ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ-ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ನಡೆಯಿತು ಆರತಕ್ಷತೆ: ಇಂಡಿಗೋ ವಿಮಾನ ರದ್ದು ಕಾರಣ
ಹುಬ್ಬಳ್ಳಿಯಲ್ಲಿ ನಡೆದ ಅಪರೂಪದ ಆರತಕ್ಷತೆಯೊಂದು ಈಗ ಎಲ್ಲರ ಗಮನ ಸೆಳೆದಿದೆ. ಇಂಡಿಗೋ ವಿಮಾನ ರದ್ದಾದ ಕಾರಣ ನೂತನ ವಧು-ವರರು ತಮ್ಮದೇ ಆರತಕ್ಷತೆಗೆ ಬರಲಾಗದೆ ಆನ್ಲೈನ್ ಮೂಲಕ ಭಾಗವಹಿಸುವಂತಾಯಿತು. ಭುವನೇಶ್ವರದಿಂದ ಹುಬ್ಬಳ್ಳಿಗೆ ಬರಬೇಕಿದ್ದ ಮೇಧಾ-ಸಂಗಮ ದಾಸ್ ಜೋಡಿ ಬಾರದೆ, ಅನಿವಾರ್ಯವಾಗಿ ವಧುವಿನ ಪೋಷಕರು ವಧು-ವರರ ಸ್ಥಾನದಲ್ಲಿ ಕುಳಿತು ಅತಿಥಿಗಳನ್ನು ಎದುರುಗೊಳ್ಳಬೇಕಾಯಿತು!
- Sanjayya Chikkamath
- Updated on: Dec 5, 2025
- 10:44 am
ಹುಬ್ಬಳ್ಳಿಯಲ್ಲಿ ಜೆಸಿಬಿ ಘರ್ಜನೆ: 47 ಮನೆಗಳು ನೆಲಸಮ, ಬೀದಿಗೆ ಬಂದ ಜನರ ಬದುಕು
ಇಂದು ಹುಬ್ಬಳ್ಳಿಯಲ್ಲಿ ಜೆಸಿಬಿ ಘರ್ಜನೆ ಮಾಡಿದೆ. ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಅಕ್ರಮವಾಗಿ ಕಟ್ಟಿದ್ದ ಮನೆಗಳನ್ನು ತೆರವು ಮಾಡಲಾಗಿದೆ. ಹುಬ್ಬಳ್ಳಿಯ ಉದಯನಗರದಲ್ಲಿರುವ ಒಟ್ಟು 47 ಮನೆಗಳನ್ನು ತೆರವು ಮಾಡಲಾಗಿದೆ. ಇದೀಗ ದಾಖಲಾತಿ ನೋಡದೆ ಮನೆ ಕಟ್ಟಿಕೊಂಡವರ ಬದುಕು ಬೀದಿಗೆ ಬಂದಿದೆ. ವಿಡಿಯೋ ನೋಡಿ.
- Sanjayya Chikkamath
- Updated on: Dec 4, 2025
- 3:22 pm
ಇ.ಡಿ ಹೆಸರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್: ಆರೋಪಿಗಳಿಗೆ ಖಾಕಿ ಶಾಕ್, ನಾಲ್ವರು ಅರೆಸ್ಟ್
ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಹುಬ್ಬಳ್ಳಿಯಲ್ಲಿ ಚಿನ್ನದ ವ್ಯಾಪಾರಿಯೊಬ್ಬರಿಂದ 3 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಗೆ ಶಾಕ್ ಕೊಟ್ಟಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈ ಮತ್ತು ಗುಜರಾತ್ ಮೂಲದ ಆರೋಪಿಗಳಿಂದ ಚಿನ್ನಾಭರಣ, ನಗದು ಮತ್ತು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.
- Sanjayya Chikkamath
- Updated on: Dec 2, 2025
- 3:11 pm
ಸರಕು ಸಾಗಣೆಯಿಂದ ಭರ್ಜರಿ ಆದಾಯ ಗಳಿಸಿದ ನೈರುತ್ಯ ರೈಲ್ವೆ: 790.75 ಕೋಟಿ ರೂ ಬೊಕ್ಕಸಕ್ಕೆ
ನೈಋತ್ಯ ರೈಲ್ವೆ ನವೆಂಬರ್ನಲ್ಲಿ ಇದುವರೆಗಿನ ಅತ್ಯುತ್ತಮ 4.47 ಮಿಲಿಯನ್ ಟನ್ ಸರಕು ಸಾಗಣೆ ದಾಖಲಿಸಿದೆ. ಸರಕು ಸಾಗಣೆ ಆದಾಯದಲ್ಲಿ 451 ಕೋಟಿ ರೂ ಏರಿಕೆಯಾಗಿದ್ದು, ಶೇಕಡಾ 11ರಷ್ಟು ಬೆಳವಣಿಗೆ ಸಾಧಿಸಿದೆ. ಪ್ರಯಾಣಿಕರ ಆದಾಯ 297 ಕೋಟಿ ರೂ ತಲುಪಿದ್ದು, ಈ ತಿಂಗಳಲ್ಲಿ 14.8 ಮಿಲಿಯನ್ ಪ್ರಯಾಣಿಕರನ್ನು ಸಾಗಿಸಲಾಗಿದೆ.
- Sanjayya Chikkamath
- Updated on: Dec 1, 2025
- 8:07 pm
ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ
ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ರಾಜ್ಯದ 18 ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಪಡಿಸಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆಯೂ ಇದರಲ್ಲಿ ಸೇರಿದ್ದು, ಈ ಹುದ್ದೆಗಳನ್ನು ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸೀನಿಯರ್ ಪ್ರೋಗ್ರಾಮರ್ ಮತ್ತು ಆಡಳಿತಾಧಿಕಾರಿ ಹುದ್ದೆಗಳಾಗಿ ಮರುನಾಮಕರಣ ಮಾಡಲಾಗಿದೆ. ಆರೋಗ್ಯ ವಿಭಾಗದ ಕಾರ್ಯಗಳು ಇಂಜಿನಿಯರ್ಗಳ ಅಧೀನದಲ್ಲಿ ಮುಂದುವರಿಯಲಿದೆ ಎಂದು ಹೇಳಲಾಗಿದೆ.
- Sanjayya Chikkamath
- Updated on: Dec 1, 2025
- 9:45 am
ಇಡಿ ಅಧಿಕಾರಿ ಸೋಗಿನಲ್ಲಿ ಬಂದು 3 ಕೋಟಿ ರೂ ಹೆಚ್ಚು ಮೌಲ್ಯದ ಚಿನ್ನಾಭರಣ ಲೂಟಿ
ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ 7.11 ಕೋಟಿ ರೂ ದರೋಡೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲೊಂದು ಘಟನೆ ನಡೆದಿದೆ. ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದ ಐವರ ಗ್ಯಾಂಗ್ ಒಂದು ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯೊಬ್ಬರಿಗೆ ವಂಚಿಸಿ 3.2 ಕೋಟಿ ರೂ ಮೌಲ್ಯದ ಚಿನ್ನಾಭರಣ ಸೇರಿ ನಗದು ದೋಚಿ ಪರಾರಿ ಆಗಿದ್ದಾರೆ.
- Sanjayya Chikkamath
- Updated on: Nov 24, 2025
- 5:09 pm
ಬಿಹಾರದಲ್ಲಿ ಸೋಲು, ರಾಜ್ಯದಲ್ಲಿ ಪಟ್ಟಕ್ಕಾಗಿ ಫೈಟ್: ‘ಕೈ’ ನಾಯಕರ ಅಲಭ್ಯತೆಯಿಂದ ಬಡವರಿಗೆ ಸಂಕಷ್ಟ!
ರಾಜ್ಯ ಸೇರಿ ಕಾಂಗ್ರೆಸ್ ಪಾಳಯದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಬಡವರ ಮೇಲೆ ಪ್ರಭಾವ ಬೀರುತ್ತಿವೆ. ಅಚ್ಚರಿ ಎನಿಸಿದರೂ ಇದು ಸದ್ಯವಾಗಿದ್ದು, ನಾಯಕರ ಸಮಯದ ಅಲಭ್ಯತೆಯ ಕಾರಣ ವಸತಿ ರಹಿತರು ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದು ಹೇಗೆ? ಏನು? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
- Sanjayya Chikkamath
- Updated on: Nov 24, 2025
- 4:42 pm
ಡಿಕೆಶಿ ಬಿಜೆಪಿಗೆ ಬಂದು ಸಿಎಂ ಆಗ್ತಾರಾ, ವಿಜಯೇಂದ್ರ ಡಿಸಿಎಂ ಆಗ್ತಾರಾ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು ನೋಡಿ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ, ಬಿವೈ ವಿಜಯೇಂದ್ರ ಡಿಸಿಎಂ ಆಗುವ ವದಂತಿಗಳನ್ನು ತಳ್ಳಿಹಾಕಿದ ಅವರು, ಜನಾದೇಶ ಪಡೆದ ಸರ್ಕಾರ ತನ್ನ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಬೇಕು ಎಂದಿದ್ದಾರೆ. INDI ಮೈತ್ರಿಕೂಟ ಅಸ್ವಾಭಾವಿಕ ಎಂದೂ ಟೀಕಿಸಿದ್ದಾರೆ.
- Sanjayya Chikkamath
- Updated on: Nov 22, 2025
- 2:08 pm
ಹುಬ್ಬಳ್ಳಿ-ಧಾರವಾಡದಲ್ಲಿ ಅನುಮಾನ ಬಂದವರಿಗೆ ಡ್ರಗ್ಸ್ ಟೆಸ್ಟ್; ನೂರಕ್ಕೂ ಹೆಚ್ಚು ಯುವಕರ ಟೆಸ್ಟ್ ಪಾಸಿಟಿವ್
ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಸೇವನೆ ಮತ್ತು ಮಾರಾಟವನ್ನು ನಿಯಂತ್ರಿಸಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಡ್ರಗ್ಸ್ ಸೇವನೆಯ ಶಂಕೆ ಇರುವ ನೂರಾರು ಯುವಕರನ್ನು ವಶಕ್ಕೆ ಪಡೆದು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಪರೀಕ್ಷೆಯಲ್ಲಿ ಅನೇಕರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಪೊಲೀಸರು ಕೌನ್ಸಿಲಿಂಗ್ ಹಾಗೂ ಎಚ್ಚರಿಕೆ ನೀಡಿದ್ದಾರೆ.
- Sanjayya Chikkamath
- Updated on: Nov 22, 2025
- 12:12 pm
ಸೌದಿ ಅರೇಬಿಯಾದಲ್ಲಿ ಟ್ಯಾಂಕರ್, ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಹುಬ್ಬಳ್ಳಿಯ ವ್ಯಕ್ತಿ ಸಾವು
ಸೌದಿ ಅರೇಬಿಯಾದಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯರು ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ರಾಜ್ಯದ ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ಇತ್ತ ಹುಬ್ಬಳ್ಳಿಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.
- Sanjayya Chikkamath
- Updated on: Nov 17, 2025
- 8:02 pm
ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ಕಾಲಿಗೆ ಗುಂಡೇಟು
ಹುಬ್ಬಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದೆ. ಇಬ್ಬರು ರೌಡಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಯುವಕನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಹೀಗಾಗಿ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ.
- Sanjayya Chikkamath
- Updated on: Nov 16, 2025
- 3:13 pm
ಒಂದೇ ಹುಡುಗಿ ಮೇಲೆ ಇಬ್ಬರಿಗೆ ಲವ್: ಹುಬ್ಬಳ್ಳಿಯಲ್ಲಿ ಹರಿದಿದ್ದು ನೆತ್ತರ ಕೋಡಿ
ಒಂದೇ ಯುವತಿಯನ್ನು ಪ್ರೀತಿಸಿದ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಗ್ಲೋಬಲ್ ಕಾಲೇಜು ಬಳಿ ನಡೆದಿದೆ. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಸೇರಿ 7 ಜನರನ್ನು ಬಂಧಿಸಿದ್ದಾರೆ. ನಗರದಲ್ಲಿ ಸಂಚಲನ ಮೂಡಿಸಿದ ಈ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
- Sanjayya Chikkamath
- Updated on: Nov 14, 2025
- 11:44 am