪುತ್ರ ಸಾವಿನ ಮನೆ ಸೇರಿದ್ದಾನೆ. ಅಷ್ಟಕ್ಕೂ ಮಾಡಲು ಹೋಗಿದ್ದ ರೀಲ್ಸ್ ಯಾವುದು? ಆಗಿದ್ದೇನು ಎನ್ನುವ ಡಿಟೇಲ್ಸ್ ಇಲ್ಲಿದೆ.
- Sanjayya Chikkamath
- Updated on: Mar 19, 2026
- 9:36 pm
ಹೊಟ್ಟೆಪಾಡಿಗೆ ದುಡಿಯಲು ಬಂದವನ ದಾರುಣ ಅಂತ್ಯ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರ ಪೈಕಿ ಓರ್ವ ಸಾವು
ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಓರ್ವ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಕಾರ್ಮಿಕರನ್ನು ಮಾರ್ಚ್ 17ರಂದು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿತ್ತು. ಉಳಿದ ಮೂವರ ಸ್ಥಿತಿಯೂ ಗಮಭೀರವಾಗಿದ್ದು, ತುರ್ತು ನಿಘಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ ಸಬ್ ಅರ್ಬನ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- Sanjayya Chikkamath
- Updated on: Mar 19, 2026
- 4:18 pm
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್
ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
- Sanjayya Chikkamath
- Updated on: Mar 17, 2026
- 10:19 pm
ರೈಲ್ವೆ ಇಲಾಖೆಯಿಂದ ಮತ್ತೊಮ್ಮೆ ಕನ್ನಡಕ್ಕೆ ಮಲತಾಯಿ ಧೋರಣೆ: ಸಿಡಿದೆದ್ದ ಕರವೇ
ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ನಿರಂತರ ಭಾಷಾ ತಾರತಮ್ಯ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಹಿಂದಿ, ಇಂಗ್ಲಿಷ್ಗೆ ಮಾತ್ರ ಆದ್ಯತೆ ನೀಡಿದ್ದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿತು. ಹೋರಾಟದ ಫಲವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.
- Sanjayya Chikkamath
- Updated on: Mar 17, 2026
- 4:07 pm
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಗೂಡ್ಸ್ ಮ್ಯಾನೇಜರ್ ಎಲ್ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆಯು, ಗೂಡ್ಸ್ ಮ್ಯಾನೇಜರ್ ಎಲ್ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಕರವೇ ಕಾರ್ಯಕರ್ತರು ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅಸಂಗತತೆಗಳು ಮತ್ತು ಕನ್ನಡ ಭಾಷೆ ಕಡೆಗಣನೆ ಕುರಿತು ಆಕ್ಷೇಪ ವ್ಯಕ್ತಪಡಿಸಿ, ತೀವ್ರ ಹೋರಾಟ ನಡೆಸಿದ್ದರು. ಈ ಹೋರಾಟದ ಪರಿಣಾಮವಾಗಿ ಪರೀಕ್ಷೆ ಮುಂದೂಡಿಕೆಯಾಗಿದೆ.
- Sanjayya Chikkamath
- Updated on: Mar 17, 2026
- 12:10 pm
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ: ರೊಚ್ಚಿಗೆದ್ದ ಕನ್ನಡಪರ ಹೋರಾಟಗಾರರು
ರೇಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದಾರೆ. ಗೂಡ್ಸ್ ರೈಲ್ವೆ ಮ್ಯಾನೇಜರ್ ಮತ್ತು LDCE ಹುದ್ದೆಗಳ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ನಡೆಸುತ್ತಿದ್ದು, ಇದು ಕನ್ನಡಿಗರಿಗೆ ಅನ್ಯಾಯ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.
- Sanjayya Chikkamath
- Updated on: Mar 17, 2026
- 11:37 am
ಕಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗಂಭೀರ ಗಾಯಗೊಂಡಿದ್ದ ಯುವಕ ಸಾವು
ಹುಬ್ಬಳ್ಳಿ ಕಿಮ್ಸ್ನ ಬಡವರ ಸಂಜೀವಿನಿ ಎಂದು ಕರೆಯುತ್ತಾರೆ. ಕಿಮ್ಸ್ಗೆ ಬಂದ್ರೆ ಜೀವ ಉಳಿಯುತ್ತೆ ಎನ್ನುವ ನಂಬಿಕೆಯಿಂದ ಅನೇಕರು ಬರ್ತಾರೆ. ಆದ್ರೆ ಜೀವ ಉಳಿಸಬೇಕಿದ್ದ ಕಿಮ್ಸ್ ಸಿಬ್ಬಂದಿಯೇ ಜೀವ ತೆಗೆಯುವ ಕೆಲಸ ಮಾಡ್ತಿದ್ದಾರೆ ಎನ್ನುವ ಆರೋಪಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿಬರುತ್ತಿವೆ. ಈ ನಡುವೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ನೀಡಲು ಸತಾಯಿಸಿದ ಪರಿಣಾಮ, ಆತ ಬ್ರೈನ್ ಡೆಡ್ ಆಗಿ ಬಾರದ ಲೋಕಕ್ಕೆ ಹೋಗಿದ್ದಾನೆ. ತಮ್ಮ ಮಗನ ಸಾವಿಗೆ ಕಿಮ್ಸ್ ಸಿಬ್ಬಂದಿಯೇ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ. ಅಷ್ಟಕ್ಕೂ ಆಗಿದ್ದೇನೆಂಬ ಮಾಹಿತಿ ಇಲ್ಲಿದೆ.
- Sanjayya Chikkamath
- Updated on: Mar 15, 2026
- 3:54 pm
ಬುಕ್ ಆಗದ ಗ್ಯಾಸ್: ಖಾಲಿ ಸಿಲಿಂಡರ್ ಹಿಡಿದು ಕುಳಿತ ಜನ; ಮನೆ ಅಡುಗೆಗೂ ಕುತ್ತು
ಹುಬ್ಬಳ್ಳಿಯಲ್ಲಿ ಗೃಹ ಬಳಕೆ ಸಿಲಿಂಡರ್ ಲಭ್ಯತೆಗೆ ಸಮಸ್ಯೆಯಿಲ್ಲವಾದರೂ, ಬುಕ್ಕಿಂಗ್ ಸರ್ವರ್ ಡೌನ್ ಆಗಿದ್ದರಿಂದ ಗ್ರಾಹಕರು ಪರದಾಡುತ್ತಿದ್ದಾರೆ. ವಾಣಿಜ್ಯ ಸಿಲಿಂಡರ್ಗಳ ಅಭಾವವಿದ್ದು, ಹೋಟೆಲ್ ಮಾಲೀಕರು ಕಂಗೆಟ್ಟಿದ್ದಾರೆ. ಸರ್ವರ್ ಸಮಸ್ಯೆಯಿಂದ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗದೆ, ಜನರಲ್ಲಿ ಆತಂಕ ಹೆಚ್ಚಾಗಿದ್ದು, ಗ್ಯಾಸ್ ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ.
- Sanjayya Chikkamath
- Updated on: Mar 14, 2026
- 4:13 pm
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್ ಇಲ್ಲವೆಂದು ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ
ಉತ್ತರ ಕರ್ನಾಟಕದ ದೊಡ್ಡ ಸರ್ಕಾರಿ ಆಸ್ಪತ್ರೆ KIMS ಹುಬ್ಬಳ್ಳಿ, ರೋಗಿಗಳ ಪಾಲಿಗೆ ನರಕವಾಗಿ ಪರಿಣಮಿಸಿದೆ. ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಗೆ ಬೆಡ್ ಇಲ್ಲ ಎಂಬ ನೆಪದಲ್ಲಿ ಚಿಕಿತ್ಸೆ ನಿರಾಕರಿಸಲಾಗಿದೆ. ಆಂಬ್ಯುಲೆನ್ಸ್ನಲ್ಲೇ ಗಾಯಾಳು ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡಿದರು. ಆಸ್ಪತ್ರೆಯ ಈ ಬೇಜವಾಬ್ದಾರಿತನ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ, ಸಂಸ್ಥೆಯ ಕಾರ್ಯವೈಖರಿ ಪ್ರಶ್ನಾರ್ಹವಾಗಿದೆ.
- Sanjayya Chikkamath
- Updated on: Mar 14, 2026
- 7:30 am
ಹುಬ್ಬಳ್ಳಿಯಲ್ಲಿ ಆಟೋ ಗ್ಯಾಸ್ ಬಂಕ್ ಬಂದ್: ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಹುಬ್ಬಳ್ಳಿಯಲ್ಲಿ ಎಲ್ಪಿಜಿ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವೆ ದಿನನಿತ್ಯ ಜಗಳಗಳು ನಡೆಯುವಂತಾಗಿದೆ. ಆಟೋ ಚಾಲಕರು ಹೆಚ್ಚಿದ ಇಂಧನ ವೆಚ್ಚದಿಂದಾಗಿ ಪ್ರಯಾಣದ ದರವನ್ನು ಹೆಚ್ಚಿಸಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಲವು ಎಲ್ಪಿಜಿ ಬಂಕ್ಗಳು ಮುಚ್ಚಿರುವುದರಿಂದ ಚಾಲಕರು ಪರದಾಡುತ್ತಿದ್ದಾರೆ.
- Sanjayya Chikkamath
- Updated on: Mar 13, 2026
- 11:17 am
ವಾಣಿಜ್ಯ ಸಿಲಿಂಡರ್ ಕೊರತೆ: ಹುಬ್ಬಳ್ಳಿಯಲ್ಲಿ ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಹುಬ್ಬಳ್ಳಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದ್ದು, ಅನೇಕ ಹೋಟೆಲ್ ಮಾಲೀಕರು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲು ಕಟ್ಟಿಗೆ ಒಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ಎಂಜಿ ಮಾರ್ಕೆಟ್ನಲ್ಲಿ ಕಟ್ಟಿಗೆ ಒಲೆಗಳ ಮಾರಾಟದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಗ್ಯಾಸ್ ಸಿಗದೆ ಅಥವಾ ಬೆಲೆ ಏರಿಕೆಯಿಂದಾಗಿ ಬಾಗಿಲು ಮುಚ್ಚುವ ಬದಲು ಹೋಟೆಲ್ಗಳು ಈ ಸಾಂಪ್ರದಾಯಿಕ ವಿಧಾನಕ್ಕೆ ಮರಳುತ್ತಿವೆ.
- Sanjayya Chikkamath
- Updated on: Mar 12, 2026
- 12:58 pm
ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು
ಹುಬ್ಬಳ್ಳಿಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಹೊಂಡದಲ್ಲಿ ಈಜಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ. ತೀವ್ರ ಬಿಸಿಲಿನ ಹಿನ್ನೆಲೆ ದೇಹ ತಂಪುಮಾಡಿಕೊಳ್ಳೋಣ ಎಂದು ಮನೆ ಸಮೀಪ ಇರುವ ಹೊಂಡಕ್ಕೆ ಯುವಕರು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜಲು ಬಾರದೆ ಇದ್ದರೂ ನೀರಿಗೆ ಇಳಿದ ಪರಿಣಾಮ ಆಪ್ತ ಸ್ನೇಹಿತರು ಒಟ್ಟಿಗೆ ಜಲ ಸಮಾಧಿಯಾಗಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
- Sanjayya Chikkamath
- Updated on: Mar 11, 2026
- 4:48 pm