ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಹುಬ್ಬಳ್ಳಿ: ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್ ಇಟ್ಟಿದ್ದ ಯುವಕನ ಬಂಧನ
ಹುಬ್ಬಳ್ಳಿಯಲ್ಲಿ ಹಿಂದೂ ಧರ್ಮಕ್ಕೆ ಅಪಮಾನವಾಗುವಂತಹ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಆರೋಪದ ಮೇಲೆ ಯುವಕನನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಯೂಟ್ಯೂಬರ್ನ ವಿಡಿಯೋವನ್ನು ಹಂಚಿಕೊಂಡಿದ್ದ. ಪೊಲೀಸರು ಸ್ವಯಂ ಪ್ರೇರಿತ ದೂರನ್ನ ದಾಖಲಿಸಿಕೊಂಡು, ಕಳೆದ ರಾತ್ರಿ ಆತನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
- Sanjayya Chikkamath
- Updated on: Feb 6, 2026
- 4:00 pm
ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವರ್ಗಾವಣೆ: ಏನಿದು ಹಣದ ರಹಸ್ಯ?
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ರೂ ಹಣ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದೆ. ಸೈಬರ್ ಅಪರಾಧ ಪ್ರಕರಣಗಳ ಬೆನ್ನತ್ತಿದಾಗ ಈ ಅಚ್ಚರಿಯ ಸಂಗತಿ ಬಯಲಾಗಿದ್ದು, ಪೊಲೀಸರು ಸ್ವತಃ ಅಚ್ಚರಿಗೊಂಡಿದ್ದಾರೆ. ವಿವಿಧ ಖಾತೆಗಳಿಂದ ಹಣ ಜಮಾ ಮತ್ತು ವರ್ಗಾವಣೆ ಆಗಿದ್ದು, ಸೈಬರ್ ವಂಚಕರು ಖಾತೆಯನ್ನು ದುರುಪಯೋಗಪಡಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
- Sanjayya Chikkamath
- Updated on: Feb 5, 2026
- 7:37 pm
ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ: ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ
ಸಾಲದ ವಿಚಾರದಲ್ಲಿ ಜಗಳವಾಗಿ ಪತಿಯೇ ಪತ್ನಿ ಕತ್ತು ಸೀಳಿ ಕೊಲೆ ಮಾಡಿದ ಭೀಕರ ಘಟನೆಗೆ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರ ಸಾಕ್ಷಿಯಾಗಿದೆ. ಪತಿ ಕತ್ತು ಸೀಳಿದಾಗ ಪ್ರಾಣ ಉಳಿಸಿಕೊಳ್ಳಲು ಪತ್ನಿ ಹೊರಗೋಡಿ ಅಂಗಲಾಚಿಕೊಂಡಿದ್ದರೂ ಬಿಡದೆ ಮತ್ತೊಮ್ಮೆ ಆಕೆಯ ಕತ್ತು ಸೀಳಿದ ಆರೋಪಿ ನಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಘಟನೆಯಿಂದ ರಾಮಲಿಂಗೇಶ್ವರ ನಗರ ಜನತೆ ಬೆಚ್ಚಿಬಿದ್ದಿದ್ದಾರೆ.
- Sanjayya Chikkamath
- Updated on: Feb 3, 2026
- 7:43 am
ಮಧ್ಯಾಹ್ನ ಬಿಸಿಯೂಟಕ್ಕೆ ಕಾದಿದ್ದ ವಿದ್ಯಾರ್ಥಿಗಳಿಗೆ ಶಾಕ್: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಾಂಬಾರಿನಲ್ಲಿ ನುಸಿ ಹುಳಗಳು ಪತ್ತೆಯಾಗಿವೆ. ಖಾಸಗಿ ಸಂಸ್ಥೆ ಪೂರೈಸಿದ್ದ ಊಟದಲ್ಲಿ ನುಸಿ ಕಂಡು ವಿದ್ಯಾರ್ಥಿಗಳು ಊಟ ತ್ಯಜಿಸಿ ಮನೆಗೆ ತೆರಳಿದ್ದಾರೆ. ಈ ಘಟನೆ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಆಹಾರ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Sanjayya Chikkamath
- Updated on: Feb 2, 2026
- 5:03 pm
ಚಾಕೊಲೇಟ್ ಕೊಡುವ ನೆಪದಲ್ಲಿ ಹೇಯ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ
ಹುಬ್ಬಳ್ಳಿಯಲ್ಲಿ ಎರಡು ಆಘಾತಕಾರಿ ಘಟನೆಗಳು ವರದಿಯಾಗಿವೆ. 8 ವರ್ಷದ ಬಾಲಕಿ ಮೇಲೆ 75 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಕ್ಸೋ ಅಡಿ ಬಂಧಿಸಲಾಗಿದೆ. ಮತ್ತೊಂದು ದುರ್ಘಟನೆಯಲ್ಲಿ, ಮಾಡಿದ ಸಾಲ ತೀರಿಸು ಎಂದಿದ್ದಕ್ಕೆ ಪತ್ನಿಯನ್ನ ಚಾಕುವಿನಿಂದ ಇರಿದು ಪತಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ.
- Sanjayya Chikkamath
- Updated on: Feb 2, 2026
- 3:19 pm
ಕೊಲೆಯಾದ ಹುಬ್ಬಳ್ಳಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮನೆ: ಸಿಎಂ ಮುಂದೆ ಕಣ್ಣೀರಿಟ್ಟ ಅಜ್ಜಿ
ಕರ್ನಾಟಕದಲ್ಲಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಸರ್ಕಾರ ಮೃತಳ ಕುಟುಂಬಕ್ಕೆ ಕೆಲ ಭರವಸೆಗಳನ್ನು ನೀಡಿತ್ತು. ಆ ಪೈಕಿ ಇದೀಗ ಹುಬ್ಬಳ್ಳಿಯಲ್ಲಿ ಮನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಮೃತ ಅಂಜಲಿಯ ಅಜ್ಜಿಗೆ ಮನೆಯ ಬೀಗ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಜ್ಜಿ ತಮ್ಮ ಮೊಮ್ಮಗಳನ್ನು ನೆನೆದು ಕಣ್ಣೀರಿಟ್ಟರು.
- Sanjayya Chikkamath
- Updated on: Jan 24, 2026
- 3:41 pm
ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್ಗಳು, ನಾಲ್ವರಿಗೆ ಗಾಯ
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ನ 42,345 ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ಅಳವಡಿಸಿದ್ದ ರಾಜಕೀಯ ನಾಯಕರ ಬೃಹತ್ ಕಟೌಟ್ಗಳು ಕುಸಿದು ಬಿದ್ದಿವೆ. ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ಕಾರ್ಯಕ್ರಮದಲ್ಲಿ ನಡೆದ ಈ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
- Sanjayya Chikkamath
- Updated on: Jan 24, 2026
- 11:39 am
ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ
ಹುಬ್ಬಳ್ಳಿಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ನಿರ್ಮಿತ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಈಗ ರಾಜಕೀಯ ವಿವಾದಕ್ಕೆ ಗ್ರಾಸವಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಹಂಚಿಕೆಯಾದ, ಸ್ಲಂ ಬೋರ್ಡ್ ನಿರ್ಮಿಸಿರುವ ಮನೆಗಳ ವಿತರಣೆ ಕಾರ್ಯಕ್ರಮದಲ್ಲಿ ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಪ್ರತಿಭಟನೆಗೆ ಮುಂದಾಗಿದೆ.
- Sanjayya Chikkamath
- Updated on: Jan 24, 2026
- 9:33 am
ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು?
ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಕರ್ನಾಟಕದ ಕಡಲೆ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿಶೇಷ ಆಸಕ್ತಿ ಹಾಗೂ ಮನವಿಯ ಮೇರೆಗೆ, ಕರ್ನಾಟಕದಿಂದ 1,01,340 ಮೆಟ್ರಿಕ್ ಟನ್ ಕಡಲೆಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಕೃಷಿ ಸಚಿವಾಲಯ ಅನುಮೋದನೆ ನೀಡಿದೆ. ಹಾಗಾದ್ರೆ, ಕೇಂದ್ರ ಘೋಷಿಸಿರುವ ಬೆಂಬಲ ಬೆಲೆ ಎಷ್ಟು ಎನ್ನುವ ಮಾಹಿತಿ ಈ ಕೆಳಗಿನಂತಿದೆ.
- Sanjayya Chikkamath
- Updated on: Jan 23, 2026
- 10:04 pm
ಹುಬ್ಬಳ್ಳಿಯ ಮಾಲ್ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ; ವೃದ್ಧ ದಂಪತಿ ಬಚಾವ್
ಹುಬ್ಬಳ್ಳಿಯ ಪ್ರಸಿದ್ಧ ಸುಖಸಾಗರ ಮಾಲ್ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಮಹಡಿಯಲ್ಲಿ ಹೊತ್ತಿಕೊಂಡ ಬೆಂಕಿ ಇಡೀ ಮಾಲ್ಗೆ ವ್ಯಾಪಿಸಿ, ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ್ದು, ಸದ್ಯ ಬೆಂಕಿ ನಂದಿಸಲಾಗಿದೆ.
- Sanjayya Chikkamath
- Updated on: Jan 23, 2026
- 5:09 pm
ಅಯ್ಯೋ ವಿಧಿಯೇ! ಬುದ್ಧಿ ಮಾತು ಹೇಳಿದ್ದಕ್ಕೆ ಅನಾಯಾಸವಾಗಿ ಕೊಲೆಯಾದ ವ್ಯಕ್ತಿ
ಹುಬ್ಬಳ್ಳಿ ನಗರದ ಗೌಶಿಯಾ ಟೌನ್ನಲ್ಲಿ ಕಳೆದ ರಾತ್ರಿ ಭೀಕರ ಕೊಲೆ ನಡೆದಿದೆ. ಬುದ್ಧಿ ಮಾತು ಹೇಳಿದ್ದಕ್ಕೆ ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಸದ್ಯ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಮನೆಗೆ ಆಧಾರವಾಗಿದ್ದ ವ್ಯಕ್ತಿಯನ್ನ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ.
- Sanjayya Chikkamath
- Updated on: Jan 22, 2026
- 3:33 pm
ಅಹಿಂದ ಸಮಾವೇಶಕ್ಕೆ ವಾಹನ ನೀಡದಂತೆ ಹೇಳಿದ್ದಾರೆ: ಡಿಕೆಶಿ ವಿರುದ್ಧ ಗಂಭೀರ ಆರೋಪ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ನಡೆಸಿ ಸಿದ್ದರಾಮಯ್ಯನವರಿಗೆ ಪ್ರಬಲ ಬೆಂಬಲ ವ್ಯಕ್ತಪಡಿಸಿದೆ. ಹೈಕಮಾಂಡ್ ಸಿಎಂ ಬದಲಾವಣೆ ಮಾಡಬಾರದೆಂದು ಅಹಿಂದ ನಾಯಕರು ಎಚ್ಚರಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅಹಿಂದ ಸಮಾವೇಶಗಳಿಗೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಲಾಗಿದ್ದು, ಸಿದ್ದರಾಮಯ್ಯನವರನ್ನು ಕುಗ್ಗಿಸುವ ಪ್ರಯತ್ನವನ್ನು ವಿರೋಧಿಸಲಾಗಿದೆ. ಇದು ಐದು ಹಂತದ ಸಮಾವೇಶಗಳಲ್ಲಿ ಮೊದಲನೆಯದು.
- Sanjayya Chikkamath
- Updated on: Jan 21, 2026
- 10:22 pm