ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರ ಸಸ್ಪೆಂಡ್: ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ಯಾದಗಿರಿಯಲ್ಲಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಇಬ್ಬರು ಶಿಕ್ಷಕರನ್ನು ಒಂಬತ್ತು ತಿಂಗಳ ಬಳಿಕ ಅಮಾನತುಗೊಳಿಸಲಾಗಿದೆ. ಈ ಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಕ್ರಮ ದ್ವೇಷಪೂರಿತ ಎಂದು ಆರೋಪಿಸಿರುವ ಅವರು, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ, ಇಂತಹ ಆದೇಶಗಳು ನ್ಯಾಯಾಲಯದಲ್ಲಿ ರದ್ದಾಗುತ್ತವೆ ಎಂದು ಎಚ್ಚರಿಸಿದ್ದಾರೆ. ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
- Sanjayya Chikkamath
- Updated on: Aug 28, 2026
- 2:49 pm
ಹುಬ್ಬಳ್ಳಿಯಲ್ಲಿ ಹೆಚ್1ಎನ್1 ಭೀತಿ: ಕಿಮ್ಸ್ನಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ; ಆತಂಕ ಬೇಡ ಎಂದ ವೈದ್ಯರು
Hubballi H1N1 Alert: ಹುಬ್ಬಳ್ಳಿ ಸೇರಿದಂತೆ ರಾಜ್ಯದಲ್ಲಿ H1N1 ಸೋಂಕು ಹೆಚ್ಚುತ್ತಿದೆ. ಕಳೆದ ಎರಡು ತಿಂಗಳಲ್ಲಿ ಹುಬ್ಬಳ್ಳಿ ಕಿಮ್ಸ್ನಲ್ಲಿ 14 ಜನರಿಗೆ ಸೋಂಕು ದೃಢಪಟ್ಟಿದೆ. ಜ್ವರ, ನೆಗಡಿ, ಕೆಮ್ಮು ಪ್ರಮುಖ ರೋಗಲಕ್ಷಣಗಳಾಗಿವೆ. ವೈದ್ಯರ ಪ್ರಕಾರ, ಇದು ಕೋವಿಡ್ನಷ್ಟು ಗಂಭೀರವಲ್ಲ, ಆದರೆ ಮುಂಜಾಗ್ರತಾ ಕ್ರಮಗಳು ಅನಿವಾರ್ಯ ಎಂದಿದ್ದಾರೆ.
- Sanjayya Chikkamath
- Updated on: Aug 27, 2026
- 6:55 pm
ಮೋಡ ಬಿತ್ತನೆ ಮಾಡಲು ಹೊರಟ ಸರ್ಕಾರದ ನಡೆ ವಿರುದ್ಧ ಸಿಡಿದೆದ್ದ ಉತ್ತರ ಕರ್ನಾಟಕದ ರೈತರು: ಕಾರಣವೇನು?
Cloud Seeding: ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಮೋಡ ಬಿತ್ತನೆಗೆ ಮುಂದಾಗಿದ್ದು, ಇದಕ್ಕೆ ಉತ್ತರ ಕರ್ನಾಟಕ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜೂನ್-ಜುಲೈನಲ್ಲಿ ಮನವಿ ಮಾಡಿದಾಗ ನಿರ್ಲಕ್ಷಿಸಿ, ಬೆಳೆ ಹಾಳಾದ ನಂತರ ಮೋಡ ಬಿತ್ತನೆಗೆ ಮುಂದಾಗಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.
- Sanjayya Chikkamath
- Updated on: Aug 26, 2026
- 5:00 pm
ಹುಬ್ಬಳ್ಳಿಯ ಅಸಾರ ಓಣಿಯ ಪುಷ್ಕರಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದೇಕೆ? ಏನಿದರ ಹಿನ್ನೆಲೆ?
Hubballi Pushkarani Row: ಸಾವಿರ ವರ್ಷಗಳ ಇತಿಹಾಸವಿರುವ ಹುಬ್ಬಳ್ಳಿಯ ಪ್ರಸಿದ್ಧ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಇದೀಗ ತೀವ್ರ ವಿವಾದದ ಕೇಂದ್ರಬಿಂದುವಾಗಿದೆ. ಪುಷ್ಕರಣಿ ಜಾಗವನ್ನು ಅಕ್ರಮವಾಗಿ ಕಬಳಿಸಿ, ರಸ್ತೆ ನಿರ್ಮಿಸಲಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
- Sanjayya Chikkamath
- Updated on: Aug 22, 2026
- 3:56 pm
ಹಳೇ ಹುಬ್ಬಳ್ಳಿ ಆಸಾರ ಓಣಿಯ ಪುಷ್ಕರಣಿ ವಿವಾದ: ಎಂಎಲ್ಸಿ ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿಯ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಾಪಕ ವಿವಾದ ಭುಗಿಲೆದ್ದಿದೆ. ಈ ರಸ್ತೆಯನ್ನು ತೆರವುಗೊಳಿಸಲು ಆಗ್ರಹಿಸಿ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ನಿಷೇಧಾಜ್ಞೆ ಹೇರಿದ್ದರೂ ಪ್ರತಿಭಟನೆ ಮುಂದುವರಿದಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
- Sanjayya Chikkamath
- Updated on: Aug 22, 2026
- 2:09 pm
ತಾರಕಕ್ಕೇರಿದ ಹಳೇ ಹುಬ್ಬಳ್ಳಿ ಆಸಾರ ಓಣಿಯ ಪುಷ್ಕರಣಿ ವಿವಾದ: ಇಂದು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ, ನಿಷೇಧಾಜ್ಞೆ ಜಾರಿ
ಹುಬ್ಬಳ್ಳಿಯ ಆಸರ ಓಣಿಯ ಪುಷ್ಕರಣಿ ಮೇಲೆ ರಸ್ತೆ ನಿರ್ಮಾಣಕ್ಕೆ ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಕರೆ ಕೊಟ್ಟಿವೆ. ಪುರಾತನ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಜಾಗದಲ್ಲಿ ಅಕ್ರಮ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ನಿಷೇಧಾಜ್ಞೆ ಜಾರಿಗೊಳಿಸಿ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ದಲಿತ ಮತ್ತು ಮುಸ್ಲಿಂ ಸಂಘಟನೆಗಳು ರಸ್ತೆ ಕಿತ್ತುಹಾಕಲು ಬಿಡುವುದಿಲ್ಲ ಎಂದು ಹೇಳಿವೆ.
- Sanjayya Chikkamath
- Updated on: Aug 22, 2026
- 6:46 am
ಚಿಗರಿ’ ಬಸ್ಗಳಿಂದ NWKRTCಗೆ ಭಾರಿ ಆರ್ಥಿಕ ಸಂಕಷ್ಟ: ನಿರ್ವಹಣೆ ಸಿಗದೆ ರಸ್ತೆಯಲ್ಲೇ ಕೆಟ್ಟು ನಿಲ್ಲುತ್ತಿರುವ ಎಸಿ ಬಸ್ಗಳು
ದಕ್ಷಿಣ ಭಾರತದ ಮೊಟ್ಟಮೊದಲ ಬಿಆರ್ಟಿಎಸ್ ಯೋಜನೆಯಾದ ಹುಬ್ಬಳ್ಳಿ-ಧಾರವಾಡ ಚಿಗರಿ ಬಸ್ಗಳು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ದೊಡ್ಡ ಹೊರೆಯಾಗಿವೆ. ಪ್ರತಿನಿತ್ಯ 2.5 ಕೋಟಿ ರೂ. ನಷ್ಟ ಅನುಭವಿಸುತ್ತಿರುವ ಸಂಸ್ಥೆಗೆ, ನಗರ ಅಭಿವೃದ್ಧಿ ಇಲಾಖೆಯಿಂದ ಬರಬೇಕಿರುವ 150 ಕೋಟಿ ರೂ.ಗೂ ಹೆಚ್ಚು ಹಣ ಬಾಕಿಯಿದೆ. ನಿರ್ವಹಣಾ ವೆಚ್ಚ ಹೆಚ್ಚಳ ಮತ್ತು ಆದಾಯ ಕುಸಿತದಿಂದಾಗಿ ಸೇವೆ ಗುಣಮಟ್ಟವೂ ಕುಸಿಯುತ್ತಿದೆ.
- Sanjayya Chikkamath
- Updated on: Aug 21, 2026
- 1:53 pm
ಮಹದಾಯಿ ಹೋರಾಟಗಾರರಿಗೆ ಕಾನೂನು ಕಂಟಕ: 28 ರೈತರ ವಿರುದ್ಧ ಕೇಸ್, ಸಮನ್ಸ್ ಕಂಡು ಕಂಗಾಲಾದ ಅನ್ನದಾತ
Mahadayi River Project: ದಶಕಗಳಿಂದ ಮಹದಾಯಿ ಕುಡಿಯುವ ನೀರಿನ ಯೋಜನೆಗಾಗಿ ಹೋರಾಟ ನಡೆಸಿದ ಉತ್ತರ ಕರ್ನಾಟಕದ ರೈತರಿಗೆ ನ್ಯಾಯಾಲಯದಿಂದ ಸಮನ್ಸ್ ಬಂದಿದೆ. ಯೋಜನೆಯ ವಿಳಂಬ ಹಾಗೂ ರೈತರ ಮೇಲೆ ದಾಖಲಾಗಿರುವ ಪ್ರಕರಣಗಳು ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಮೇಲಿಮ ಕೇಸ್ ಹಿಂಪಡೆಯುವಂತೆ ರೈತರು ಆಗ್ರಹಿಸಿದ್ದಾರೆ.
- Sanjayya Chikkamath
- Updated on: Aug 20, 2026
- 7:59 pm
ಹುಬ್ಬಳ್ಳಿ, ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಪ್ರತಿನಿತ್ಯ ವಿಮಾನ ಸೇವೆ, ಇಲ್ಲಿದೆ ವೇಳಾಪಟ್ಟಿ
ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಯಾಣಿಕರ ಅನುಕೂಲ ಹಾಗೂ ಜನರ ಬೇಡಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈಡೇರಿಸಿದ್ದಾರೆ. ದೆಹಲಿ- ಹುಬ್ಬಳ್ಳಿ ಹಾಗೂ ದೆಹಲಿ-ಬೆಳಗಾವಿ ನಡುವೆ ದೈನಂದಿನ ವಿಮಾನ (ಪ್ರತಿ ದಿನ) ಸೇವೆ ಆರಂಭವಾಗಲಿದೆ. ಹಾಗಾದ್ರೆ, ಯಾವಾಗಿನಿಂದ ವಿಮಾನ ಸಂಚಾರ ಆರಂಭ ಎನ್ನುವ ವೇಳಾಪಟ್ಟಿ ಈ ಕೆಳಗಿನಂತಿದೆ.
- Sanjayya Chikkamath
- Updated on: Aug 19, 2026
- 10:53 pm
ರೈತರ ಜೀವಕ್ಕೆ ಕುತ್ತು ತರುತ್ತಿದೆಯಾ ಕ್ರಿಮಿನಾಶಕ: KIMS ಅಧ್ಯಯನದಲ್ಲಿ ಆತಂಕಕಾರಿ ಸಂಗತಿ ಬಯಲು
ಬೆಳೆಗಳ ಇಳುವರಿ ಹೆಚ್ಚಿಸಲು ಅತಿಯಾಗಿ ಕ್ರಿಮಿನಾಶಕ ಬಳಸುತ್ತಿರುವ ರೈತರ ಆರೋಗ್ಯದ ಮೇಲೆ ಅದು ಗಂಭೀರ ಪರಿಣಾಮ ಬೀರುತ್ತಿರುವುದು ಅಧ್ಯಯನದಿಂದ ತಿಳಿದುಬಂದಿದೆ. ಹುಬ್ಬಳ್ಳಿ KIMSನ ಬಹುಶಿಸ್ತೀಯ ಅಧ್ಯಯನ ಘಟಕ ನಡೆಸಿದ ಅಧ್ಯಯನದಲ್ಲಿ, ಕ್ರಿಮಿನಾಶಕ ಸಿಂಪಡಣೆ ಮಾಡಿದ 15 ದಿನಗಳ ಬಳಿಕವೂ ರೈತರ ರಕ್ತದಲ್ಲಿ ಅದರ ಅಂಶಗಳು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಮಾರಕ ರೋಗಗಳಿಗೆ ಕಾರಣವಾಗುತ್ತಿರುವುದು ಗೊತ್ತಾಗಿದೆ.
- Sanjayya Chikkamath
- Updated on: Aug 19, 2026
- 12:57 pm
ಹುಬ್ಬಳ್ಳಿಯ ಚಾಲುಕ್ಯರ ಕಾಲದ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ: ಹಿಂದೂಪರ ಸಂಘಟನೆಗಳ ಆಕ್ರೋಶ
ಹುಬ್ಬಳ್ಳಿಯ ಪ್ರಾಚೀನ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ ಕೇಳಿಬಂದಿದೆ. ಆಗಸ್ಟ್ 5ರಂದು 25 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಪಾಲಿಕೆ ಮುಂದಾಗಿರುವುದೇ ವಿವಾದಕ್ಕೆ ಕಾರಣ. ಹಿಂದೂಪರ ಸಂಘಟನೆಗಳು ಪುಷ್ಕರಣಿ ಜಾಗವನ್ನು ಉತ್ಖನನಗೊಳಿಸಿ ರಕ್ಷಿಸುವಂತೆ ಆಗ್ರಹಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಗಸ್ಟ್ 22ರಂದು ಬೃಹತ್ ಹೋರಾಟದ ಎಚ್ಚರಿಕೆ ನೀಡಿವೆ.
- Sanjayya Chikkamath
- Updated on: Aug 17, 2026
- 4:05 pm
ಅನುದಾನ ಕೊರತೆ: ಬೆಂಗಳೂರಲ್ಲಿ ಮತ್ತೊಂದು ಕಾನೂನು ವಿವಿಗೆ ಸರ್ಕಾರ ಚಿಂತನೆ; ಉತ್ತರ ಕರ್ನಾಟಕದ ಜನ ಆಕ್ರೋಶ
Hubballi Law University: ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯ ಅನುದಾನದ ಕೊರತೆಯಿಂದ ಬಳಲುತ್ತಿದೆ. ಇರುವ ವಿವಿಯನ್ನು ಬಲಪಡಿಸುವ ಬದಲು, ಸರ್ಕಾರ ಬೆಂಗಳೂರಿನಲ್ಲಿ ಮತ್ತೊಂದು ಕಾನೂನು ವಿಶ್ವವಿದ್ಯಾಲಯವನ್ನು ಆರಂಭಿಸಲು ಮುಂದಾಗಿದೆ. ಇದರಿಂದ ಉತ್ತರ ಕರ್ನಾಟಕದ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ನಿರ್ಧಾರವನ್ನು ಕೈಬಿಡುವಂತೆ ಆಗ್ರಹ ವ್ಯಕ್ತವಾಗಿದೆ.
- Sanjayya Chikkamath
- Updated on: Aug 15, 2026
- 3:59 pm