ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.
ಕಾಂಗ್ರೆಸ್ ಹೈಕಮಾಂಡ್ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ
ಹೊಸ ಕರ್ನಾಟಕ ಸರ್ಕಾರ ರಚನೆಯಾದ ಬೆನ್ನಲ್ಲೇ, ಮುಸ್ಲಿಂ ಸಮುದಾಯ ಸಚಿವ ಸಂಪುಟದಲ್ಲಿ ಯು.ಟಿ. ಖಾದರ್ ಹೊರತುಪಡಿಸಿ ಇನ್ನೂ 4 ಸ್ಥಾನಗಳಿಗೆ ತೀವ್ರ ಬೇಡಿಕೆ ಇಟ್ಟಿದೆ. ಈಡೇರದಿದ್ದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ಮತದಾನವಿಲ್ಲ ಎಂದು ಹುಬ್ಬಳ್ಳಿಯ ಮುಖಂಡರು ಎಚ್ಚರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ಗೆ ಮುಸ್ಲಿಂ ಸಮುದಾಯ ಇಕ್ಕಟ್ಟು ಸೃಷ್ಟಿಸಿದ್ದು, ಸಂಪುಟ ವಿಸ್ತರಣೆ ಸವಾಲಾಗಿದೆ.
- Sanjayya Chikkamath
- Updated on: Jun 4, 2026
- 7:59 am
ಹಿಜಾಬ್ Vs ಕೇಸರಿ ಸಂಘರ್ಷ: ಹಿಂದೂಪರ ಸಂಘಟನೆಗಳಿಂದ ಹುಬ್ಬಳ್ಳಿಯ ಅನೇಕ ಕಡೆ ಕೇಸರಿ ಶಾಲು ವಿತರಣೆ
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಆದೇಶವನ್ನು ವಿರೋಧಿಸಿ ಹುಬ್ಬಳ್ಳಿಯ ಕನಕದಾಸ ಕಾಲೇಜು ಸೇರಿದಂತೆ ಹಲವೆಡೆ ಹಿಂದೂಪರ ಸಂಘಟನೆಗಳು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿ ಪ್ರತಿಭಟಿಸಿದವು. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಆವರಣಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
- Sanjayya Chikkamath
- Updated on: Jun 1, 2026
- 2:15 pm
ಮೊದಲು ರಸ್ತೆ, ಆಮೇಲೆ ಚರಂಡಿ: ಹುಬ್ಬಳ್ಳಿಯಲ್ಲಿ ಉಲ್ಟಾ ಪ್ಲ್ಯಾನ್ಗೆ ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ
ಹುಬ್ಬಳ್ಳಿ-ಧಾರವಾಡದಲ್ಲಿ ರಸ್ತೆ ನಿರ್ಮಾಣಕ್ಕೆ ಕೋಟಿಗಟ್ಟಲೆ ಹಣ ಖರ್ಚು ಮಾಡಿದ ನಂತರ, ಒಳಚರಂಡಿಗಾಗಿ ಹೊಸ ರಸ್ತೆಗಳನ್ನು ಮತ್ತೆ ಅಗೆಯಲಾಗುತ್ತಿದೆ. ಅಧಿಕಾರಿಗಳ ಸಮನ್ವಯ ಕೊರತೆಯಿಂದ ಸಾರ್ವಜನಿಕರ ಕೋಟ್ಯಂತರ ರೂ ತೆರಿಗೆ ಹಣ ಪೋಲು ಮಾಡಲಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ದುಂದು ವೆಚ್ಚಕ್ಕೆ ಆಕ್ರೋಶ ವ್ಯಕ್ತವಾಗಿದೆ.
- Sanjayya Chikkamath
- Updated on: May 30, 2026
- 3:11 pm
ಪ್ರತ್ಯಕ ಪಾಲಿಕೆ ಹೋರಾಟಕ್ಕೆ ತೆರೆ: ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದು
ಹುಬ್ಬಳ್ಳಿ-ಧಾರವಾಡ ಪ್ರತ್ಯಕ ಪಾಲಿಕೆ ಕಡಿತಕ್ಕೆ ರಾಜ್ಯಪಾಲರು ಸಹಿ ಬೆನ್ನಲ್ಲೇ ಇದೀಗ ಈ ಹಿಂದಿನ ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದಾಗಿದೆ. ಆ ಮೂಲಕ ಕೆಲ ದಿನಗಳಿಂದ ನಡೆದಿದ್ದ ಹೋರಾಟ, ಪ್ರತಿಭಟನೆಗಳಿಗೆ ತೆರೆ ಬಿದ್ದಿದೆ. ಈ ಬಗ್ಗೆ ಪಾಲಿಕೆ ಮೇಯರ್ ಜೋತಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
- Sanjayya Chikkamath
- Updated on: May 29, 2026
- 4:42 pm
ಕೆಪಿಎಸ್ ಶಾಲೆಯಿಂದ ಸರ್ಕಾರಿ ಶಾಲೆಗಳು ಕ್ಲೋಸ್ ಆಗುತ್ತಿವೆಯಾ? ಕಳವಳ ವ್ಯಕ್ತಪಡಿಸಿದ ಹೊರಟ್ಟಿ
ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ವಿಸ್ತರಣೆ ಉತ್ತಮ ನಿರ್ಧಾರವಾದರೂ, ಸುತ್ತಮುತ್ತಲಿನ ಕನ್ನಡ ಶಾಲೆಗಳನ್ನು ವಿಲೀನಗೊಳಿಸಿ ಅಥವಾ ಬಂದ್ ಮಾಡಿ ಕೆಪಿಎಸ್ ಆರಂಭಿಸುವ ಸರ್ಕಾರದ ನಡೆಯು ಆತಂಕಕ್ಕೆ ಕಾರಣವಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳನ್ನು ಉಳಿಸಬೇಕೆಂದು ಆಗ್ರಹಿಸಿದ್ದಾರೆ.
- Sanjayya Chikkamath
- Updated on: May 26, 2026
- 6:52 pm
ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಹೋದ ಮುಸುಕುಧಾರಿಗಳು: ಗ್ರಾಮದಲ್ಲಿ ಆತಂಕ
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ 11 ವರ್ಷದ ಬಾಲಕನಿಗೆ ಮುಸುಕುಧಾರಿಗಳು ಇಂಜೆಕ್ಷನ್ ಚುಚ್ಚಿ ಪರಾರಿಯಾಗಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಆತಂಕ ಮನೆಮಾಡಿದ್ದು, ಬಾಲಕನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸತ್ಯಾಸತ್ಯತೆ ಕುರಿತು ಕುಂದಗೋಳ ಪೊಲೀಸರು ತನಿಖೆ ಆರಂಭಿಸಿದ್ದಾರೆ.
- Sanjayya Chikkamath
- Updated on: May 22, 2026
- 3:05 pm
ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್
ಎನ್ಡಬ್ಲ್ಯೂಕೆಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್ಟಾಪ್ ಬ್ಯಾಗ್ನ್ನು ಮರೆತಿದ್ದಾರೆ.
- Sanjayya Chikkamath
- Updated on: May 22, 2026
- 4:16 pm
ನಾಲ್ಕು ದಿನಗಳಿಂದ ವಿದ್ಯುತ್ ಕಡಿತ: ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಹುಬ್ಬಳ್ಳಿ ಗಾಂಧಿನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಕಡಿತದಿಂದ ಜನರು ಪರದಾಡುತ್ತಿದ್ದಾರೆ. ಬಿರುಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದರೂ, ಹೆಸ್ಕಾಂ ಮತ್ತು ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸಿಲ್ಲ. ಕುಡಿಯುವ ನೀರು ಮತ್ತು ಶೌಚಾಲಯಕ್ಕೂ ನೀರಿಲ್ಲದೆ ಸಾವಿರಾರು ಜನ ತೀವ್ರ ತೊಂದರೆ ಅನುಭವಿಸುತ್ತಿದ್ದು, ಆಕ್ರೋಶಗೊಂಡ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.
- Sanjayya Chikkamath
- Updated on: May 21, 2026
- 12:21 pm
3 ದಿನಗಳಿಂದ ವಿದ್ಯುತ್ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ
ಹುಬ್ಬಳ್ಳಿಯ ಗಾಂಧಿನಗರ ಲೇಔಟ್ನಲ್ಲಿ ಮೂರು ದಿನಗಳಿಂದ ವಿದ್ಯುತ್ ಕಡಿತದಿಂದ ರೋಸಿಹೋದ ಜನ ಗೋಕುಲ ರಸ್ತೆ ತಡೆದು ಹೆಸ್ಕಾಂ ವಿರುದ್ಧ ಪ್ರತಿಭಟಿಸಿದ್ದಾರೆ. ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.
- Sanjayya Chikkamath
- Updated on: May 21, 2026
- 10:48 am
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠಗಳ ವಿವಾದ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಹರಿಹರ ಪೀಠದ ಲೆಕ್ಕಪತ್ರದ ಗೊಂದಲಗಳನ್ನು ಪರಿಹರಿಸಲು ನಿರ್ಧರಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮುಖಂಡರು ಪಾರದರ್ಶಕವಾಗಿ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದ್ದು, ಸಮಾಜಕ್ಕೆ ಒಳಿತು ಮಾಡುವ ಉದ್ದೇಶದಿಂದ ಎರಡೂ ಬಣದವರು ಸಮ್ಮತಿಸಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ.
- Sanjayya Chikkamath
- Updated on: May 20, 2026
- 6:35 pm
ಡೀಸೆಲ್ ಬೆಲೆ ಹೆಚ್ಚಳದಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಸಂಕಷ್ಟ: ತಿಂಗಳಿಗೆ ಕೋಟ್ಯಂತರ ರೂ ಹೊರೆ!
ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ತೀವ್ರ ಆರ್ಥಿಕ ಸಂಕಷ್ಟ ತಂದಿದೆ. ಪ್ರತಿ ತಿಂಗಳು 4 ಕೋಟಿ ರೂ. ಹೆಚ್ಚುವರಿ ಹೊರೆಯನ್ನು ಸಂಸ್ಥೆ ಎದುರಿಸುತ್ತಿದೆ. ಈಗಾಗಲೇ ನಷ್ಟದಲ್ಲಿದ್ದ ಸಾರಿಗೆ ಸಂಸ್ಥೆಗೆ ಇದು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.
- Sanjayya Chikkamath
- Updated on: May 20, 2026
- 4:31 pm
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವತಿಯನ್ನ ಮನೆಗೆ ಕರೆದೊಯ್ದಿದ್ದ ಯುವಕ ಸಿಕ್ಕಿಬಿದ್ದ
ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದುಕೊಂಡಿರುವ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಸಾಜಿದ್ ಉಣಕಲ್ ಎಂಬ ಯುವಕ ಹಿಂದೂ ಯುವತಿಯ ಬ್ರೈನ್ವಾಶ್ ಮಾಡಿ ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದೊಯ್ದ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಇನ್ನು ಸಾಜಿದ್ ನನ್ನು ಅಶೋಕ ನಗರ ಠಾಣೆಗೆ ಪೊಲೀಸರ ವಶಕ್ಕೆ ನೀಡಿದ್ದು, ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
- Sanjayya Chikkamath
- Updated on: May 19, 2026
- 9:22 pm