ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವತಿಯನ್ನ ಮನೆಗೆ ಕರೆದೊಯ್ದಿದ್ದ ಯುವಕ ಸಿಕ್ಕಿಬಿದ್ದ
ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದುಕೊಂಡಿರುವ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಸಾಜಿದ್ ಉಣಕಲ್ ಎಂಬ ಯುವಕ ಹಿಂದೂ ಯುವತಿಯ ಬ್ರೈನ್ವಾಶ್ ಮಾಡಿ ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದೊಯ್ದ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಇನ್ನು ಸಾಜಿದ್ ನನ್ನು ಅಶೋಕ ನಗರ ಠಾಣೆಗೆ ಪೊಲೀಸರ ವಶಕ್ಕೆ ನೀಡಿದ್ದು, ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
- Sanjayya Chikkamath
- Updated on: May 19, 2026
- 9:22 pm
ಹುಬ್ಬಳ್ಳಿಗೆ ಬಾಂಗ್ಲಾ ನುಸುಳುಕೋರರ ಲಗ್ಗೆ? ರೈಲ್ವೆ ಪೊಲೀಸರ ವಿರುದ್ಧ ಭುಗಿಲೆದ್ದ ಆಕ್ರೋಶ
ಹುಬ್ಬಳ್ಳಿಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಆತಂಕ ಜೋರಾಗಿದೆ. ಅಕ್ರಮ ಬಾಂಗ್ಲಾ ನುಸುಳುಕೋರರು ಸುರಕ್ಷಿತ ಸ್ಥಳ ಅರಸಿ ಹುಬ್ಬಳ್ಳಿ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳತ್ತ ಮುಖ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೇ ಹಿಂದೂಪರ ಸಂಘಟನೆಗಳು ಇಂದು ನಗರದಲ್ಲಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿವೆ.
- Sanjayya Chikkamath
- Updated on: May 18, 2026
- 4:13 pm
ಹುಬ್ಬಳ್ಳಿಯಲ್ಲೊಂದು ಕರುಳು ಹಿಂಡುವ ಘಟನೆ: ಮಗನ ಜೀವ ಉಳಿಸಲು ಕಿವಿಯೋಲೆ ಮಾರಿದ ತಾಯಿ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮಗನ ಜೀವ ಉಳಿಸಲು ಓರ್ವ ತಾಯಿ ಹೋರಾಡುತ್ತಿದ್ದಾರೆ. 11 ವರ್ಷದ ಮಗನಿಗೆ ಬಂದಿರುವ ಮಹಾಮಾರಿ ರೋಗಕ್ಕೆ ಚಿಕಿತ್ಸೆ ಅಗತ್ಯವಿದ್ದು, ದುಬಾರಿ ವೆಚ್ಚಕ್ಕೆ ತಮ್ಮ ಕಿವಿ ಓಲೆಯನ್ನೇ ಮಾರಿದ್ದಾರೆ. ದಯವಿಟ್ಟು ನನ್ನ ಮಗನನ್ನು ಬದುಕಿಸಿ ಅಂತ ತಾಯಿ ಕಣ್ಣೀರು ಹಾಕಿದ್ದಾರೆ.
- Sanjayya Chikkamath
- Updated on: May 17, 2026
- 7:45 pm
ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಭೀಕರ ಗಲಾಟೆ ನಡೆದಿದೆ. ಪೊಲೀಸ್ ಸಿಬ್ಬಂದಿ ಕಣ್ಣೆದುರಲ್ಲೇ ಯುವಕನ ಕುಟುಂಬಸ್ಥರ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದ್ದು, ಗರ್ಭಿಣಿ ಮಹಿಳೆಗೂ ಗಾಯಗಳಾಗಿವೆ. ಗಾಯಗೊಂಡ ಯುವಕ ಈಶ್ವರ್ ಆಸ್ಪತ್ರೆಗೆ ದಾಖಲಾಗಿದ್ದು, ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Sanjayya Chikkamath
- Updated on: May 16, 2026
- 9:36 pm
ಕೆಸಿಇಟಿ ಪರೀಕ್ಷೆಯಲ್ಲೂ ‘ನೀಟ್’ ಮಾದರಿ ಹಗರಣ? ಒಂದೇ ಸೆಂಟರ್ನ 74 ವಿದ್ಯಾರ್ಥಿಗಳಿಗೆ 200ಕ್ಕೆ 200 ಅಂಕ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ ಕೃಷಿ ವಿಜ್ಞಾನ ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಮೇ 10 ರಂದು ನಡೆದ ಪರೀಕ್ಷೆಯಲ್ಲಿ ಚಿತ್ರದುರ್ಗದ ಹಿರಿಯೂರು ಕೇಂದ್ರವೊಂದರಲ್ಲೇ ಬರೋಬ್ಬರಿ 74 ವಿದ್ಯಾರ್ಥಿಗಳು 200ಕ್ಕೆ 200 ಪೂರ್ಣ ಅಂಕಗಳನ್ನು ಪಡೆದಿದ್ದು, ಪಾಲಕರಲ್ಲಿ ಭಾರಿ ಅನುಮಾನ ಮೂಡಿಸಿದೆ. ನೀಟ್ ಮಾದರಿಯಲ್ಲೇ ಹಗರಣ ನಡೆದಿದ್ದು, ತಕ್ಷಣವೇ ಮರುಪರೀಕ್ಷೆ ನಡೆಸಬೇಕೆಂದು ಪ್ರತಿಭಾವಂತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
- Sanjayya Chikkamath
- Updated on: May 16, 2026
- 1:10 pm
ಹು-ಧಾ ಪಾಲಿಕೆಗೆ ಕೋಟಿ ಕೋಟಿ ನಷ್ಟ: ಕಲಾವಿದರ ನಿವೇಶನ ಅಕ್ರಮ ಮಾರಾಟ ಬಯಲು
ಒಂದೆಡೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರೆ, ಮತ್ತೊಂದೆಡೆ ಪಾಲಿಕೆಗೆ ಕೋಟ್ಯಂತರ ರೂಪಾಯಿ ಆದಾಯ ಬರುವ ಮೂಲಗಳಲ್ಲೇ ಅಕ್ರಮಗಳು ನಡೆಯುತ್ತಿವೆ. ಭೂ ಮಾಫಿಯಾ ಸಕ್ರಿಯವಾಗಿದೆ. ಇನ್ನು ಅಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು ಸಾಥ್ ನೀಡಿರುವ ಆರೋಪಗಳೂ ಕೇಳಿಬರುತ್ತಿವೆ.
- Sanjayya Chikkamath
- Updated on: May 15, 2026
- 3:07 pm
ಹುಬ್ಬಳ್ಳಿಯಲ್ಲಿ ಶುರುವಾಯ್ತು ಹಿಜಾಬ್ ಕಿಚ್ಚು: ಮುತಾಲಿಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿದೆ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಿ ಪ್ರತಿಭಟಿಸಲಾಗಿದೆ. ಹಿಂದೂ ವಿದ್ಯಾರ್ಥಿಗಳೂ ಕೇಸರಿ ಶಾಲು ಧರಿಸಿ ಶಾಲಾ, ಕಾಲೇಜುಗಳಿಗೆ ತೆರಳುವಂತೆ ಮುತಾಲಿಕ್ ಕರೆ ನೀಡಿದ್ದಾರೆ.
- Sanjayya Chikkamath
- Updated on: May 14, 2026
- 3:09 pm
ಹುಬ್ಬಳ್ಳಿಯಲ್ಲಿ ಅರೆಬೆತ್ತಲೆ ಕಳ್ಳರ ಹಾವಳಿ, ಜೈನ ಮಂದಿರಗಳೇ ಟಾರ್ಗೆಟ್: ಚಡ್ಡಿ ಗ್ಯಾಂಗ್ ಕೃತ್ಯದ ಶಂಕೆ
ಹುಬ್ಬಳ್ಳಿಯ ಹೊಸರು ಬಡಾವಣೆಯ ಜೈನ ಮಂದಿರದಲ್ಲಿ ಮಂಗಳವಾರ ರಾತ್ರಿ ಅರೆಬೆತ್ತಲೆ ಕಳ್ಳರ ತಂಡವೊಂದು 3 ಕೆಜಿ ಬೆಳ್ಳಿ ಆಭರಣಗಳನ್ನು ದೋಚಿದೆ. ಸರಣಿ ಮಂದಿರ ಕಳ್ಳತನಗಳಿಂದ ಅವಳಿ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಇದು ‘ಚಡ್ಡಿ ಗ್ಯಾಂಗ್’ನವರ ಕೃತ್ಯ ಇರಬಹುದೆಂದು ಶಂಕಿಸಲಾಗಿದ್ದು, ಖದೀಮರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
- Sanjayya Chikkamath
- Updated on: May 13, 2026
- 2:28 pm
ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ
ಹುಬ್ಬಳ್ಳಿಯ ತಾರಿಹಾಳದಲ್ಲಿ ನಡೆದ ಆಘಾತಕಾರಿ ಆ್ಯಸಿಡ್ ದಾಳಿಯಲ್ಲಿ 6 ತಿಂಗಳ ಮಗು ಸೇರಿ ಐವರು ಗಾಯಗೊಂಡಿದ್ದಾರೆ. ನಾದಿನಿಯರ ಫೋಟೋ ತೆಗೆದ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ ಈ ಕೃತ್ಯ ನಡೆದಿದೆ. ಘಟನೆಯಲ್ಲಿ ಆರೋಪಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆತನ ಪತ್ನಿ ಸ್ಥಿತಿ ಚಿಂತಾಜನಕವಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Sanjayya Chikkamath
- Updated on: May 9, 2026
- 2:42 pm
ಜಗದ್ಗುರುಗಳ ಸಮ್ಮುಖದಲ್ಲಿ ಸ್ವಾಮೀಜಿ-ಭಕ್ತರ ಸಂಧಾನ: ಏನಿದು ಕುಂದಗೋಳ ಮಠದ ವಿವಾದ?
ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ಪ್ರಸಿದ್ಧ ಪಂಚಗ್ರಹ ಹಿರೇಮಠದಲ್ಲಿ ಕಳೆದ ಒಂದು ತಿಂಗಳಿಂದ ನಡೆಯುತ್ತಿದ್ದ ಆಸ್ತಿ ವಿವಾದಕ್ಕೆ ಪಂಚಪೀಠದ ಜಗದ್ಗುರುಗಳ ಮಧ್ಯಸ್ಥಿಕೆಯಲ್ಲಿ ಇಂದು ಸುಖಾಂತ್ಯ ಕಂಡಿದೆ. ಸ್ವಾಮೀಜಿ ಭೂಮಿ ಮಾರಾಟ ಮಾಡಲು ಮುಂದಾಗಿದ್ದು, ಭಕ್ತರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ಸ್ವಾಮೀಜಿ ಯಾವುದೇ ಆಸ್ತಿ ಮಾರಾಟ ಮಾಡುವುದಿಲ್ಲ ಎಂದಿದ್ದಾರೆ.
- Sanjayya Chikkamath
- Updated on: May 8, 2026
- 6:25 pm
ಡಾಲಿ ಧನಂಜಯ್ ಪುತ್ರನಿಗಾಗಿ ತಯಾರಾಗುತ್ತಿದೆ ವಿಶ್ವಪ್ರಸಿದ್ಧ ಕಲಘಟಗಿ ತೊಟ್ಟಿಲು: ಏನಿದರ ವಿಶೇಷತೆ?
Daali Dhananjay: ತಂದೆಯಾಗಿರುವ ಖುಷಿಯಲ್ಲಿರುವ ನಟ ಡಾಲಿ ಧನಂಜಯ್, ಇದೀಗ ತಮ್ಮ ನವಜಾತ ಶಿಶುವಿಗಾಗಿ ತೊಟ್ಟಿಲು ಖರೀದಿಸುತ್ತಿದ್ದಾರೆ. ಅದೂ ಅಂತಿಥ ಸಾಮಾನ್ಯ ತೊಟ್ಟಿಲಲ್ಲ, ಬದಲಿಗೆ ವಿಶ್ವಪ್ರಸಿದ್ಧವಾಗಿರುವ ಕಲಘಟಗಿಯ ತೊಟ್ಟಿಲು. ಕಲಘಟಗಿ ಪಟ್ಟಣದ ತೊಟ್ಟಿಲಿಗೆ ಸುದೀರ್ಘ ಇತಿಹಾಸವಿದೆ. ಅದಕ್ಕೆ ಅದರದ್ದೇ ಆದ ಪರಂಪರೆ, ಪ್ರಾಮುಖ್ಯತೆ ಇದೆ. ಇಂಥಹಾ ಅಪರೂಪದ ತೊಟ್ಟಿಲನ್ನು ಡಾಲಿ ಖರೀದಿಸುತ್ತಿದ್ದಾರೆ.
- Sanjayya Chikkamath
- Updated on: May 7, 2026
- 6:21 pm
ಐಷಾರಾಮಿ ಕಾರಿನಲ್ಲಿ ಬಂದ್ರು, ಬೀದಿಯಲ್ಲಿದ್ದ ಹಸುವನ್ನೇ ಕದ್ದುಕೊಂಡು ಹೋದ್ರು!
ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳನ್ನೇ ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದಾರೆ.
- Sanjayya Chikkamath
- Updated on: May 5, 2026
- 2:55 pm