ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಕಿಮ್ಸ್ ಸಂಸ್ಥೆ ವೈದ್ಯರ ತಂಡ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚುತ್ತಿರುವ ಕುರಿತು ಹುಬ್ಬಳ್ಳಿಯ ಕಿಮ್ಸ್ ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಅಧ್ಯಯನ ನಡೆಸಿದೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳ 8-18 ವರ್ಷದ ಮಕ್ಕಳ ಮೇಲೆ ನಡೆಸಿದ ಸಂಶೋಧನೆಯಲ್ಲಿ 70% ಮಕ್ಕಳಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ. ಜಂಕ್ ಫುಡ್, ದೈಹಿಕ ಚಟುವಟಿಕೆ ಕೊರತೆ ಮುಖ್ಯ ಕಾರಣವಾಗಿದ್ದು, ತಕ್ಷಣದ ಕ್ರಮಕ್ಕೆ ಕಿಮ್ಸ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ವರದಿ ಸಲ್ಲಿಸಲಿದೆ.
- Sanjayya Chikkamath
- Updated on: Aug 6, 2026
- 12:43 pm
NWKRTC ಕೈ ಸುಡುತ್ತಿರುವ ಚಿಗರಿ ಬಸ್ಗಳು: ಸಂಸ್ಥೆಗೆ ಪ್ರತಿ ತಿಂಗಳು ಎರಡೂವರೆ ಕೋಟಿ ನಷ್ಟ!
Chigari BRTS Buses: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಸಂಚರಿಸುವ 'ಚಿಗರಿ' ಬಿಆರ್ಟಿಎಸ್ ಎಸಿ ಬಸ್ಗಳು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆರ್ಥಿಕವಾಗಿ ಭಾರಿ ಹೊರೆಯಾಗಿ ಪರಿಣಮಿಸಿವೆ. ಸಂಸ್ಥೆಗೆ ಪ್ರತಿ ತಿಂಗಳು ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದ್ದು, ಈ ಬಗ್ಗೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆಯಾದರೂ, ಈವರೆಗೂ ಯಾವುದೇ ಕ್ರಮ ಆಗಿಲ್ಲ ಎನ್ನಲಾಗಿದೆ.
- Sanjayya Chikkamath
- Updated on: Aug 4, 2026
- 8:32 pm
ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆ: ಇತ್ಯರ್ಥವಾಗುವವರೆಗೂ ಮಹದಾಯಿಗೆ ಅನುಮತಿ ಇಲ್ಲ ಎಂದ ಕೇಂದ್ರ
Mahadayi Project: ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಹದಿಮೂರು ಪಟ್ಟಣಗಳು ಹಾಗೂ ನೂರಾರು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಕನಸಿನ 'ಮಹದಾಯಿ ಯೋಜನೆ'ಗೆ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೂ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
- Sanjayya Chikkamath
- Updated on: Jul 23, 2026
- 9:12 pm
ಧಾರವಾಡ: ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 1600ಕ್ಕೂ ಅಧಿಕ ಬಾಲ ಗರ್ಭಿಣಿಯರ ಕೇಸ್ ಪತ್ತೆ!
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದೇ ವಾರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ತಾಯಿಯಾಗಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 1,691 ಬಾಲ ಗರ್ಭಿಣಿ ಪ್ರಕರಣಗಳು ಅಧಿಕೃತವಾಗಿ ವರದಿಯಾಗಿರುವ ಆಘಾತಕಾರಿ ಅಂಕಿ-ಅಂಶ ಹೊರಬಿದ್ದಿದೆ. ಪ್ರಕರಣ ಮುಚ್ಚಿಟ್ಟ ಖಾಸಗಿ ಆಸ್ಪತ್ರೆ ವೈದ್ಯರು ಹಾಗೂ ಪೋಷಕರ ವಿರುದ್ಧ ಹಳೆ ಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ತೀವ್ರಗೊಂಡಿದೆ.
- Sanjayya Chikkamath
- Updated on: Jul 18, 2026
- 7:36 am
ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸಿ ನೆರವಾಗಿದೆ. ಹಾಗಾದ್ರೆ, ಎಲ್ಲಿಯವರೆಗೆ ವಿಸ್ತರಣೆ ಮಾಡಲಾಗಿದೆ. ಯಾವೆಲ್ಲಾ ಜಿಲ್ಲೆಯ ರೈತರಿಗೆ ಅನ್ವಯಿಸಲಿದೆ ಎನ್ನುವ ವಿವರ ಇಲ್ಲಿದೆ.
- Sanjayya Chikkamath
- Updated on: Jul 16, 2026
- 7:16 pm
ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ ‘ಕೈ, ಕಾಲು, ಬಾಯಿ’ ಸೋಂಕು!
ರಾಜ್ಯದಲ್ಲಿ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ 'ಕೈ, ಕಾಲು ಮತ್ತು ಬಾಯಿ ರೋಗ' (HFMD) ತೀವ್ರವಾಗಿ ಹರಡುತ್ತಿದ್ದು, ಪಾಲಕರಲ್ಲಿ ಭೀತಿ ಮೂಡಿಸಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕಿಮ್ಸ್ ಸೇರಿದಂತೆ ಪ್ರಮುಖ ಆಸ್ಪತ್ರೆಗಳಿಗೆ ನೂರಾರು ಮಕ್ಕಳು ದಾಖಲಾಗುತ್ತಿದ್ದಾರೆ. ಕಿಮ್ಸ್ ತಜ್ಞ ವೈದ್ಯರು ಈ ಸೋಂಕಿನ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.
- Sanjayya Chikkamath
- Updated on: Jul 14, 2026
- 10:35 am
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಅಚ್ಚರಿಯ ಹೇಳಿಕೆ ನೀಡಿದ ಹುಬ್ಬಳ್ಳಿ ಕಿಮ್ಸ್ ವೈದ್ಯರು
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದು, ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಯ 'ನಿರ್ಭಯಾ ವಾರ್ಡ್'ಗೆ ದಾಖಲಾಗಿದ್ದಾಳೆ. ತಾಯಿ ಮತ್ತು ನವಜಾತ ಶಿಶು ಆರೋಗ್ಯವಾಗಿದ್ದಾರೆ. ಪೋಷಕರ ಗೈರುಹಾಜರಿ ಮತ್ತು ಮಾಹಿತಿಯ ಕೊರತೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
- Sanjayya Chikkamath
- Updated on: Jul 11, 2026
- 3:12 pm
ಅರಬೈಲ್ ಘಾಟ್ ದುರಂತ: 20 ದಿನದ ಹಿಂದಷ್ಟೇ ದುಬೈನಿಂದ ಬಂದಿದ್ದ ಮಗ ಇನ್ನಿಲ್ಲ; ಹೆತ್ತ ತಾಯಿ ಆಕ್ರಂದನ
ಉತ್ತರ ಕನ್ನಡದ ಅರಬೈಲ್ ಘಾಟ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕ್ರೂಸರ್ ಮತ್ತು ಲಾರಿ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡ ಮೂಲದ 9 ಜನ ಧರ್ಮಸ್ಥಳ, ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತ ಸಚಿನ್ ತಾಯಿಯ ಮಾತುಗಳು ಹೃದಯ ಕಲಕುವಂತಿವೆ.
- Sanjayya Chikkamath
- Updated on: Jul 9, 2026
- 11:44 am
ಮೋಡ ಬಿತ್ತನೆಗೆ ಚಾಲನೆ ಬೆನ್ನಲ್ಲೇ ಸುರಿದ ಮಳೆ: ಪ್ರಯತ್ನ ಫಲ ನೀಡಿದೆ ಎಂದ ಶಾಸಕ; ರೈತರೂ ಖುಷ್
ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲ ಪರಿಸ್ಥಿತಿ ತಲೆದೋರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಹಾವೇರಿ ಜಿಲ್ಲೆಯ ಶಾಸಕರು, ತಮ್ಮ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆಗೆ ಮುಂದಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದ್ದು, ಪ್ರತಿ ಗಂಟೆಗೆ 15 ಲಕ್ಷ ರೂ. ವೆಚ್ಚವಾಗಲಿದೆ. ಈ ಪ್ರಯತ್ನದಿಂದ ಮಳೆಯಾಗಿದ್ದು, ರೈತರಿಗೆ ಸಂತಸ ಮೂಡಿಸಿದೆ.
- Sanjayya Chikkamath
- Updated on: Jul 6, 2026
- 6:18 pm
ಈ ಹೊಸ ಮಾಫಿಯಾ ಬಗ್ಗೆ ಎಚ್ಚರ! ಪ್ರತಿಷ್ಠಿತ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ
ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್ ಕೊಡಿಸುವ ನೆಪದಲ್ಲಿ ವಂಚಕರು ಲಕ್ಷಾಂತರ ರೂ ವಂಚನೆ ಮಾಡಿರುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ವಿದ್ಯಾರ್ಥಿನಿ ಬರೋಬ್ಬರಿ 16 ಲಕ್ಷ ರೂ ಕಳೆದುಕೊಂಡಿರುವ ಘಟನೆ ನಡೆದಿದೆ. ಸದ್ಯ ಹುಬ್ಬಳ್ಳಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟಕ್ಕೂ ವಿದ್ಯಾರ್ಥಿನಿ ಹಣ ಕಳೆದುಕೊಂಡಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.
- Sanjayya Chikkamath
- Updated on: Jul 5, 2026
- 4:48 pm
ಸರ್ಕಾರದ ಕ್ರಮಕ್ಕೆ ಕಂಗಾಲಾದ ವಯೋವೃದ್ಧ ಪಿಂಚಣಿದಾರರು: ಕಚೇರಿಗೆ ಅಲೆದಾಟ
ರಾಜ್ಯ ಸರ್ಕಾರವು 23 ಲಕ್ಷ ಶಂಕಾಸ್ಪದ ಪಿಂಚಣಿದಾರರ ಗುರುತಿಸಿದ್ದು, ಹುಬ್ಬಳ್ಳಿಯ ಸಾವಿರಾರು ವಯೋವೃದ್ಧರಿಗೆ ಪಿಂಚಣಿ ನಿಲ್ಲಿಸಿದೆ. ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಹಿರಿಯ ನಾಗರಿಕರು ಆದಾಯ ಪ್ರಮಾಣಪತ್ರ, ಬಿಪಿಎಲ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ ಸಲ್ಲಿಸಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ.
- Sanjayya Chikkamath
- Updated on: Jul 3, 2026
- 6:53 pm
ಹುಬ್ಬಳ್ಳಿ ಕಿಮ್ಸ್ ಸಾಧನೆಗೆ ಮತ್ತೊಂದು ಗರಿ: ರೋಬೋಟಿಕ್ ಶಸ್ತ್ರಚಿಕಿತ್ಸೆ ಮಾಡಿದ ಕರ್ನಾಟಕದ ಮೊದಲ ಸರ್ಕಾರಿ ಮೆಡಿಕಲ್ ಕಾಲೇಜು
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯು ರಾಜ್ಯದ ವೈದ್ಯಕೀಯ ಕಾಲೇಜುಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರೋಬೋಟಿಕ್ ಯಂತ್ರದ ಮೂಲಕ ಮಂಡಿ ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚವಾಗುವ ಈ ಅತ್ಯಾಧುನಿಕ ಚಿಕಿತ್ಸೆಯನ್ನು ಬಡ ಮಹಿಳೆಗೆ ಸಂಪೂರ್ಣ ಉಚಿತವಾಗಿ ಮಾಡುವ ಮೂಲಕ ಕಿಮ್ಸ್ ಹೊಸ ಹೆಗ್ಗಳಿಕೆಗೆ ಪಾತ್ರವಾಗಿದೆ.
- Sanjayya Chikkamath
- Updated on: Jul 2, 2026
- 2:05 pm